ಕ್ರೀಡೆ

400 ಮೀ. ಮೆಡ್ಲೆ ರಿಲೆ ಈಜು: ರಾಷ್ಟ್ರೀಯ ದಾಖಲೆ ಸ್ಥಾಪಿಸಿದ ಭಾರತ ತಂಡಕ್ಕೆ ಐದನೇ ಸ್ಥಾನ

ಹಾಂಗ್‌ಝೌ : ‘ಬ್ರೆಸ್ಟ್ ಸ್ಟೋಕ್ ದೊರೆ’ ಎನಿಸಿರುವ ಕ್ವಿನ್ ಹೈಯಾಂಗ್ ಅವರ ಅತ್ಯುತ್ತಮ ಪ್ರದರ್ಶನದ ನೆರವಿನಿಂದ ಚೀನಾ ತಂಡ ಏಷ್ಯನ್ ಗೇಮ್ಸ್‌ನ ಈಜು ಸ್ಪರ್ಧೆಯ 4×100 ಮೀ. ಮೆಡ್ಲೆ ರಿಲೆಯಲ್ಲಿ ಏಷ್ಯನ್ ದಾಖಲೆಯೊಡನೆ ಚಿನ್ನ ಗೆದ್ದುಕೊಂಡಿತು. ಬೆಳಿಗ್ಗೆ ಹೀಟ್ಸ್‌ನಲ್ಲಿ ರಾಷ್ಟ್ರೀಯ ದಾಖಲೆ ಸ್ಥಾಪಿಸಿದ್ದ ಭಾರತ ತಂಡ ಮಂಗಳವಾರ ಸಂಜೆ ನಡೆದ ಈ ಸ್ಪರ್ಧೆಯ ಫೈನಲ್‌ನಲ್ಲಿ ಐದನೇ ಸ್ಥಾನಕ್ಕೆ ಸರಿಯಿತು.

ಕ್ವಿನ್, ಷು ಜಿಯಾವು, ವಾಂಗ್ ಚಾಂಗ್ ಹಾವೊ ಮತ್ತು ಪಾನ್ ಝಾನ್ ಅವರಿದ್ದ ತಂಡ 39.27.1 ಸೆಕೆಂಡುಗಳಲ್ಲಿ ಸ್ಪರ್ಧೆ ಪೂರೈಸಿ ಈಜುಕೊಳದಲ್ಲಿ ಚೀನಾ ಪಾರಮ್ಯವನ್ನು ಮುಂದುವರಿಸಿತು. ದಕ್ಷಿಣ ಕೊರಿಯಾ (3:32.05) ಮತ್ತು ಜಪಾನ್ (3:32.52) ನಡುವೆ ತೀವ್ರ ಪೈಪೋಟಿ ಏರ್ಪಟ್ಟಿದ್ದು ಕ್ರಮವಾಗಿ ಎರಡು ಮತ್ತು ಮೂರನೇ ಸ್ಥಾನ ಪಡೆದವು.

ಚೀನಾ ತೈಪೆ 3ನಿ.38.35 ಸೆ. ತೆಗೆದುಕೊಂಡರೆ, ಭಾರತ ತಂಡ (ಶ್ರೀಹರಿ ನಟರಾಜ್, ಲಿಖಿತ್ ಸೆಲ್ವರಾಜ್, ಸಜನ್ ಪ್ರಕಾಶ್ ಮತ್ತು ತನಿಶ್ ಜಾರ್ಜ್) 3ನಿ.40.20 ಸೆ.ಗಳಲ್ಲಿ ಗುರಿಮುಟ್ಟಿತು.

ಬೆಳಿಗ್ಗೆ ಒಂದನೇ ಹೀಟ್ಸ್‌ನಲ್ಲಿ ಭಾರತ ತಂಡ 3 ನಿ. 40.84 ಸೆ.ಗಳಲ್ಲಿ ಗುರಿತಲುಪಿ

ರಾಷ್ಟ್ರೀಯ ದಾಖಲೆ ಸ್ಥಾಪಿಸಿತ್ತು. ಆ ಹಾದಿಯಲ್ಲಿ ಒಟ್ಟಾರೆ ನಾಲ್ಕನೇ ಉತ್ತಮ

ಟೈಮಿಂಗ್‌ನೊಡನೆ ಫೈನಲ್‌ಗೆ ಅರ್ಹತೆ ಪಡೆದಿತ್ತು.

ಈ ಹಿಂದಿನ ದಾಖಲೆ (ನಟರಾಜ್, ಸಂದೀಪ್ ಸೆಜ್ವಾಲ್, ಸಜನ್ ಪ್ರಕಾಶ್, ಆ್ಯರನ್ ಡಿಸೋಜ ತಂಡದಿಂದ 3:44.94) 2018ರ ಕ್ರೀಡೆಗಳಲ್ಲಿ ಮೂಡಿಬಂದಿತ್ತು.

