ನವದೆಹಲಿ: ಅಮೇರಿಕಾ ಹಾಗೂ ವೆಸ್ಟ್ ಇಂಡೀಸ್ ಸಹಭಾಗಿತ್ವದಲ್ಲಿ ನಡೆದ ಟಿ20 ವಿಶ್ವಕಪ್ನ್ನು ರೋಹಿತ್ ನಾಯಕತ್ವದ ಟೀ ಇಂಡಿಯಾ ಜಯಿಸಿತು. ಇದಾದ ಬಳಿಕ ರೋಹಿತ್ ಟಿ20ಗೆ ವಿದಾಯ ಘೋಷಿಸಿದ್ದರು.
ಇನ್ನು ಈ ವಿಶ್ವಕಪ್ನಲ್ಲಿ ಉಪನಾಯಕರಾಗಿದ್ದ ಹಾರ್ದಿಕ್ ಪಾಂಡ್ಯ ಅವರೇ ಮುಂದಿನ ಟಿ20 ತಂಡದ ನಾಯಕ ಎಂದು ಎಲ್ಲರೂ ಅಂದುಕೊಂಡಿದ್ದರು. ಆದರೆ ಈ ಎಲ್ಲಾ ಲೆಕ್ಕಗಳನ್ನು ತಲೆ ಕೆಳಗಾಗಿ ಮಾಡಿದ ಬಿಸಿಸಿಐ ನೂತನ ಟಿ20 ನಾಯಕನಾಗಿ ಸೂರ್ಯಕುಮಾರ್ ಯಾದವ್ ಅವರನ್ನು ನೇಮಕ ಮಾಡುವ ಮೂಲಕ ಎಲ್ಲರಿಗೂ ಅಚ್ಚರಿ ಮೂಡಿಸಿದ್ದರು. ಇದರ ಜೊತೆಗೆ ಉಪ ನಾಯಕನಾಗಿ ಆದರೂ ಹಾರ್ದಿಕ್ ಅವರನ್ನು ನೇಮಕ ಮಾಡದೇ ಶುಬ್ಮನ್ ಗಿಲ್ಗೆ ಬಿಸಿಸಿಐ ಮಣೆ ಹಾಕಿತ್ತು.
ಇದು ಅಂತರಾಷ್ಟ್ರೀಯ ಮಟ್ಟದಲ್ಲಿ ದೊಡ್ಡ ಚರ್ಚೆಯನ್ನೇ ಹುಟ್ಟುಹಾಕಿತ್ತು. ಶ್ರೀಲಂಕಾ ಪ್ರವಾಸಕ್ಕೂ ಮುನ್ನವೇ ಟೀಂ ಇಂಡಿಯಾದಲ್ಲಿನ ಈ ಬದಲಾವಣೆ ಬಗ್ಗೆ ಎಲ್ಲರಲ್ಲಿಯೂ ಹಲವಾರು ಸಂದೇಹಗಳನ್ನು ಹುಟ್ಟುಕೊಂಡಿದ್ದು, ಈ ಎಲ್ಲದಕ್ಕೂ ಟೀಂ ಇಂಡಿಯಾ ಮುಖ್ಯ ಆಯ್ಕೆಗಾರ ಅಜಿತ್ ಅಗರ್ಕರ್ ಸ್ಪಷ್ಟನೆ ನೀಡಿದ್ದಾರೆ.
ಈ ಬಗ್ಗೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿರುವ ಅವರು, ಹಾರ್ದಿಕ್ಗೆ ಸಂಬಂಧಿಸಿದಂತೆ, ಅವರು ಇನ್ನೂ ನಮಗೆ ಅತ್ಯಂತ ಪ್ರಮುಖ ಆಟಗಾರರಾಗಿದ್ದಾರೆ. ಫಿಟ್ನೆಸ್ ಅವರಿಗೆ ನಿಸ್ಸಂಶಯವಾಗಿ ಸವಾಲಾಗಿದ್ದು, ಅದು ಮುಂದಿನ ದಿನಗಳಲ್ಲಿ ಕೋಚ್ ಅಥವಾ ಆಯ್ಕೆದಾರರಿಗೆ ಕಷ್ಟ ತಂದೊಡ್ಡುತ್ತವೆ. ಹಾಗಾಗಿ ತಂಡಕ್ಕೆ ಹಾಗೂ ನಮಗೆ ಹೆಚ್ಚಾಗಿ ಲಭ್ಯವಿರುವ ವ್ಯಕ್ತಿಯನ್ನು ಬಯಸುತ್ತೇವೆ. ಡ್ರೆಸ್ಸಿಂಗ್ ರೂಂ ಸೇರಿದಂತೆ ಸೂರ್ಯ ಯಾದವ್ ಅವರಿಗೆ ಕ್ಯಾಪ್ಟನ್ ಆಗಲು ಇರಬೇಕಾದ ಗುಣಗಳನ್ನು ಹೊಂದಿದ್ದಾರೆ ಅವರನ್ನು ಮುಂದಿನ ಟಿ20 ತಂಡದ ನಾಯಕನಾಗಿ ಆಯ್ಕೆ ಮಾಡಿದ್ದೇವೆ.
