ಕ್ರೀಡೆ

ಇದೇ ಕಾರಣಕ್ಕೆ ಹಾರ್ದಿಕ್‌ ಬದಲು ಸೂರ್ಯ ಅವನ್ನು ಕ್ಯಾಪ್ಟನ್‌ ಮಾಡಿದ್ದು ಎಂದ ಅಗರ್ಕರ್‌!

ನವದೆಹಲಿ: ಅಮೇರಿಕಾ ಹಾಗೂ ವೆಸ್ಟ್‌ ಇಂಡೀಸ್‌ ಸಹಭಾಗಿತ್ವದಲ್ಲಿ ನಡೆದ ಟಿ20 ವಿಶ್ವಕಪ್‌ನ್ನು ರೋಹಿತ್‌ ನಾಯಕತ್ವದ ಟೀ ಇಂಡಿಯಾ ಜಯಿಸಿತು. ಇದಾದ ಬಳಿಕ ರೋಹಿತ್‌ ಟಿ20ಗೆ ವಿದಾಯ ಘೋಷಿಸಿದ್ದರು.

ಇನ್ನು ಈ ವಿಶ್ವಕಪ್‌ನಲ್ಲಿ ಉಪನಾಯಕರಾಗಿದ್ದ ಹಾರ್ದಿಕ್‌ ಪಾಂಡ್ಯ ಅವರೇ ಮುಂದಿನ ಟಿ20 ತಂಡದ ನಾಯಕ ಎಂದು ಎಲ್ಲರೂ ಅಂದುಕೊಂಡಿದ್ದರು. ಆದರೆ ಈ ಎಲ್ಲಾ ಲೆಕ್ಕಗಳನ್ನು ತಲೆ ಕೆಳಗಾಗಿ ಮಾಡಿದ ಬಿಸಿಸಿಐ ನೂತನ ಟಿ20 ನಾಯಕನಾಗಿ ಸೂರ್ಯಕುಮಾರ್‌ ಯಾದವ್‌ ಅವರನ್ನು ನೇಮಕ ಮಾಡುವ ಮೂಲಕ ಎಲ್ಲರಿಗೂ ಅಚ್ಚರಿ ಮೂಡಿಸಿದ್ದರು. ಇದರ ಜೊತೆಗೆ ಉಪ ನಾಯಕನಾಗಿ ಆದರೂ ಹಾರ್ದಿಕ್‌ ಅವರನ್ನು ನೇಮಕ ಮಾಡದೇ ಶುಬ್‌ಮನ್‌ ಗಿಲ್‌ಗೆ ಬಿಸಿಸಿಐ ಮಣೆ ಹಾಕಿತ್ತು.

ಇದು ಅಂತರಾಷ್ಟ್ರೀಯ ಮಟ್ಟದಲ್ಲಿ ದೊಡ್ಡ ಚರ್ಚೆಯನ್ನೇ ಹುಟ್ಟುಹಾಕಿತ್ತು. ಶ್ರೀಲಂಕಾ ಪ್ರವಾಸಕ್ಕೂ ಮುನ್ನವೇ ಟೀಂ ಇಂಡಿಯಾದಲ್ಲಿನ ಈ ಬದಲಾವಣೆ ಬಗ್ಗೆ ಎಲ್ಲರಲ್ಲಿಯೂ ಹಲವಾರು ಸಂದೇಹಗಳನ್ನು ಹುಟ್ಟುಕೊಂಡಿದ್ದು, ಈ ಎಲ್ಲದಕ್ಕೂ ಟೀಂ ಇಂಡಿಯಾ ಮುಖ್ಯ ಆಯ್ಕೆಗಾರ ಅಜಿತ್‌ ಅಗರ್ಕರ್‌ ಸ್ಪಷ್ಟನೆ ನೀಡಿದ್ದಾರೆ.

ಈ ಬಗ್ಗೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿರುವ ಅವರು, ಹಾರ್ದಿಕ್‌ಗೆ ಸಂಬಂಧಿಸಿದಂತೆ, ಅವರು ಇನ್ನೂ ನಮಗೆ ಅತ್ಯಂತ ಪ್ರಮುಖ ಆಟಗಾರರಾಗಿದ್ದಾರೆ. ಫಿಟ್‌ನೆಸ್ ಅವರಿಗೆ ನಿಸ್ಸಂಶಯವಾಗಿ ಸವಾಲಾಗಿದ್ದು, ಅದು ಮುಂದಿನ ದಿನಗಳಲ್ಲಿ ಕೋಚ್ ಅಥವಾ ಆಯ್ಕೆದಾರರಿಗೆ ಕಷ್ಟ ತಂದೊಡ್ಡುತ್ತವೆ. ಹಾಗಾಗಿ ತಂಡಕ್ಕೆ ಹಾಗೂ ನಮಗೆ ಹೆಚ್ಚಾಗಿ ಲಭ್ಯವಿರುವ ವ್ಯಕ್ತಿಯನ್ನು ಬಯಸುತ್ತೇವೆ. ಡ್ರೆಸ್ಸಿಂಗ್‌ ರೂಂ ಸೇರಿದಂತೆ ಸೂರ್ಯ ಯಾದವ್‌ ಅವರಿಗೆ ಕ್ಯಾಪ್ಟನ್ ಆಗಲು ಇರಬೇಕಾದ ಗುಣಗಳನ್ನು ಹೊಂದಿದ್ದಾರೆ ಅವರನ್ನು ಮುಂದಿನ ಟಿ20 ತಂಡದ ನಾಯಕನಾಗಿ ಆಯ್ಕೆ ಮಾಡಿದ್ದೇವೆ.

