ಕ್ರೀಡೆ

24 ಎಸೆತಕ್ಕೆ ಶತಕ, 43 ಎಸೆತಕ್ಕೆ 193 ರನ್; ನಿರ್ಮಾಣವಾಯಿತು ವಿಶ್ವದಾಖಲೆ

ಕ್ರಿಕೆಟ್‌ ಲೋಕದಲ್ಲಿ ಆಗಾಗ ಹಲವಾರು ದಾಖಲೆಗಳು ನಿರ್ಮಾಣವಾಗುತ್ತಲೇ ಇರುತ್ತವೆ. ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ನಿರ್ಮಾಣವಾದ ದಾಖಲೆಗಳು ಸುದ್ದಿಯಾದರೆ, ದೇಶಿ ಕ್ರಿಕೆಟ್‌ನಲ್ಲಿ ನಿರ್ಮಾಣವಾದ ಅದೆಷ್ಟೋ ದಾಖಲೆಗಳು ಹೆಚ್ಚು ಸುದ್ದಿಯಾಗದೇ ಉಳಿದುಕೊಂಡಿವೆ. ಇದೀಗ ಯುರೋಪಿಯನ್‌ ಟಿ 10 ಕ್ರಿಕೆಟ್‌ ಸರಣಿಯಲ್ಲಿ ಬೃಹತ್‌ ವಿಶ್ವ ದಾಖಲೆಯೊಂದು ನಿರ್ಮಾಣವಾಗಿದೆ.

ಸ್ಪೇನ್‌ನಲ್ಲಿ ನಡೆಯುತ್ತಿರುವ ಈ ಸರಣಿಯ ಕ್ಯಾಟಲುನ್ಯ ಜಾಗ್ವಾರ್‌ ಹಾಗೂ ಸೋಹಲ್‌ ಹಾಸ್ಪಿಟಲ್‌ ತಂಡಗಳ ನಡುವಿನ ಪಂದ್ಯದಲ್ಲಿ ಹಂಝ ಸಲೀಮ್‌ ದಾರ್‌ ಎಂಬ ಬ್ಯಾಟ್ಸ್‌ಮನ್‌ ಅತಿವೇಗದ ಶತಕ ಬಾರಿಸಿದ ದಾಖಲೆ ಬರೆದಿದ್ದಾರೆ. ಕೇವಲ 24 ಎಸೆತಗಳಲ್ಲಿ ಹಂಝ ಸಲೀಮ್‌ ದಾರ್‌ ಶತಕ ಬಾರಿಸಿದರು.

ತಮ್ಮ ಇನ್ನಿಂಗ್ಸ್‌ನ ಆರಂಭದಿಂದಲೇ ಅಬ್ಬರದ ಬ್ಯಾಟಿಂಗ್‌ ನಡೆಸಿದ ಹಂಝ ಸಲೀಮ್‌ ದಾರ್‌ ಒಟ್ಟು 43 ಎಸೆತಗಳಲ್ಲಿ 22 ಸಿಕ್ಸರ್‌ ಹಾಗೂ 14 ಬೌಂಡರಿ ಬಾರಿಸುವ ಮೂಲಕ ಅಜೇಯ 193 ರನ್‌ ದಾಖಲಿಸಿದರು. ಹಂಝ ಸಲೀಮ್‌ ದಾರ್‌ ಅಬ್ಬರದ ಬ್ಯಾಟಿಂಗ್‌ ನೆರವಿನಿಂದ ಕ್ಯಾಟಲುನ್ಯ ಜಾಗ್ವಾರ್‌ ತಂಡ 10 ಓವರ್‌ಗಳಲ್ಲಿ 257 ರನ್‌ ಕಲೆಹಾಕಿ ಸೋಹಲ್‌ ಹಾಸ್ಪಿಟಲ್‌ ತಂಡಕ್ಕೆ ಗೆಲ್ಲಲು 258 ರನ್‌ಗಳ ಕಠಿಣ ಗುರಿಯನ್ನು ನೀಡಿತ್ತು. ಈ ಗುರಿಯನ್ನು ಬೆನ್ನಟ್ಟುವಲ್ಲಿ ವಿಫಲಗೊಂಡ ಸೋಹಲ್‌ ಹಾಸ್ಪಿಟಲ್‌ ತಂಡ 10 ಓವರ್‌ಗಳಲ್ಲಿ ಕೇವಲ 104 ರನ್‌ ಗಳಿಸಿತು ಹಾಗೂ ಕ್ಯಾಟಲುನ್ಯ ಜಾಗ್ವಾರ್‌ ತಂಡವು 153 ರನ್‌ಗಳ ಭರ್ಜರಿ ಗೆಲುವು ದಾಖಲಿಸಿತು.

