ಕ್ರೀಡೆ

ಇದೇ ಕಾರಣಕ್ಕೆ ಹಾರ್ದಿಕ್‌ ಬದಲು ಸೂರ್ಯ ಅವನ್ನು ಕ್ಯಾಪ್ಟನ್‌ ಮಾಡಿದ್ದು ಎಂದ ಅಗರ್ಕರ್‌!

ನವದೆಹಲಿ: ಅಮೇರಿಕಾ ಹಾಗೂ ವೆಸ್ಟ್‌ ಇಂಡೀಸ್‌ ಸಹಭಾಗಿತ್ವದಲ್ಲಿ ನಡೆದ ಟಿ20 ವಿಶ್ವಕಪ್‌ನ್ನು ರೋಹಿತ್‌ ನಾಯಕತ್ವದ ಟೀ ಇಂಡಿಯಾ ಜಯಿಸಿತು. ಇದಾದ ಬಳಿಕ ರೋಹಿತ್‌ ಟಿ20ಗೆ ವಿದಾಯ ಘೋಷಿಸಿದ್ದರು.

ಇನ್ನು ಈ ವಿಶ್ವಕಪ್‌ನಲ್ಲಿ ಉಪನಾಯಕರಾಗಿದ್ದ ಹಾರ್ದಿಕ್‌ ಪಾಂಡ್ಯ ಅವರೇ ಮುಂದಿನ ಟಿ20 ತಂಡದ ನಾಯಕ ಎಂದು ಎಲ್ಲರೂ ಅಂದುಕೊಂಡಿದ್ದರು. ಆದರೆ ಈ ಎಲ್ಲಾ ಲೆಕ್ಕಗಳನ್ನು ತಲೆ ಕೆಳಗಾಗಿ ಮಾಡಿದ ಬಿಸಿಸಿಐ ನೂತನ ಟಿ20 ನಾಯಕನಾಗಿ ಸೂರ್ಯಕುಮಾರ್‌ ಯಾದವ್‌ ಅವರನ್ನು ನೇಮಕ ಮಾಡುವ ಮೂಲಕ ಎಲ್ಲರಿಗೂ ಅಚ್ಚರಿ ಮೂಡಿಸಿದ್ದರು. ಇದರ ಜೊತೆಗೆ ಉಪ ನಾಯಕನಾಗಿ ಆದರೂ ಹಾರ್ದಿಕ್‌ ಅವರನ್ನು ನೇಮಕ ಮಾಡದೇ ಶುಬ್‌ಮನ್‌ ಗಿಲ್‌ಗೆ ಬಿಸಿಸಿಐ ಮಣೆ ಹಾಕಿತ್ತು.

ಇದು ಅಂತರಾಷ್ಟ್ರೀಯ ಮಟ್ಟದಲ್ಲಿ ದೊಡ್ಡ ಚರ್ಚೆಯನ್ನೇ ಹುಟ್ಟುಹಾಕಿತ್ತು. ಶ್ರೀಲಂಕಾ ಪ್ರವಾಸಕ್ಕೂ ಮುನ್ನವೇ ಟೀಂ ಇಂಡಿಯಾದಲ್ಲಿನ ಈ ಬದಲಾವಣೆ ಬಗ್ಗೆ ಎಲ್ಲರಲ್ಲಿಯೂ ಹಲವಾರು ಸಂದೇಹಗಳನ್ನು ಹುಟ್ಟುಕೊಂಡಿದ್ದು, ಈ ಎಲ್ಲದಕ್ಕೂ ಟೀಂ ಇಂಡಿಯಾ ಮುಖ್ಯ ಆಯ್ಕೆಗಾರ ಅಜಿತ್‌ ಅಗರ್ಕರ್‌ ಸ್ಪಷ್ಟನೆ ನೀಡಿದ್ದಾರೆ.

ಈ ಬಗ್ಗೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿರುವ ಅವರು, ಹಾರ್ದಿಕ್‌ಗೆ ಸಂಬಂಧಿಸಿದಂತೆ, ಅವರು ಇನ್ನೂ ನಮಗೆ ಅತ್ಯಂತ ಪ್ರಮುಖ ಆಟಗಾರರಾಗಿದ್ದಾರೆ. ಫಿಟ್‌ನೆಸ್ ಅವರಿಗೆ ನಿಸ್ಸಂಶಯವಾಗಿ ಸವಾಲಾಗಿದ್ದು, ಅದು ಮುಂದಿನ ದಿನಗಳಲ್ಲಿ ಕೋಚ್ ಅಥವಾ ಆಯ್ಕೆದಾರರಿಗೆ ಕಷ್ಟ ತಂದೊಡ್ಡುತ್ತವೆ. ಹಾಗಾಗಿ ತಂಡಕ್ಕೆ ಹಾಗೂ ನಮಗೆ ಹೆಚ್ಚಾಗಿ ಲಭ್ಯವಿರುವ ವ್ಯಕ್ತಿಯನ್ನು ಬಯಸುತ್ತೇವೆ. ಡ್ರೆಸ್ಸಿಂಗ್‌ ರೂಂ ಸೇರಿದಂತೆ ಸೂರ್ಯ ಯಾದವ್‌ ಅವರಿಗೆ ಕ್ಯಾಪ್ಟನ್ ಆಗಲು ಇರಬೇಕಾದ ಗುಣಗಳನ್ನು ಹೊಂದಿದ್ದಾರೆ ಅವರನ್ನು ಮುಂದಿನ ಟಿ20 ತಂಡದ ನಾಯಕನಾಗಿ ಆಯ್ಕೆ ಮಾಡಿದ್ದೇವೆ.