ನಾವು ಹಾರ್ದಿಕ್ ಅವರನ್ನು ಉತ್ತಮವಾಗಿ ನಿರ್ವಹಿಸಬಹುದು ಎಂದು ನಾವು ಭಾವಿಸುತ್ತೇವೆ, ವಿಶ್ವಕಪ್‌ನಲ್ಲಿ ಅವರು ಬ್ಯಾಟ್ ಮತ್ತು ಬಾಲ್‌ನಿಂದ ಏನು ಮಾಡಬಹುದು ಎಂಬುದನ್ನು ನಾವು ನೋಡಿದ್ದೇವೆ. ಆದರೆ ತಂಡಕ್ಕೆ ಡೀರ್ಘಾವಧಿಯ ನಾಯಕನ ಅವಶ್ಯಕತೆಯಿದ್ದು, ಹಾರ್ದಿಕ್‌ಗೆ ಬದಲಗಾಗಿ ಸೂರ್ಯಕುಮಾರ್‌ ಮೊರೆ ಹೋಗಿದ್ದೇವೆ ಎಂದು ಅಗರ್ಕರ್‌ ತಿಳಿಸಿದರು.

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ನೇಪಾಳದಲ್ಲಿ ಭೀಕರ ಪ್ರವಾಹ ; ಭಾರತೀಯರ ನೆರವಿಗೆ ಸಹಾಯವಾಣಿ ಆರಂಭ

ಕಠ್ಮಂಡು : ನೇಪಾಳದ ರಸುವಾ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಪ್ರವಾಹದಿಂದ ಸಂತ್ರಸ್ತರಾಗಿರುವ ಭಾರತೀಯ ಪ್ರಜೆಗಳ ನೆರವಿಗಾಗಿ ಭಾರತವು ಸಹಾಯವಾಣಿ ಆರಂಭಿಸಿದೆ.…

4 hours ago

ಸಂಪುಟದಲ್ಲಿ ಚರ್ಚಿಸಿ ಬರ ಘೋಷಣೆ ; ಡಿಸಿಎಂ ಪರಮೇಶ್ವರ್‌

ಬೆಂಗಳೂರು : ರಾಜ್ಯದ ಬರ ಪರಿಸ್ಥಿತಿಯ ಸಮಗ್ರ ಅವಲೋಕನ ನಡೆಯುತ್ತಿದೆ. 102 ತಾಲ್ಲೂಕುಗಳ ಗ್ರೌಂಡ್ ಟ್ರೂಥಿಂಗ್ ವರದಿ ಬಂದಿದ್ದು, ಮುಂದಿನ…

5 hours ago

ಸ್ವಚ್ಛತಾ ಅಭಿಯಾನ | ವಿವಿಧೆಡೆ 15 ಟನ್‌ ತ್ಯಾಜ್ಯ ವಿಲೇವಾರಿ

ಮೈಸೂರು : 80ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ಮಹಾನಗರ ಪಾಲಿಕೆಯ ವತಿಯಿಂದ 80 ಜಿವಿಪಿ ನಿರ್ಮೂಲನೆ ಅಭಿಯಾನದಲ್ಲಿ ಮಂಗಳವಾರ ವಲಯ-3ರ ವ್ಯಾಪ್ತಿಗೆ…

5 hours ago

ನೇಪಾಳ ಪ್ರವಾಹ | 105 ಭಾರತೀಯರು ಸೇರಿ 400 ಮಂದಿ ನಾಪತ್ತೆ

ಕಠ್ಮಂಡು : ಟಿಬೆಟ್ ಗಡಿಗೆ ಹೊಂದಿಕೊಂಡಿರುವ ನೇಪಾಳದ ಉತ್ತರದ ರಸುವಾ ಜಿಲ್ಲೆಯಲ್ಲಿ ಬುಧವಾರ ಸಂಭವಿಸಿದ ಭೀಕರ ಹಠಾತ್ ಪ್ರವಾಹಕ್ಕೆ ಕನಿಷ್ಠ…

6 hours ago

ನೇಪಾಳದಲ್ಲಿ ಭೀಕರ ಪ್ರವಾಹ | ಹತ್ತಾರು ಹಳ್ಳಿಗಳು ಜಲಾವೃತ ; ನಾಪತ್ತೆಯಾದ ಪ್ರವಾಸಿಗರು

ಕಠ್ಮಂಡು : ನೆರೆಯ ರಾಷ್ಟ್ರ ನೇಪಾಳದಲ್ಲಿ ಹಿಮಕುಸಿತದ ಪರಿಣಾಮ ಉಂಟಾದ ಭೀಕರ ಆಕಸ್ಮಿಕ ಪ್ರವಾಹ ಜಲಪ್ರಳಯವನ್ನೇ ಸೃಷ್ಟಿಸಿದೆ. ಕೋಶಿ ನದಿಯ…

7 hours ago

ರಾಜೀನಾಮೆ ಸಂಬಂಧ ಯಾವುದೇ ಚರ್ಚೆ ನಡೆದಿಲ್ಲ: ಸಚಿವ ನಾಗೇಂದ್ರ

ಬೆಂಗಳೂರು: ರಾಜೀನಾಮೆಗೆ ಸಂಬಂಧಿಸಿದ ಯಾವುದೇ ಚರ್ಚೆ ನಡೆದಿಲ್ಲ. ನನ್ನ ರಾಜೀನಾಮೆ ಬಗ್ಗೆ ಕೇಳಿಬರುತ್ತಿರುವ ವರದಿಗಳು ಸಂಪೂರ್ಣವಾಗಿ ಸತ್ಯಕ್ಕೆ ದೂರವಾಗಿವೆ ಎಂದು ಸಚಿವ…

11 hours ago