ದುಬೈ : ಮುಂಬರುವ ಏಷ್ಯಾಕಪ್ ಕೂಟದಲ್ಲಿ ಭಾರತ ತಂಡ ಪಾಕಿಸ್ತಾನ ವಿರುದ್ಧ ಸೆಣಸಲಿದ್ದು, ಸೆ.14 ರಂದು ಪಂದ್ಯ ನಿಗದಿಯಾಗಿದೆ. ಆದರೆ ಪಂದ್ಯ ರದ್ದಾಗುವ ಸಾಧ್ಯತೆ ದಟ್ಟವಾಗಿದೆ.
ಪದೇ ಪದೇ ಕಾಲುಕೆರೆದು ಜಗಳಕ್ಕೆ ಬರುವ, ಸದಾ ಭಾರತದ ಮೇಲೆ ಭಯೋತ್ಪಾದಕ ದಾಳಿ ನಡೆಸುವ ಪಾಕಿಸ್ತಾನ ವಿರುದ್ಧ ಕ್ರಿಕೆಟ್ ಸಹವಾಸವೇ ಬೇಡ ಎಂಬ ಅನೇಕರ ಪ್ರತಿರೋಧ ವ್ಯಕ್ತವಾಗಿದೆ. ಇತ್ತೀಚೆಗೆ ನಡೆದಿದ್ದ ವಿಶ್ವ ಲೆಜೆಂಡ್ಸ್ ಚಾಂಪಿಯನ್ಷಿಪ್ (ಡಬ್ಲ್ಯೂಸಿಎಲ್) ಟೂರ್ನಿಯಲ್ಲಿ ಭಾರತ ತಂಡ ಪಾಕ್ನೊಂದಿಗೆ ಪಂದ್ಯ ಆಡಲು ನಿರಾಕರಿಸಿತ್ತು. ಲೀಗ್ ಹಂತ ಮಾತ್ರವಲ್ಲದೆ ಸೆಮಿ ಪಂದ್ಯವನ್ನು ಕೂಡ ಭಾರತ ಆಡಿರಲಿಲ್ಲ. ಹೀಗಾಗಿ ಏಷ್ಯಾ ಕಪ್ನಲ್ಲಿ ಭಾರತ ತಂಡ ಪಾಕ್ ವಿರುದ್ಧ ಆಡಬಾರದು ಎಂಬುದು ಭಾರತೀಯ ಅಭಿಮಾನಿಗಳ ಒತ್ತಾಯವಾಗಿದೆ.
ಇನ್ನು ಕೆಲವರು ನಾವೇಕೆ ಪಾಕಿಸ್ತಾನಕ್ಕೆ ಪುಕ್ಕಟೆ ಎರಡಂಕ ಕೊಡಬೇಕು. ಅವರನ್ನು ಇನ್ನೊಮ್ಮೆ ಹೆಡೆಮುರಿ ಕಟ್ಟಿ ಸೋಲಿಸಬೇಕು ಎಂದಿದ್ದಾರೆ. ಎಮಿರೇಟ್ಸ್ ಕ್ರಿಕೆಟ್ ಮಂಡಳಿಯ ಮುಖ್ಯ ಕಾರ್ಯ ನಿರ್ವಹಣಾಧಿಕಾರಿಯಾಗಿರುವ ಸುಭಾನ್ ಅಹದ್ ಪ್ರಕಾರ, ಏಷ್ಯಾಕಪ್ನಲ್ಲಿ ಪಂದ್ಯ ರದ್ದಾಗುವ ಸಾಧ್ಯತೆ ಕಡಿಮೆ. ನಾವು ಯಾವುದೇ ಗ್ಯಾರಂಟಿ ನೀಡಲು ಸಾಧ್ಯವಿಲ್ಲ ಎಂದಿದ್ದಾರೆ.
