ಕ್ರೀಡೆ

ಝದ್ರಾನ್ ಶತಕದ ನೆರವಿನಿಂದ ಆಸೀಸ್ ಗೆ 292 ರನ್ ಗುರಿ ನೀಡಿದ ಅಫ್ಘಾನಿಸ್ತಾನ

ಮುಂಬೈ : ಇಲ್ಲಿನ ವಾಂಖೆಡೆ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಐಸಿಸಿ ಏಕದಿನ ವಿಶ್ವಕಪ್ ಕ್ರಿಕೆಟ್ ಟೂರ್ನಿ ಯಲ್ಲಿ ಝದ್ರಾನ್ ಅವರ ಶತಕದ ನೆರವಿನಿಂದ ಅಫ್ಘಾನಿಸ್ತಾನ ತಂಡ ಆಸ್ಟ್ರೇಲಿಯ ಗೆಲುವಿಗೆ 292 ರನ್ ಗಳ ಸ್ಪರ್ಧಾತ್ಮಕ ಗುರಿ ನೀಡಿದೆ.

ಅಸೀಸ್ ವಿರುದ್ದ ಟಾಸ್ ಗೆದ್ದ ಅಫ್ಘಾನಿಸ್ತಾನ ತಂಡ ವಾಂಖೆಡೆ ಬ್ಯಾಟಿಂಗ್‌ ಸ್ನೇಹಿ ಪಿಚ್ ನಲ್ಲಿ ಮೊದಲು ಬ್ಯಾಟಿಂಗ್ ಆಯ್ದುಕೊಂಡಿತು. ಅಸೀಸ್ ಗೆ ಕಠಿಣ ಗುರಿ ನೀಡಬೇಕೆಂಬ ಉದ್ದೇಶ ದಿಂದ ಮೊದಲು ಬ್ಯಾಟಿಂಗ್ ಮಾಡಿದ್ದ ಅಫ್ಘಾನ್ ಪೆಡೆ ನಿಧಾನಗತಿಯಲ್ಲಿ ಇನ್ನಿಂಗ್ಸ್‌ ಕಟ್ಟಿತು. ಓಪನರ್ ರಹ್ಮತುಲ್ಲಾ ಗುರ್ಬಾಝ್ 21 ರನ್ ಗೆ ತಂಡದ 8 ನೇ ಓವರ್ ನಲ್ಲಿ ಹೇಝಲ್‌ವುಡ್‌ ಎಸೆತದಲ್ಲಿ ವಿಕೆಟ್ ಒಪ್ಪಿಸಿದರೆ ಮೂರನೇ ಕ್ರಮಾಂಕದಲ್ಲಿ ಬಂದ ರಹ್ಮತ್ ಶಾ 30 ರನ್ ಗೆ ಮಾಕ್ಸ್‌ವೆಲ್‌ ಆಫ್ ಸ್ಪಿನ್ ಗೆ ಔಟ್ ಆದರು. ಅಫ್ಘಾನಿಸ್ತಾನ ಪರ ಮೊದಲಿನಿಂದ ಕಡೇ ವರೆಗೂ ಏಕಾಂಗಿ ಹೋರಾಟ ಪ್ರದರ್ಶಿಸಿದ್ದ ಇಬ್ರಾಹೀಂ ಝದ್ರಾನ್ ಆಸ್ಟ್ರೇಲಿಯ ವಿರುದ್ಧ ಆಕರ್ಷಕ ಶತಕ ಬಾರಿಸಿ ತಂಡ ಅಲ್ಪ ಮೊತ್ತಕ್ಕೆ ಕುಸಿಯುವುದನ್ನು ತಡೆದರು. ಅಸೀಸ್ ವಿರುದ್ಧ ನಿಧಾನಗತಿ ರಕ್ಷಣಾತ್ಮಕ ಆಟವಾಡಿದ ಝದ್ರಾನ್ 142 ಎಸೆತಗಳಲ್ಲಿ 8 ಬೌಂಡರಿ 3 ಸಿಕ್ಸರ್ ಸಹಿತ 129 ರನ್ ಬಾರಿಸಿದರು.

ಅಫ್ಘಾನ್ ಪರ ನಾಯಕ ಹಶ್ಮತುಲ್ಲಾ ಶಾಹಿದಿ 26 , ಅಝ್ಮತುಲ್ಲಾ 22 , ಮುಹಮ್ಮದ್ ನಬಿ 12 ಗಳಿಸಿದರೆ ಕಡೇ ಗಳಿಗೆಯಲ್ಲಿ ಸ್ಟೋಟಕ ಬ್ಯಾಟಿಂಗ್ ಮಾಡಿದ ರಶೀದ್ ಖಾನ್ 35 ರನ್ ಬಾರಿಸಿದರು.

