ಕ್ರೀಡೆ

ICC t20 worldcup 2024: ಬಾಂಗ್ಲಾ ವಿರುದ್ದ ಗೆದ್ದ ಅಫ್ಘಾನ್‌ ಸೆಮಿಸ್‌ಗೆ ಇನ್‌, ಆಸೀಸ್‌ ಟೂರ್ನಿಯಿಂದ ಔಟ್‌!

ವಿನ್ಸೆಂಟ್‌: ಇಲ್ಲಿನ ಕಿಂಗ್ಸ್‌ಕೋರ್ಟ್‌ ಅರ್ನೋಸ್ ವೇಲ್ ಮೈದಾನದಲ್ಲಿ ನಡೆದ ಟಿ20 ವಿಶ್ವಕಪ್‌ ನ ಸೂಪರ್‌-8ನ ಕೊನೆಯ ಪಂದ್ಯದಲ್ಲಿ ಅಫ್ಘಾನಿಸ್ತಾನ ಬಾಂಗ್ಲಾದೇಶದ ವಿರುದ್ಧ 8 ರನ್‌ಗಳ ಅಂತರದ ಭರ್ಜರಿ ಗೆಲುವು ದಾಖಲಿಸಿತು. ಮೂಲಕ ಅಫ್ಘಾನ್‌ ಕ್ರಿಕೆಟ್‌ ವೃತ್ತಿ ಜೀವನದಲ್ಲೇ ಮೊಟ್ಟ ಮೊದಲ ಬಾರಿಗೆ ಸೆಮಿಸ್‌ ಗೆ ಲಗ್ಗೆಯಿಟ್ಟಿತು.

ಇತ್ತ ಅಫ್ಘಾನ್‌ ಗೆಲುವಿನೊಂದಿಗೆ ಸಂಭ್ರಮಿಸಿದರೇ, ಅಫ್ಘಾನ್‌ ಸೋಲಿಗಾಗಿ ಕಾಯುತ್ತಿದ್ದ ಆಸ್ಟ್ರೇಲಿಯಾ ಟೂರ್ನಿಯಿಂದ ಹೊರನಡೆಯಿತು.

ಈ ಪಂದ್ಯದಲ್ಲಿ ಟಾಸ್‌ ಗೆದ್ದ ಅಫ್ಘಾನಿಸ್ತಾನ ಮೊದಲು ಬ್ಯಾಟ್‌ ಮಾಡಿತು. ನಿಗದಿತ 20 ಓವರ್‌ಗಳಲ್ಲಿ 5 ವಿಕೆಟ್‌ ಕಳೆದುಕೊಂಡು 115 ರನ್‌ ಕಲೆಹಾಕಿ 116ರನ್‌ಗಳ ಸಾಧಾರಣ ಗುರಿ ನೀಡಿತ್ತು. ಈ ಮೊತ್ತ ಬೆನ್ನತ್ತಿದ ಬಾಂಗ್ಲಾದೇಶ 17.5 ಓವರ್‌ಗಳಲ್ಲಿ ತನ್ನೆಲ್ಲಾ ವಿಕೆಟ್‌ ಕಳೆದುಕೊಂಡು ಕೇವಲ 105ರನ್‌ ಕಲೆಹಾಕಿ 8 ರನ್‌ಗಳ ಅಂತರದಿಂದ ಸೋಲನುಭವಿಸಿತು.

ಅಫ್ಘಾನಿಸ್ತಾನ ಇನ್ನಿಂಗ್ಸ್‌: ಸೂಪರ್‌-8 ಕೊನೆಯ ಡೂ-ಆರ್‌-ಡೈ ಪಂದ್ಯದಲ್ಲಿ ಟಾಸ್‌ ಗೆದ್ದು ಮೊದಲು ಬ್ಯಾಟ್‌ ಮಾಡಿದ ಅಫ್ಘಾನ್‌ಗೆ ಆರಂಭಿಕ ಆಘಾತ ಎದುರಾಯಿತು. ಇಬ್ರಾಹಿಂ ಜದ್ರಾನ್‌ 18(29) ರನ್‌ ಗಳಿಸಿ ನಿರ್ಗಮಿಸಿದರು. ನಂತರ ಬಂದ ಅಜರತ್ತುಲ್ಲಾ 10(12) ಬಂದ ಹಾದಿಯಲ್ಲೇ ಪೆವಿಲಿಯನ್‌ ಸೇರಿದರು. ಗುಲ್ಬದಿನ್‌ ನೈಬ್‌ 4(3) ರನ್‌ ಗಳಿಸಿದರೆ, ನಬಿ 1(5) ರನ್‌ ಗಳಿಸಿ ಔಟಾದರು.

