ಕ್ರೀಡೆ

ಝದ್ರಾನ್ ಶತಕದ ನೆರವಿನಿಂದ ಆಸೀಸ್ ಗೆ 292 ರನ್ ಗುರಿ ನೀಡಿದ ಅಫ್ಘಾನಿಸ್ತಾನ

ಮುಂಬೈ : ಇಲ್ಲಿನ ವಾಂಖೆಡೆ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಐಸಿಸಿ ಏಕದಿನ ವಿಶ್ವಕಪ್ ಕ್ರಿಕೆಟ್ ಟೂರ್ನಿ ಯಲ್ಲಿ ಝದ್ರಾನ್ ಅವರ ಶತಕದ ನೆರವಿನಿಂದ ಅಫ್ಘಾನಿಸ್ತಾನ ತಂಡ ಆಸ್ಟ್ರೇಲಿಯ ಗೆಲುವಿಗೆ 292 ರನ್ ಗಳ ಸ್ಪರ್ಧಾತ್ಮಕ ಗುರಿ ನೀಡಿದೆ.

ಅಸೀಸ್ ವಿರುದ್ದ ಟಾಸ್ ಗೆದ್ದ ಅಫ್ಘಾನಿಸ್ತಾನ ತಂಡ ವಾಂಖೆಡೆ ಬ್ಯಾಟಿಂಗ್‌ ಸ್ನೇಹಿ ಪಿಚ್ ನಲ್ಲಿ ಮೊದಲು ಬ್ಯಾಟಿಂಗ್ ಆಯ್ದುಕೊಂಡಿತು. ಅಸೀಸ್ ಗೆ ಕಠಿಣ ಗುರಿ ನೀಡಬೇಕೆಂಬ ಉದ್ದೇಶ ದಿಂದ ಮೊದಲು ಬ್ಯಾಟಿಂಗ್ ಮಾಡಿದ್ದ ಅಫ್ಘಾನ್ ಪೆಡೆ ನಿಧಾನಗತಿಯಲ್ಲಿ ಇನ್ನಿಂಗ್ಸ್‌ ಕಟ್ಟಿತು. ಓಪನರ್ ರಹ್ಮತುಲ್ಲಾ ಗುರ್ಬಾಝ್ 21 ರನ್ ಗೆ ತಂಡದ 8 ನೇ ಓವರ್ ನಲ್ಲಿ ಹೇಝಲ್‌ವುಡ್‌ ಎಸೆತದಲ್ಲಿ ವಿಕೆಟ್ ಒಪ್ಪಿಸಿದರೆ ಮೂರನೇ ಕ್ರಮಾಂಕದಲ್ಲಿ ಬಂದ ರಹ್ಮತ್ ಶಾ 30 ರನ್ ಗೆ ಮಾಕ್ಸ್‌ವೆಲ್‌ ಆಫ್ ಸ್ಪಿನ್ ಗೆ ಔಟ್ ಆದರು. ಅಫ್ಘಾನಿಸ್ತಾನ ಪರ ಮೊದಲಿನಿಂದ ಕಡೇ ವರೆಗೂ ಏಕಾಂಗಿ ಹೋರಾಟ ಪ್ರದರ್ಶಿಸಿದ್ದ ಇಬ್ರಾಹೀಂ ಝದ್ರಾನ್ ಆಸ್ಟ್ರೇಲಿಯ ವಿರುದ್ಧ ಆಕರ್ಷಕ ಶತಕ ಬಾರಿಸಿ ತಂಡ ಅಲ್ಪ ಮೊತ್ತಕ್ಕೆ ಕುಸಿಯುವುದನ್ನು ತಡೆದರು. ಅಸೀಸ್ ವಿರುದ್ಧ ನಿಧಾನಗತಿ ರಕ್ಷಣಾತ್ಮಕ ಆಟವಾಡಿದ ಝದ್ರಾನ್ 142 ಎಸೆತಗಳಲ್ಲಿ 8 ಬೌಂಡರಿ 3 ಸಿಕ್ಸರ್ ಸಹಿತ 129 ರನ್ ಬಾರಿಸಿದರು.

ಅಫ್ಘಾನ್ ಪರ ನಾಯಕ ಹಶ್ಮತುಲ್ಲಾ ಶಾಹಿದಿ 26 , ಅಝ್ಮತುಲ್ಲಾ 22 , ಮುಹಮ್ಮದ್ ನಬಿ 12 ಗಳಿಸಿದರೆ ಕಡೇ ಗಳಿಗೆಯಲ್ಲಿ ಸ್ಟೋಟಕ ಬ್ಯಾಟಿಂಗ್ ಮಾಡಿದ ರಶೀದ್ ಖಾನ್ 35 ರನ್ ಬಾರಿಸಿದರು.