ಆಸ್ಟ್ರೇಲಿಯ ಪರ ಜೋಸ್ ಹೇಝಲ್‌ವುಡ್‌ 2 ವಿಕೆಟ್ ಪಡೆದರೆ ಮಿಷೆಲ್ ಸ್ಟಾರ್ಕ್, ಮ್ಯಾಕ್ಸ್‌ವೆಲ್ ಹಾಗೂ ಆಡಂ ಝಾಂಪ ತಲಾ ಒಂದು ವಿಕೆಟ್ ಕಬಳಿಸಿದರು.

andolanait

Recent Posts

ಓದುಗರ ಪತ್ರ | ರಾಜ್ಯ ವಿಧಾನ ಮಂಡಲ ಅಧಿವೇಶನ ಸದ್ಬಳಕೆಗೆ ದಾರಿ ಯಾವುದಯ್ಯ!?

ರಾಜ್ಯ ವಿಧಾನ ಮಂಡಲದ ಮುಂಗಾರು ಅಧಿವೇಶನ ವಿರೋಧ ಪಕ್ಷಗಳ ಸಕ್ರೀಯ ಭಾಗವಹಿಸುವಿಕೆ ಇಲ್ಲದೇ ನೀರಸವಾಗಿ ಕೊನೆಗೊಂಡಿದ್ದು ಪ್ರಜಾಪ್ರಭುತ್ವದ ದುರ್ದೈವದ ಸಂಗತಿಯಾಗಿದೆ.…

5 hours ago

ಓದುಗರ ಪತ್ರ | ಹಿಂದಿ ಶಿಕ್ಷಕರ ನೇಮಕಾತಿ ಏಕಿಲ್ಲ?

15 ಸಾವಿರ ಶಿಕ್ಷಕರ ನೇಮಕಾತಿಯಲ್ಲಿ ಹಿಂದಿ ಶಿಕ್ಷಕರನ್ನು ಪಟ್ಟಿಯಿಂದ ಹೊರಗಿಟ್ಟಿರುವುದು ಖಂಡನೀಯ. ಇದು ಸಂವಿಧಾನ ಬಾಹಿರ ನಡೆ. ಇದು ಹಿಂದಿ…

6 hours ago

ಓದುಗರ ಪತ್ರ | ಕನ್ನಡ ಚಿತ್ರ; ಟಿಕೆಟ್‌ಗಳಲ್ಲಿ ಆಂಗ್ಲ ಹೆಸರು !

ಮಲ್ಟಿಪ್ಲೆಕ್ಸ್‌ಗಳಲ್ಲಿ ಕನ್ನಡದ ಚಲನಚಿತ್ರಗಳು ಪ್ರದರ್ಶಿತವಾಗುತ್ತವೆ. ಗ್ರಾಹಕರಿಗೆ ನೀಡುವ ಟಿಕೆಟಿನಲ್ಲಿ ಸಿನಿಮಾದ ಹೆಸರೂ ಅಚ್ಚಾಗಿರುತ್ತದೆ.ಆದರೆ... ಕನ್ನಡ ಚಿತ್ರಕ್ಕೆ ಖರೀದಿಸುವ ಟಿಕೆಟ್‌ನಲ್ಲಿ ಚಿತ್ರದ…

6 hours ago

ಓದುಗರ ಪತ್ರ | ಮತದಾರರ ಕರಡು ಪಟ್ಟಿಯ ತಪ್ಪುಗಳನ್ನು ಸರಿಪಡಿಸಿ

ರಾಜ್ಯದಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ (ಎಸ್‌ಐಆರ್-೨೬) ಕಾರ್ಯ ಮುಗಿದು ಇದೀಗ ಕರಡು ಪಟ್ಟಿ ಬಿಡುಗಡೆಯಾಗಿದೆ. ಎಸ್‌ಐಆರ್ ಬಗ್ಗೆ ಹಲವಾರು ಅನುಮಾನ…

6 hours ago

ಬಾ.ನಾ.ಸುಬ್ರಹ್ಮಣ್ಯ ಅವರ ವೈಡ್‌ ಆಂಗಲ್‌ | ಕಳಚಿದ ಚಲನಚಿತ್ರ ಪತ್ರಿಕೋದ್ಯಮದ ಹಿರಿಯ ಕೊಂಡಿ ಶ್ರೀಕೃಪಾ

ಕನ್ನಡ ಚಿತ್ರವೊಂದು ದೇಶ-ವಿದೇಶಗಳಲ್ಲಿ ಜೈತ್ರಯಾತ್ರೆ ಮಾಡುತ್ತಿರುವ ಸಂದರ್ಭ. ಕನ್ನಡ ಚಿತ್ರರಂಗದ ಕಡೆ ಭಾರತದ ಉಳಿದ ಚಿತ್ರೋದ್ಯಮಗಳು ತಿರುಗಿ ನೋಡುವ ಬೆಳವಣಿಗೆ.…

6 hours ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಆಗಸ್ಟ್‌ 28  ಶುಕ್ರವಾರ

6 hours ago