ಬೆಂಗಳೂರು: ಬರ್ಮಿಂಗ್ಹ್ಯಾಮ್ನ ಎಡ್ಜ್ ಬಾಸ್ಟನ್ ಕ್ರೀಡಾಂಗಣದಲ್ಲಿ ನಡೆದ ದಿ ಆಷಸ್ ಟೆಸ್ಟ್ ಕ್ರಿಕೆಟ್ ಸರಣಿಯ ಮೊದಲ ಹಣಾಹಣಿಯಲ್ಲಿ ಜಿದ್ದಾಜಿದ್ದಿನ ಪೈಪೋಟಿ ನಡುವೆ ಆತಿಥೇಯ ಇಂಗ್ಲೆಂಡ್ ಎದುರು ಆಸ್ಟ್ರೇಲಿಯಾ 2 ವಿಕೆಟ್ಗಳ ರೋಚಕ ಜಯ ದಾಖಲಿಸಿತು.
ಪಂದ್ಯದಲ್ಲಿ ಇಂಗ್ಲೆಂಡ್ ತಂಡ ಸೋತರು ನಾಯಕ ಬೆನ್ ಸ್ಟೋಕ್ಸ್ ಅನುಸರಿಸಿದ ಆಕ್ರಮಣಕಾರಿ ಆಟದ ರಣತಂತ್ರಕ್ಕೆ ಭಾರಿ ಮೆಚ್ಚುಗೆ ವ್ಯಕ್ತವಾಗಿದೆ. ಅದರಲ್ಲೂ ಮೊದಲ ದಿನವೇ 383/8 ರನ್ಗಳಿಗೆ ಡಿಕ್ಲೇರ್ ಮಾಡಿ ದಿಟ್ಟ ನಿರ್ಧಾರ ತೆಗೆದುಕೊಂಡಿದ್ದರು. ಬಳಿಕ ಮೊದಲ ಇನಿಂಗ್ಸ್ನಲ್ಲಿ ಇಂಗ್ಲೆಂಡ್ 7 ರನ್ಗಳ ಮುನ್ನಡೆಗಳಿಸಿದರೂ, ಪಂದ್ಯದ ಕೊನೇ ದಿನದಾಟದಲ್ಲಿ ಕೇವಲ 2 ವಿಕೆಟ್ ಅಂತರದಲ್ಲಿ ನಿರಾಶೆ ಅನುಭವಿಸಿತು.
ಈ ಬಗ್ಗೆ ಮಾತನಾಡಿರುವ ದಕ್ಷಿಣ ಆಫ್ರಿಕಾ ತಂಡದ ಮಾಜಿ ನಾಯಕ ಹಾಗೂ ಮಿಸ್ಟರ್ 360 ಖ್ಯಾತಿಯ ದಿಗ್ಗಜ ಬ್ಯಾಟರ್ ಎಬಿ ಡಿ’ವಿಲಿಯರ್ಸ್, ಇಂಗ್ಲೆಂಡ್ ನಾಯಕ ಬೆನ್ ಸ್ಟೋಕ್ಸ್ ಅವರ ಕ್ಯಾಪ್ಟನ್ಸಿ ಶೈಲಿಯನ್ನು ಟೀಮ್ ಇಂಡಿಯಾದ ಮಾಜಿ ನಾಯಕ ಹಾಗೂ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡವನ್ನು ಮುನ್ನಡೆಸುತ್ತಿರುವ ಎಂಎಸ್ ಧೋನಿ ಅವರ ಶೈಲಿಗೆ ಹೋಲಿಕೆ ಮಾಡಿದ್ದಾರೆ. ಟೆಸ್ಟ್ ಕ್ರಿಕೆಟ್ನಲ್ಲಿ ಗೆಲುವು ಕಾಣಲು ಪರಿಸ್ಥಿತಿಗಳಿಗೆ ತಕ್ಕಂತೆ ದಿಟ್ಟ ನಿರ್ಧಾರಗಳನ್ನು ತೆಗದುಕೊಳ್ಳುವುದರ ಮೇಲಿರುತ್ತದೆ ಎಂದು ಎಬಿಡಿ ತಮ್ಮ ಟ್ವಿಟರ್ ಗೋಡೆಯ ಮೇಲೆ ಬರೆದುಕೊಂಡಿದ್ದಾರೆ.
