ಕ್ರೀಡೆ

ಆರ್‌ಸಿಬಿ ಆರ್ಭಟ ಕಂಡು ಉಳಿದ ತಂಡಗಳಿಗೆ ನಡುಕ ಶುರುವಾಗಿದೆ: ಆಕಾಶ್ ಚೋಪ್ರಾ

ಬೆಂಗಳೂರು : ಜಗತ್ತಿನ ಐಶಾರಾಮಿ ಟಿ20 ಲೀಗ್‌ ಕ್ರಿಕೆಟ್‌ ಟೂರ್ನಿ ಇಂಡಿಯನ್ ಪ್ರೀಮಿರಿಯರ್‌ ಲೀಗ್‌ನ ಹದಿನಾರನೇ ಆವೃತ್ತಿಯು ಕ್ಲೈಮ್ಯಾಕ್ಸ್‌ ಹಂತಕ್ಕೆ ಕಾಲಿಟ್ಟಿದೆ.

ಐಪಿಎಲ್‌ 2023 ಟೂರ್ನಿಯ 65ನೇ ಲೀಗ್‌ ಪಂದ್ಯದ ಮುಕ್ತಾಯಕ್ಕೆ, ಎಲ್ಲ ಹತ್ತು ತಂಡಗಳು ತಲಾ 13 ಪಂದ್ಯಗಳನ್ನು ಆಡಿದಂತ್ತಾಗಿದೆ. ಇನ್ನು ಲೀಗ್‌ ಹಂತದಲ್ಲಿ ಎಲ್ಲ ತಂಡಗಳು ತಲಾ ಒಂದೊಂದು ಪಂದ್ಯಗಳನ್ನು ಆಡುವುದಷ್ಟೇ ಬಾಕಿ. ಆದರೂ ಕೂಡ ಪ್ಲೇ ಆಫ್‌ ಹಂತದ ಮೂರು ಸ್ಥಾನಗಳು ಇನ್ನೂ ಖಾಲಿ ಉಳಿದಿವೆ.

18 ಅಂಕ ಕಲೆಹಾಕಿರುವ ಡಿಫೆಂಡಿಂಗ್‌ ಚಾಂಪಿಯನ್ಸ್‌ ಗುಜರಾತ್‌ ಟೈಟನ್ಸ್‌ ಮಾತ್ರವೇ ನಾಕ್‌ ಔಟ್‌ ಹಂತಕ್ಕೆ ಕಾಲಿಟ್ಟಿರುವ ಏಕಮಾತ್ರ ತಂಡ.

ಈ ಬಗ್ಗೆ ಮಾತನಾಡಿರುವ ಭಾರತ ತಂಡದ ಮಾಜಿ ಕ್ರಿಕೆಟಿಗ ಹಾಗೂ ಜನಪ್ರಿಯ ಕ್ರಿಕೆಟ್‌ ಕಾಮೆಂಟೇಟರ್‌, ಲೀಗ್ ಹಂತದ ಅಂತಿಮ ಪಂದ್ಯಗಳಲ್ಲಿ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ತಂಡದ ಭರ್ಜರಿ ಪ್ರದರ್ಶನ ಕಂಡು ಉಳಿದ ಎಲ್ಲಾ ತಂಡಗಳ ಮನದಲ್ಲಿ ಭಯ ಶುರುವಾಗಿದೆ ಎಂದು ಹೇಳಿದ್ದಾರೆ.

ಫಾಫ್‌ ಡು ಪ್ಲೆಸಿಸ್‌ ಸಾರಥ್ಯದ ಆರ್‌ಸಿಬಿ ತಂಡ ತನ್ನ ಕಳೆದ ಎರಡೂ ಪಂದ್ಯಗಳಲ್ಲಿ ಭರ್ಜರಿ ಜಯ ದಾಖಲಿಸಿದೆ. ಮೊದಲಿಗೆ ರಾಜಸ್ಥಾನ್‌ ರಾಯಲ್ಸ್‌ ಎದುರು 112 ರನ್‌ಗಳ ದೈತ್ಯ ಗೆಲುವು ದಕ್ಕಿಸಿಕೊಂಡು, ನಂತರ ಎಸ್‌ಆರ್‌ಎಚ್‌ ಎದುರು 187 ರನ್‌ಗಳ ಗುರಿ ಮೆಟ್ಟಿನಿಂತು 8 ವಿಕೆಟ್‌ಗಳ ಜಯ ದಾಖಲಿಸಿದೆ. ಈ ಮೂಲಕ ಅಂಕಪಟ್ಟಿಯಲ್ಲಿ ಮರಳಿ ಅಗ್ರ 4ರಲ್ಲಿ ಸ್ಥಾನ ಪಡೆದುಕೊಂಡಿದೆ.

