ಕ್ರೀಡೆ

ವಿರಾಟ್‌ ಕೊಹ್ಲಿಗೆ ಆಲ್‌ ದಿ ಬೆಸ್ಟ್‌ ಎಂದ ಎಬಿಡಿ…!

ಶುರುವಾಗಿದ್ದು, ಉದ್ಘಾಟನಾ ಪಂದ್ಯದಲ್ಲಿ ಶ್ರೀಲಂಕಾ ಎದುರು ಅಫಘಾನಿಸ್ತಾನ ಜಯ ದಾಖಲಿಸಿದೆ. ಇದೀಗ

ದುಬೈ: ಕ್ರಿಕೆಟ್‌ ಅಭಿಮಾನಿಗಳು ಆಸಕ್ತಿಯಿಂದ ಕಾಯುತ್ತಿರುವ ಏಷ್ಯಾ ಕಪ್‌ 2022 ಕ್ರಿಕೆಟ್‌ ಟೂರ್ನಿ ಟೂರ್ನಿಯ ಎರಡನೇ ಪಂದ್ಯದಲ್ಲಿ ಇಂದು ಸಾಂಪ್ರದಾಯಿಕ ಎದುರಾಳಿಗಳಾದ ಭಾರತ ಮತ್ತು ಪಾಕಿಸ್ತಾನ ತಂಡಗಳು ಕಾದಾಟ ನಡೆಸಲಿವೆ.

ದುಬೈನ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ಇಂಡೊ-&-ಪಾಕ್‌ ಪಂದ್ಯ ನಡೆಯಲಿದ್ದು, ಈ ಪಂದ್ಯದಲ್ಲಿ ಭಾರತ ತಂಡದ ಮಾಜಿ ನಾಯಕ ವಿರಾಟ್‌ ಕೊಹ್ಲಿ ಕಣಕ್ಕಿಳಿದರೆ ಅವರಿಗಿದು 100ನೇ ಅಂತಾರಾಷ್ಟ್ರೀಯ ಟಿ20 ಕ್ರಿಕೆಟ್‌ ಪಂದ್ಯವಾಗಲಿದೆ.

ಕೊಹ್ಲಿ ಹಲವು ತಿಂಗಳ ವಿರಾಮದ ಬಳಿಕ ಸ್ಪರ್ಧಾತ್ಮಕ ಕ್ರಿಕೆಟ್‌ಗೆ ಮತ್ತೆ ಮರಳಲಿದ್ದು ತಮ್ಮ 100ನೇ ಟಿ20 ಪಂದ್ಯವನ್ನಾಡಲು ಕಾತರರಾಗಿದ್ದಾರೆ. ಆಡಲು ಅವಕಾಶ ದೊರೆತರೆ ಎಲ್ಲಾ ಮಾದರಿಯ ಕ್ರಿಕೆಟ್‌ನಲ್ಲಿ ಭಾರತದ ಪರ 100 ಪಂದ್ಯಗಳನ್ನು ಆಡಿದ ಮೊದಲ ಆಟಗಾರ ಹಾಗೂ ವಿಶ್ವದ 2ನೇ ಆಟಗಾರ ಎಂಬ ವಿಶೇಷ ದಾಖಲೆ ಕೊಹ್ಲಿ ಪಾಲಾಗಲಿದೆ.

ಈ ನಡುವೆ ಹೈ-ವೋಲ್ಟೇಜ್‌ ಪಂದ್ಯದ ಮೂಲಕ ಕಮ್‌ಬ್ಯಾಕ್‌ ಮಾಡುತ್ತಿರುವ ಕೊಹ್ಲಿ ಅವರಿಗೆ ರಾಯಲ್‌ ಚಾಲೆಂಜರ್ಸ್‌ನಲ್ಲಿ ಅವರ ಸಹ ಆಟಗಾರನಾಗಿದ್ದ ಸ್ನೇಹಿತ, ದಕ್ಷಿಣ ಆಫ್ರಿಕಾ ತಂಡದ ಮಾಜಿ ನಾಯಕ ಎಬಿ ಡಿʼವಿಲಿಯರ್ಸ್‌ ವಿಶೇಷ ಸಂದೇಶ ರವಾನಿಸಿದ್ದಾರೆ. ಏಷ್ಯಾ ಕಪ್‌ 2022 ಟೂರ್ನಿಯಲ್ಲಿ ತಮ್ಮ ಶ್ರೇಷ್ಠ ಲಯ ಕಂಡುಕೊಳ್ಳಿ ಎಂದು ಎಬಿಡಿ ಹಾರೈಸಿದ್ದಾರೆ. ಇನ್ನೂ ಅನೇಕ ಮಾಜಿ ಆಟಗಾರರು ಕೊಹ್ಲಿ ಅವರಿಗೆ ಶುಭ ಹಾರೈಸಿದ್ದಾರೆ.

ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಕಳೆದ 3 ವರ್ಷಗಳಲ್ಲಿ 33 ವರ್ಷದ ಬಲಗೈ ಬ್ಯಾಟರ್‌ ವಿರಾಟ್‌ ಕೊಹ್ಲಿ ಸಾಲು ಸಾಲು ವೈಫಲ್ಯ ಅನುಭವಿಸಿದ್ದಾರೆ. ತಮ್ಮ 71ನೇ ಅಂತಾರಾಷ್ಟ್ರೀಯ ಶತಕದ ಸಲುವಾಗಿ ಕಿಂಗ್‌ ಕೊಹ್ಲಿ ಭಗೀರಥ ಪ್ರಯತ್ನ ನಡೆಸುತ್ತಿದ್ದಾರೆ.

andolana

Recent Posts

ಹುಣಸೆ, ಹಲಸು ಮತ್ತು ನೇರಳೆಗಾಗಿ ರಾಷ್ಟ್ರೀಯ ಮಂಡಳಿ ರಚಿಸಲು ಕೇಂದ್ರಕ್ಕೆ ಹೆಚ್.ಡಿ.ದೇವೇಗೌಡರ ಮನವಿ

ಹೊಸದಿಲ್ಲಿ: ಮಾಜಿ ಪ್ರಧಾನಿಗಳು ಹಾಗೂ ರಾಜ್ಯಸಭಾ ಸದಸ್ಯರಾದ ಹೆಚ್.ಡಿ. ದೇವೇಗೌಡರು ಶುಕ್ರವಾರ ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ ಖಾತೆ…

1 hour ago

ಪೌರಕಾರ್ಮಿಕರು ಸೇರಿ ಎಲ್ಲಾ ಕಾರ್ಮಿಕರಿಗೆ ಪಾಲಿಕೆಯಿಂದಲೇ ನೇರ ವೇತನ ಪಾವತಿಗೆ ಕ್ರಮ : ಬೈರತಿ ಸುರೇಶ್

ವಿಧಾನಸಭೆ : ರಾಜ್ಯದಲ್ಲಿರುವ ಮಹಾನಗರಪಾಲಿಕೆಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ಪೌರ ಕಾರ್ಮಿಕರು, ಚಾಲಕರು, ಲೋಡರ್ ಗಳು, ತ್ಯಾಜ್ಯ ಸಂಗ್ರಹಕಾರರು ಸೇರಿದಂತೆ ಇನ್ನಿತರೆ…

2 hours ago

ಮೈಸೂರು | ನಾಳೆ ಗಿಚ್ಚಿ ಗಿಲಿಗಿಲಿ ಜೂನಿಯರ‍್ಸ್ ರಿಯಾಲಿಟಿ ಶೋʼನ ಆಡಿಷನ್‌

ಮೈಸೂರು : ಕಲರ್ಸ್ ಕನ್ನಡ ವಾಹಿನಿಯ ‘ಗಿಚ್ಚಿ ಗಿಲಿಗಿಲಿ ಜೂನಿಯರ‍್ಸ್’ ರಿಯಾಲಿಟಿ ಷೋಗಾಗಿ ಡಿ.20 ರಂದು ಬೆಳಿಗ್ಗೆ 11 ಗಂಟೆಗೆ…

2 hours ago

ಆರೋಗ್ಯ ಸೇತು-ಸಂಚಾರಿ ಆರೋಗ್ಯ ಘಟಕಕ್ಕೆ ಸಿಎಂ ಚಾಲನೆ

ಬೆಳಗಾವಿ : ಆರೋಗ್ಯ ಸೇವೆಯಿಂದ ವಂಚಿತರಾಗಿರುವ ಜನರಿಗೆ ಆರೋಗ್ಯ ಸೇತು-ಸಂಚಾರಿ ಆರೋಗ್ಯ ಘಟಕ ಯೋಜನೆ ನೆರವಾಗಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ…

3 hours ago

ಸಿನಿಮಾ ಜವಾಬ್ದಾರಿಯುಳ್ಳ ಶಿಕ್ಷಣದ ಮಾಧ್ಯಮವಾಗಬೇಕು : ನಿರ್ದೇಶಕ ಸುರೇಶ್‌ ಆಶಯ

ಮೈಸೂರು : ಸಿನಿಮಾಗಳು ಮನರಂಜನೆಗಷ್ಟೇ ಸೀಮಿತವಾಗದೆ ಸಾಮಾಜಿಕ ಜವಾಬ್ದಾರಿಯುಳ್ಳ ಶಿಕ್ಷಣದ ಮಾಧ್ಯಮವಾಗಬೇಕು ಎಂದು ಖ್ಯಾತ ನಿರ್ದೇಶಕ ಬಿ.ಸುರೇಶ್ ಆಶಿಸಿದರು. ನಗರದ…

3 hours ago

ಬಾಲ್ಯ ವಿವಾಹ, ಬಾಲ ಕಾರ್ಮಿಕ ಪದ್ಧತಿಗಳ ಕುರಿತು ಅರಿವು ಮೂಡಿಸಿ : ಜಿಲ್ಲಾಧಿಕಾರಿ ಸೂಚನೆ

ಮೈಸೂರು : ಅಲ್ಪಸಂಖ್ಯಾತರ ಸಮುದಾಯ ವಾಸಿಸುವ ಸ್ಥಳಗಳಲ್ಲಿ ಬಾಲ್ಯ ವಿವಾಹ ಹಾಗೂ ಬಾಲಕಾರ್ಮಿಕ ಪದ್ಧತಿಗಳ ದುಷ್ಪರಿಣಾಮಗಳ ಕುರಿತು ಅರಿವು ಕಾರ್ಯಕ್ರಮಗಳನ್ನು…

3 hours ago