ಆಸ್ಟ್ರೇಲಿಯ ಪರ ಜೋಸ್ ಹೇಝಲ್‌ವುಡ್‌ 2 ವಿಕೆಟ್ ಪಡೆದರೆ ಮಿಷೆಲ್ ಸ್ಟಾರ್ಕ್, ಮ್ಯಾಕ್ಸ್‌ವೆಲ್ ಹಾಗೂ ಆಡಂ ಝಾಂಪ ತಲಾ ಒಂದು ವಿಕೆಟ್ ಕಬಳಿಸಿದರು.

andolanait

Recent Posts

ತಿ.‌ ನರಸೀಪುರ: ಬೈಕ್ ಡಿಕ್ಕಿ ಚಿರತೆ ಸಾವು

ತಿ. ನರಸೀಪುರ: ತಾಲೂಕಿನ ಬನ್ನೂರು ಹೋಬಳಿಯ ಬಸವನಹಳ್ಳಿ ಗ್ರಾಮದ ಸಮೀಪದ ಮುಖ್ಯರಸ್ತೆಯಲ್ಲಿ ದ್ವಿಚಕ್ರ ವಾಹನ ಚಿರತೆಗೆ ಡಿಕ್ಕಿ ಹೊಡೆದ ಪರಿಣಾಮ…

4 hours ago

ತಿರುಪತಿ ಲಡ್ಡು: ತುಪ್ಪದಲ್ಲಿ ಪ್ರಾಣಿ ಕೊಬ್ಬು ಬಳಕೆ

ಅಮರಾವತಿ: ಜಗತ್‌ ಪ್ರಸಿದ್ಧ ತಿರುಪತಿ ಲಡ್ಡು ಪ್ರಸಾದದಲ್ಲಿ ಪ್ರಾಣಿಗಳ ಕೊಬ್ಬು ಹಾಗೂ ಕಳಪೆ ಗುಣಮಟ್ಟದ ಪದಾರ್ಥಗಳು ಪತ್ತೆಯಾಗಿದೆ ಎಂದು ತೆಲುಗು…

5 hours ago

ಬುರ್ಖಾಧಾರಿ ಮಹಿಳೆಯಿಂದ ಸಲ್ಮಾನ್‌ ಖಾನ್‌ ತಂದೆಗೆ ಜೀವ ಬೆದರಿಕೆ: ಮಹಿಳೆ ಸೇರಿ ಇಬ್ಬರ ಬಂಧನ

ಮುಂಬೈ:‌ ಬಾಲಿವುಡ್‌ನ ಭಾಯಿಜಾನ್ ಸಲ್ಮಾನ್‌ ಖಾನ್‌ ಅವರ ತಂದೆಗೆ ಬುರ್ಖಾ ಧರಿಸಿದ್ದ ಮಹಿಳೆ ಹಾಗೂ ಇನ್ನೊರ್ವ ವ್ಯಕ್ತಿ ಜೀವ ಬೆದರಿಕೆ…

6 hours ago

ಶಾಸಕ ಮುನಿರತ್ನಗೆ ಜಾಮೀನು: ಅತ್ಯಾಚಾರ ಪ್ರಕರಣದಲ್ಲಿ ಮತ್ತೆ ಬಂಧನ ಸಾಧ್ಯತೆ

ಬೆಂಗಳೂರು: ಗುತ್ತಿಗೆದಾರರೊಬ್ಬರಿಗೆ ಜಾತಿನಿಂದನೆ ಹಾಗೂ ಪ್ರಾಣ ಬೆದರಿಕೆ ಹಾಕಿದ ಪ್ರಕರಣದಲ್ಲಿ ಬೆಂಗಳೂರಿನ ರಾಜರಾಜೇಶ್ವರಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನಗೆ…

7 hours ago

ನುಡಿ ಹಬ್ಬಕ್ಕೆ ಆಹ್ವಾನಿಸಲು ಸಿದ್ಧವಾಗಿದೆ ಕನ್ನಡ ರಥ

ಮಂಡ್ಯ: ಜಿಲ್ಲೆಯಲ್ಲಿ ಡಿಸೆಂಬರ್ 20, 21, 22 ರಂದು ನಡೆಯಲಿರುವ 87 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ…

7 hours ago

ಬಸ್‌ನಲ್ಲಿ ಪ್ರಯಾಣ: ಮಹಿಳೆಯರಿಂದ ಶಕ್ತಿಯೋಜನೆಯ ಅಭಿಪ್ರಾಯ ಪಡೆದ ಪುಷ್ಪ ಅಮರನಾಥ್‌

ಮೈಸೂರು: ರಾಜ್ಯ ಸರ್ಕಾರದ ಮಹತ್ವಕಾಂಕ್ಷೆ ಯೋಜನೆಗಳಲ್ಲಿ ಒಂದಾದ ಶಕ್ತಿಯೋಜನೆ ಫಲಾನುಭವಿಗಳ ಅಭಿಪ್ರಾಯ ಸಂಗ್ರಹಿಸಲು ಗ್ಯಾರಂಟಿ ಅನುಷ್ಠಾನ ಸಮಿತಿ ಉಪಾಧ್ಯಕ್ಷೆಯಾದ ಡಾ…

7 hours ago