ನಾವು ಹಾರ್ದಿಕ್ ಅವರನ್ನು ಉತ್ತಮವಾಗಿ ನಿರ್ವಹಿಸಬಹುದು ಎಂದು ನಾವು ಭಾವಿಸುತ್ತೇವೆ, ವಿಶ್ವಕಪ್‌ನಲ್ಲಿ ಅವರು ಬ್ಯಾಟ್ ಮತ್ತು ಬಾಲ್‌ನಿಂದ ಏನು ಮಾಡಬಹುದು ಎಂಬುದನ್ನು ನಾವು ನೋಡಿದ್ದೇವೆ. ಆದರೆ ತಂಡಕ್ಕೆ ಡೀರ್ಘಾವಧಿಯ ನಾಯಕನ ಅವಶ್ಯಕತೆಯಿದ್ದು, ಹಾರ್ದಿಕ್‌ಗೆ ಬದಲಗಾಗಿ ಸೂರ್ಯಕುಮಾರ್‌ ಮೊರೆ ಹೋಗಿದ್ದೇವೆ ಎಂದು ಅಗರ್ಕರ್‌ ತಿಳಿಸಿದರು.

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ರೈತರ ಪ್ರತಿಭಟನೆಗೆ ಮಣಿದ ಜಿಲ್ಲಾಡಳಿತ: ಜೆಸಿಬಿ ಕಾರ್ಯ ಸ್ಥಗಿತ

ಮೈಸೂರು: ವರುಣ ಕ್ಷೇತ್ರದ ಕೃಷಿ ಭೂಮಿಯಲ್ಲಿ ನಿಮ್ಹಾನ್ಸ್‌ ನಿರ್ಮಾಣ ವಿಚಾರಕ್ಕೆ ಸಂಬಂಧಿಸಿದಂತೆ ರೈತರಿಂದ ಪ್ರತಿಭಟನೆ ಜೋರಾದ ಹಿನ್ನೆಲೆಯಲ್ಲಿ ಜಿಲ್ಲಾಡಳಿತವು ಗುಡುಮಾದನಹಳ್ಳಿಯಲ್ಲಿ…

13 mins ago

ಏಪ್ರಿಲ್‌ನಿಂದ ವೇತನ ಪರಿಷ್ಕರಣೆಗೆ ಒಪ್ಪಿದರೂ ತಿರಸ್ಕಾರ: ಮತ್ತೆ ಪ್ರತಿಭಟನೆಗೆ ಮುಂದಾದ ಸಾರಿಗೆ ನೌಕರರು

ಬೆಂಗಳೂರು: ರಾಜ್ಯ ಸಾರಿಗೆ ನೌಕರರು ಸರ್ಕಾರದ ವಿರುದ್ಧ ಸೆಡ್ಡು ಹೊಡೆದಿದ್ದು, ಮತ್ತೆ ಪ್ರತಿಭಟನೆ, ಹೋರಾಟಕ್ಕೆ ಮುಂದಾಗಿದ್ದಾರೆ. 38 ತಿಂಗಳ ವೇತನ…

25 mins ago

ಮೈಸೂರು: ಲೋಕೋಪಯೋಗಿ ಇಲಾಖೆ ಎಇಇ ರೇವನ್‌ ಕುಮಾರ್ ಮನೆ ಮೇಲೆ ಲೋಕಾಯುಕ್ತ ದಾಳಿ

ಮೈಸೂರು: ಪಿಡಬ್ಲ್ಯೂಡಿ ಅಧಿಕಾರಿ ಜಿ.ಕೆ.ರೇವನ್‌ ಕುಮಾರ್‌ ಮನೆ ಹಾಗೂ ಕಚೇರಿಗೆ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿದ್ದಾರೆ. ಬಂದರು ಮತ್ತು ಒಳನಾಡಿನ…

29 mins ago

ರಾಜ್ಯದಲ್ಲಿ ಇಂದು ಸಹ ಗುಡುಗು ಸಹಿತ ಧಾರಾಕಾರ ಮಳೆ: 3 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌

ಬೆಂಗಳೂರು: ಬೆಂಗಳೂರು ಸೇರಿದಂತೆ ರಾಜ್ಯದ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಮಳೆಯ ಅಬ್ಬರ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಸೂಚನೆ ನೀಡಿದೆ.…

59 mins ago

ನಾಪತ್ತೆಯಾಗಿದ್ದ ಪ್ರಥಮ ದರ್ಜೆ ಕಂಟ್ರಾಕ್ಟರ್‌ ಶವವಾಗಿ ಪತ್ತೆ

ಮಂಡ್ಯ: ಕಳೆದ ನಾಲ್ಕು ದಿನಗಳ ಹಿಂದೆ ಕಾಣೆಯಾಗಿದ್ದ ಪ್ರಥಮ ದರ್ಜೆ ಗುತ್ತಿಗೆದಾರ ಕಾವೇರಿ ನದಿಯಲ್ಲಿ ಶವವಾಗಿ ಪತ್ತೆಯಾಗಿರುವ ಘಟನೆ ಮಂಡ್ಯ…

1 hour ago

ಬಾಂಗ್ಲಾ ಮಾಜಿ ಸ್ಪೀಕರ್‌ ಶಿರಿನ್‌ ಶರ್ಮಿನ್‌ ಚೌಧರಿ ಬಂಧನ

ಢಾಕಾ: ಬಾಂಗ್ಲಾದೇಶದ ಮೊದಲ ಮಹಿಳಾ ಸ್ಫೀಕರ್‌ ಆಗಿದ್ದ ಶಿರಿನ್‌ ಶರ್ಮಿನ್‌ ಚೌಧರಿ ಅವರನ್ನು ಢಾಕಾ ಮೆಟ್ರೋಪಾಲಿಟನ್‌ ಪೊಲೀಸರ ಪತ್ತೇದಾರಿ ವಿಭಾಗವು…

2 hours ago