ತನ್ನ ಮುಂದಿನ ಪಂದ್ಯದಲ್ಲಿ ಗುಜರಾತ್‌ ಟೈಟನ್ಸ್‌ ಎದುರು ಪೈಪೋಟಿ ನಡೆಸಲಿದ್ದು, ಆ ಪಂದ್ಯದಲ್ಲಿ ಜಯ ಸಿಕ್ಕರೆ ಸುಲಭವಾಗಿ ನಾಕ್‌ಔಟ್ ಹಂತಕ್ಕೆ ಕಾಲಿಡಲಿದೆ. ಸದ್ಯ ಆಡಿದ 13 ಪಂದ್ಯಗಳಲ್ಲಿ 7 ಜಯದೊಂದಿಗೆ ಅಂಕಪಟ್ಟಿಯಲ್ಲಿ 4ನೇ ಸ್ಥಾನ ಅಲಂಕರಿಸಿದೆ.

“ಬೆಂಗಳೂರು ತಂಡ ಐಪಿಎಲ್‌ ಪ್ಲೇ ಆಫ್‌ ರೇಸ್‌ನಲ್ಲಿ ಜೀವಂತವಾಗಿ ಉಳಿದಿದೆ. ಕಳೆದ ಎರಡು ಪಂದ್ಯಗಳಲ್ಲಿ ಆರ್‌ಸಿಬಿ ಅಧಿಕಾರಯುತ ಜಯ ದಾಖಲಿಸಿದೆ. ಹೀಗಾಗಿ ಟೂರ್ನಿಯಲ್ಲಿನ ಉಳಿದ ತಂಡಗಳಿಗೆ ಈಗ ಖಂಡಿತಾ ಆರ್‌ಸಿಬಿ ಬಗ್ಗೆ ಭಯ ಶುರುವಾಗಿದೆ ಎನ್ನಬಹುದು. ಅಂದಹಾಗೆ ಆರ್‌ಸಿಬಿ ತಂಡದ ಭವಿಷ್ಯ ಭಾನುವಾರ ರಾತ್ರಿ ನಿರ್ಧಾರವಾಗಲಿದೆ,” ಎಂದು ಆಕಾಶ್‌ ಚೋಪ್ರಾ ತಮ್ಮ ಯೂಟ್ಯೂಬ್‌ ಕಾರ್ಯಕ್ರಮದಲ್ಲಿ ಹೇಳಿದ್ದಾರೆ.

ಮೇ 21ರಂದು ಮನೆಯಂಗಣ ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಲಿರುವ ಲೀಗ್‌ ಹಂತದ ಕೊನೇ ಪಂದ್ಯದಲ್ಲಿ ಆರ್‌ಸಿಬಿ ತಂಡ ಡಿಫೆಂಡಿಂಗ್ ಚಾಂಪಿಯನ್ಸ್‌ ಗುಜರಾತ್‌ ಟೈಟನ್ಸ್‌ ಎದುರು ಕಾದಾಟ ನಡೆಸಲಿದೆ. ಇಲ್ಲಿ ಗೆಲುವು ಸಿಕ್ಕರೆ ಆರ್‌ಸಿಬಿ ಮುಂದಿನ ಹಂತಕ್ಕೆ ಯಾವುದೇ ಅಡ್ಡಿಯಿಲ್ಲದೆ ತೇರ್ಗಡೆಯಾಗಲಿದೆ.

ಉತ್ತಮ ಪ್ರದರ್ಶನ ನೀಡಿರುವ ಆರ್‌ಸಿಬಿ
2009, 2011 ಮತ್ತು 2016ರ ಸಾಲಿನಲ್ಲಿ ರನ್ನರ್ಸ್‌ ಅಪ್‌ ಸ್ಥಾನ ಪಡೆದಿರುವ ಆರ್‌ಸಿಬಿ ತಂಡ ಈ ಬಾರಿ ಉತ್ತಮ ಪ್ರದರ್ಶನವನ್ನೇ ನೀಡಿದೆ. ನಾಯಕ ಫಾಫ್‌ ಡು ಪ್ಲೆಸಿಸ್‌, ಆರೆಂಜ್‌ ಕ್ಯಾಪ್‌ ರೇಸ್‌ನಲ್ಲಿ ಮುಂಚೂಣಿಯಲ್ಲಿದ್ದು, ಆಡಿದ 13 ಪಂದ್ಯಗಳಿಂದ ಒಟ್ಟಾರೆ 702 ರನ್‌ಗಳನ್ನು ಬಾರಿಸಿದ್ದಾರೆ. ವಿರಾಟ್‌ ಕೊಹ್ಲಿ ಕೂಡ ಶ್ರೇಷ್ಠ ಲಯದಲ್ಲಿದ್ದು, 538 ರನ್‌ ಸಿಡಿಸಿದ್ದಾರೆ.

