ಕ್ರೀಡೆ

ಏಷ್ಯಾಕಪ್​ಗೆ ಅಫ್ಘಾನಿಸ್ತಾನ್ ತಂಡ ಪ್ರಕಟ: ನವೀನ್ ಉಲ್ ಹಕ್ ಔಟ್

ಏಷ್ಯಾಕಪ್​ಗಾಗಿ ಅಫ್ಘಾನಿಸ್ತಾನ್ ತಂಡವನ್ನು ಪ್ರಕಟಿಸಲಾಗಿದೆ. 17 ಸದಸ್ಯರ ಈ ಬಳಗವನ್ನು ಹಶ್ಮತುಲ್ಲಾ ಶಾಹಿದಿ ಮುನ್ನಡೆಸಲಿದ್ದಾರೆ. ಇನ್ನು ಈ ತಂಡದಲ್ಲಿ ಅಫ್ಘಾನ್​ನ ಯುವ ವೇಗಿ ನವೀನ್ ಉಲ್ ಹಕ್ ಸ್ಥಾನ ನೀಡಲಾಗಿಲ್ಲ. ಈ ಹಿಂದೆ ಐಪಿಎಲ್​ನಲ್ಲಿ ವಿರಾಟ್ ಕೊಹ್ಲಿ ಜೊತೆ ಜಗಳಕ್ಕಿಳಿದು ನವೀನ್ ಉಲ್ ಹಕ್ ಭಾರೀ ಸುದ್ದಿಯಾಗಿದ್ದರು. ಅಲ್ಲದೆ ಏಷ್ಯಾಕಪ್​ನಲ್ಲಿ ನವೀನ್ ಹಾಗೂ ಕೊಹ್ಲಿ ನಡುವಣ ಮುಖಾಮುಖಿಯನ್ನು ನಿರೀಕ್ಷಿಸಲಾಗಿತ್ತು. ಆದರೀಗ 17 ಸದಸ್ಯರ ಬಳಗದಲ್ಲಿ ಲಕ್ನೋ ಸೂಪರ್ ಜೈಂಟ್ಸ್​ ಬೌಲರ್​ ಸ್ಥಾನ ಪಡೆಯುವಲ್ಲಿ ವಿಫಲರಾಗಿದ್ದಾರೆ.

ಮತ್ತೊಂದೆಡೆ 6 ವರ್ಷಗಳ ಬಳಿಕ ಕರೀಮ್ ಜನತ್ ಅಫ್ಘಾನಿಸ್ತಾನ್ ತಂಡದಲ್ಲಿ ಸ್ಥಾನ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ. 2017 ರಲ್ಲಿ ಝಿಂಬಾಬ್ವೆ ವಿರುದ್ಧ ಕೊನೆಯ ಬಾರಿಗೆ ಏಕದಿನ ಪಂದ್ಯವಾಡಿದ್ದ ಜನತ್ ಇದೀಗ ಏಷ್ಯಾಕಪ್ ಮೂಲಕ ಕಂಬ್ಯಾಕ್ ಮಾಡುತ್ತಿದ್ದಾರೆ.

ಇನ್ನು ಪಾಕಿಸ್ತಾನ್ ವಿರುದ್ಧದ ಸರಣಿಯಲ್ಲಿ ಕಳಪೆ ಪ್ರದರ್ಶನ ನೀಡಿದ್ದ ಫರೀದ್ ಅಹ್ಮದ್ ಮಲಿಕ್ ಮತ್ತು ಶಾಹಿದುಲ್ಲಾ ಕಮಾಲ್ ಅವರನ್ನು ತಂಡದಿಂದ ಕೈ ಬಿಡಲಾಗಿದೆ. ಹಾಗೆಯೇ ಪಾಕ್​ ವಿರುದ್ಧದ ಕೊನೆಯ ಏಕದಿನ ಪಂದ್ಯದಲ್ಲಿ ಗಾಯಗೊಂಡಿರುವ ಅಜ್ಮತುಲ್ಲಾ ಒಮರ್ಜಾಯ್ ಬದಲಿಗೆ ಗುಲ್ಬದಿನ್ ನೈಬ್ ಅವರನ್ನು ತಂಡಕ್ಕೆ ಸೇರಿಸಿಕೊಳ್ಳಲಾಗಿದೆ.

