ಕ್ರೀಡೆ

5 ಸಿಕ್ಸ್​ಗಳೊಂದಿಗೆ ಅಬ್ಬರಿಸಿದ ಅಭಿನವ್: ಶಿವಮೊಗ್ಗ ಲಯನ್ಸ್​ಗೆ ರೋಚಕ ಜಯ

ಬೆಂಗಳೂರು : ನಗರದ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ ಮಹಾರಾಜ ಟ್ರೋಫಿಯ 3ನೇ ಟಿ20 ಪಂದ್ಯದಲ್ಲಿ ಮಂಗಳೂರು ಡ್ರಾಗನ್ಸ್ ವಿರುದ್ದ ಶಿವಮೊಗ್ಗ ಲಯನ್ಸ್ ರೋಚಕ ಜಯ ಸಾಧಿಸಿದೆ. ಈ ಪಂದ್ಯದಲ್ಲಿ ಟಾಸ್ ಗೆದ್ದ ಮಂಗಳೂರು ತಂಡದ ನಾಯಕ ಕೃಷ್ಣಪ್ಪ ಗೌತಮ್ ಶಿವಮೊಗ್ಗ ತಂಡವನ್ನು ಬ್ಯಾಟಿಂಗ್​ಗೆ ಆಹ್ವಾನಿಸಿತು.

ಮೊದಲು ಬ್ಯಾಟ್ ಮಾಡಿದ ಶಿವಮೊಗ್ಗ ಲಯನ್ಸ್ ತಂಡಕ್ಕೆ ರೋಹನ್ ಕದಮ್ (27) ಹಾಗೂ ನಿಹಾಲ್ ಉಳ್ಳಾಲ್ (28) ಉತ್ತಮ ಆರಂಭ ಒದಗಿಸಿದರು. ಇನ್ನು 3ನೇ ಕ್ರಮಾಂಕದಲ್ಲಿ ಬ್ಯಾಟ್​ ಬೀಸಿದ ರೋಹಿತ್ ಕುಮಾರ್ 18 ರನ್​ಗಳಿಸಿ ಔಟಾದರು.

ಆ ಬಳಿಕ ಜೊತೆಯಾದ ನಾಯಕ ಶ್ರೇಯಸ್ ಗೋಪಾಲ್ ಹಾಗೂ ಅಭಿನವ್ ಮನೋಹರ್ ಭರ್ಜರಿ ಬ್ಯಾಟಿಂಗ್ ಪ್ರದರ್ಶಿದರು. 32 ಎಸೆತಗಳಲ್ಲಿ 46 ರನ್ ಬಾರಿಸಿ ಶ್ರೇಯಸ್ ಗೋಪಾಲ್ ಔಟಾದರು.

ಆದರೆ ಇನ್ನೊಂದೆಡೆ ಸಿಡಿಲಬ್ಬರದ ಬ್ಯಾಟಿಂಗ್ ಮುಂದುವರೆಸಿದ ಅಭಿನವ್ ಮನೋಹರ್ 25 ಎಸೆತಗಳಲ್ಲಿ 5 ಭರ್ಜರಿ ಸಿಕ್ಸ್ ಹಾಗೂ 1 ಫೋರ್​ನೊಂದಿಗೆ 50 ರನ್ ಚಚ್ಚಿದರು. ಈ ಅರ್ಧಶತಕದ ನೆರವಿನೊಂದಿಗೆ ಶಿವಮೊಗ್ಗ ಲಯನ್ಸ್ ತಂಡವು 20 ಓವರ್​ಗಳಲ್ಲಿ 5 ವಿಕೆಟ್ ನಷ್ಟಕ್ಕೆ 176 ರನ್ ಕಲೆಹಾಕಿತು.

