ಕ್ರೀಡೆ

36ನೇ ರಾಷ್ಟ್ರೀಯ ಕ್ರೀಡಾಕೂಟ : ಮೈಸೂರಿನ ಖುಷಿಗೆ ಬೆಳ್ಳಿ ಪದಕ

ಮೈಸೂರು : ಜಿಲ್ಲೆಯ ಯೋಗಪಟು ಕುಮಾರಿ ಖುಷಿ ಹೆಚ್‌ ಅವರು ಗುಜರಾತಿನ ಅಹಮದಾಬಾದ್ ನಲ್ಲಿ ನಡೆದ 36ನೇ ರಾಷ್ಟ್ರೀಯ ಕ್ರೀಡಾಕೂಟದಲ್ಲಿ ಯೋಗಾಸನ ಕ್ರೀಡೆ ವಿಭಾಗದಲ್ಲಿ ಭಾಗವಹಿಸುವ ಮೂಲಕ ಬೆಳ್ಳಿ ಪದಕವನ್ನು ಮುಡಿಗೇರಿಸಿಕೊಂಡು ಜಿಲ್ಲೆಗೆ ಕೀರ್ತಿ ತಂದಿದ್ದಾರೆ.

ಕುಮಾರಿ ಖುಷಿ ಹೆಚ್ ರವರು ರಿದಮಿಕ್ ಯೋಗಾಸನ ಸ್ಪರ್ಧೆಯಲ್ಲಿ ಕರ್ನಾಟಕವನ್ನು ಪ್ರತಿನಿಧಿಸುವ ಮೂಲಕ ಬೆಳ್ಳಿ ಪದಕವನ್ನು ತಮ್ಮದಾಗಿಸಿಕೊಂಡಿದ್ದಾರೆ. ಕರ್ನಾಟಕ ತಂಡ ಒಟ್ಟು ಒಂದು ಚಿನ್ನ ಎರಡು ಬೆಳ್ಳಿ ಹಾಗೂ ಎರಡು ಕಂಚಿನ ಪದಕ ಗಳಿಸಿರುತ್ತದೆ. ಮೊದಲನೇ ಬಾರಿಗೆ ಯೋಗಾಸನ ಕ್ರೀಡೆಯು ರಾಷ್ಟ್ರಮಟ್ಟದ ಕ್ರೀಡಾಕೂಟದಲ್ಲಿ ಸೇರ್ಪಡೆಯಾಗಿರುವುದು ವಿಶೇಷವಾಗಿದೆ.

ಕುಮಾರಿ ಖುಷಿ ಅವರು ಮೈಸೂರಿನ ಸರ್ಕಾರಿ ಪ್ರಕೃತಿ ಚಿಕಿತ್ಸೆ ಮತ್ತು ಯೋಗ ವೈದ್ಯಕೀಯ ಮಹಾವಿದ್ಯಾನಿಲಯ ಮತ್ತು ಆಸ್ಪತ್ರೆ ಮೈಸೂರು, ಇಲ್ಲಿ ಮೊದಲನೇ ವರ್ಷದಲ್ಲಿ ವ್ಯಾಸಂಗ ಮಾಡುತ್ತಿದ್ದು ನಂತರ ವಿವೇಕಾನಂದ ಯೋಗ ಮತ್ತು ಸಂಶೋಧನ ಕೇಂದ್ರದಲ್ಲಿ ಕಳೆದ 8 ವರ್ಷಗಳಿಂದ ಡಾ. ಪಿ.ಎನ್ ಗಣೇಶ್ ಕುಮಾರ್ ರವರ ಮಾರ್ಗದರ್ಶನದಲ್ಲಿ ಯೋಗ ಅಭ್ಯಾಸ ಮಾಡುತ್ತಿದ್ದಾರೆ. ಮುಂದೆ ಯೋಗ ಕ್ಷೇತ್ರದಲ್ಲಿ ಸಂಶೋಧನೆ ಮಾಡಿ ಉತ್ತಮ ಯೋಗ ಶಿಕ್ಷಕಿ ಆಗುವುದು ನನ್ನ ಗುರಿ ಎನ್ನುತ್ತಾರೆ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತೆ ಕುಮಾರಿ ಖುಷಿ.

