ಕ್ರೀಡೆ

ಝದ್ರಾನ್ ಶತಕದ ನೆರವಿನಿಂದ ಆಸೀಸ್ ಗೆ 292 ರನ್ ಗುರಿ ನೀಡಿದ ಅಫ್ಘಾನಿಸ್ತಾನ

ಮುಂಬೈ : ಇಲ್ಲಿನ ವಾಂಖೆಡೆ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಐಸಿಸಿ ಏಕದಿನ ವಿಶ್ವಕಪ್ ಕ್ರಿಕೆಟ್ ಟೂರ್ನಿ ಯಲ್ಲಿ ಝದ್ರಾನ್ ಅವರ ಶತಕದ ನೆರವಿನಿಂದ ಅಫ್ಘಾನಿಸ್ತಾನ ತಂಡ ಆಸ್ಟ್ರೇಲಿಯ ಗೆಲುವಿಗೆ 292 ರನ್ ಗಳ ಸ್ಪರ್ಧಾತ್ಮಕ ಗುರಿ ನೀಡಿದೆ.

ಅಸೀಸ್ ವಿರುದ್ದ ಟಾಸ್ ಗೆದ್ದ ಅಫ್ಘಾನಿಸ್ತಾನ ತಂಡ ವಾಂಖೆಡೆ ಬ್ಯಾಟಿಂಗ್‌ ಸ್ನೇಹಿ ಪಿಚ್ ನಲ್ಲಿ ಮೊದಲು ಬ್ಯಾಟಿಂಗ್ ಆಯ್ದುಕೊಂಡಿತು. ಅಸೀಸ್ ಗೆ ಕಠಿಣ ಗುರಿ ನೀಡಬೇಕೆಂಬ ಉದ್ದೇಶ ದಿಂದ ಮೊದಲು ಬ್ಯಾಟಿಂಗ್ ಮಾಡಿದ್ದ ಅಫ್ಘಾನ್ ಪೆಡೆ ನಿಧಾನಗತಿಯಲ್ಲಿ ಇನ್ನಿಂಗ್ಸ್‌ ಕಟ್ಟಿತು. ಓಪನರ್ ರಹ್ಮತುಲ್ಲಾ ಗುರ್ಬಾಝ್ 21 ರನ್ ಗೆ ತಂಡದ 8 ನೇ ಓವರ್ ನಲ್ಲಿ ಹೇಝಲ್‌ವುಡ್‌ ಎಸೆತದಲ್ಲಿ ವಿಕೆಟ್ ಒಪ್ಪಿಸಿದರೆ ಮೂರನೇ ಕ್ರಮಾಂಕದಲ್ಲಿ ಬಂದ ರಹ್ಮತ್ ಶಾ 30 ರನ್ ಗೆ ಮಾಕ್ಸ್‌ವೆಲ್‌ ಆಫ್ ಸ್ಪಿನ್ ಗೆ ಔಟ್ ಆದರು. ಅಫ್ಘಾನಿಸ್ತಾನ ಪರ ಮೊದಲಿನಿಂದ ಕಡೇ ವರೆಗೂ ಏಕಾಂಗಿ ಹೋರಾಟ ಪ್ರದರ್ಶಿಸಿದ್ದ ಇಬ್ರಾಹೀಂ ಝದ್ರಾನ್ ಆಸ್ಟ್ರೇಲಿಯ ವಿರುದ್ಧ ಆಕರ್ಷಕ ಶತಕ ಬಾರಿಸಿ ತಂಡ ಅಲ್ಪ ಮೊತ್ತಕ್ಕೆ ಕುಸಿಯುವುದನ್ನು ತಡೆದರು. ಅಸೀಸ್ ವಿರುದ್ಧ ನಿಧಾನಗತಿ ರಕ್ಷಣಾತ್ಮಕ ಆಟವಾಡಿದ ಝದ್ರಾನ್ 142 ಎಸೆತಗಳಲ್ಲಿ 8 ಬೌಂಡರಿ 3 ಸಿಕ್ಸರ್ ಸಹಿತ 129 ರನ್ ಬಾರಿಸಿದರು.

ಅಫ್ಘಾನ್ ಪರ ನಾಯಕ ಹಶ್ಮತುಲ್ಲಾ ಶಾಹಿದಿ 26 , ಅಝ್ಮತುಲ್ಲಾ 22 , ಮುಹಮ್ಮದ್ ನಬಿ 12 ಗಳಿಸಿದರೆ ಕಡೇ ಗಳಿಗೆಯಲ್ಲಿ ಸ್ಟೋಟಕ ಬ್ಯಾಟಿಂಗ್ ಮಾಡಿದ ರಶೀದ್ ಖಾನ್ 35 ರನ್ ಬಾರಿಸಿದರು.

