ಕ್ರೀಡೆ

ICC t20 worldcup 2024: ಬಾಂಗ್ಲಾ ವಿರುದ್ದ ಗೆದ್ದ ಅಫ್ಘಾನ್‌ ಸೆಮಿಸ್‌ಗೆ ಇನ್‌, ಆಸೀಸ್‌ ಟೂರ್ನಿಯಿಂದ ಔಟ್‌!

ವಿನ್ಸೆಂಟ್‌: ಇಲ್ಲಿನ ಕಿಂಗ್ಸ್‌ಕೋರ್ಟ್‌ ಅರ್ನೋಸ್ ವೇಲ್ ಮೈದಾನದಲ್ಲಿ ನಡೆದ ಟಿ20 ವಿಶ್ವಕಪ್‌ ನ ಸೂಪರ್‌-8ನ ಕೊನೆಯ ಪಂದ್ಯದಲ್ಲಿ ಅಫ್ಘಾನಿಸ್ತಾನ ಬಾಂಗ್ಲಾದೇಶದ ವಿರುದ್ಧ 8 ರನ್‌ಗಳ ಅಂತರದ ಭರ್ಜರಿ ಗೆಲುವು ದಾಖಲಿಸಿತು. ಮೂಲಕ ಅಫ್ಘಾನ್‌ ಕ್ರಿಕೆಟ್‌ ವೃತ್ತಿ ಜೀವನದಲ್ಲೇ ಮೊಟ್ಟ ಮೊದಲ ಬಾರಿಗೆ ಸೆಮಿಸ್‌ ಗೆ ಲಗ್ಗೆಯಿಟ್ಟಿತು.

ಇತ್ತ ಅಫ್ಘಾನ್‌ ಗೆಲುವಿನೊಂದಿಗೆ ಸಂಭ್ರಮಿಸಿದರೇ, ಅಫ್ಘಾನ್‌ ಸೋಲಿಗಾಗಿ ಕಾಯುತ್ತಿದ್ದ ಆಸ್ಟ್ರೇಲಿಯಾ ಟೂರ್ನಿಯಿಂದ ಹೊರನಡೆಯಿತು.

ಈ ಪಂದ್ಯದಲ್ಲಿ ಟಾಸ್‌ ಗೆದ್ದ ಅಫ್ಘಾನಿಸ್ತಾನ ಮೊದಲು ಬ್ಯಾಟ್‌ ಮಾಡಿತು. ನಿಗದಿತ 20 ಓವರ್‌ಗಳಲ್ಲಿ 5 ವಿಕೆಟ್‌ ಕಳೆದುಕೊಂಡು 115 ರನ್‌ ಕಲೆಹಾಕಿ 116ರನ್‌ಗಳ ಸಾಧಾರಣ ಗುರಿ ನೀಡಿತ್ತು. ಈ ಮೊತ್ತ ಬೆನ್ನತ್ತಿದ ಬಾಂಗ್ಲಾದೇಶ 17.5 ಓವರ್‌ಗಳಲ್ಲಿ ತನ್ನೆಲ್ಲಾ ವಿಕೆಟ್‌ ಕಳೆದುಕೊಂಡು ಕೇವಲ 105ರನ್‌ ಕಲೆಹಾಕಿ 8 ರನ್‌ಗಳ ಅಂತರದಿಂದ ಸೋಲನುಭವಿಸಿತು.

