ಕ್ರೀಡೆ

ಏಪ್ಯಾ ಕಪ್‌ ಕ್ರಿಕೆಟ್‌ : ಭಾರತ-ಪಾಕ್‌ ಪಂದ್ಯ ರದ್ದು ಸಾಧ್ಯತೆ

ದುಬೈ : ಮುಂಬರುವ ಏಷ್ಯಾಕಪ್ ಕೂಟದಲ್ಲಿ ಭಾರತ ತಂಡ ಪಾಕಿಸ್ತಾನ ವಿರುದ್ಧ ಸೆಣಸಲಿದ್ದು, ಸೆ.14 ರಂದು ಪಂದ್ಯ ನಿಗದಿಯಾಗಿದೆ. ಆದರೆ ಪಂದ್ಯ ರದ್ದಾಗುವ ಸಾಧ್ಯತೆ ದಟ್ಟವಾಗಿದೆ.

ಪದೇ ಪದೇ ಕಾಲುಕೆರೆದು ಜಗಳಕ್ಕೆ ಬರುವ, ಸದಾ ಭಾರತದ ಮೇಲೆ ಭಯೋತ್ಪಾದಕ ದಾಳಿ ನಡೆಸುವ ಪಾಕಿಸ್ತಾನ ವಿರುದ್ಧ ಕ್ರಿಕೆಟ್ ಸಹವಾಸವೇ ಬೇಡ ಎಂಬ ಅನೇಕರ ಪ್ರತಿರೋಧ ವ್ಯಕ್ತವಾಗಿದೆ. ಇತ್ತೀಚೆಗೆ ನಡೆದಿದ್ದ ವಿಶ್ವ ಲೆಜೆಂಡ್ಸ್ ಚಾಂಪಿಯನ್‌ಷಿಪ್ (ಡಬ್ಲ್ಯೂಸಿಎಲ್) ಟೂರ್ನಿಯಲ್ಲಿ ಭಾರತ ತಂಡ ಪಾಕ್‌ನೊಂದಿಗೆ ಪಂದ್ಯ ಆಡಲು ನಿರಾಕರಿಸಿತ್ತು. ಲೀಗ್ ಹಂತ ಮಾತ್ರವಲ್ಲದೆ ಸೆಮಿ ಪಂದ್ಯವನ್ನು ಕೂಡ ಭಾರತ ಆಡಿರಲಿಲ್ಲ. ಹೀಗಾಗಿ ಏಷ್ಯಾ ಕಪ್‌ನಲ್ಲಿ ಭಾರತ ತಂಡ ಪಾಕ್ ವಿರುದ್ಧ ಆಡಬಾರದು ಎಂಬುದು ಭಾರತೀಯ ಅಭಿಮಾನಿಗಳ ಒತ್ತಾಯವಾಗಿದೆ.

ಇನ್ನು ಕೆಲವರು ನಾವೇಕೆ ಪಾಕಿಸ್ತಾನಕ್ಕೆ ಪುಕ್ಕಟೆ ಎರಡಂಕ ಕೊಡಬೇಕು. ಅವರನ್ನು ಇನ್ನೊಮ್ಮೆ ಹೆಡೆಮುರಿ ಕಟ್ಟಿ ಸೋಲಿಸಬೇಕು ಎಂದಿದ್ದಾರೆ. ಎಮಿರೇಟ್ಸ್ ಕ್ರಿಕೆಟ್ ಮಂಡಳಿಯ ಮುಖ್ಯ ಕಾರ್ಯ ನಿರ್ವಹಣಾಧಿಕಾರಿಯಾಗಿರುವ ಸುಭಾನ್ ಅಹದ್ ಪ್ರಕಾರ, ಏಷ್ಯಾಕಪ್‌ನಲ್ಲಿ ಪಂದ್ಯ ರದ್ದಾಗುವ ಸಾಧ್ಯತೆ ಕಡಿಮೆ. ನಾವು ಯಾವುದೇ ಗ್ಯಾರಂಟಿ ನೀಡಲು ಸಾಧ್ಯವಿಲ್ಲ ಎಂದಿದ್ದಾರೆ.

ಏಷ್ಯಾ ಕಪ್‌ನಲ್ಲಿ ಆಡಲು ಸರ್ಕಾರದ ಅನುಮತಿಯನ್ನು ಮುಂಚಿತವಾಗಿ ತೆಗೆದುಕೊಳ್ಳಲಾಗುತ್ತದೆ. ವೇಳಾಪಟ್ಟಿಯನ್ನು ಘೋಷಿಸುವ ನಿರ್ಧಾರಕ್ಕೆ ಬರುವ ಮೊದಲೇ ಅದನ್ನು ಮಾಡಲಾಗಿದೆ. ಆದ್ದರಿಂದ ಡಬ್ಲ್ಯೂಸಿಐನಲ್ಲಿ ಇದ್ದಂತಹ ಪರಿಸ್ಥಿತಿ ನಮಗೆ ಬರದಿರಲು ಆಶಿಸುತ್ತೇವೆ ಎಂದು ಹೇಳಿದ್ದಾರೆ. ಆದರೆ ಬಿಸಿಸಿಐ ಯಾವ ನಿರ್ಧಾರ ತೆಗೆದುಕೊಳ್ಳುತ್ತದೆ ಎಂಬುದನ್ನು ಕಾದು ನೋಡಬೇಕಿದೆ.