ಆಸ್ಟ್ರೇಲಿಯ ಪರ ಜೋಸ್ ಹೇಝಲ್‌ವುಡ್‌ 2 ವಿಕೆಟ್ ಪಡೆದರೆ ಮಿಷೆಲ್ ಸ್ಟಾರ್ಕ್, ಮ್ಯಾಕ್ಸ್‌ವೆಲ್ ಹಾಗೂ ಆಡಂ ಝಾಂಪ ತಲಾ ಒಂದು ವಿಕೆಟ್ ಕಬಳಿಸಿದರು.

andolanait

Recent Posts

ಆಂಧ್ರದಲ್ಲಿ ಮತ್ತೆ ಕೋವಿಡ್‌ ಆತಂಕ: ಇಬ್ಬರು ಬಲಿ

ಅಮರಾವತಿ: ಆಂಧ್ರಪ್ರದೇಶದಲ್ಲಿ ಮತ್ತೆ ಕೋವಿಡ್‌ ಸೋಂಕಿನ ಪ್ರಕರಣಗಳು ಕಾಣಿಸಿಕೊಳ್ಳುತ್ತಿದ್ದು, ವೈಎಸ್‌ಆರ್‌ ಕಡಪ ಜಿಲ್ಲೆಯಲ್ಲಿ ಇತ್ತೀಚಿನ ವಾರಗಳಲ್ಲಿ 8 ಸಕ್ರಿಯ ಕೋವಿಡ್‌…

8 hours ago

ಪಂಚಭೂತಗಳಲ್ಲಿ ಲೀನರಾದ ಗಾನಕೋಗಿಲೆ ಎಸ್.ಜಾನಕಿ

ಮೈಸೂರು: ಖ್ಯಾತ ಹಿನ್ನೆಲೆ ಗಾಯಕಿ ಎಸ್.ಜಾನಕಿ ಅವರ ಅಂತ್ಯಕ್ರಿಯೆಯು ತೆಲುಗು ಬ್ರಾಹ್ಮಣ ಕುಟುಂಬದ ಸಂಪ್ರದಾಯದಂತೆ ನೆರವೇರಿತು. ಜಾನಕಿ ಅವರ ಪುತ್ರ…

8 hours ago

ಹೇಮಾವತಿ ನದಿ ಹಿನ್ನೀರಿನಲ್ಲಿ ಕಣ್ಮರೆಯಾಗಿದ್ದ ಇಬ್ಬರ ಮೃತದೇಹ ಪತ್ತೆ

ಶನಿವಾರಸಂತೆ: ಸಮೀಪದ ಕೊಡ್ಲಿಪೇಟೆ ಹೋಬಳಿ ವ್ಯಾಪ್ತಿಯ ನೀರುಗುಂದ ಗ್ರಾಮದ ಹೇಮಾವತಿ ನದಿ ಹಿನ್ನೀರಿನಲ್ಲಿ ಮೀನು ಹಿಡಿಯಲು ತೆರಳಿ ಕಣ್ಮರೆಯಾಗಿದ್ದ ಸ್ಥಳೀಯ…

10 hours ago

ಮಧ್ಯಪ್ರಾಚ್ಯ ಮತ್ತೆ ಉದ್ವಿಗ್ನ: ಹಾರ್ಮುಜ್‌ ಜಲಸಂಧಿ ಮುಚ್ಚಿದ ಇರಾನ್‌

ಟೆಹರಾನ್:‌ ಹಾರ್ಮುಜ್‌ ಜಲಸಂಧಿಯನ್ನು ಮುಚ್ಚುವುದಾಗಿ ಐಆರ್‌ಜಿಸಿ ಘೋಷಣೆ ಮಾಡಿದೆ. ಪಶ್ಚಿಮ ಏಷ್ಯಾ ಪ್ರದೇಶದಲ್ಲಿ ಅಮೇರಿಕಾ ತನ್ನ ಹಸ್ತಕ್ಷೇಪವನ್ನು ಕೊನೆಗೊಳಿಸುವವರೆಗೆ ಜಲಮಾರ್ಗವನ್ನು…

10 hours ago

ರಾಜ್ಯದಲ್ಲಿ ನೈರುತ್ಯ ಮುಂಗಾರು ಮತ್ತೆ ದುರ್ಬಲ: ತೀವ್ರಗೊಂಡ ಬರದ ಛಾಯೆ

ಬೆಂಗಳೂರು: ನೈಋತ್ಯ ಮುಂಗಾರು ಮತ್ತೆ ರಾಜ್ಯದಲ್ಲಿ ದುರ್ಬಲಗೊಂಡಿದ್ದು, ಮಳೆ ಕೊರತೆಯಿಂದಾಗಿ ಬರದ ಛಾಯೆ ತೀವ್ರವಾಗತೊಡಗಿದೆ. ಜುಲೈ ತಿಂಗಳ ಮೊದಲ ವಾರದಲ್ಲಿ…

10 hours ago

ಕಣಿಯನಹುಂಡಿ ತೋಟದ ಮನೆಯಲ್ಲಿ ನೆರವೇರಲಿದೆ ಎಸ್‌.ಜಾನಕಿ ಅವರ ಅಂತ್ಯಕ್ರಿಯೆ

ಮೈಸೂರು: ಹಿರಿಯ ಗಾಯಕಿ ಎಸ್. ಜಾನಕಿ ಅವರ ಅಂತ್ಯಕ್ರಿಯೆ ಇಂದು ಮೈಸೂರಿನ ಬೋಗಾದಿ ಬಳಿಯ ಕಣಿಯನಹುಂಡಿ ತೋಟದ ಮನೆಯಲ್ಲಿ ಸಕಲ…

11 hours ago