ದುಬೈ : ಮುಂಬರುವ ಏಷ್ಯಾಕಪ್ ಕೂಟದಲ್ಲಿ ಭಾರತ ತಂಡ ಪಾಕಿಸ್ತಾನ ವಿರುದ್ಧ ಸೆಣಸಲಿದ್ದು, ಸೆ.14 ರಂದು ಪಂದ್ಯ ನಿಗದಿಯಾಗಿದೆ. ಆದರೆ ಪಂದ್ಯ ರದ್ದಾಗುವ ಸಾಧ್ಯತೆ ದಟ್ಟವಾಗಿದೆ.
ಪದೇ ಪದೇ ಕಾಲುಕೆರೆದು ಜಗಳಕ್ಕೆ ಬರುವ, ಸದಾ ಭಾರತದ ಮೇಲೆ ಭಯೋತ್ಪಾದಕ ದಾಳಿ ನಡೆಸುವ ಪಾಕಿಸ್ತಾನ ವಿರುದ್ಧ ಕ್ರಿಕೆಟ್ ಸಹವಾಸವೇ ಬೇಡ ಎಂಬ ಅನೇಕರ ಪ್ರತಿರೋಧ ವ್ಯಕ್ತವಾಗಿದೆ. ಇತ್ತೀಚೆಗೆ ನಡೆದಿದ್ದ ವಿಶ್ವ ಲೆಜೆಂಡ್ಸ್ ಚಾಂಪಿಯನ್ಷಿಪ್ (ಡಬ್ಲ್ಯೂಸಿಎಲ್) ಟೂರ್ನಿಯಲ್ಲಿ ಭಾರತ ತಂಡ ಪಾಕ್ನೊಂದಿಗೆ ಪಂದ್ಯ ಆಡಲು ನಿರಾಕರಿಸಿತ್ತು. ಲೀಗ್ ಹಂತ ಮಾತ್ರವಲ್ಲದೆ ಸೆಮಿ ಪಂದ್ಯವನ್ನು ಕೂಡ ಭಾರತ ಆಡಿರಲಿಲ್ಲ. ಹೀಗಾಗಿ ಏಷ್ಯಾ ಕಪ್ನಲ್ಲಿ ಭಾರತ ತಂಡ ಪಾಕ್ ವಿರುದ್ಧ ಆಡಬಾರದು ಎಂಬುದು ಭಾರತೀಯ ಅಭಿಮಾನಿಗಳ ಒತ್ತಾಯವಾಗಿದೆ.
ಇನ್ನು ಕೆಲವರು ನಾವೇಕೆ ಪಾಕಿಸ್ತಾನಕ್ಕೆ ಪುಕ್ಕಟೆ ಎರಡಂಕ ಕೊಡಬೇಕು. ಅವರನ್ನು ಇನ್ನೊಮ್ಮೆ ಹೆಡೆಮುರಿ ಕಟ್ಟಿ ಸೋಲಿಸಬೇಕು ಎಂದಿದ್ದಾರೆ. ಎಮಿರೇಟ್ಸ್ ಕ್ರಿಕೆಟ್ ಮಂಡಳಿಯ ಮುಖ್ಯ ಕಾರ್ಯ ನಿರ್ವಹಣಾಧಿಕಾರಿಯಾಗಿರುವ ಸುಭಾನ್ ಅಹದ್ ಪ್ರಕಾರ, ಏಷ್ಯಾಕಪ್ನಲ್ಲಿ ಪಂದ್ಯ ರದ್ದಾಗುವ ಸಾಧ್ಯತೆ ಕಡಿಮೆ. ನಾವು ಯಾವುದೇ ಗ್ಯಾರಂಟಿ ನೀಡಲು ಸಾಧ್ಯವಿಲ್ಲ ಎಂದಿದ್ದಾರೆ.