ಭಾರತದ ಪಲಕ್ ಜೋಶಿ ಮತ್ತು ಶಿವಾಂಗಿ ಶರ್ಮಾ ತಮ್ಮ ಸ್ಪರ್ಧೆಗಳಲ್ಲಿ ಫೈನಲ್‌ಗೇರಲು ವಿಫಲರಾದರು. ಪಲಕ್, ಮಹಿಳೆಯರ 200 ಮೀ. ಬ್ಯಾಕ್‌ಸ್ಟೋಕ್ ಸ್ಪರ್ಧೆಯಲ್ಲಿ (ಕಾಲ: 2:25.81) 19 ಮಂದಿ ಪೈಕಿ 14ನೇ ಸ್ಥಾನ ಪಡೆದರೆ, ಶಿವಾಂಗಿ 100 ಮೀ. ಫ್ರೀಸ್ಟೈಲ್‌ನಲ್ಲಿ 58.31 ಸೆ.ಗಳಲ್ಲಿ ಗುರಿತಲುಪಿ 17ನೇ ಸ್ಥಾನ ಗಳಿಸಿದರು.

andolanait

Recent Posts

ಹೆಚ್ಚುತ್ತಿರುವ ಯುವತಿಯರ ಆತ್ಮಹತ್ಯೆ ; ಯುವತಿಯರಿಗೆ ಕಂಗನಾ ರಣಾವತ್ ಕಿವಿಮಾತು

ದೆಹಲಿ : ಮದುವೆಯಾದ ಯುವತಿಯರು ಸಾವನ್ನಪ್ಪುತ್ತಿರುವ ಪ್ರಕರಣಗಳು ಹೆಚ್ಚುತ್ತಿರುವ ಬೆನ್ನಲ್ಲೇ ಬಾಲಿವುಡ್ ನಟಿ ಹಾಗೂ ಸಂಸದೆ ಕಂಗನಾ ರಣಾವತ್ ಯುವತಿಯರಿಗೆ…

2 hours ago

ಆ.31ರೊಳಗೆ ಜಿಬಿಎ ಚುನಾವಣೆ ನಡೆಸಿ ; ರಾಜ್ಯ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಅಂತಿಮ ಗಡುವು

ಹೊಸದಿಲ್ಲಿ : ಆಗಸ್ಟ್ ೩೧ರೊಳಗೆ ಗ್ರೇಟರ್ ಬೆಂಗಳೂರು ಪ್ರಾಧಿಕಾರದ (ಜಿಬಿಎ) ವ್ಯಾಪ್ತಿಯ ಐದು ನಗರಪಾಲಿಕೆಗಳಿಗೆ ಚುನಾವಣೆ ನಡೆಸುವಂತೆ ಸರ್ವೋಚ್ಚ ನ್ಯಾಯಾಲಯ…

5 hours ago

ಸಫಾರಿಗಳಲ್ಲಿ ಇನ್ಮುಂದೆ ತೆರೆದ ವಾಹನಕ್ಕೆ ಅವಕಾಶವಿಲ್ಲ : ಈಶ್ವರ ಖಂಡ್ರೆ

ಸಫಾರಿ ಕ್ಯಾಂಪರ್ ಗಳಿಗೆ ಕಬ್ಬಿಣದ ಸರಳು, ಒಡೆಯದ ಗಾಜು ಅಳವಡಿಸಲು ಖಂಡ್ರೆ ಸೂಚನೆ ಬೆಂಗಳೂರು :  ರಾಜ್ಯದ ಐದು ಹುಲಿ…

6 hours ago

ಮ.ಬೆಟ್ಟ | ಮರದ ಕೊಂಬೆ ಬಿದ್ದು ಮೂವರಿಗೆ ಗಾಯ

ಹನೂರು : ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟಕ್ಕೆ ಬಂದಿದ್ದ ಭಕ್ತರ ಮೇಲೆ ಮರದ ಕೊಂಬೆ ಬಿದ್ದು ಮೂವರು ಗಾಯಗೊಂಡಿರುವ…

8 hours ago

ಔಷಧಿ ಮಾರಾಟಗಾರರ ಸಂಘ ಕರೆ ನೀಡಿದ್ದ ಬಂದ್‍ಗೆ ಮಿಶ್ರ ಪ್ರತಿಕ್ರಿಯೆ

ಬೆಂಗಳೂರು: ಆನ್‍ಲೈನ್‍ನಲ್ಲಿ ಔಷಧಿಗಳ ಮಾರಾಟ ವಿರೋಧಿಸಿ ಅಖಿಲ ಭಾರತ ಔಷಧಿ ಮಾರಾಟಗಾರರ ಸಂಘ ಕರೆ ನೀಡಿದ್ದ ಕರ್ನಾಟಕ ಬಂದ್‍ಗೆ ಮಿಶ್ರ…

11 hours ago

ಯಳಂದೂರು: ಬೋನಿಗೆ ಬಿದ್ದ ಚಿರತೆ

ಯಳಂದೂರು: ಕಳೆದ ಕೆಲ ದಿನಗಳಿಂದ ಉಪಟಳ ನೀಡುತ್ತಿದ್ದ ಚಿರತೆಯೊಂದು ಅರಣ್ಯ ಇಲಾಖೆ ಇರಿಸಿದ್ದ ಬೋನಿಗೆ ಸೆರೆಯಾಗಿದೆ. ತಾಲ್ಲೂಕಿನ ಗುಂಬಳ್ಳಿ ಗ್ರಾಮದಲ್ಲಿ…

11 hours ago