ಕ್ರೀಡೆ

5 ಸಿಕ್ಸ್​ಗಳೊಂದಿಗೆ ಅಬ್ಬರಿಸಿದ ಅಭಿನವ್: ಶಿವಮೊಗ್ಗ ಲಯನ್ಸ್​ಗೆ ರೋಚಕ ಜಯ

ಬೆಂಗಳೂರು : ನಗರದ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ ಮಹಾರಾಜ ಟ್ರೋಫಿಯ 3ನೇ ಟಿ20 ಪಂದ್ಯದಲ್ಲಿ ಮಂಗಳೂರು ಡ್ರಾಗನ್ಸ್ ವಿರುದ್ದ ಶಿವಮೊಗ್ಗ ಲಯನ್ಸ್ ರೋಚಕ ಜಯ ಸಾಧಿಸಿದೆ. ಈ ಪಂದ್ಯದಲ್ಲಿ ಟಾಸ್ ಗೆದ್ದ ಮಂಗಳೂರು ತಂಡದ ನಾಯಕ ಕೃಷ್ಣಪ್ಪ ಗೌತಮ್ ಶಿವಮೊಗ್ಗ ತಂಡವನ್ನು ಬ್ಯಾಟಿಂಗ್​ಗೆ ಆಹ್ವಾನಿಸಿತು.

ಮೊದಲು ಬ್ಯಾಟ್ ಮಾಡಿದ ಶಿವಮೊಗ್ಗ ಲಯನ್ಸ್ ತಂಡಕ್ಕೆ ರೋಹನ್ ಕದಮ್ (27) ಹಾಗೂ ನಿಹಾಲ್ ಉಳ್ಳಾಲ್ (28) ಉತ್ತಮ ಆರಂಭ ಒದಗಿಸಿದರು. ಇನ್ನು 3ನೇ ಕ್ರಮಾಂಕದಲ್ಲಿ ಬ್ಯಾಟ್​ ಬೀಸಿದ ರೋಹಿತ್ ಕುಮಾರ್ 18 ರನ್​ಗಳಿಸಿ ಔಟಾದರು.

ಆ ಬಳಿಕ ಜೊತೆಯಾದ ನಾಯಕ ಶ್ರೇಯಸ್ ಗೋಪಾಲ್ ಹಾಗೂ ಅಭಿನವ್ ಮನೋಹರ್ ಭರ್ಜರಿ ಬ್ಯಾಟಿಂಗ್ ಪ್ರದರ್ಶಿದರು. 32 ಎಸೆತಗಳಲ್ಲಿ 46 ರನ್ ಬಾರಿಸಿ ಶ್ರೇಯಸ್ ಗೋಪಾಲ್ ಔಟಾದರು.

ಆದರೆ ಇನ್ನೊಂದೆಡೆ ಸಿಡಿಲಬ್ಬರದ ಬ್ಯಾಟಿಂಗ್ ಮುಂದುವರೆಸಿದ ಅಭಿನವ್ ಮನೋಹರ್ 25 ಎಸೆತಗಳಲ್ಲಿ 5 ಭರ್ಜರಿ ಸಿಕ್ಸ್ ಹಾಗೂ 1 ಫೋರ್​ನೊಂದಿಗೆ 50 ರನ್ ಚಚ್ಚಿದರು. ಈ ಅರ್ಧಶತಕದ ನೆರವಿನೊಂದಿಗೆ ಶಿವಮೊಗ್ಗ ಲಯನ್ಸ್ ತಂಡವು 20 ಓವರ್​ಗಳಲ್ಲಿ 5 ವಿಕೆಟ್ ನಷ್ಟಕ್ಕೆ 176 ರನ್ ಕಲೆಹಾಕಿತು.

177 ರನ್​ಗಳ ಕಠಿಣ ಗುರಿ ಬೆನ್ನತ್ತಿದ ಮಂಗಳೂರು ಡ್ರಾಗನ್ಸ್ ತಂಡವು ನಿರೀಕ್ಷಿತ ಆರಂಭ ಪಡೆಯುವಲ್ಲಿ ವಿಫಲವಾಯಿತು. ಇದಾಗ್ಯೂ ನಾಲ್ಕನೇ ಕ್ರಮಾಂಕದಲ್ಲಿ ಕಣಕ್ಕಿಳಿದ ಕೆ. ಸಿದ್ಧಾರ್ಥ್ 35 ಎಸೆತಗಳಲ್ಲಿ 46 ರನ್​ಗಳ ಕೊಡುಗೆ ನೀಡಿದರು.