177 ರನ್​ಗಳ ಕಠಿಣ ಗುರಿ ಬೆನ್ನತ್ತಿದ ಮಂಗಳೂರು ಡ್ರಾಗನ್ಸ್ ತಂಡವು ನಿರೀಕ್ಷಿತ ಆರಂಭ ಪಡೆಯುವಲ್ಲಿ ವಿಫಲವಾಯಿತು. ಇದಾಗ್ಯೂ ನಾಲ್ಕನೇ ಕ್ರಮಾಂಕದಲ್ಲಿ ಕಣಕ್ಕಿಳಿದ ಕೆ. ಸಿದ್ಧಾರ್ಥ್ 35 ಎಸೆತಗಳಲ್ಲಿ 46 ರನ್​ಗಳ ಕೊಡುಗೆ ನೀಡಿದರು.

ಹಾಗೆಯೇ 7ನೇ ಕ್ರಮಾಂಕದಲ್ಲಿ ಬ್ಯಾಟ್ ಬೀಸಿದ ಅನಿರುದ್ಧ್ ಜೋಶಿ ಮಂಗಳೂರು ಡ್ರಾಗನ್ಸ್ ತಂಡಕ್ಕೆ ಗೆಲುವಿನ ಆಸೆ ಚಿಗುರಿಸಿದರು. ಸ್ಪೋಟಕ ಬ್ಯಾಟಿಂಗ್​ ಪ್ರದರ್ಶಿಸಿದ ಜೋಶಿ 31 ಎಸೆತಗಳಲ್ಲಿ 4 ಭರ್ಜರಿ ಸಿಕ್ಸ್ ಹಾಗೂ 3 ಫೋರ್​ಗಳೊಂದಿಗೆ ಅರ್ಧಶತಕ ಸಿಡಿಸಿದರು. ಈ ಹಂತದಲ್ಲಿ ವಿ. ಕೌಶಿಕ್ ಎಸೆತವನ್ನು ಭರ್ಜರಿ ಹೊಡೆತಕ್ಕೆ ಮುಂದಾಗಿ ಕ್ಯಾಚ್ ಔಟ್ ಆದರು.

ಅಂತಿಮವಾಗಿ 20 ಓವರ್​ಗಳಲ್ಲಿ 7 ವಿಕೆಟ್ ನಷ್ಟಕ್ಕೆ 167 ರನ್ ಕಲೆಹಾಕುವ ಮೂಲಕ ಮಂಗಳೂರು ಡ್ರಾಗನ್ಸ್ ತಂಡವು 9 ರನ್​ಗಳಿಂದ ಸೋಲೊಪ್ಪಿಕೊಂಡಿತು. ಈ ಮೂಲಕ ಶಿವಮೊಗ್ಗ ಲಯನ್ಸ್ ತಂಡವು ತನ್ನ ಮೊದಲ ಪಂದ್ಯದಲ್ಲೇ ಜಯ ಸಾಧಿಸಿ ಶುಭಾರಂಭ ಮಾಡಿದೆ.

ಮಂಗಳೂರು ಡ್ರಾಗನ್ಸ್​ ಪ್ಲೇಯಿಂಗ್ 11: ನಿಕಿನ್ ಜೋಸ್ , ಶರತ್ ಬಿ.ಆರ್ (ವಿಕೆಟ್ ಕೀಪರ್) , ಕೃಷ್ಣಮೂರ್ತಿ ಸಿದ್ಧಾರ್ಥ್ , ಅನೀಶ್ವರ್ ಗೌತಮ್ , ಕೃಷ್ಣಪ್ಪ ಗೌತಮ್ (ನಾಯಕ) , ಅನಿರುದ್ಧ್ ಜೋಶಿ , ಆದಿತ್ಯ ಗೋಯಲ್ , ಆನಂದ್ ದೊಡ್ಡಮನಿ , ಪ್ರತೀಕ್ ಜೈನ್ , ನವೀನ್ ಎಂಜಿ , ಧೀರಜ್ ಜೆ ಗೌಡ , ರೋಹನ್ ಪಾಟೀಲ್.

