ನವದೆಹಲಿ: ಅಖಿಲ ಭಾರತ ಫುಟ್ಬಾಲ್ ಒಕ್ಕೂಟದ (ಎಐಎಫ್ಎಫ್) ಕಾರ್ಯಕಾರಿ ಸಮಿತಿಯ ಚುನಾವಣೆಗಳನ್ನು ಮುಂದೂಡುವಂತೆ ಕೇಂದ್ರ ಸರ್ಕಾರವು ಮಾಡಿದ್ದ ಕೋರಿಕೆಗೆ ಸುಪ್ರೀಂ ಕೋರ್ಟ್ ಸೋಮವಾರ ಸಮ್ಮತಿಸಿದೆ.
ಇದಲ್ಲದೆ, ಎಐಎಫ್ಎಫ್ನ ದಿನಂಪ್ರತಿ ವ್ಯವಹಾರಗಳನ್ನು 36 ರಾಜ್ಯಗಳ ಒಕ್ಕೂಟಗಳು ಆಯ್ಕೆ ಮಾಡಿರುವ ಒಕ್ಕೂಟದ ಪ್ರಧಾನ ಕಾರ್ಯದರ್ಶಿಯವರೇ ಸದ್ಯದ ಮಟ್ಟಿಗೆ ನಿರ್ವಹಿಸುವಂತೆ ಕೂಡ ನ್ಯಾ. ಡಿ ವೈ ಚಂದ್ರಚೂಡ್ ಅವರ ನೇತೃತ್ವದ ಪೀಠ ಆದೇಶಿಸಿದೆ. ಒಮ್ಮೆ ಪ್ರಧಾನ ಕಾರ್ಯದರ್ಶಿಯವರು ಅಧಿಕಾರ ವಹಿಸಿಕೊಂಡ ನಂತರ ಪ್ರಸ್ತುತ ಒಕ್ಕೂಟದ ಕಾರ್ಯಭಾರ ನೋಡಿಕೊಳ್ಳುತ್ತಿರುವ ಆಡಳಿತಗಾರರ ಸಮಿತಿಯು (ಸಿಒಎ) ಅಂತ್ಯಗೊಳ್ಳಲಿದೆ ಎಂದು ನ್ಯಾಯಾಲಯ ಸ್ಪಷ್ಟಪಡಿಸಿತು. ಎಐಎಫ್ಎಫ್ಅನ್ನು ಅಮಾನತ್ತು ಮಾಡಿರುವ ಆದೇಶವನ್ನುಅಂತಾರಾಷ್ಟ್ರೀಯ ಫುಟ್ಬಾಲ್ ಸಂಸ್ಥಗಳ ಒಕ್ಕೂಟವು (ಫಿಫಾ) ಹಿಂಪಡೆಯುವ ಪ್ರಕ್ರಿಯೆಯನ್ನು ಸರಾಗವಾಗಿಸಲು, ಆ ಮೂಲಕ ಹದಿನೇಳು ವರ್ಷದ ಕೆಳಗಿನವರ ವಿಶ್ವಕಪ್ ಅನ್ನು ಭಾರತದಲ್ಲಿ ಆಯೋಜಿಸುವ ಪ್ರತಿಷ್ಠಿತ ಅವಕಾಶಕ್ಕೆ ಧಕ್ಕೆ ಒದಗದಂತೆ ತಡೆಯಲು ಈ ಆದೇಶವು ಅನುವು ಮಾಡಲಿದೆ.
ನ್ಯಾಯಾಲಯವು ತನ್ನ ಆದೇಶದಲ್ಲಿ ನೀಡಿರುವ ಪ್ರಮುಖ ನಿರ್ದೇಶನಗಳು ಹೀಗಿವೆ:
ಹಿನ್ನೆಲೆ :
ಎಐಎಫ್ಎಫ್ ಅಧ್ಯಕ್ಷರಾಗಿದ್ದ ರಾಜಕಾರಣಿ ಪ್ರಫುಲ್ ಪಟೇಲ್ ತಮ್ಮ ಅವಧಿಯ ನಂತರವೂ ಅಧ್ಯಕ್ಷ ಪಟ್ಟದಲ್ಲಿ ಮುಂದುವರೆದಿದ್ದರಿಂದ ಪ್ರಕರಣ ಸುಪ್ರೀಂ ಕೋರ್ಟ್ ಮೆಟ್ಟಿಲೇರಿತ್ತು. ಹೊಸದಾಗಿ ಚುನಾವಣೆ ನಡೆಸಲು ಮನವಿ ಸಲ್ಲಿಸಲಾಗಿತ್ತು. ಮೇ 18ರಂದು ಆದೇಶ ನೀಡಿದ್ದ ಸುಪ್ರೀಂ ಕೋರ್ಟ್ ಪ್ರಫುಲ್ ಪಟೇಲ್ ಸಹಿತ ಕಾರ್ಯಕಾರಿ ಸಮಿತಿಯನ್ನು ಕೆಳಗಿಳಿಯಲು ಸೂಚಿಸಿ, ಆ ಸ್ಥಾನಕ್ಕೆ ಆಡಳಿತಗಾರರ ಸಮಿತಿಯನ್ನು ನೇಮಿಸಿತ್ತು.