ಏಷ್ಯಾ ಕಪ್ನಲ್ಲಿ ಆಡಲು ಸರ್ಕಾರದ ಅನುಮತಿಯನ್ನು ಮುಂಚಿತವಾಗಿ ತೆಗೆದುಕೊಳ್ಳಲಾಗುತ್ತದೆ. ವೇಳಾಪಟ್ಟಿಯನ್ನು ಘೋಷಿಸುವ ನಿರ್ಧಾರಕ್ಕೆ ಬರುವ ಮೊದಲೇ ಅದನ್ನು ಮಾಡಲಾಗಿದೆ. ಆದ್ದರಿಂದ ಡಬ್ಲ್ಯೂಸಿಐನಲ್ಲಿ ಇದ್ದಂತಹ ಪರಿಸ್ಥಿತಿ ನಮಗೆ ಬರದಿರಲು ಆಶಿಸುತ್ತೇವೆ ಎಂದು ಹೇಳಿದ್ದಾರೆ. ಆದರೆ ಬಿಸಿಸಿಐ ಯಾವ ನಿರ್ಧಾರ ತೆಗೆದುಕೊಳ್ಳುತ್ತದೆ ಎಂಬುದನ್ನು ಕಾದು ನೋಡಬೇಕಿದೆ.
ಮೈಸೂರು: ಮೈಸೂರು ನಗರದ ಜಿಲ್ಲಾಧಿಕಾರಿ ಕಚೇರಿ ಆವರಣದ ಬಳಿ ಮಾಜಿ ಸಿಎಂ ದೇವರಾಜ ಅರಸು ಅವರ ನೂತನ ಪ್ರತಿಮೆಯನ್ನು ಪ್ರತಿಷ್ಠಾಪಿಸಲಾಗಿದೆ.…
ವಿಜಯನಗರ: ತುಂಗಭದ್ರಾ ಜಲಾಶಯದಲ್ಲಿ ಅಳವಡಿಸಲಾಗಿರುವ ನೂತನ ಕ್ರೆಸ್ಟ್ ಗೇಟ್ಗಳನ್ನು ಮೂವರು ಮುಖ್ಯಮಂತ್ರಿಗಳು ಉದ್ಘಾಟಿಸಿದ ಅಪರೂಪದ ಸಮಾರಂಭಕ್ಕೆ ಸಾವಿರಾರು ಮಂದಿ ಸಾಕ್ಷಿಯಾದರು.…
ನವದೆಹಲಿ: ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ಕೇಂದ್ರದ ಕೃಷಿ ಮತ್ತು ರೈತ ಕಲ್ಯಾಣ ಖಾತೆ ಮಂತ್ರಿಗಳಾದ ಶಿವರಾಜ್ ಸಿಂಗ್…
ಬೆಂಗಳೂರು: ರಾಜ್ಯದಲ್ಲಿ ಪ್ರಕೃತಿ ವಿಕೋಪ ನಿರ್ವಹಣೆಯನ್ನು ಪರಿಣಾಮಕಾರಿಯಾಗಿ ನಡೆಸುವ ಉದ್ದೇಶದಿಂದ ಸಚಿವರಿಗೆ ವಿವಿಧ ಜಿಲ್ಲೆಗಳ ಮೇಲುಸ್ತುವಾರಿಯನ್ನು ಹಂಚಿಕೆ ಮಾಡಿ ಅಧಿಸೂಚನೆ…
ವೆನಿಜುವೆಲಾ: ವೆನಿಜುವೆಲಾ ದೇಶದ ಇತಿಹಾಸದಲ್ಲೇ ಕಂಡು ಕೇಳರಿಯದ ಭೀಕರ ಭೂಕಂಪ ಸಂಭವಿಸಿ ಸಾವಿರಾರು ಜನ ಸಾವನ್ನಪ್ಪಿದ್ದು, ಭಾರೀ ಪ್ರಮಾಣದ ಜನರು…
ಕ್ಯಾರಕಾಸ್ : ವೆನೆಜುವೆಲಾ ಕರಾವಳಿಯ ಸಮೀಪ ಬುಧವಾರ ಸಂಜೆ ಸಂಭವಿಸಿದ ಎರಡು ಪ್ರಬಲ ಭೂಕಂಪಗಳು ದೇಶವನ್ನು ಬೆಚ್ಚಿಬೀಳಿಸಿವೆ. ರಿಕ್ಟರ್ ಮಾಪಕದಲ್ಲಿ…