andolana

Recent Posts

ಹೋಟೆಲ್,ರೆಸ್ಟೋರೆಂಟ್‌ಗಳ ಮೇಲೆ ಮುಂದುವರೆದ ದಾಳಿ

ಬೆಂಗಳೂರು ನಂತರ ಮೈಸೂರು, ಮಂಗಳೂರಿನಲ್ಲೂ ಕಾರ್ಯಾಚರಣೆ ಬೆಂಗಳೂರು : ರಾಜ್ಯದಲ್ಲಿ ಆಹಾರದ ಗುಣಮಟ್ಟ ಮತ್ತು ನೈರ್ಮಲ್ಯದ ಕುರಿತು ಸಾರ್ವಜನಿಕರಿಂದ ಹೆಚ್ಚುತ್ತಿರುವ…

6 hours ago

ನಂ.ಗೂಡು | ಮತ್ತೆ ಕಳಚಿ ಬೀಳುತ್ತಿರುವ ಸೇತುವೆಯ ಸೀಲಿಂಗ್ ಕಾಂಕ್ರೀಟ್

ಮೂರೂ ದಿನಗಳಿಂದಲೂ ಸೇತುವೆಯತ್ತ ಮುಖ ಮಾಡದ ರೈಲ್ವೆ ಇಲಾಖೆ ನಂಜನಗೂಡು : ಮಹಾತ್ಮಾಗಾಂಧಿ ಶತಾಬ್ಧಿ ರಸ್ತೆಗೆ ನಿರ್ಮಿಸಿರುವ ರೈಲ್ವೆ ಕೆಳ…

8 hours ago

ರಾವಣನ ಪಾತ್ರವನ್ನ ನನಗಿಂತ ಉತ್ತಮವಾಗಿ ಯಾರೂ ಮಾಡಲು ಸಾಧ್ಯವಿಲ್ಲ : ಯಶ್

ಮುಂಬೈ : ‘ಟಾಕ್ಸಿಕ್’ ಮತ್ತು ‘ರಾಮಾಯಣ’ ಸಿನಿಮಾಗಳ ಕೆಲಸಗಳಲ್ಲಿ ನಿರತರಾಗಿರುವ ಯಶ್, ‘ರಾಮಾಯಣ’ ಸಿನಿಮಾದಲ್ಲಿ ಕೇವಲ ಸಹ-ನಿರ್ಮಾಪಕರಾಗಿ ಮಾತ್ರವಲ್ಲದೆ ʻರಾವಣʼನ…

9 hours ago

ರಾಜ್ಯಗಳಿಗೆ ನೀಡುವ ವಿಪತ್ತು ಪರಿಹಾರದಲ್ಲೂ ಕೇಂದ್ರದಿಂದ ವಂಚನೆ : ಸಿಎಜಿ ವರದಿ

ಬೆಂಗಳೂರು : ಭೂಕುಸಿತ, ಬರದಂತಹ ಭೀಕರ ಪ್ರಕೃತಿ ವಿಕೋಪಗಳಿಂದ ಕಂಗಾಲಾಗಿರುವ ರಾಜ್ಯಗಳಿಗೆ ಕೇಂದ್ರ ಸರ್ಕಾರದಿಂದ ಸಿಗಬೇಕಾದ ವಿಪತ್ತು ಪರಿಹಾರ ಅನುದಾನದಲ್ಲಿ…

10 hours ago

ಶಾಸಕರ ಭರವಸೆ ಬಳಿಕ ಪ್ರತಿಭಟನೆ ಹಿಂಪಡೆತ : ಮೃತರ ಕುಟುಂಬಕ್ಕೆ ತಲಾ ₹15 ಲಕ್ಷ ಪರಿಹಾರ

ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳ ದಾಳಿಗೆ ಮೃತಪಟ್ಟ ಕುಟುಂಬಗಳಿಗೆ ಸರ್ಕಾರಿ ಉದ್ಯೋಗ, ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸ ಹಾಗೂ ಸೂಕ್ತ…

12 hours ago

ವಾರಣಾಸಿ ಏರ್‌ಫೋರ್ಟ್‌ | ಶಸ್ತ್ರಾಸ್ತ್ರ ತಪಾಸಣೆ ವೇಳೆ ಆಕಸ್ಮಿಕ ಗುಂಡಿನ ದಾಳಿ ; ಇಬ್ಬರಿಗೆ ಗಾಯ

ವಾರಣಾಸಿ : ವಾರಣಾಸಿಯ ಲಾಲ್ ಬಹದ್ದೂರ್ ಶಾಸ್ತ್ರಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭಾನುವಾರ ಬೆಳಿಗ್ಗೆ ನಡೆದ ಆಘಾತಕಾರಿ ಘಟನೆಯೊಂದರಲ್ಲಿ, ಶಸ್ತ್ರಾಸ್ತ್ರ ತಪಾಸಣೆಯ…

13 hours ago