ಕ್ರೀಡೆ

ಏಷ್ಯಾಕಪ್​ಗೆ ಅಫ್ಘಾನಿಸ್ತಾನ್ ತಂಡ ಪ್ರಕಟ: ನವೀನ್ ಉಲ್ ಹಕ್ ಔಟ್

ಏಷ್ಯಾಕಪ್​ಗಾಗಿ ಅಫ್ಘಾನಿಸ್ತಾನ್ ತಂಡವನ್ನು ಪ್ರಕಟಿಸಲಾಗಿದೆ. 17 ಸದಸ್ಯರ ಈ ಬಳಗವನ್ನು ಹಶ್ಮತುಲ್ಲಾ ಶಾಹಿದಿ ಮುನ್ನಡೆಸಲಿದ್ದಾರೆ. ಇನ್ನು ಈ ತಂಡದಲ್ಲಿ ಅಫ್ಘಾನ್​ನ ಯುವ ವೇಗಿ ನವೀನ್ ಉಲ್ ಹಕ್ ಸ್ಥಾನ ನೀಡಲಾಗಿಲ್ಲ. ಈ ಹಿಂದೆ ಐಪಿಎಲ್​ನಲ್ಲಿ ವಿರಾಟ್ ಕೊಹ್ಲಿ ಜೊತೆ ಜಗಳಕ್ಕಿಳಿದು ನವೀನ್ ಉಲ್ ಹಕ್ ಭಾರೀ ಸುದ್ದಿಯಾಗಿದ್ದರು. ಅಲ್ಲದೆ ಏಷ್ಯಾಕಪ್​ನಲ್ಲಿ ನವೀನ್ ಹಾಗೂ ಕೊಹ್ಲಿ ನಡುವಣ ಮುಖಾಮುಖಿಯನ್ನು ನಿರೀಕ್ಷಿಸಲಾಗಿತ್ತು. ಆದರೀಗ 17 ಸದಸ್ಯರ ಬಳಗದಲ್ಲಿ ಲಕ್ನೋ ಸೂಪರ್ ಜೈಂಟ್ಸ್​ ಬೌಲರ್​ ಸ್ಥಾನ ಪಡೆಯುವಲ್ಲಿ ವಿಫಲರಾಗಿದ್ದಾರೆ.

ಮತ್ತೊಂದೆಡೆ 6 ವರ್ಷಗಳ ಬಳಿಕ ಕರೀಮ್ ಜನತ್ ಅಫ್ಘಾನಿಸ್ತಾನ್ ತಂಡದಲ್ಲಿ ಸ್ಥಾನ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ. 2017 ರಲ್ಲಿ ಝಿಂಬಾಬ್ವೆ ವಿರುದ್ಧ ಕೊನೆಯ ಬಾರಿಗೆ ಏಕದಿನ ಪಂದ್ಯವಾಡಿದ್ದ ಜನತ್ ಇದೀಗ ಏಷ್ಯಾಕಪ್ ಮೂಲಕ ಕಂಬ್ಯಾಕ್ ಮಾಡುತ್ತಿದ್ದಾರೆ.

ಇನ್ನು ಪಾಕಿಸ್ತಾನ್ ವಿರುದ್ಧದ ಸರಣಿಯಲ್ಲಿ ಕಳಪೆ ಪ್ರದರ್ಶನ ನೀಡಿದ್ದ ಫರೀದ್ ಅಹ್ಮದ್ ಮಲಿಕ್ ಮತ್ತು ಶಾಹಿದುಲ್ಲಾ ಕಮಾಲ್ ಅವರನ್ನು ತಂಡದಿಂದ ಕೈ ಬಿಡಲಾಗಿದೆ. ಹಾಗೆಯೇ ಪಾಕ್​ ವಿರುದ್ಧದ ಕೊನೆಯ ಏಕದಿನ ಪಂದ್ಯದಲ್ಲಿ ಗಾಯಗೊಂಡಿರುವ ಅಜ್ಮತುಲ್ಲಾ ಒಮರ್ಜಾಯ್ ಬದಲಿಗೆ ಗುಲ್ಬದಿನ್ ನೈಬ್ ಅವರನ್ನು ತಂಡಕ್ಕೆ ಸೇರಿಸಿಕೊಳ್ಳಲಾಗಿದೆ.