ತಂಡದ ವಿಕೆಟ್‌ಗಳು ಒಂದೆಡೆ ಬೀಳುತ್ತಿದ್ದರೂ ಮತ್ತೊಂದೆಡೆ ನಿಧಾನಗತಿಯ ಇನ್ನಿಂಗ್ಸ್‌ ಕಟ್ಟಿದ ಗುರ್ಬಾಜ್‌ 55 ಎಸೆತಗಳಲ್ಲಿ 3 ಬೌಂಡರಿ ಹಾಗೂ 1ಸಿಕ್ಸರ್‌ ಸಹಿತ 43 ರನ್‌ ಬಾರಿಸಿ ತಂಡಕ್ಕೆ ಆಸರೆಯಾದರು. ಕೊನೆಯಲ್ಲಿ ನಾಯಕ ರಶೀದ್‌ 19(10) ರನ್‌ ಹಾಗೂ ಜನತ್‌ 1(5)ರನ್‌ ಗಳಿಸಿ ಔಟಾಗದೇ ಉಳಿದರು.

ಬಾಂಗ್ಲಾದೇಶದ ಪರ ರಶೀದ್‌ ಹೊಸೇನ್‌ ಮೂರು, ಮುಸ್ತಫಿಜುರ್‌ ಹಾಗೂ ತಸ್ಕಿನ್‌ ಅಹ್ಮದ್‌ ತಲಾ ಒಂದೊಂದು ವಿಕೆಟ್‌ ಕಬಳಿಸಿದರು.

ಬಾಂಗ್ಲಾದೇಶ ಇನ್ನಿಂಗ್ಸ್‌: ಅಫ್ಘಾನಿಸ್ತಾನ ನೀಡಿದ್ದ ಸಾಧಾರಣ ಮೊತ್ತ ಬೆನ್ನತ್ತಿದ ಬಾಂಗ್ಲಾದೇಶಕ್ಕೆ ಅಫ್ಘನ್‌ ಸ್ಪಿನ್ನರ್ಸ್‌ ಕಾಡಿದರು. ಸಂಘಟಿತ ಬೌಲಿಂಗ್‌ ದಾಳಿಗೆ ಮಂಕಾದ ಬಾಂಗ್ಲಾ ಅಫ್ಘನ್‌ ಮುಂದೆ ಮಂಡಿಯೂರಿತು.

ಬಾಂಗ್ಲಾ ಪರವಾಗಿ ಆರಂಭಿಕ ಆಟಗಾರ ಲಿಟನ್‌ ದಾಸ್‌ ಅರ್ಧಶತಕ ಹೊರತಾಗಿ ಬೇರಾರಿಂದಲೂ ಉತ್ತಮ ಇನ್ನಿಂಗ್ಸ್‌ ಕಂಡುಬರಲೇ ಇಲ್ಲ. ನಾಟ್‌ಔಟ್‌ ಆಗಿ ಉಳಿದರೂ ಸಹಾ ಲಿಟನ್‌ ದಾಸ್‌ (54 ರನ್‌, 49 ಎಸೆತ 5 ಬೌಂಡರಿ 1ಸಿಕ್ಸರ್‌) ಪಂದ್ಯ ಗೆಲ್ಲಿಸಿಕೊಡಲು ಸಾಧ್ಯವಾಗಲಿಲ್ಲ.

ಆರಂಭಿಕ ಹಸನ್‌ ಶೂನ್ಯ ಸುತ್ತಿದರೇ, ನಾಯಕ ಸ್ಯಾಂಟೋ 5(5) ರನ್‌ ಬಾರಿಸಿದರು. ಉಳಿದಂತೆ ಅನುಭವಿ ಶಕೀಬ್‌ ಅಲ್‌-ಹಸನ್‌ ಡಕ್‌ಔಟ್‌ ಆಗಿ ಬಂದ ವೇಗದಲ್ಲೇ ಪೆವಿಲಿಯನ್‌ ಸೇರಿದರು. ಸೌಮ್ಯ ಸರ್ಕಾರ್‌ 10(10) ರನ್‌, ಹೃದಯ್‌ 14(9)ರನ್‌, ರಶೀದ್‌ ಹೊಸೇನ್‌ ಡಕ್‌ಔಟ್‌, ತಂಝೀಮ್‌ 3(10) ರನ್‌, ತಸ್ಕಿನ್‌ ಅಹ್ಮದ್‌ 2(9) ರನ್‌ ಹಾಗೂ ಮುಸ್ತಫಿಜುರ್‌ ಡಕ್‌ ಔಟ್‌ ಆಗುವ ಮೂಲಕ ಟೂರ್ನಿ ಅಭಿಯಾನವನ್ನು ಮುಗಿಸಿದರು.

ಈ ಪಂದ್ಯದಲ್ಲಿ ಬರೋಬ್ಬರಿ ನಾಲ್ಕು ಜನರು ಟಕ್‌ಔಟ್‌ ಆಗುವ ಮೂಲಕ ತಮ್ಮ ಕೈಯಲ್ಲಿದ್ದ ಅವಕಾಶ ಚೆಲ್ಲಿ ಅಫ್ಘಾನಿಸ್ತಾನ ಸೆಮಿಸ್‌ ಏರಲು ಬಾಂಗ್ಲಾ ಸಹಕರಿಸಿದರು.