andolanait

Recent Posts

ಸಾಕಾನೆಗಳ ಕಾಳಗದ ನಡುವೆ ಸಿಲುಕಿ ಪ್ರವಾಸಿ ಮಹಿಳೆ ಸಾವು

ಕೊಡಗು: ಎಲಿಫೆಂಟ್‌ ಬಾತಿಂಗ್‌ ವೇಳೆ ಆನೆಯ ಅಡಿಗೆ ಸಿಲುಕಿ ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ದುಬಾರೆ ಸಾಕಾನೆ ಶಿಬಿರದಲ್ಲಿ ನಡೆದಿದೆ. ಚೆನ್ನೈ…

13 mins ago

ಆಫ್ರಿಕಾದಲ್ಲಿ ಎಬೋಲಾಕ್ಕೆ 88 ಮಂದಿ ಬಲಿ: ತುರ್ತು ಪರಿಸ್ಥಿತಿ ಘೋಷಿಸಿದ WHO

ಕಾಂಗೋ: ಆಫ್ರಿಕಾದಲ್ಲಿ ಎಬೋಲಾಕ್ಕೆ 88 ಮಂದಿ ಬಲಿಯಾಗಿದ್ದು, WHO ತುರ್ತು ಪರಿಸ್ಥಿತಿ ಘೋಷಣೆ ಮಾಡಿದೆ. ಆಫ್ರಿಕಾದಲ್ಲಿ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದ್ದಂತೆ…

41 mins ago

ತಾಯಿಯನ್ನೇ ಕೊಲೆಗೈದ ಪಾಪಿ ಮಗ

ಮೈಸೂರು: ಪರಪುರುಷನ ಸಂಗ ಮಾಡಿದ್ದ ತಾಯಿಯನ್ನು ಮಗ ಕೊಲೆ ಮಾಡಿರುವ ಘಟನೆ ಮೈಸೂರು ತಾಲ್ಲೂಕಿನ ಮಾದಹಳ್ಳಿ ಗ್ರಾಮದಲ್ಲಿ ನಡೆದಿದೆ. ಸುಧಾ…

2 hours ago

ಹನೂರು| ರಸ್ತೆ ದುರಸ್ತಿಗೆ ಮಾರ್ಟಳ್ಳಿ ಗ್ರಾಮಸ್ಥರ ಆಗ್ರಹ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಮಾರ್ಟಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಪಾಲಿಮೇಡುವಿನಲ್ಲಿರುವ ಸೇಂಟ್ ಮೇರಿಸ್…

2 hours ago

ನೇಣು ಬಿಗಿದುಕೊಂಡು ಯುವಕ ಆತ್ಮಹತ್ಯೆ

ಸಿದ್ದಾಪುರ: ಸಿದ್ದಾಪುರ ವ್ಯಾಪ್ತಿಯ ಕೂಡುಗದ್ದೆ ಗ್ರಾಮದಲ್ಲಿ ಯುವಕನೋರ್ವ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ದುರ್ಘಟನೆ ನಡೆದಿದೆ. ಮೃತನನ್ನು ಕೂಡುಗದ್ದೆ ನಿವಾಸಿ…

2 hours ago

ಕೇರಳ ಸಿಎಂ ಆಗಿ ವಿ.ಡಿ.ಸತೀಶನ್ ಪ್ರಮಾಣವಚನ ಸ್ವೀಕಾರ

ತಿರುವನಂತಪುರಂ: ಕೇರಳಂ ಮುಖ್ಯಮಂತ್ರಿಯಾಗಿ ವಿ.ಡಿ.ಸತೀಶನ್‌ ಅವರಿಂದು ಪ್ರಮಾಣವಚನ ಸ್ವೀಕರಿಸಿದರು. ರಾಜ್ಯಪಾಲ ಆರ್.‌ವಿ.ಅರ್ಲೇಕರ್‌ ಅವರು ಪ್ರಮಾಣವಚನ ಬೋಧಿಸಿದರು. ಸತೀಶನ್‌ ಜೊತೆಗೆ ಅವರ…

3 hours ago