ನಾವು ಹಾರ್ದಿಕ್ ಅವರನ್ನು ಉತ್ತಮವಾಗಿ ನಿರ್ವಹಿಸಬಹುದು ಎಂದು ನಾವು ಭಾವಿಸುತ್ತೇವೆ, ವಿಶ್ವಕಪ್ನಲ್ಲಿ ಅವರು ಬ್ಯಾಟ್ ಮತ್ತು ಬಾಲ್ನಿಂದ ಏನು ಮಾಡಬಹುದು ಎಂಬುದನ್ನು ನಾವು ನೋಡಿದ್ದೇವೆ. ಆದರೆ ತಂಡಕ್ಕೆ ಡೀರ್ಘಾವಧಿಯ ನಾಯಕನ ಅವಶ್ಯಕತೆಯಿದ್ದು, ಹಾರ್ದಿಕ್ಗೆ ಬದಲಗಾಗಿ ಸೂರ್ಯಕುಮಾರ್ ಮೊರೆ ಹೋಗಿದ್ದೇವೆ ಎಂದು ಅಗರ್ಕರ್ ತಿಳಿಸಿದರು.
ಅಮರಾವತಿ: ಆಂಧ್ರಪ್ರದೇಶದಲ್ಲಿ ಮತ್ತೆ ಕೋವಿಡ್ ಸೋಂಕಿನ ಪ್ರಕರಣಗಳು ಕಾಣಿಸಿಕೊಳ್ಳುತ್ತಿದ್ದು, ವೈಎಸ್ಆರ್ ಕಡಪ ಜಿಲ್ಲೆಯಲ್ಲಿ ಇತ್ತೀಚಿನ ವಾರಗಳಲ್ಲಿ 8 ಸಕ್ರಿಯ ಕೋವಿಡ್…
ಮೈಸೂರು: ಖ್ಯಾತ ಹಿನ್ನೆಲೆ ಗಾಯಕಿ ಎಸ್.ಜಾನಕಿ ಅವರ ಅಂತ್ಯಕ್ರಿಯೆಯು ತೆಲುಗು ಬ್ರಾಹ್ಮಣ ಕುಟುಂಬದ ಸಂಪ್ರದಾಯದಂತೆ ನೆರವೇರಿತು. ಜಾನಕಿ ಅವರ ಪುತ್ರ…
ಶನಿವಾರಸಂತೆ: ಸಮೀಪದ ಕೊಡ್ಲಿಪೇಟೆ ಹೋಬಳಿ ವ್ಯಾಪ್ತಿಯ ನೀರುಗುಂದ ಗ್ರಾಮದ ಹೇಮಾವತಿ ನದಿ ಹಿನ್ನೀರಿನಲ್ಲಿ ಮೀನು ಹಿಡಿಯಲು ತೆರಳಿ ಕಣ್ಮರೆಯಾಗಿದ್ದ ಸ್ಥಳೀಯ…
ಟೆಹರಾನ್: ಹಾರ್ಮುಜ್ ಜಲಸಂಧಿಯನ್ನು ಮುಚ್ಚುವುದಾಗಿ ಐಆರ್ಜಿಸಿ ಘೋಷಣೆ ಮಾಡಿದೆ. ಪಶ್ಚಿಮ ಏಷ್ಯಾ ಪ್ರದೇಶದಲ್ಲಿ ಅಮೇರಿಕಾ ತನ್ನ ಹಸ್ತಕ್ಷೇಪವನ್ನು ಕೊನೆಗೊಳಿಸುವವರೆಗೆ ಜಲಮಾರ್ಗವನ್ನು…
ಬೆಂಗಳೂರು: ನೈಋತ್ಯ ಮುಂಗಾರು ಮತ್ತೆ ರಾಜ್ಯದಲ್ಲಿ ದುರ್ಬಲಗೊಂಡಿದ್ದು, ಮಳೆ ಕೊರತೆಯಿಂದಾಗಿ ಬರದ ಛಾಯೆ ತೀವ್ರವಾಗತೊಡಗಿದೆ. ಜುಲೈ ತಿಂಗಳ ಮೊದಲ ವಾರದಲ್ಲಿ…
ಮೈಸೂರು: ಹಿರಿಯ ಗಾಯಕಿ ಎಸ್. ಜಾನಕಿ ಅವರ ಅಂತ್ಯಕ್ರಿಯೆ ಇಂದು ಮೈಸೂರಿನ ಬೋಗಾದಿ ಬಳಿಯ ಕಣಿಯನಹುಂಡಿ ತೋಟದ ಮನೆಯಲ್ಲಿ ಸಕಲ…