ಹಾಗೆಯೇ 7ನೇ ಕ್ರಮಾಂಕದಲ್ಲಿ ಬ್ಯಾಟ್ ಬೀಸಿದ ಅನಿರುದ್ಧ್ ಜೋಶಿ ಮಂಗಳೂರು ಡ್ರಾಗನ್ಸ್ ತಂಡಕ್ಕೆ ಗೆಲುವಿನ ಆಸೆ ಚಿಗುರಿಸಿದರು. ಸ್ಪೋಟಕ ಬ್ಯಾಟಿಂಗ್​ ಪ್ರದರ್ಶಿಸಿದ ಜೋಶಿ 31 ಎಸೆತಗಳಲ್ಲಿ 4 ಭರ್ಜರಿ ಸಿಕ್ಸ್ ಹಾಗೂ 3 ಫೋರ್​ಗಳೊಂದಿಗೆ ಅರ್ಧಶತಕ ಸಿಡಿಸಿದರು. ಈ ಹಂತದಲ್ಲಿ ವಿ. ಕೌಶಿಕ್ ಎಸೆತವನ್ನು ಭರ್ಜರಿ ಹೊಡೆತಕ್ಕೆ ಮುಂದಾಗಿ ಕ್ಯಾಚ್ ಔಟ್ ಆದರು.

ಅಂತಿಮವಾಗಿ 20 ಓವರ್​ಗಳಲ್ಲಿ 7 ವಿಕೆಟ್ ನಷ್ಟಕ್ಕೆ 167 ರನ್ ಕಲೆಹಾಕುವ ಮೂಲಕ ಮಂಗಳೂರು ಡ್ರಾಗನ್ಸ್ ತಂಡವು 9 ರನ್​ಗಳಿಂದ ಸೋಲೊಪ್ಪಿಕೊಂಡಿತು. ಈ ಮೂಲಕ ಶಿವಮೊಗ್ಗ ಲಯನ್ಸ್ ತಂಡವು ತನ್ನ ಮೊದಲ ಪಂದ್ಯದಲ್ಲೇ ಜಯ ಸಾಧಿಸಿ ಶುಭಾರಂಭ ಮಾಡಿದೆ.

ಮಂಗಳೂರು ಡ್ರಾಗನ್ಸ್​ ಪ್ಲೇಯಿಂಗ್ 11: ನಿಕಿನ್ ಜೋಸ್ , ಶರತ್ ಬಿ.ಆರ್ (ವಿಕೆಟ್ ಕೀಪರ್) , ಕೃಷ್ಣಮೂರ್ತಿ ಸಿದ್ಧಾರ್ಥ್ , ಅನೀಶ್ವರ್ ಗೌತಮ್ , ಕೃಷ್ಣಪ್ಪ ಗೌತಮ್ (ನಾಯಕ) , ಅನಿರುದ್ಧ್ ಜೋಶಿ , ಆದಿತ್ಯ ಗೋಯಲ್ , ಆನಂದ್ ದೊಡ್ಡಮನಿ , ಪ್ರತೀಕ್ ಜೈನ್ , ನವೀನ್ ಎಂಜಿ , ಧೀರಜ್ ಜೆ ಗೌಡ , ರೋಹನ್ ಪಾಟೀಲ್.

ಶಿವಮೊಗ್ಗ ಲಯನ್ಸ್ ಪ್ಲೇಯಿಂಗ್ 11: ರೋಹನ್ ಕದಮ್ , ನಿಹಾಲ್ ಉಳ್ಳಾಲ್ (ವಿಕೆಟ್ ಕೀಪರ್) , ರೋಹಿತ್ ಕುಮಾರ್, ಶ್ರೇಯಸ್ ಗೋಪಾಲ್ (ನಾಯಕ) , ಅಭಿನವ್ ಮನೋಹರ್ , ಕ್ರಾಂತಿ ಕುಮಾರ್ , ಎಸ್ ಶಿವರಾಜ್ , ಪ್ರಣವ್ ಭಾಟಿಯಾ , ಎಚ್ ಎಸ್ ಶರತ್ , ನಿಶ್ಚಿತ್ ಎನ್ ರಾವ್ , ವಾಸುಕಿ ಕೌಶಿಕ್.