ಮಧ್ಯಮ ಕ್ರಮಾಂಕದಲ್ಲಿ ಗ್ಲೆನ್‌ ಮ್ಯಾಕ್ಸ್‌ವೆಲ್‌ (389) ಕೂಡ ಭರ್ಜರಿ ಆಟವಾಡುತ್ತಿದ್ದಾರೆ. ಮೊಹಮ್ಮದ್‌ ಸಿರಾಜ್‌ ತಂಡದ ಪರ ಹೆಚ್ಚು ವಿಕೆಟ್‌ ಪಡೆದ ಬೌಲರ್‌ ಆಗಿದ್ದಾರೆ. ಅವರಿಗೆ ಉಳಿದವರಿಂದ ಸೂಕ್ತ ಬೆಂಬಲ ಸಿಕ್ಕರೆ ಖಂಡಿತಾ ಈ ಬಾರಿ ಆರ್‌ಸಿಬಿ ತನ್ನ ಟ್ರೋಫಿ ಗೆಲುವಿನ ಬರ ನೀಗಿಸಿಕೊಳ್ಳುವ ಎಲ್ಲಾ ಸಾಧ್ಯತೆಗಳಿವೆ.

andolanait

Recent Posts

ಮಾನವ ಹಕ್ಕುಗಳನ್ನು ಪೋಷಿಸುವ ಸಾಮಾಜಿಕ ನ್ಯಾಯದ ಪರಿಕಲ್ಪನೆ

ಯಾವುದೋ ಒಂದು ಹಕ್ಕು ಹೆಚ್ಚಿನ ಆದ್ಯತೆ ಹೊಂದಲು ಸಾಧ್ಯವೇ? ಕೆಲವು ಹಕ್ಕುಗಳು ಹೆಚ್ಚು ಮುಖ್ಯವಾಗುವವೇ? ಒಂದು ರೀತಿಯ ಹಕ್ಕಿನಿಂದ ಇನ್ನೊಂದು…

6 mins ago

ಅವೈಜ್ಞಾನಿಕ ಚರಂಡಿ ಕಾಮಗಾರಿಯಿಂದ ಕಿರಿಕಿರಿ

ಮನೆ ಮುಂಭಾಗ ತ್ಯಾಜ್ಯ ನೀರು ನಿಂತು ಗಬ್ಬುನಾರುತ್ತಿರುವ ಚರಂಡಿ ; ಸಾಂಕ್ರಾಮಿಕ ರೋಗ ಹರಡುವ ಭೀತಿ, ಚುನಾವಣೆ ಬಹಿಷ್ಕಾರಕ್ಕೆ ಸ್ಥಳೀಯರ…

33 mins ago

ಅಂಗನವಾಡಿಗಳಿಗೆ ೬ ತಿಂಗಳಿಂದ ಬಾರದ ಮೊಟ್ಟೆ ಹಣ!

ಚಾಮರಾಜನಗರ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ ತಾಲ್ಲೂಕಿನ ಅಂಗನವಾಡಿ ಕೇಂದ್ರಗಳಿಗೆ ಕೋಳಿಮೊಟ್ಟೆ ವಿತರಣೆಗಾಗಿ ನೀಡಲಾಗುವ ಅನುದಾನ ಕಳೆದ ೬ತಿಂಗಳಿಂದ…

3 hours ago

‘ತ್ಯಾಜ್ಯ ಸಂಸ್ಕರಣೆ, ವಿಲೇವಾರಿಗೆ ಕ್ರಮಕೈಗೊಳ್ಳಬೇಕು’

ಗುತ್ತಲು ಕೆರೆ, ಕಾಳೇನಹಳ್ಳಿ ಘನ ತ್ಯಾಜ್ಯ ವಿಲೇವಾರಿ ಘಟಕಕ್ಕೆ ಜಿಲ್ಲಾಧಿಕಾರಿ ಡಾ.ಕುಮಾರ ಭೇಟಿ ಮಂಡ್ಯ: ನಗರದ ಗುತ್ತಲು ಕೆರೆಗೆ ತ್ಯಾಜ್ಯ…

3 hours ago

ಕೇಂದ್ರೀಯ ಬಸ್ ನಿಲ್ದಾಣದಲ್ಲಿ ಕುಡಿಯುವ ನೀರಿಗೆ ಪರದಾಟ

ಪ್ರಶಾಂತ್ ಎಸ್. ಆರು ತಿಂಗಳಿನಿಂದ ಶುದ್ಧ ಕುಡಿಯುವ ನೀರಿನ ಘಟಕ ಸ್ಥಗಿತ ನೀರಿನ ಘಟಕ ನಿರ್ವಹಣೆ ಮಾಡುವಲ್ಲಿ ಕೆಎಸ್‌ಆರ್‌ಟಿಸಿ ವಿಫಲ…

3 hours ago

ವರ್ಷಾಂತ್ಯ: ಗರಿಗೆದರದ ಮೈಸೂರು ಪ್ರವಾಸೋದ್ಯಮ

ಗಿರೀಶ್ ಹುಣಸೂರು ಹೊಸ ವರ್ಷಾಚರಣೆ, ಕ್ರಿಸ್‌ಮಸ್ ರಜೆ ನಿರೀಕ್ಷೆಯಲ್ಲಿ ವ್ಯಾಪಾರಸ್ಥರು, ಉದ್ಯಮಿಗಳು ಮೈಸೂರು: ೨೦೨೫ನೇ ವರ್ಷಕ್ಕೆ ವಿದಾಯ ಹೇಳಿ, ೨೦೨೬ರ…

3 hours ago