ಅಫ್ಘಾನಿಸ್ತಾನ ಇನ್ನಿಂಗ್ಸ್‌: ಸೂಪರ್‌-8 ಕೊನೆಯ ಡೂ-ಆರ್‌-ಡೈ ಪಂದ್ಯದಲ್ಲಿ ಟಾಸ್‌ ಗೆದ್ದು ಮೊದಲು ಬ್ಯಾಟ್‌ ಮಾಡಿದ ಅಫ್ಘಾನ್‌ಗೆ ಆರಂಭಿಕ ಆಘಾತ ಎದುರಾಯಿತು. ಇಬ್ರಾಹಿಂ ಜದ್ರಾನ್‌ 18(29) ರನ್‌ ಗಳಿಸಿ ನಿರ್ಗಮಿಸಿದರು. ನಂತರ ಬಂದ ಅಜರತ್ತುಲ್ಲಾ 10(12) ಬಂದ ಹಾದಿಯಲ್ಲೇ ಪೆವಿಲಿಯನ್‌ ಸೇರಿದರು. ಗುಲ್ಬದಿನ್‌ ನೈಬ್‌ 4(3) ರನ್‌ ಗಳಿಸಿದರೆ, ನಬಿ 1(5) ರನ್‌ ಗಳಿಸಿ ಔಟಾದರು.

ತಂಡದ ವಿಕೆಟ್‌ಗಳು ಒಂದೆಡೆ ಬೀಳುತ್ತಿದ್ದರೂ ಮತ್ತೊಂದೆಡೆ ನಿಧಾನಗತಿಯ ಇನ್ನಿಂಗ್ಸ್‌ ಕಟ್ಟಿದ ಗುರ್ಬಾಜ್‌ 55 ಎಸೆತಗಳಲ್ಲಿ 3 ಬೌಂಡರಿ ಹಾಗೂ 1ಸಿಕ್ಸರ್‌ ಸಹಿತ 43 ರನ್‌ ಬಾರಿಸಿ ತಂಡಕ್ಕೆ ಆಸರೆಯಾದರು. ಕೊನೆಯಲ್ಲಿ ನಾಯಕ ರಶೀದ್‌ 19(10) ರನ್‌ ಹಾಗೂ ಜನತ್‌ 1(5)ರನ್‌ ಗಳಿಸಿ ಔಟಾಗದೇ ಉಳಿದರು.

ಬಾಂಗ್ಲಾದೇಶದ ಪರ ರಶೀದ್‌ ಹೊಸೇನ್‌ ಮೂರು, ಮುಸ್ತಫಿಜುರ್‌ ಹಾಗೂ ತಸ್ಕಿನ್‌ ಅಹ್ಮದ್‌ ತಲಾ ಒಂದೊಂದು ವಿಕೆಟ್‌ ಕಬಳಿಸಿದರು.

ಬಾಂಗ್ಲಾದೇಶ ಇನ್ನಿಂಗ್ಸ್‌: ಅಫ್ಘಾನಿಸ್ತಾನ ನೀಡಿದ್ದ ಸಾಧಾರಣ ಮೊತ್ತ ಬೆನ್ನತ್ತಿದ ಬಾಂಗ್ಲಾದೇಶಕ್ಕೆ ಅಫ್ಘನ್‌ ಸ್ಪಿನ್ನರ್ಸ್‌ ಕಾಡಿದರು. ಸಂಘಟಿತ ಬೌಲಿಂಗ್‌ ದಾಳಿಗೆ ಮಂಕಾದ ಬಾಂಗ್ಲಾ ಅಫ್ಘನ್‌ ಮುಂದೆ ಮಂಡಿಯೂರಿತು.

ಬಾಂಗ್ಲಾ ಪರವಾಗಿ ಆರಂಭಿಕ ಆಟಗಾರ ಲಿಟನ್‌ ದಾಸ್‌ ಅರ್ಧಶತಕ ಹೊರತಾಗಿ ಬೇರಾರಿಂದಲೂ ಉತ್ತಮ ಇನ್ನಿಂಗ್ಸ್‌ ಕಂಡುಬರಲೇ ಇಲ್ಲ. ನಾಟ್‌ಔಟ್‌ ಆಗಿ ಉಳಿದರೂ ಸಹಾ ಲಿಟನ್‌ ದಾಸ್‌ (54 ರನ್‌, 49 ಎಸೆತ 5 ಬೌಂಡರಿ 1ಸಿಕ್ಸರ್‌) ಪಂದ್ಯ ಗೆಲ್ಲಿಸಿಕೊಡಲು ಸಾಧ್ಯವಾಗಲಿಲ್ಲ.