andolanait

Recent Posts

ಎಕ್ಸ್ ಬಿಟ್ಟು ಇನ್‌ಸ್ಟಾ ಹಿಡಿದ ರಾಜಕಾರಣ : ಮೋದಿಗೆ ಜೆನ್-ಝೀ ಕಾಟ

ನವದೆಹಲಿ : ದೇಶದ ರಾಜಕೀಯದ ಭಾಷೆ ಬದಲಾಗುತ್ತಿದೆ. ಒಮ್ಮೆ ಟ್ವಿಟರ್, ಈಗಿನ ಎಕ್ಸ್‌ನಲ್ಲಿ ನಡೆಯುತ್ತಿದ್ದ ವಾಗ್ವಾದ, ಟ್ರೆಂಡ್‌ಗಳು ಈಗ ಇನ್‌ಸ್ಟಾಗ್ರಾಂ…

2 hours ago

ಓದುಗರ ಪತ್ರ: ಕಠಿಣ ಕ್ರಮ ಅಗತ್ಯ

ಉನ್ನತ ವಿದ್ಯಾಭ್ಯಾಸಕ್ಕಾಗಿ ವಿದ್ಯಾರ್ಥಿಗಳು ಶ್ರಮಪಡುವುದು ಗೊತ್ತಿರುವ ವಿಷಯವೇ. ವೃತ್ತಿಪರ ಕೋರ್ಸ್‌ಗಳು ಮತ್ತು ನಂತರ ಉದ್ಯೋಗಕ್ಕಾಗಿ ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿಗೆ ವಿದ್ಯಾರ್ಥಿಗಳು…

11 hours ago

ಓದುಗರ ಪತ್ರ: ಕಸ ವಿಲೇವಾರಿಗೆ ವೈಜ್ಞಾನಿಕ ಪರಿಹಾರ ಅಗತ್ಯ

ರಾಜ್ಯದಲ್ಲಿ ಪ್ರತಿದಿನ ಸೃಷ್ಟಿಯಾಗುವ ೧೨,೧೪೯ ಟನ್ ಕಸದಿಂದ ವಿದ್ಯುತ್ ತಯಾರಿಸುವ ಸರ್ಕಾರದ ಪ್ರಸ್ತಾಪವು ಕೇವಲ ಕಾಗದದ ಮೇಲಷ್ಟೇ ಸುಂದರವಾಗಿ ಕಾಣುತ್ತದೆ.…

11 hours ago

ಕೇಂದ್ರ ಸರ್ಕಾರದ ಮೇಲೆ ಜೆನ್ ಝೀ ಚಳುವಳಿಯ ತೂಗುಗತ್ತಿ

ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್‌  ಪಂಜಬ್ ಮತ್ತು ಹರಿಯಾಣ ರೈತರ ೧೩ ತಿಂಗಳ ನಿರಂತರಹೋರಾಟ ಜನಮಾನಸದಿಂದ ಮರೆಯುತ್ತಿದ್ದಂತೆ ಬಿಜೆಪಿ ನೇತೃತ್ವದ…

11 hours ago

‘ಅಂಕಲ್ ಚೋಕ್’ ಕಟ್ಟಿದ ಬಿದಿರಿನ ಮಾಯಾಲೋಕ

ಜಿ.ಕೃಷ್ಣ ಪ್ರಸಾದ್ ‘ಇಂದು ನಿಮ್ಮನ್ನು ಬಿದಿರಿನ ಲೋಕಕ್ಕೆ ಕರೆದೊಯ್ಯುತ್ತೇನೆ’. ಬೆಳಿಗ್ಗೆ ಕಾಫಿ ಕುಡಿಯುತ್ತಿದ್ದಾಗ ಗೆಳೆಯ ಮೈಕೆಲ್ ಕಾಮನ್ಸ್ ಹೇಳಿದ ಈ…

14 hours ago

ಮುಚ್ಚುತ್ತಿರುವ ಚಿತ್ರಮಂದಿರ

ಮಧುಕರ ಎಂ.ಎಲ್. ಒಂದು ಕಾಲದಲ್ಲಿ ಚಲನಚಿತ್ರವೇ ನಮ್ಮ ಮನರಂಜನೆ ಮಾಧ್ಯಮವಾಗಿದ್ದು, ಪೌರಾಣಿಕ ಕಥೆಗಳು, ರಾಮಾಯಣ ಕಥೆಗಳು, ಮಹಾಭಾರತ ಪ್ರಸಂಗಗಳು ಚಲನಚಿತ್ರವಾಗಿ…

14 hours ago