ಏಷ್ಯಾ ಕಪ್ನಲ್ಲಿ ಆಡಲು ಸರ್ಕಾರದ ಅನುಮತಿಯನ್ನು ಮುಂಚಿತವಾಗಿ ತೆಗೆದುಕೊಳ್ಳಲಾಗುತ್ತದೆ. ವೇಳಾಪಟ್ಟಿಯನ್ನು ಘೋಷಿಸುವ ನಿರ್ಧಾರಕ್ಕೆ ಬರುವ ಮೊದಲೇ ಅದನ್ನು ಮಾಡಲಾಗಿದೆ. ಆದ್ದರಿಂದ ಡಬ್ಲ್ಯೂಸಿಐನಲ್ಲಿ ಇದ್ದಂತಹ ಪರಿಸ್ಥಿತಿ ನಮಗೆ ಬರದಿರಲು ಆಶಿಸುತ್ತೇವೆ ಎಂದು ಹೇಳಿದ್ದಾರೆ. ಆದರೆ ಬಿಸಿಸಿಐ ಯಾವ ನಿರ್ಧಾರ ತೆಗೆದುಕೊಳ್ಳುತ್ತದೆ ಎಂಬುದನ್ನು ಕಾದು ನೋಡಬೇಕಿದೆ.
ಬೆಂಗಳೂರು: ಮಾಜಿ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಅಪರಾಧ ಸಾಬೀತುಪಡಿಸಿದ ತನಿಖಾ ತಂಡಕ್ಕೆ 25 ಲಕ್ಷ ರೂ. ನಗದು ಬಹುಮಾನ…
ಬೆಂಗಳೂರು: ರಾಜ್ಯಪಾಲರು ಜಂಟಿ ಅಧಿವೇಶನದಲ್ಲಿ ರಾಷ್ಟ್ರಗೀತೆ ಹಾಡದೇ ಹೋಗಿದ್ದು ಸಂವಿಧಾನದ ಉಲ್ಲಂಘನೆಯಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಟೀಕೆ ಮಾಡಿದರು. ಈ…
ಕೇರಳ: ವಿಧಾನಸಭೆ ಚುನಾವಣೆ ನಡೆಯಲಿರುವ ಕೇರಳಕ್ಕೆ ಭೇಟಿ ನೀಡಿದ ಪ್ರಧಾನಿ ನರೇಂದ್ರ ಮೋದಿ ಅವರು ಸರಣಿ ಅಭಿವೃದ್ಧಿ ಯೋಜನೆಗಳಿಗೆ ಉದ್ಘಾಟನೆ…
ಮಂಡ್ಯ: ಕಳೆದ ಬಾರಿಗಿಂತ ಈ ಬಾರಿ ವಿಶೇಷವಾಗಿ 2 ಲಕ್ಷಕ್ಕೂ ಅಧಿಕ ಹೂಗಳನ್ನು ಬಳಿಸಿ ವಿಶೇಷ ಫಲಪುಷ್ಪ ಪ್ರದರ್ಶನವನ್ನು ಮಾಡಲಾಗಿದೆ…
ಮೈಸೂರು: ಅಪಾರ್ಟ್ಮೆಂಟ್ವೊಂದರಲ್ಲಿ ಬಣ್ಣ ಹೊಡೆಯುವ ವೇಳೆ ಕಾಲು ಜಾರಿ ಕೆಳಗೆ ಬಿದ್ದು ಕಾರ್ಮಿಕನೋರ್ವ ಮೃತಪಟ್ಟಿರುವ ಘಟನೆ ಮೈಸೂರಿನ ದಿವಾನ್ಸ್ ರಸ್ತೆಯಲ್ಲಿರುವ…
ಮಹಾದೇಶ್ ಎಂ ಗೌಡ ಹನೂರು: ಶ್ರೀ ಕ್ಷೇತ್ರ ಮಲೆ ಮಾದೇಶ್ವರ ಬೆಟ್ಟಕ್ಕೆ ಸಂಜೆ 6 ಗಂಟೆಯಿಂದ ಬೆಳಗಿನ ಜಾವ 6…