ಆರಂಭಿಕ ಹಸನ್‌ ಶೂನ್ಯ ಸುತ್ತಿದರೇ, ನಾಯಕ ಸ್ಯಾಂಟೋ 5(5) ರನ್‌ ಬಾರಿಸಿದರು. ಉಳಿದಂತೆ ಅನುಭವಿ ಶಕೀಬ್‌ ಅಲ್‌-ಹಸನ್‌ ಡಕ್‌ಔಟ್‌ ಆಗಿ ಬಂದ ವೇಗದಲ್ಲೇ ಪೆವಿಲಿಯನ್‌ ಸೇರಿದರು. ಸೌಮ್ಯ ಸರ್ಕಾರ್‌ 10(10) ರನ್‌, ಹೃದಯ್‌ 14(9)ರನ್‌, ರಶೀದ್‌ ಹೊಸೇನ್‌ ಡಕ್‌ಔಟ್‌, ತಂಝೀಮ್‌ 3(10) ರನ್‌, ತಸ್ಕಿನ್‌ ಅಹ್ಮದ್‌ 2(9) ರನ್‌ ಹಾಗೂ ಮುಸ್ತಫಿಜುರ್‌ ಡಕ್‌ ಔಟ್‌ ಆಗುವ ಮೂಲಕ ಟೂರ್ನಿ ಅಭಿಯಾನವನ್ನು ಮುಗಿಸಿದರು.

ಈ ಪಂದ್ಯದಲ್ಲಿ ಬರೋಬ್ಬರಿ ನಾಲ್ಕು ಜನರು ಟಕ್‌ಔಟ್‌ ಆಗುವ ಮೂಲಕ ತಮ್ಮ ಕೈಯಲ್ಲಿದ್ದ ಅವಕಾಶ ಚೆಲ್ಲಿ ಅಫ್ಘಾನಿಸ್ತಾನ ಸೆಮಿಸ್‌ ಏರಲು ಬಾಂಗ್ಲಾ ಸಹಕರಿಸಿದರು.

ಅಫ್ಘಾನ್‌ ಪರ ನಾಯಕ ರಶೀದ್‌ ಖಾನ್‌ ಹಾಗೂ ನವೀನ್‌ ಉಲ್‌-ಹಕ್‌ ತಲಾ 4 ವಿಕೆಟ್‌ ಕಬಳಿಸಿ ಮಿಂಚಿದರು. ಫರೂಕಿ ಹಾಗೂ ನೈಬ್‌ ತಲಾ ಒಂದೊಂದು ವಿಕೆಟ್‌ ಪಡೆದು ಗಮನಸೆಳೆದರು.

ಪಂದ್ಯಶ್ರೇಷ್ಠ: ನವೀನ್‌ ಉಲ್‌-ಹಕ್‌

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ನಂಜನಗೂಡು | ಲೋಕಾ ಬಲೆಗೆ ಬಿದ್ದ ಸರ್ವೆಯರ್‌

ನಂಜನಗೂಡು : ಜಮೀನಿನ ಪೋಡಿ ಹಾಗೂ ದುರಸ್ತಿಪಡಿಸಲು ಲಂಚ ಪಡೆಯುತ್ತಿದ್ದ ಸರ್ವೆಯರ್ ಲೋಕಾಯುಕ್ತ ಬಲೆಗೆ ಬಿದ್ದ ಘಟನೆ ವರದಿಯಾಗಿದೆ. ತಾಲ್ಲೂಕಿನ…