ಈ ಹಿನ್ನೆಲೆಯಲ್ಲಿ ಚುನಾಯಿತ ಮಂಡಳಿಯಲ್ಲದೆ ಬೇರೊಬ್ಬರು ಒಕ್ಕೂಟದ ಆಡಳಿತದಲ್ಲಿ ಹಸ್ತಕ್ಷೇಪ ನಡೆಸುವುದು ಫಿಫಾದ ನಿಯಮಗಳಿಗೆ ವಿರುದ್ಧವಾಗಿದ್ದು ಫಿಫಾ ಎಐಎಫ್ಎಫ್ಅನ್ನು ಅಮಾನತು ಮಾಡಬೇಕು ಎಂದು ಪಟೇಲ್ ಫಿಫಾ ಮೊರೆ ಹೋಗಿದ್ದರು. ಮತ್ತೊಂದೆಡೆ ಒಕ್ಕೂಟಕ್ಕೆ ನೂತನ ಸಂವಿಧಾನವನ್ನು ಬರೆಯುವ ಹೊಣೆ ಹೊತ್ತ ಆಡಳಿತಗಾರರ ಸಮಿತಿಯು ಹಿಂದಿನ ಒಕ್ಕೂಟದ ಅಧ್ಯಕ್ಷ ಪ್ರಫುಲ್ ಪಟೇಲ್ ಹಾಗೂ ಪದಾಧಿಕಾರಿಗಳ ವಿರುದ್ಧ ನ್ಯಾಯಾಂಗ ನಿಂದನೆ ಪ್ರಕ್ರಿಯೆಗೆ ಅನುಮತಿ ಕೋರಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿತು. ಈ ಎಲ್ಲ ಬೆಳವಣಿಗೆಗಳ ಹಿನ್ನೆಲೆಯಲ್ಲಿ ಇತ್ತೀಚೆಗೆ ಪತ್ರಿಕಾ ಪ್ರಕಟಣೆ ನೀಡಿದ್ದ ಫಿಫಾ ತನ್ನ ನಿಯಮಾವಳಿಗಳನ್ನು ಉಲ್ಲಂಘಿಸಿ ಮೂರನೆಯವರು ಎಐಎಫ್ಎಪ್ನಲ್ಲಿ ಪ್ರಭಾವ ಬೀರುತ್ತಿರುವ ಹಿನ್ನೆಲೆಯಲ್ಲಿ ಫಿಫಾ ಆಡಳಿತ ಮಂಡಳಿಯು ಎಐಎಫ್ಎಫ್ಅನ್ನು ಅಮಾನತ್ತುಗೊಳಿಸಿರುವುದಾಗಿ ತಿಳಿಸಿತ್ತು.
ಆಡಳಿಗಾರರ ಸಮಿತಿಯ ಜಾಗಕ್ಕೆ ಮತ್ತೆ ಎಐಎಫ್ಎಫ್ನ ಆಡಳಿತವು ಬಂದ ನಂತರ ಅಮಾನತು ರದ್ದುಗೊಳ್ಳಲಿದೆ ಎಂದು ಅದು ಹೇಳಿತ್ತು.
ಮಂಡ್ಯ : ಜಲ ಶಕ್ತಿ ಜನ ಭಾಗೀದಾರಿ, ಮಹಾತ್ಮ ಗಾಂಧಿ ನರೇಗಾ, ತೆರಿಗೆ ವಸೂಲಾತಿ ಸೇರಿದಂತೆ ಇತರೆ ಯೋಜನೆ ಮತ್ತು…
ಸೋಮವಾರಪೇಟೆ : ಮರದ ನಾಟಗಳನ್ನು ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ವಾಹನವನ್ನು ಅರಣ್ಯ ಇಲಾಖೆಯ ಅಧಿಕಾರಿಗಳು ಹೊಸಳ್ಳಿ ಗ್ರಾಮದಲ್ಲಿ ವಶಪಡಿಸಿಕೊಂಡಿದ್ದಾರೆ. ಹುದುಗೂರು…
ಬೆಂಗಳೂರು : ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಚಾಲೆಂಜಿಂಗ್ ಸ್ಟಾರ್ ದರ್ಶನ್ ಜೈಲಿನಲ್ಲಿ ಇದ್ರೂ ಗುರುವಾರ ಬಿಡುಗಡೆಯಾದ ಅವರ ಅಭಿನಯದ ಡೆವಿಲ್…
ಮಳವಳ್ಳಿ : ವಿದ್ಯುತ್ ಸ್ಪರ್ಶಿಸಿ ಕಾರ್ಮಿಕನೋರ್ವ ಸ್ಥಳದಲ್ಲೇ ಮೃತಪಟ್ಟಿರುವ ದುರ್ಘಟನೆ ತಾಲ್ಲೂಕಿನ ಕಲ್ಕುಣಿ ಗ್ರಾಮದ ಬಳಿ ನಡೆದಿದ್ದು, ಸೆಸ್ಕ್ ಅಧಿಕಾರಿಗಳ…
ಹೊಸದಿಲ್ಲಿ : ದೇಶದಾದ್ಯಂತ ನಡೆಸಲು ಉದ್ದೇಶಿಸಿರುವ ೨೦೨೭ರ ಜನಗಣತಿಗೆ ರೂ. ೧೧,೭೧೮ ಕೋಟಿ ಅನುದಾನ ನೀಡಲು ಕೇಂದ್ರ ಸಚಿವ ಸಂಪುಟವು…
ಮುಂಬೈ : ಇಂಡಿಗೊ ವಿಮಾನ ಕಾರ್ಯಾಚರಣೆ ವ್ಯತ್ಯಯ ಪ್ರಕರಣ ಸಂಬಂಧ ನಾಲ್ವರು ವಿಮಾನ ನಿರ್ವಹಣಾ ಇನ್ಸ್ಪೆಕ್ಟರ್ಗಳನ್ನು (ಎಫ್.ಒ.ಐ) ನಾಗರಿಕ ವಿಮಾನಯಾನ…