ಕ್ರೀಡೆ

24 ಎಸೆತಕ್ಕೆ ಶತಕ, 43 ಎಸೆತಕ್ಕೆ 193 ರನ್; ನಿರ್ಮಾಣವಾಯಿತು ವಿಶ್ವದಾಖಲೆ

ಕ್ರಿಕೆಟ್‌ ಲೋಕದಲ್ಲಿ ಆಗಾಗ ಹಲವಾರು ದಾಖಲೆಗಳು ನಿರ್ಮಾಣವಾಗುತ್ತಲೇ ಇರುತ್ತವೆ. ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ನಿರ್ಮಾಣವಾದ ದಾಖಲೆಗಳು ಸುದ್ದಿಯಾದರೆ, ದೇಶಿ ಕ್ರಿಕೆಟ್‌ನಲ್ಲಿ ನಿರ್ಮಾಣವಾದ ಅದೆಷ್ಟೋ ದಾಖಲೆಗಳು ಹೆಚ್ಚು ಸುದ್ದಿಯಾಗದೇ ಉಳಿದುಕೊಂಡಿವೆ. ಇದೀಗ ಯುರೋಪಿಯನ್‌ ಟಿ 10 ಕ್ರಿಕೆಟ್‌ ಸರಣಿಯಲ್ಲಿ ಬೃಹತ್‌ ವಿಶ್ವ ದಾಖಲೆಯೊಂದು ನಿರ್ಮಾಣವಾಗಿದೆ.

ಸ್ಪೇನ್‌ನಲ್ಲಿ ನಡೆಯುತ್ತಿರುವ ಈ ಸರಣಿಯ ಕ್ಯಾಟಲುನ್ಯ ಜಾಗ್ವಾರ್‌ ಹಾಗೂ ಸೋಹಲ್‌ ಹಾಸ್ಪಿಟಲ್‌ ತಂಡಗಳ ನಡುವಿನ ಪಂದ್ಯದಲ್ಲಿ ಹಂಝ ಸಲೀಮ್‌ ದಾರ್‌ ಎಂಬ ಬ್ಯಾಟ್ಸ್‌ಮನ್‌ ಅತಿವೇಗದ ಶತಕ ಬಾರಿಸಿದ ದಾಖಲೆ ಬರೆದಿದ್ದಾರೆ. ಕೇವಲ 24 ಎಸೆತಗಳಲ್ಲಿ ಹಂಝ ಸಲೀಮ್‌ ದಾರ್‌ ಶತಕ ಬಾರಿಸಿದರು.

ತಮ್ಮ ಇನ್ನಿಂಗ್ಸ್‌ನ ಆರಂಭದಿಂದಲೇ ಅಬ್ಬರದ ಬ್ಯಾಟಿಂಗ್‌ ನಡೆಸಿದ ಹಂಝ ಸಲೀಮ್‌ ದಾರ್‌ ಒಟ್ಟು 43 ಎಸೆತಗಳಲ್ಲಿ 22 ಸಿಕ್ಸರ್‌ ಹಾಗೂ 14 ಬೌಂಡರಿ ಬಾರಿಸುವ ಮೂಲಕ ಅಜೇಯ 193 ರನ್‌ ದಾಖಲಿಸಿದರು. ಹಂಝ ಸಲೀಮ್‌ ದಾರ್‌ ಅಬ್ಬರದ ಬ್ಯಾಟಿಂಗ್‌ ನೆರವಿನಿಂದ ಕ್ಯಾಟಲುನ್ಯ ಜಾಗ್ವಾರ್‌ ತಂಡ 10 ಓವರ್‌ಗಳಲ್ಲಿ 257 ರನ್‌ ಕಲೆಹಾಕಿ ಸೋಹಲ್‌ ಹಾಸ್ಪಿಟಲ್‌ ತಂಡಕ್ಕೆ ಗೆಲ್ಲಲು 258 ರನ್‌ಗಳ ಕಠಿಣ ಗುರಿಯನ್ನು ನೀಡಿತ್ತು. ಈ ಗುರಿಯನ್ನು ಬೆನ್ನಟ್ಟುವಲ್ಲಿ ವಿಫಲಗೊಂಡ ಸೋಹಲ್‌ ಹಾಸ್ಪಿಟಲ್‌ ತಂಡ 10 ಓವರ್‌ಗಳಲ್ಲಿ ಕೇವಲ 104 ರನ್‌ ಗಳಿಸಿತು ಹಾಗೂ ಕ್ಯಾಟಲುನ್ಯ ಜಾಗ್ವಾರ್‌ ತಂಡವು 153 ರನ್‌ಗಳ ಭರ್ಜರಿ ಗೆಲುವು ದಾಖಲಿಸಿತು.