ಅಫ್ಘಾನಿಸ್ತಾನ ತಂಡ: ಹಶ್ಮತುಲ್ಲಾ ಶಾಹಿದಿ (ನಾಯಕ), ರಹಮಾನುಲ್ಲಾ ಗುರ್ಬಾಝ್ (ವಿಕೆಟ್ ಕೀಪರ್), ಇಬ್ರಾಹಿಂ ಝದ್ರಾನ್, ರಿಯಾಜ್ ಹಸನ್, ರಹಮತ್ ಶಾ, ನಜಿಬುಲ್ಲಾ ಝದ್ರಾನ್, ಮೊಹಮ್ಮದ್ ನಬಿ, ಇಕ್ರಮ್ ಅಲಿಖಿಲ್, ರಶೀದ್ ಖಾನ್, ಗುಲ್ಬದಿನ್ ನೈಬ್, ಕರೀಮ್ ಜನತ್, ಅಬ್ದುಲ್ ರಹಮಾನ್, ಮುದ್ದೀನ್ ಅಶ್ರಫ್, ಅಬ್ದುಲ್ ರಹಮಾನ್ ರೆಹಮಾನ್, ನೂರ್ ಅಹ್ಮದ್, ಮೊಹಮ್ಮದ್ ಸಲೀಮ್ ಸಫಿ, ಫಜಲ್ಹಕ್ ಫಾರೂಕಿ.

ಏಷ್ಯಾಕಪ್​ ವೇಳಾಪಟ್ಟಿ:

  1. ಆಗಸ್ಟ್ 30- ಪಾಕಿಸ್ತಾನ್ vs ನೇಪಾಳ (ಮುಲ್ತಾನ್)
  2. ಆಗಸ್ಟ್ 31- ಬಾಂಗ್ಲಾದೇಶ್ vs ಶ್ರೀಲಂಕಾ (ಕ್ಯಾಂಡಿ)
  3. ಸೆಪ್ಟೆಂಬರ್ 2- ಭಾರತ vs ಪಾಕಿಸ್ತಾನ್ (ಕ್ಯಾಂಡಿ)
  4. ಸೆಪ್ಟೆಂಬರ್ 3- ಬಾಂಗ್ಲಾದೇಶ್ vs ಅಫ್ಘಾನಿಸ್ತಾನ್ (ಲಾಹೋರ್)
  5. ಸೆಪ್ಟೆಂಬರ್ 4- ಭಾರತ vs ನೇಪಾಳ (ಕ್ಯಾಂಡಿ)
  6. ಸೆಪ್ಟೆಂಬರ್ 5- ಶ್ರೀಲಂಕಾ vs ಅಫ್ಘಾನಿಸ್ತಾನ್ (ಲಾಹೋರ್)

ಸೂಪರ್‌-4 ವೇಳಾಪಟ್ಟಿ:

  1. ಸೆಪ್ಟೆಂಬರ್ 6- A1 Vs B2 (ಲಾಹೋರ್)
  2. ಸೆಪ್ಟೆಂಬರ್ 9- B1 Vs B2 (ಕೊಲಂಬೊ)
  3. ಸೆಪ್ಟೆಂಬರ್ 10- A1 Vs A2 (ಕೊಲಂಬೊ)
  4. ಸೆಪ್ಟೆಂಬರ್ 12- A2 Vs B1 (ಕೊಲಂಬೊ)
  5. ಸೆಪ್ಟೆಂಬರ್ 14- A1 Vs B1 (ಕೊಲಂಬೊ)
  6. ಸೆಪ್ಟೆಂಬರ್ 15- A2 Vs B2 (ಕೊಲಂಬೊ)
  7. ಸೆಪ್ಟೆಂಬರ್ 17- ಫೈನಲ್ ಪಂದ್ಯ (ಕೊಲಂಬೊ)
andolanait