ಆಂದೋಲನ ಡೆಸ್ಕ್

Recent Posts

ಹಾರ್ಮುಜ್ ಮೇಲೆ ಅಮೆರಿಕ ಸಂಪೂರ್ಣ ಹಿಡಿತ ; ಟ್ರಂಪ್ ಹೇಳಿಕೆಯಿಂದ ವಾಸ್ತವ ಬದಲಾಗಲ್ಲ : ಇರಾನ್ ತಿರುಗೇಟು

ಷರತ್ತುಗಳ ಒಪ್ಪದ ಹೊರತು ಜಲಸಂಧಿ ತೆರೆಯಲ್ಲ; ಸ್ಪಷ್ಟನೆ ಟೆಹರಾನ್ : ಹಾರ್ಮುಜ್ ಜಲಸಂಧಿಯ ಮೇಲೆ ಅಮೆರಿಕ ಸಂಪೂರ್ಣ ನಿಯಂತ್ರಣ ಸಾಧಿಸಿದೆ…

4 hours ago

ಪ್ರಜ್ವಲ್ ರೇವಣ್ಣ ಬ್ಯಾರಕ್‌ನಲ್ಲಿ ಮೊಬೈಲ್ ಪತ್ತೆ ಪ್ರಕರಣ : ಡಿಐಜಿ ನೇತೃತ್ವದಲ್ಲಿ ತನಿಖೆ

ಎಲ್ಲ ಆಯಾಮಗಳಲ್ಲೂ ತನಿಖೆ ನಡೆಸಿ ವರದಿ ಸಲ್ಲಿಸಲು ಸೂಚನೆ ಬೆಂಗಳೂರು : ಇಲ್ಲಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದ ಮೇಲೆ…

6 hours ago

ಭಾಷಣ ಮಾಡಿದ ವೇದಿಕೆ ಸ್ಥಳದ ಶುದ್ಧೀಕರಣ : ಇದು ನನ್ನ ವಿರುದ್ಧ ತೋರಿದ ಅಸ್ಪೃಶ್ಯತೆ ; ಖರ್ಗೆ ಕಿಡಿ

ಹೊಸದಿಲ್ಲಿ: ಉತ್ತರಾಖಂಡದ ಹಲ್ದ್ವಾನಿಯಲ್ಲಿ ತಾವು ಭಾಷಣ ಮಾಡಿದ್ದ ರಾಮಲೀಲಾ ಮೈದಾನದ ವೇದಿಕೆಯಲ್ಲಿ ‘ಶ್ರೀರಾಮ ಸೇನಾ’ ಸಂಘಟನೆಯು ಶುದ್ಧೀಕರಣ (ಹವನ) ನಡೆಸಿದ್ದಕ್ಕೆ…

6 hours ago

ಪ್ರತಿಭಟನೆಗೆ ಸೀಮಿತವಾದ ಕರ್ನಾಟಕ ಬಂದ್ ; ಮೈಸೂರು, ಮಂಡ್ಯದಲ್ಲೂ ಹೋರಾಟಕ್ಕೆ ಸೀಮಿತ

ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ಹರಿಸಬೇಕು ಎಂಬ ನೀರು ನಿರ್ವಹಣಾ ಪ್ರಾಧಿಕಾರದ ಆದೇಶ ಖಂಡಿಸಿ ಹಾಗೂ…

8 hours ago

ಮೈಸೂರು: ಹೊಸ ಮಠದ ಚಿದಾನಂದ ಸ್ವಾಮೀಜಿ ಲಿಂಗೈಕ್ಯ

ಮೈಸೂರು: ಮೈಸೂರಿನ ಶಂಕರ ಮಠದ ರಸ್ತಯಲ್ಲಿರುವ ಹೊಸ ಮಠದ ಚಿದಾನಂದ ಸ್ವಾಮೀಜಿ ಅವರು ಇಂದು ಲಿಂಗೈಕ್ಯರಾಗಿದ್ದಾರೆ. ವಯೋಸಹಜ ಆರೋಗ್ಯ ಸಮಸ್ಯೆಗಳಿಂದ…

14 hours ago

ಓದುಗರ ಪತ್ರ: ಹೋಟೆಲ್‌ಗಳ ಆಹಾರ ಶುದ್ಧತೆ, ಪದಾರ್ಥಗಳ ತಪಾಸಣೆ ನಿಯಮಿತವಾಗಿ ನಡೆಯಲಿ

ಅಧಿಕಾರಿಗಳ ತಪಾಸಣೆ ವೇಳೆ ಬೆಂಗಳೂರಿನ ಕೆಲವು ಪಂಚತಾರಾ ಹೋಟೆಲ್‌ಗಳಲ್ಲಿ, ಕೊಳೆತ ಮಾಂಸ, ಹಳೆಯ ತರಕಾರಿಗಳು ಇರುವುದು ಪತ್ತೆಯಾಗಿರುವುದೇ ಎಲ್ಲೆಲ್ಲೂ ಚರ್ಚಿತ…

20 hours ago