ನವದೆಹಲಿ: ಒಲಿಂಪಿಕ್ಸ್ ಗೇಮ್ನ ಒಂದೇ ಆವೃತ್ತಿಯಲ್ಲಿ ಎರಡು ಪದಕ ಗೆದ್ದ ಭಾರತೀಯ ಮೊದಲ ಅಥ್ಲೀಟ್ ಎಂಬ ಹೆಗ್ಗಳಿಕೆ ಪಡೆದಿರುವ ಮನು ಭಾಕರ್ ಇಂದು(ಆ.7) ಭಾರತಕ್ಕೆ ಬಂದಿಳಿದಿದ್ದಾರೆ.
ದೆಹಲಿಯ ಇಂದಿರಾಗಾಂಧಿ ಅಂತರಾಷ್ಟ್ರೀಯ ವಿಮಾಣ ನಿಲ್ದಾಣಕ್ಕೆ ಬಂದ ಮನು ಬಾಕರ್ ಅವರಿಗೆ, ವಿಮಾನ ನಿಲ್ದಾಣದಲ್ಲಿ ಭವ್ಯ ಸ್ವಾಗತ ಸಿಕ್ಕಿದೆ. ಅಭಿಮಾನಿಗಳು, ಕುಟುಂಬಸ್ಥರು, ಕ್ರೀಡಾಪಟುಗಳು ಹಾಗೂ ಅವರ ತವರು ರಾಜ್ಯ ಉತ್ತರಾಖಂಡದ ಅಧಿಕಾರಿಗಳು ಅವರನ್ನು ಕಾದು ಸ್ವಾಗತಿಸಿದರು.
ಹಾಡು, ನೃತ್ಯ, ತಮಟೆ ಬಾರಿಸುವ ಮೂಲಕ ಭಾಕರ್ ಆಗಮನವನ್ನು ಏರ್ಪೋರ್ಟ್ನಲ್ಲಿ ಜನ ಸಂಭ್ರಮಿಸಿದರು.
ಮಹಿಳೆಯರ 10ಮೀಟರ್ ಏರ್ ಶೂಟರ್ ಸ್ಪರ್ಧೆಯಲ್ಲಿ 22 ವರ್ಷದ ಮನು ಭಾಕರ್ ಕಂಚು ಗೆಲ್ಲುವ ಮೂಲಕ ಭಾರತದ ಖಾತೆ ತೆರೆದರು. ನಂತರ ಏರ್ ಪಿಸ್ತೂಲ್ ಮಿಶ್ರ ತಂಡ ವಿಭಾಗದಲ್ಲಿ ಕಂಚಿನ ಪದಕ ಗೆದ್ದಿದ್ದಾರೆ.
ಆಗಸ್ಟ್ 11 ಕ್ಕೆ ಮತ್ತೆ ಪ್ಯಾರಿಸ್ಗೆ ಮನು ಭಾಕರ್ ತೆರಳಲಿದ್ದು, ಒಲಿಂಪಿಕ್ಸ್ ಸಮಾರೋಮ ಸಮಾರಂಭದಲ್ಲಿ ಭಾರತದ ಮಹಿಳಾ ಧ್ವಜಧಾರಿಯಾಗಿ ಪಾಲ್ಗೊಳ್ಳಲಿದ್ದಾರೆ.
ನವದೆಹಲಿ: ಸೆಪ್ಟೆಂಬರ್ 5ರಂದು ದೆಹಲಿಯಲ್ಲಿ ಹಮ್ಮಿಕೊಳ್ಳಲಾಗಿದ್ದ ಪ್ರತಿಭಟನಾ ಮೆರವಣಿಗೆಯನ್ನು ಹಿಂಪಡೆಯಲಾಗಿದೆ ಎಂದು ಕಾಕ್ರೋಚ್ ಜನತಾ ಪಾರ್ಟಿ (CJP) ಸುಪ್ರೀಂ ಕೋರ್ಟ್ಗೆ…
ನವದೆಹಲಿ: ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಖಂಡಿಸಿ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಪ್ರತಿಭಟನಾಕಾರರ ವಿರುದ್ಧ ದಾಖಲಾಗಿದ್ದ ಎಫ್ಐಆರ್ ಅನ್ನು ಸುಪ್ರೀಂಕೋರ್ಟ್ ರದ್ದುಪಡಿಸಿದೆ. ಜುಲೈನಲ್ಲಿ…
ಕಠ್ಮಂಡು: ನೇಪಾಳದಲ್ಲಿ ಭೀಕರ ಪ್ರವಾಹದ ಅಬ್ಬರ ಮುಂದುವರಿದಿದ್ದು, ಮೃತರ ಸಂಖ್ಯೆ 939ಕ್ಕೆ ಏರಿಕೆಯಾಗಿದೆ. ಇನ್ನೂ ಸುಮಾರು 4 ಸಾವಿರ ಜನರು…
ಮಡಿಕೇರಿ: ತಲಕಾವೇರಿ ಸಮೀಪದ ತಣ್ಣಿಮಾನಿ ಗ್ರಾಮದಲ್ಲಿ ತಾಯಿ ಮತ್ತು ಮಗಳು ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ನಡೆದಿದೆ.…
ಮಡಿಕೇರಿ: ಕೊಡಗಿನಲ್ಲಿ ಭಾರೀ ಮಳೆಗೆ ಬೆಟ್ಟದಲ್ಲಿ ಜಾರಿನಿಂತ ಬೃಹತ್ ಕಲ್ಲುಬಂಡೆ ಆತಂಕ ಮೂಡಿಸಿದೆ. ಮಡಿಕೇರಿ ತಾಲೂಕಿನ ಕುಂದಚೇರಿ ಗ್ರಾಮದ ಪೊಲಮಾನಿ…
ಮೈಸೂರಿನ ಚಾಮರಾಜ ಮೊಹದ ಸೋನಾರ್ ಬೀದಿಯಲ್ಲಿ ಸಾರ್ವಜನಿಕ ನಲ್ಲಿಗೆ ಸಂಪರ್ಕ ಕಲ್ಪಿಸುವ ಪೈಪ್ ಪಡೆದುಹೋಗಿದ್ದು, ಕುಡಿಯುವ ನೀರು ಚರಂಡಿ ಪಾಲಾಗುತ್ತಿದೆ.…