ಅಫ್ಘಾನಿಸ್ತಾನ ತಂಡ: ಹಶ್ಮತುಲ್ಲಾ ಶಾಹಿದಿ (ನಾಯಕ), ರಹಮಾನುಲ್ಲಾ ಗುರ್ಬಾಝ್ (ವಿಕೆಟ್ ಕೀಪರ್), ಇಬ್ರಾಹಿಂ ಝದ್ರಾನ್, ರಿಯಾಜ್ ಹಸನ್, ರಹಮತ್ ಶಾ, ನಜಿಬುಲ್ಲಾ ಝದ್ರಾನ್, ಮೊಹಮ್ಮದ್ ನಬಿ, ಇಕ್ರಮ್ ಅಲಿಖಿಲ್, ರಶೀದ್ ಖಾನ್, ಗುಲ್ಬದಿನ್ ನೈಬ್, ಕರೀಮ್ ಜನತ್, ಅಬ್ದುಲ್ ರಹಮಾನ್, ಮುದ್ದೀನ್ ಅಶ್ರಫ್, ಅಬ್ದುಲ್ ರಹಮಾನ್ ರೆಹಮಾನ್, ನೂರ್ ಅಹ್ಮದ್, ಮೊಹಮ್ಮದ್ ಸಲೀಮ್ ಸಫಿ, ಫಜಲ್ಹಕ್ ಫಾರೂಕಿ.

ಏಷ್ಯಾಕಪ್​ ವೇಳಾಪಟ್ಟಿ:

  1. ಆಗಸ್ಟ್ 30- ಪಾಕಿಸ್ತಾನ್ vs ನೇಪಾಳ (ಮುಲ್ತಾನ್)
  2. ಆಗಸ್ಟ್ 31- ಬಾಂಗ್ಲಾದೇಶ್ vs ಶ್ರೀಲಂಕಾ (ಕ್ಯಾಂಡಿ)
  3. ಸೆಪ್ಟೆಂಬರ್ 2- ಭಾರತ vs ಪಾಕಿಸ್ತಾನ್ (ಕ್ಯಾಂಡಿ)
  4. ಸೆಪ್ಟೆಂಬರ್ 3- ಬಾಂಗ್ಲಾದೇಶ್ vs ಅಫ್ಘಾನಿಸ್ತಾನ್ (ಲಾಹೋರ್)
  5. ಸೆಪ್ಟೆಂಬರ್ 4- ಭಾರತ vs ನೇಪಾಳ (ಕ್ಯಾಂಡಿ)
  6. ಸೆಪ್ಟೆಂಬರ್ 5- ಶ್ರೀಲಂಕಾ vs ಅಫ್ಘಾನಿಸ್ತಾನ್ (ಲಾಹೋರ್)

ಸೂಪರ್‌-4 ವೇಳಾಪಟ್ಟಿ:

  1. ಸೆಪ್ಟೆಂಬರ್ 6- A1 Vs B2 (ಲಾಹೋರ್)
  2. ಸೆಪ್ಟೆಂಬರ್ 9- B1 Vs B2 (ಕೊಲಂಬೊ)
  3. ಸೆಪ್ಟೆಂಬರ್ 10- A1 Vs A2 (ಕೊಲಂಬೊ)
  4. ಸೆಪ್ಟೆಂಬರ್ 12- A2 Vs B1 (ಕೊಲಂಬೊ)
  5. ಸೆಪ್ಟೆಂಬರ್ 14- A1 Vs B1 (ಕೊಲಂಬೊ)
  6. ಸೆಪ್ಟೆಂಬರ್ 15- A2 Vs B2 (ಕೊಲಂಬೊ)
  7. ಸೆಪ್ಟೆಂಬರ್ 17- ಫೈನಲ್ ಪಂದ್ಯ (ಕೊಲಂಬೊ)
andolanait

Recent Posts

ಸುಪ್ರೀಂಕೋರ್ಟ್‌ಗೆ ಐವರು ನ್ಯಾಯಮೂರ್ತಿಗಳ ನೇಮಕ

ನವದೆಹಲಿ: ಸುಪ್ರೀಂಕೋರ್ಟ್‍ಗೆ ಐವರು ನ್ಯಾಯಮೂರ್ತಿಗಳನ್ನು ನೇಮಕ ಮಾಡಲಾಗಿದೆ. ನ್ಯಾಯಮೂರ್ತಿಗಳಾಗಿ ನ್ಯಾ.ವೆಂಕಿಟ ಸುಬ್ರಮಣಿ ಮೋಹನ, ನ್ಯಾ.ಚಂದ್ರಶೇಖರ್ (ಬಾಂಬೆ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ),…