4 hours ago

ಅನೈತಿಕ ಸಂಬಂಧದ ಶಂಕೆ : ರಾಡ್‌ನಿಂದ ಹೊಡೆದು ಪತ್ನಿ ಕೊಂದ ಪತಿ

ಶ್ರೀರಂಗಪಟ್ಟಣ : ಅನೈತಿಕ ಸಂಬಂಧದ ಶಂಕೆಯಿಂದ ಪತಿಯೇ ಪತ್ನಿಯನ್ನು ಹತ್ಯೆ ಮಾಡಿರುವ ಘಟನೆ ತಾಲ್ಲೂಕಿನ ಆಲಗೂಡು ಗ್ರಾಮದಲ್ಲಿ ನಡೆದಿದೆ. ಗ್ರಾಮದ…

6 hours ago

ರಾಮನಗರ: ಕಲ್ಲು ಕ್ವಾರಿಯಲ್ಲಿ ದುರಂತ: ಬಂಡೆ ಕುಸಿದು 7 ಮಂದಿ ಕಾರ್ಮಿಕರು ಸಾವು

ರಾಮನಗರ: ಕಲ್ಲು ಕ್ವಾರಿಯಲ್ಲಿ ಬಂಡೆ ಕುಸಿದು 7 ಮಂದಿ ಕಾರ್ಮಿಕರು ಸಾವನ್ನಪ್ಪಿರುವ ಘಟನೆ ಬೆಂಗಳೂರು ದಕ್ಷಿಣ ತಾಲ್ಲೂಕಿನ ಮಾದಾಪಟ್ಟಣ ಬಳಿ…

12 hours ago

ಕೊಡಗಿನಲ್ಲಿ ಸಾಧಾರಣ ಮಳೆ: ಹಾರಂಗಿ ಜಲಾಶಯದ ಒಳಹರಿವು ಹೆಚ್ಚಳ

ಮಡಿಕೇರಿ: ಕೊಡಗು ಜಿಲ್ಲೆಯಾದ್ಯಂತ ಕಳೆದ ಎರಡು ದಿನಗಳಿಂದ ಸಾಧಾರಣ ಮಳೆಯಾಗುತ್ತಿರುವ ಪರಿಣಾಮ ಹಾರಂಗಿ ಜಲಾಶಯಕ್ಕೆ ಒಳಹರಿವಿನ ಪ್ರಮಾಣ ಹೆಚ್ಚಾಗಿದೆ. ಜಲಾಶಯಕ್ಕೆ…

12 hours ago

ಓದುಗರ ಪತ್ರ: ಮುತ್ತತ್ತಿ ನದಿ ಬಳಿ ಪೊಲೀಸರನ್ನು ನಿಯೋಜಿಸಿ

ಮಂಡ್ಯ ಜಿಲ್ಲೆಯ ಮುತ್ತತ್ತಿಯಲ್ಲಿ ಕಾವೇರಿ ನದಿ ನೀರಿಗೆ ಇಳಿದು ಸೆಲ್ಛಿ ತೆಗೆದುಕೊಳ್ಳಲು ಹೋದ ಒಂದೇ ಕುಟುಂಬದ ನಾಲ್ವರು ಹಾಗೂ ಕಾರು…

17 hours ago

ಓದುಗರ ಪತ್ರ: ಚಪ್ಪಲಿ ಎಸೆತ ಪ್ರಕರಣ ಎಳೆದಾಡುವುದು ಬೇಡ

ಚಿಕ್ಕಬಳ್ಳಾಪುರ ಶಾಸಕರಾದ ಪ್ರದೀಪ್ ಈಶ್ವರ್ ಅವರ ಮೇಲೆ ಜಾ.ದಳ ಕಾರ್ಯಕರ್ತರೊಬ್ಬರು ಚಪ್ಪಲಿಯನ್ನು ಎಸೆದಿದ್ದು, ಈಗಾಗಲೇ ಆ ಕಾರ್ಯಕರ್ತನನ್ನು ಪೊಲೀಸರು ಬಂಧಿಸಿದ್ದಾರೆ.…

17 hours ago