ಕ್ರೀಡೆ

ವಿರಾಟ್‌ ಕೊಹ್ಲಿಗೆ ಆಲ್‌ ದಿ ಬೆಸ್ಟ್‌ ಎಂದ ಎಬಿಡಿ…!

ಶುರುವಾಗಿದ್ದು, ಉದ್ಘಾಟನಾ ಪಂದ್ಯದಲ್ಲಿ ಶ್ರೀಲಂಕಾ ಎದುರು ಅಫಘಾನಿಸ್ತಾನ ಜಯ ದಾಖಲಿಸಿದೆ. ಇದೀಗ

ದುಬೈ: ಕ್ರಿಕೆಟ್‌ ಅಭಿಮಾನಿಗಳು ಆಸಕ್ತಿಯಿಂದ ಕಾಯುತ್ತಿರುವ ಏಷ್ಯಾ ಕಪ್‌ 2022 ಕ್ರಿಕೆಟ್‌ ಟೂರ್ನಿ ಟೂರ್ನಿಯ ಎರಡನೇ ಪಂದ್ಯದಲ್ಲಿ ಇಂದು ಸಾಂಪ್ರದಾಯಿಕ ಎದುರಾಳಿಗಳಾದ ಭಾರತ ಮತ್ತು ಪಾಕಿಸ್ತಾನ ತಂಡಗಳು ಕಾದಾಟ ನಡೆಸಲಿವೆ.

ದುಬೈನ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ಇಂಡೊ-&-ಪಾಕ್‌ ಪಂದ್ಯ ನಡೆಯಲಿದ್ದು, ಈ ಪಂದ್ಯದಲ್ಲಿ ಭಾರತ ತಂಡದ ಮಾಜಿ ನಾಯಕ ವಿರಾಟ್‌ ಕೊಹ್ಲಿ ಕಣಕ್ಕಿಳಿದರೆ ಅವರಿಗಿದು 100ನೇ ಅಂತಾರಾಷ್ಟ್ರೀಯ ಟಿ20 ಕ್ರಿಕೆಟ್‌ ಪಂದ್ಯವಾಗಲಿದೆ.

ಕೊಹ್ಲಿ ಹಲವು ತಿಂಗಳ ವಿರಾಮದ ಬಳಿಕ ಸ್ಪರ್ಧಾತ್ಮಕ ಕ್ರಿಕೆಟ್‌ಗೆ ಮತ್ತೆ ಮರಳಲಿದ್ದು ತಮ್ಮ 100ನೇ ಟಿ20 ಪಂದ್ಯವನ್ನಾಡಲು ಕಾತರರಾಗಿದ್ದಾರೆ. ಆಡಲು ಅವಕಾಶ ದೊರೆತರೆ ಎಲ್ಲಾ ಮಾದರಿಯ ಕ್ರಿಕೆಟ್‌ನಲ್ಲಿ ಭಾರತದ ಪರ 100 ಪಂದ್ಯಗಳನ್ನು ಆಡಿದ ಮೊದಲ ಆಟಗಾರ ಹಾಗೂ ವಿಶ್ವದ 2ನೇ ಆಟಗಾರ ಎಂಬ ವಿಶೇಷ ದಾಖಲೆ ಕೊಹ್ಲಿ ಪಾಲಾಗಲಿದೆ.

ಈ ನಡುವೆ ಹೈ-ವೋಲ್ಟೇಜ್‌ ಪಂದ್ಯದ ಮೂಲಕ ಕಮ್‌ಬ್ಯಾಕ್‌ ಮಾಡುತ್ತಿರುವ ಕೊಹ್ಲಿ ಅವರಿಗೆ ರಾಯಲ್‌ ಚಾಲೆಂಜರ್ಸ್‌ನಲ್ಲಿ ಅವರ ಸಹ ಆಟಗಾರನಾಗಿದ್ದ ಸ್ನೇಹಿತ, ದಕ್ಷಿಣ ಆಫ್ರಿಕಾ ತಂಡದ ಮಾಜಿ ನಾಯಕ ಎಬಿ ಡಿʼವಿಲಿಯರ್ಸ್‌ ವಿಶೇಷ ಸಂದೇಶ ರವಾನಿಸಿದ್ದಾರೆ. ಏಷ್ಯಾ ಕಪ್‌ 2022 ಟೂರ್ನಿಯಲ್ಲಿ ತಮ್ಮ ಶ್ರೇಷ್ಠ ಲಯ ಕಂಡುಕೊಳ್ಳಿ ಎಂದು ಎಬಿಡಿ ಹಾರೈಸಿದ್ದಾರೆ. ಇನ್ನೂ ಅನೇಕ ಮಾಜಿ ಆಟಗಾರರು ಕೊಹ್ಲಿ ಅವರಿಗೆ ಶುಭ ಹಾರೈಸಿದ್ದಾರೆ.

ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಕಳೆದ 3 ವರ್ಷಗಳಲ್ಲಿ 33 ವರ್ಷದ ಬಲಗೈ ಬ್ಯಾಟರ್‌ ವಿರಾಟ್‌ ಕೊಹ್ಲಿ ಸಾಲು ಸಾಲು ವೈಫಲ್ಯ ಅನುಭವಿಸಿದ್ದಾರೆ. ತಮ್ಮ 71ನೇ ಅಂತಾರಾಷ್ಟ್ರೀಯ ಶತಕದ ಸಲುವಾಗಿ ಕಿಂಗ್‌ ಕೊಹ್ಲಿ ಭಗೀರಥ ಪ್ರಯತ್ನ ನಡೆಸುತ್ತಿದ್ದಾರೆ.

andolana

Recent Posts

ಲೋಕಾಯುಕ್ತ ಬಲೆಗೆ ಬಿದ್ದ ಪಿಡಿಒ

ಮೈಸೂರು: ಇ-ಸ್ವತ್ತು ಮಾಡಿ ಕೊಡಲು ಅರ್ಜಿದಾರರಿಗೆ ಹಣ ನೀಡುವಂತೆ ಒತ್ತಾಯ ಮಾಡಿದ ಗ್ರಾಮ ಪಂಚಾಯಿತಿ ಪಿಡಿಒ ಕುಳ್ಳೇಗೌಡ ನಾಲ್ಕು ಸಾವಿರ…

2 hours ago

ಅರ್ಥಪೂರ್ಣವಾಗಿ ಕನ್ನಡ ರಾಜ್ಯೋತ್ಸವ ಆಚರಣೆ – ಡಾ. ಪಿ ಶಿವರಾಜ್

ಮೈಸೂರು: ಕಳೆದ ಬಾರಿಯಂತೆ ಈ ಬಾರಿಯೂ ಅರ್ಥಪೂರ್ಣ ಹಾಗೂ ಅದ್ದೂರಿಯಾಗಿ ಕನ್ನಡ ರಾಜ್ಯೋತ್ಸವ ಆಚರಣೆ ಮಾಡಲಾಗುವುದು ಎಂದು ಅಪರ ಜಿಲ್ಲಾಧಿಕಾರಿ…

3 hours ago

ನಗರದ ಆರೋಗ್ಯ ಕಾಪಾಡುವ ಪೌರಕಾರ್ಮಿಕರ ಆರೋಗ್ಯವೂ ಮುಖ್ಯ: ಜಿ ಟಿ ದೇವೇಗೌಡ

ಮೈಸೂರು: ನಗರವನ್ನು ಸ್ವಚ್ಛಗೊಳಿಸುವ ಮೂಲಕ ಜನರ ಆರೋಗ್ಯ ಕಾಪಾಡುವ ಪೌರಕಾರ್ಮಿಕರ ಆರೋಗ್ಯವೂ ಮುಖ್ಯ ವಾಗಿದ್ದು, ಅವರು ಈ ವಿಷಯದಲ್ಲಿ ನಿರ್ಲಕ್ಷ್ಯ…

4 hours ago

ಹನೂರು: ಗುಂಡಿಮಯವಾದ ರಸ್ತೆ, ಸಾಮಾಜಿಕ ಜಾಲತಾಣ ಮೂಲಕ ಯುವಕ ವ್ಯಂಗ್ಯ

ಹನೂರು: ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಅತಿ ದೊಡ್ಡ ಗ್ರಾಮ ಪಂಚಾಯಿತಿ ಎಂದು ಪ್ರಸಿದ್ಧಿ ಪಡೆದಿರುವ ಮಾರ್ಟಳ್ಳಿ ಗ್ರಾಮ ಪಂಚಾಯಿತಿ ಮುಖ್ಯ…

4 hours ago

ಇಶಾ ಫೌಂಡೇಶನ್‌ ವಿರುದ್ಧದ ಪ್ರಕರಣ ವಜಾಗೊಳಿಸಿದ ಸುಪ್ರೀಂಕೋರ್ಟ್‌

ಹೊಸದಿಲ್ಲಿ: ತಮಿಳುನಾಡಿನ ಕೊಯಮತ್ತೂರಿನಲ್ಲಿರುವ ಸದ್ಗುರು ಜಗ್ಗಿ ವಾಸುದೇವ್‌ ಅವರ ಆಶ್ರಮ ಸೇರಲು ತನ್ನ ಇಬ್ಬರು ಹೆಣ್ಣುಮಕ್ಕಳನ್ನು ಬ್ರೈನ್‌ವಾಶ್‌ ಮಾಡಲಾಗಿದೆ ಎಂಬ…

5 hours ago

ಮಡಿಕೇರಿ: ಮಗನಿಂದಲೇ ತಂದೆಯ ಹತ್ಯೆ..

ಮಡಿಕೇರಿ: ಮಗನಿಂದಲೇ ತಂದೆ ಹತ್ಯೆಯಾದ ಘಟನೆ ಶ್ರೀಮಂಗಲ ಪೊಲೀಸ್ ಠಾಣಾ ವ್ಯಾಪ್ತಿಯ ಚಿಕ್ಕಮಂಡೂರು ಗ್ರಾಮದಲ್ಲಿ ನಡೆದಿದೆ. ಸಿ ಎನ್ ನಾಣಯ್ಯ…

6 hours ago