andolana

Recent Posts

ಹನೂರು: ಮಹದೇಶ್ವರ ಬೆಟ್ಟದಲ್ಲಿ ಇತಿಹಾಸದಲ್ಲೇ ಮೊಟ್ಟ ಮೊದಲಿಗೆ ದಾಖಲೆ ಹುಂಡಿ ಹಣ ಸಂಗ್ರಹ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ರಾಜ್ಯದ ಪ್ರಸಿದ್ಧ ಧಾರ್ಮಿಕ ಯಾತ್ರಾಸ್ಥಳ ಮಲೆ ಮಹದೇಶ್ವರ ಬೆಟ್ಟದ ಶ್ರೀ…

6 hours ago

ರಾಜ್ಯದಲ್ಲಿ ಎಲೆಕ್ಟ್ರಿಕ್ ವಾಹನೋದ್ಯಮಕ್ಕೆ ಉತ್ತೇಜನ: ಉದ್ಯಮಿಗಳ ಜೊತೆ ಕೇಂದ್ರ ಸಚಿವ ಎಚ್‌ಡಿಕೆ ಚರ್ಚೆ

ಬೆಂಗಳೂರು: ರಾಜ್ಯದಲ್ಲಿ ಎಲೆಕ್ಟ್ರಿಕ್ ವಾಹನ ಕ್ಷೇತ್ರದ ಅಭಿವೃದ್ಧಿ ಹಾಗೂ ಅದಕ್ಕೆ ಪೂರಕ ವ್ಯವಸ್ಥೆಯನ್ನು ಸೃಷ್ಟಿಸುವ ದಿಸೆಯಲ್ಲಿ ಕೇಂದ್ರದ ಬೃಹತ್ ಕೈಗಾರಿಕೆ…

9 hours ago

ಪವಿತ್ರಾ ಗೌಡಗೆ ಬಿಗ್‌ ಶಾಕ್‌ ಕೊಟ್ಟ ಹೈಕೋರ್ಟ್:‌ ಏನದು ಗೊತ್ತಾ.?

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಎ1 ಆರೋಪಿ ಪವಿತ್ರಾ ಗೌಡ ಅವರಿಗೆ ಈಗ ಜೈಲಿನ ಊಟವೇ ಗತಿಯಾಗಿದೆ. ಈ…

10 hours ago

ಆರೋಗ್ಯ ಸೇವೆಯಲ್ಲಿ ವ್ಯತ್ಯಯ ಉಂಟಾಗಬಾರದು: ಜಿಲ್ಲಾಧಿಕಾರಿ ಡಾ.ಕುಮಾರ

ಮಂಡ್ಯ: ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಕರ್ನಾಟಕ ಸರ್ಕಾರಿ ವೈದ್ಯಾಧಿಕಾರಿಗಳ ಸಂಘವು ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಮಾರ್ಚ್.11ರಿಂದ ಅನಿರ್ದಿಷ್ಟಾವಧಿ ಮುಷ್ಕರಕ್ಕೆ…

10 hours ago

ಗುಂಡ್ಲುಪೇಟೆ: ಕಾಡಾನೆ ದಾಳಿ ನಿಯಂತ್ರಿಸುವಂತೆ ಅರಣ್ಯ ಇಲಾಖೆಗೆ ಮನವಿ

ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು  ಗುಂಡ್ಲುಪೇಟೆ: ತಾಲ್ಲೂಕಿನ ಮಂಚಹಳ್ಳಿ ಹಾಗೂ ಸವಕನಹಳ್ಳಿ ಪಾಳ್ಯದಲ್ಲಿ ಕಾಡಾನೆಗಳ ದಾಳಿಯಿಂದ ಫಸಲು ನಾಶವಾಗುತ್ತಿದ್ದು,…

11 hours ago

ಗುಂಡ್ಲುಪೇಟೆ: ಪಡಗೂರು ಬಳಿ ಎರಡು ಚಿರತೆ ಮರಿಗಳ ರಕ್ಷಣೆ

ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು ಗುಂಡ್ಲುಪೇಟೆ: ತಾಲ್ಲೂಕಿನ ಪಡಗೂರು ಗ್ರಾಮದ ಶಿವಕುಮಾರ್ ಎಂಬುವವರ ಜಮೀನಿನಲ್ಲಿ ಎರಡು ಚಿರತೆ ಮರಿಗಳನ್ನು…

11 hours ago