ಶಿವಮೊಗ್ಗ ಲಯನ್ಸ್ ಪ್ಲೇಯಿಂಗ್ 11: ರೋಹನ್ ಕದಮ್ , ನಿಹಾಲ್ ಉಳ್ಳಾಲ್ (ವಿಕೆಟ್ ಕೀಪರ್) , ರೋಹಿತ್ ಕುಮಾರ್, ಶ್ರೇಯಸ್ ಗೋಪಾಲ್ (ನಾಯಕ) , ಅಭಿನವ್ ಮನೋಹರ್ , ಕ್ರಾಂತಿ ಕುಮಾರ್ , ಎಸ್ ಶಿವರಾಜ್ , ಪ್ರಣವ್ ಭಾಟಿಯಾ , ಎಚ್ ಎಸ್ ಶರತ್ , ನಿಶ್ಚಿತ್ ಎನ್ ರಾವ್ , ವಾಸುಕಿ ಕೌಶಿಕ್.

andolanait

Recent Posts

ಓದುಗರ ಪತ್ರ: ದಸರಾ ಚಿತ್ರೋತ್ಸವ ಮುಂದುವರಿಯಲಿ

ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…

2 hours ago

ಓದುಗರ ಪತ್ರ: ಫಿಲಂ ಸಿಟಿ ಯೋಜನೆ ಆದಷ್ಟು ಬೇಗ ಕಾರ್ಯರೂಪಕ್ಕೆ ಬರಲಿ

ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…

2 hours ago

ಓದುಗರ ಪತ್ರ: ಕಾವೇರಿ:ಆದೇಶ ನಿಷ್ಪಕ್ಷಪಾತವಾಗಿರಲಿ

ಸಿಡಬ್ಲ್ಯುಆರ್‌ಸಿ ಆದೇಶದಂತೆ ಪ್ರತಿದಿನ ೬,೦೦೦ ಕ್ಯೂಸೆಕ್ಸ್‌ನಂತೆ ೧೫ ದಿನಗಳ ಕಾಲ ಕರ್ನಾಟಕ ತಮಿಳುನಾಡಿಗೆ ಕಾವೇರಿ ನದಿ ನೀರು ಹರಿಸಬೇಕಾಗುತ್ತದೆ. ಜಲಾಶಯದಲ್ಲಿ…

2 hours ago

ಮಲ್ಟಿಪ್ಲೆಕ್ಸ್: ಪ್ರಾದೇಶಿಕ ಭಾಷಾ ಚಿತ್ರಗಳಿಗೆ ಮಾರಕ ಹಂಚಿಕಾ ಸೂತ್ರ

ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ  ಅದೇಕೋ ಏನೋ ಕರ್ನಾಟಕಕ್ಕೂ ಇಲ್ಲಿರುವ ಮಲ್ಟಿಪ್ಲೆಕ್‌ಳಿಗೂ ಆಗಿ ಬರುತ್ತಿಲ್ಲ ಎನಿಸುತ್ತದೆ. ಅದು ಚಿತ್ರೋದ್ಯಮಕ್ಕೆ ಮಾತ್ರವಲ್ಲ,…

2 hours ago

ಕಸ್ತೂರಿ ರಂಗನ್ ವರದಿ ವಿರೋಧಿಸಿ ಇಂದು ಪ್ರತಿಭಟನೆ

ಲಕ್ಷ್ಮೀಕಾಂತ್ ಕೊಮಾರಪ್ಪ ಸುದರ್ಶನ ಸರ್ಕಲ್‌ನಿಂದ ಗಾಂಧಿ ಮೈದಾನದವರೆಗೆ ಪ್ರತಿಭಟನಾ ಮೆರವಣಿಗೆ  ಸೋಮವಾರಪೇಟೆ: ಮಲೆನಾಡ ಭಾಗದ ರೈತರ ಬದುಕಿನ ಮೇಲೆ ತೂಗುಗತ್ತಿಯಂತೆ ಪರಿಣಮಿಸಿರುವ…

2 hours ago

ಚಾ.ನಗರ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿ ಜೆ.ಯೋಗೇಶ್ ನೇಮಕ

ರಾಜೇಶ್ ಬೆಂಡರವಾಡಿ ಪ್ರಥಮ ಬಾರಿಗೆ ಇತರೆ ಹಿಂದುಳಿದ ವರ್ಗಕ್ಕೆ ಒಲಿದ ಡಿಸಿಸಿ ಅಧ್ಯಕ್ಷ ಸ್ಥಾನ  ಚಾಮರಾಜನಗರ: ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ…

2 hours ago