24 mins ago

ಮೋದಿ ಮಿತವ್ಯಯ ಕರೆ ಎಫೆಕ್ಟ್:‌ ಚಿನ್ನ ಆಮದು 70% ಇಳಿಕೆ

ಬೆಂಗಳೂರು: ದೇಶದಲ್ಲಿ ಚಿನ್ನದ ಖರೀದಿ ಪ್ರಮಾಣ ಗಣನೀಯವಾಗಿ ಕಡಿಮೆಯಾಗಿದೆ. ಇದರ ಪರಿಣಾಮವಾಗಿ ಚಿನ್ನದ ಆಮದು ಪ್ರಮಾಣದಲ್ಲೂ ಭಾರೀ ಇಳಿಕೆ ಕಂಡುಬಂದಿದೆ.…

39 mins ago

ರಾಜ್ಯಸಭೆ ಚುನಾವಣೆಗೆ ಬಿಜೆಪಿ-ಜೆಡಿಎಸ್‌ನಲ್ಲಿ ತೀವ್ರ ಪೈಪೋಟಿ

ಬೆಂಗಳೂರು : ಇದೇ ತಿಂಗಳ 18 ರಂದು ನಡೆಯಲಿರುವ ರಾಜ್ಯಸಭೆ ಮತ್ತು ವಿಧಾನಪರಿಷತ್ ಚುನಾವಣೆಗೆ ಎನ್‍ಡಿಎ ಮೈತ್ರಿಪಕ್ಷಗಳಾದ ಬಿಜೆಪಿ ಹಾಗೂ…

2 hours ago

ಆರ್.ಟಿ.ವಿಠ್ಠಲಮೂರ್ತಿ ಅವರು ವಾರದ ಅಂಕಣ | ಬದಲಾಗಿದೆ ರಾಜ್ಯ ರಾಜಕಾರಣದ ಸೂತ್ರ

ರಾಜ್ಯ ರಾಜಕಾರಣ ಮಗ್ಗಲು ಬದಲಿಸಿದೆ. ಸಿಎಂ ಹುದ್ದೆಯಿಂದ ಸಿದ್ದರಾಮಯ್ಯ ಅವರು ಕೆಳಗಿಳಿದು ಡಿ.ಕೆ.ಶಿವಕುಮಾರ್ ಬಂದು ಕೂರುವ ಬೆಳವಣಿಗೆಯೊಂದಿಗೆ ರಾಜ್ಯ ರಾಜಕಾರಣದ…

5 hours ago

ಸಂಪಾದಕೀಯ | ಡಿ.ಕೆ.ಶಿವಕುಮಾರ್‌ ಅವರ ಮುಂದಿದೆ ಸವಾಲುಗಳು

ಕರ್ನಾಟಕದ ರಾಜಕಾರಣದಲ್ಲಿ ಮಹತ್ವದ ಬದಲಾವಣೆಯಾಗಿ, ಡಿ. ಕೆ. ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ಬುಧವಾರ ಅಧಿಕಾರ ವಹಿಸಿಕೊಳ್ಳುತ್ತಿದ್ದಾರೆ. ಸಿದ್ದರಾಮಯ್ಯನವರು ಮುಖ್ಯಮಂತ್ರಿ ಸ್ಥಾನಕ್ಕೆ…

5 hours ago

ಸೈದ್ಧಾಂತಿಕ ಬದ್ಧತೆ; ಪಕ್ಷದ ಸಿದ್ಧಾಂತದಲ್ಲಿ ರಾಜಿ ಸಲ್ಲದು ; ಡಿಕೆಶಿಗೆ ಸಿದ್ದರಾಮಯ್ಯ ಭಾವನಾತ್ಮಕ ಪೋಸ್ಟ್

ಬೆಂಗಳೂರು : ಹಂಗಾಮಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಡಿ.ಕೆ.ಶಿವಕುಮಾರ್ ಅವರಿಗೆ ಭಾವನಾತ್ಮಕ ಪೋಸ್ಟ್ ಮಾಡಿದ್ದಾರೆ. ಈ…

22 hours ago