ಅಫ್ಘಾನ್‌ ಪರ ನಾಯಕ ರಶೀದ್‌ ಖಾನ್‌ ಹಾಗೂ ನವೀನ್‌ ಉಲ್‌-ಹಕ್‌ ತಲಾ 4 ವಿಕೆಟ್‌ ಕಬಳಿಸಿ ಮಿಂಚಿದರು. ಫರೂಕಿ ಹಾಗೂ ನೈಬ್‌ ತಲಾ ಒಂದೊಂದು ವಿಕೆಟ್‌ ಪಡೆದು ಗಮನಸೆಳೆದರು.

ಪಂದ್ಯಶ್ರೇಷ್ಠ: ನವೀನ್‌ ಉಲ್‌-ಹಕ್‌

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ಮಲಗಿದ್ದ ವ್ಯಕ್ತಿಗಳ ಮೇಲೆ ಕಾರು ಹರಿದ ಪ್ರಕರಣ: ಗಾಯಾಳು ರವಿಗೆ ಮುಂದುವರಿದ ಚಿಕಿತ್ಸೆ

ಪ್ರಶಾಂತ್‌ ಎನ್‌ ಮಲ್ಲಿಕ್‌  ಮೈಸೂರು: ಸುತ್ತೂರು ಜಾತ್ರೆ ವೇಳೆ ರಾತ್ರಿ ಗದ್ದೆಯಲ್ಲಿ ಮಲಗಿದ್ದ ವ್ಯಕ್ತಿಗಳ ಮೇಲೆ ಕಾರು ಹರಿದ ಪರಿಣಾಮ…

1 hour ago

ಕಾಫಿ ಮಳಿಗೆಯಲ್ಲಿದ್ದ ಹಣ ಕಳವು: ಆರೋಪಿ ಬಂಧನ

ಸಿದ್ದಾಪುರ: ವಿರಾಜಪೇಟೆ ರಸ್ತೆಯಲ್ಲಿರುವ ಎಸ್‌ವೈಎಸ್ ಕಾಫಿ ಅಂಗಡಿಯಲ್ಲಿ ನಡೆದ ನಗದು ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಸಿದ್ದಾಪುರ ಪೊಲೀಸರು ಕೇರಳ ಮೂಲದ…

2 hours ago

ಕಾಡಾನೆ ದಾಳಿ: ಅಪಾರ ಪ್ರಮಾಣದ ಬೆಳೆ ನಾಶ

ಮಹಾದೇಶ್‌ ಎಂ ಗೌಡ  ಹನೂರು: ತಾಲ್ಲೂಕಿನ ಕೆವಿಎನ್ ದೊಡ್ಡಿ ಗ್ರಾಮದ ಜಮೀನೊಂದರಲ್ಲಿ ಕಾಡಾನೆ ಲಗ್ಗೆ ಇಟ್ಟು ಅಪಾರ ಪ್ರಮಾಣದ ಬೆಳೆ…

2 hours ago

ಬೆಂಗಳೂರಿನಲ್ಲೇ ಐಪಿಎಲ್ ಉದ್ಘಾಟನಾ ಪಂದ್ಯ

ಬೆಂಗಳೂರು: ಕಾಲ್ತುಳಿತ ಪ್ರಕರಣದಿಂದಾಗಿ ಈ ಬಾರಿಯ ಬಹು ನಿರೀಕ್ಷಿತ ಇಂಡಿಯನ್ ಪ್ರೀಮಿಯರ್ ಲೀಗ್(ಐಪಿಎಲ್) ಪಂದ್ಯಗಳು ನಡುವುದೇ ಡೋಲಾಯಮಾನ ಸ್ಥಿತಿಯಲ್ಲಿರುವಾಗಲೇ ಉದ್ಘಾಟನಾ…

2 hours ago

ಪೌರಾಯುಕ್ತೆಗೆ ಧಮ್ಕಿ ಹಾಕಿದ್ದ ಪ್ರಕರಣ: ರಾಜೀವ್‌ ಗೌಡಗೆ ಹೈಕೋರ್ಟ್‌ ತರಾಟೆ

ಬೆಂಗಳೂರು: ಶಿಡ್ಲಘಟ್ಟ ಪೌರಾಯುಕ್ತೆ ಅಮೃತಾ ಅವರಿಗೆ ಜೀವ ಬೆದರಿಕೆ ಹಾಕಿದ್ದ ಪ್ರಕರಣ ಸಂಬಂಧ ಕಾಂಗ್ರೆಸ್‌ ಮುಖಂಡ ರಾಜೀವ್‌ಗೌಡಗೆ ಹೈಕೋರ್ಟ್‌ ತೀವ್ರ…

2 hours ago

ರೇಣುಕಾಸ್ವಾಮಿ ಕೊಲೆ ಪ್ರಕರಣ: ಪವಿತ್ರಾಗೌಡಗೆ ವಾರಕ್ಕೊಮ್ಮೆ ಮನೆ ಊಟ ಆದೇಶಕ್ಕೆ ತಡೆ

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಲು ಸೇರಿರುವ ಪ್ರಮುಖ ಆರೋಪಿ ಪವಿತ್ರಾ ಗೌಡಗೆ ವಾರಕ್ಕೊಮ್ಮೆ ಮನೆ ಊಟ…

3 hours ago