Recent Posts

ಮಲೆ ಮಹದೇಶ್ವರದಲ್ಲಿ ವನ್ಯಜೀವಿಧಾಮದಲ್ಲಿ ಬೇಟೆಗಾರರ ಕ್ರೌರ್ಯಕ್ಕೆ ಮತ್ತೊಂದು ಕಡವೆ ಬಲಿ: ಮೂರು ತುಂಡು ಮಾಡಿ ಪರಾರಿ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕಾವೇರಿ ವನ್ಯಜೀವಿಧಾಮದ ಹೊಳೆಮುರಿದಟ್ಟಿ ಕರಿಕಲ್ಲುಗುಡ್ಡದಲ್ಲಿ ಅರಣ್ಯಾಧಿಕಾರಿಗಳ ಮೇಲೆ ಗುಂಡಿನ ದಾಳಿ…

5 mins ago

ಓದುಗರ ಪತ್ರ: ಚರಂಡಿಯಿಂದ ವಿದ್ಯುತ್ ಕಂಬವನ್ನು ಬೇರ್ಪಡಿಸಿ

ಮೈಸೂರಿನ ಕುವೆಂಪುನಗರದ ನೃಪತುಂಗ ರಸ್ತೆಯಲ್ಲಿ ಚರಂಡಿ, ಪಾದಚಾರಿಮಾರ್ಗ ಮತ್ತು ರಸ್ತೆ ಅಭಿವೃದ್ಧಿ ಕಾಮಗಾರಿ ನಡೆಯುತ್ತಿದೆ. ಸಿದ್ದಲಿಂಗೇಶ್ವರ ಅಂಗಡಿ ಬಳಿ ವಿದ್ಯುತ್…

5 hours ago

ಓದುಗರ ಪತ್ರ: ಬೇಲಿಯೇ ಎದ್ದು ಹೊಲ ಮೇಯ್ದಂತೆ !

ಮೈಸೂರು ನಗರದ ಪ್ರತಿಷ್ಠಿತ ಸಹಕಾರ ಬ್ಯಾಂಕ್ ಒಂದರಲ್ಲಿ ಸಾಲ ನೀಡುವಿಕೆಯಲ್ಲಿ ಕೊಟ್ಯಂತರ ರೂ. ಅವ್ಯವಹಾರ ನಡೆದಿರುವ ಬಗ್ಗೆ ಮಾಧ್ಯಮಗಳಲ್ಲಿ ವರದಿಯಾಗಿದೆ.…

5 hours ago

ಓದುಗರ ಪತ್ರ: ಕೆಪಿಎಸ್‌ಸಿ ಶುದ್ಧೀಕರಣದ ಅಗತ್ಯ

ಕರ್ನಾಟಕ ಲೋಕಸೇವಾ ಆಯೋಗವು ರಾಜ್ಯದ ಅತ್ಯುನ್ನತ ನಾಗರಿಕ ಸೇವೆಗಳಿಗೆ ಅರ್ಹ ಅಭ್ಯರ್ಥಿಗಳನ್ನು ಆಯ್ಕೆ ಮಾಡುವ ಜವಾಬ್ದಾರಿಯುತ ಸಂಸ್ಥೆಯಾಗಿದೆ. ಆದರೆ ಇತ್ತೀಚಿನ…

5 hours ago

ದಸರೆಯ ಹಿಂದೆ ಸಾಗುವ ಗಜಪಡೆ ಮಹಾಯಾನ

ಶ್ರೇಯಸ್ ದೇವನೂರು, ವನ್ಯಜೀವಿ ಛಾಯಾಗ್ರಾಹಕ ಮಾವುತ - ಆನೆ ನಡುವೆ ಹೃದಯಸ್ಪರ್ಶಿ ಸಂಬಂಧ ಮೈಸೂರು ದಸರಾ ಎಂದಾಕ್ಷಣ ನಮ್ಮ ಕಣ್ಣ…

5 hours ago

ಗರ್ಭಕೋಶ ಕ್ಯಾನ್ಸರ್‌ಗೆ ಲಸಿಕೆ ಅಸ್ತ್ರ

ಚಿರಂಜೀವಿ ಸಿ. ಹುಲ್ಲಹಳ್ಳಿ ಜಿಲ್ಲೆಯಲ್ಲಿ ಎಚ್‌ಪಿವಿ ಅಭಿಯಾನ; ಶೇ.೬೮.೮ರಷ್ಟು ಪ್ರಗತಿ ೧೫,೫೧೮ ಬಾಲಕಿಯರಿಗೆ ಲಸಿಕೆ ನೀಡುವ ಗುರಿ; ೮,೩೬೦ ಸಾಧನೆ…

5 hours ago