ಕಳೆದ ವರ್ಷ ಇಂಗ್ಲೆಂಡ್ ಟೆಸ್ಟ್ ತಂಡದ ಕ್ಯಾಪ್ಟನ್ಸಿಗೆ ಜೋ ರೂಟ್ ಗುಡ್-ಬೈ ಹೇಳಿದ್ದರು. ಬಳಿಕ ಮುಖ್ಯ ಕೋಚ್ ಬ್ರೆಂಡನ್ ಮೆಕಲಮ್ ಮತ್ತು ನೂತನ ನಾಯಕ ಬೆನ್ ಸ್ಟೋಕ್ಸ್ ಜೋಡಿ ಅಕ್ಷರಶಃ ಮೋಡಿ ಮಾಡಿದೆ. ಕಳೆದ 14 ಟೆಸ್ಟ್ಗಳಲ್ಲಿ ಇಂಗ್ಲೆಂಡ್ 10 ಪಂದ್ಯಗಳನ್ನು ಗೆದ್ದು ಬೀಗಿದೆ. ಸ್ಟೋಕ್ಸ್ ಮತ್ತು ಮೆಕಲಮ್ ಅವರ ‘ಬಾಝ್ಬಾಲ್’ ಶೈಲಿಯ ಆಕ್ರಮಣಕಾರಿ ಕ್ರಿಕೆಟ್ ಜಗತ್ತನ್ನು ಅಕ್ಷರಶಃ ಬೆರಗುಗೊಳಿಸಿದೆ.
ಮಳವಳ್ಳಿ: ಪೂರಿಗಾಲಿ ಗ್ರಾಮದಲ್ಲಿ ರಸ್ತೆ ಅಗಲೀಕರಣ ಕಾಮಗಾರಿ ಆರಂಭವಾಗಿದ್ದು, ರಸ್ತೆ ಬದಿಯ ಕಟ್ಟಡ ನೆಲಸಮ ಮಾಡುವಾಗ ಕಟ್ಟಡದ ಗೋಡೆ ಹಿಟಾಚಿ…
ಮೈಸೂರು: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ನೂತನ ಕುಲಪತಿಯಾಗಿ ಶಿಕ್ಷಣತಜ್ಞ, ವಿಜ್ಞಾನಿ ಪ್ರೊ.ಎ.ಪಿ.ಜ್ಞಾನಪ್ರಕಾಶ್ ಅವರನ್ನು ನೇಮಕ ಮಾಡಿ ಆದೇಶ ಹೊರಡಿಸಲಾಗಿದೆ.…
ಕೃಷ್ಣಾ ಸಿದ್ದಾಪುರ ವಿರಾಜಪೇಟೆ: ತಾಲೂಕಿನ ಪಳ್ಳಕೆರೆ ವ್ಯಾಪ್ತಿಯಲ್ಲಿ ಕಾಡಾನೆ ದಾಳಿಯಿಂದ ಮಹಿಳೆಯೊಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ನಡೆದಿದೆ. ಕೆಲಸಕ್ಕೆ ತೆರಳಿದ್ದ…
ಮೈಸೂರು: ಮೈಸೂರು ನಗರದ ಜಿಲ್ಲಾಧಿಕಾರಿ ಕಚೇರಿ ಆವರಣದ ಬಳಿ ಮಾಜಿ ಸಿಎಂ ದೇವರಾಜ ಅರಸು ಅವರ ನೂತನ ಪ್ರತಿಮೆಯನ್ನು ಪ್ರತಿಷ್ಠಾಪಿಸಲಾಗಿದೆ.…
ವಿಜಯನಗರ: ತುಂಗಭದ್ರಾ ಜಲಾಶಯದಲ್ಲಿ ಅಳವಡಿಸಲಾಗಿರುವ ನೂತನ ಕ್ರೆಸ್ಟ್ ಗೇಟ್ಗಳನ್ನು ಮೂವರು ಮುಖ್ಯಮಂತ್ರಿಗಳು ಉದ್ಘಾಟಿಸಿದ ಅಪರೂಪದ ಸಮಾರಂಭಕ್ಕೆ ಸಾವಿರಾರು ಮಂದಿ ಸಾಕ್ಷಿಯಾದರು.…
ನವದೆಹಲಿ: ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ಕೇಂದ್ರದ ಕೃಷಿ ಮತ್ತು ರೈತ ಕಲ್ಯಾಣ ಖಾತೆ ಮಂತ್ರಿಗಳಾದ ಶಿವರಾಜ್ ಸಿಂಗ್…