ಕ್ರೀಡೆ

French Open 2024: ಚೊಚ್ಚಲ ಪ್ರಶಸ್ತಿಗೆ ಮುತ್ತಿಕ್ಕಿದ ಸ್ಪೇನ್‌ ತಾರೆ ಅಲ್ಕರಾಜ್‌

ರೋಲ್ಯಾಂಡ್‌: ಇಲ್ಲಿನ ಗ್ಯಾರಸ್‌ನ ಕ್ಲೇಕೋರ್ಟ್‌ನಲ್ಲಿ ನಡೆದ ಫ್ರೆಂಚ್‌ ಓಪನ್‌ 2024ರ ಪುರುಷರ ಸಿಂಗಲ್ಸ್‌ನಲ್ಲಿ ಜರ್ಮನಿಯ ಅಲೆಕ್ಜಾಂಡರ್‌ ಜ್ವೆರೆವ್‌ ವಿರುದ್ಧ ಸ್ಪೇನ್‌ನ ಕಾರ್ಲೋಸ್‌ ಅಲ್ಕರಾಜ್‌ ನೇರ ಸೆಟ್‌ಗಳ ಮೂಲಕ ಗೆಲುವು ದಾಖಲಿಸಿ ಫ್ರೆಂಚ್‌ ಓಪನ್‌ ಚಾಂಪಿಯನ್‌ ಆಗಿ ಹೊರಹೊಮ್ಮಿದ್ದಾರೆ.

ಇದು ಅಲ್ಕರಾಜ್‌ ಅವರ ವೃತ್ತಿ ಜೀವನದ ಮೊದಲ ಫ್ರೆಂಚ್‌ ಓಪನ್‌ ಹಾಗೂ ವೈಯಕ್ತಿಕ ಮೂರನೇ ಗ್ರ್ಯಾಂಡ್‌ ಸ್ಲಾಮ್‌ ಪ್ರಶಸ್ತಿಯಾಗಿದೆ.

ಪ್ರಶಸ್ತಿ ಸುತ್ತಿನಲ್ಲಿ ಅಲ್ಕರಾಜ್‌ ಜರ್ಮನಿಯ ಜ್ವೆರೆವ್‌ ವಿರುದ್ಧ ನಿರ್ಣಾಯಕ ಸೆಟ್‌ಗಳಿಂದ ಗೆದ್ದು ಬೀಗಿದರು. ಒಟ್ಟು 4 ಗಂಟೆ 19 ನಿಮಿಷಗಳ ಕಾದಾಟದಲ್ಲಿ ಅಲ್ಕರಾಜ್‌ 6-3, 2-6, 5-7, 6-1, 6-2 ಸೆಟ್‌ಗಳಿಂದ ಜಯ ದಾಖಲಿಸಿದರು. ಆ ಮೂಲಕ ಮೊದಲ ಫ್ರೆಂಚ್‌ ಓಪನ್‌ ಟ್ರೋಫಿಗೆ ಮತ್ತಿಕ್ಕಿದರು. ಮತ್ತು ಫ್ರೆಂಚ್‌ ಓಪನ್‌ ಗೆದ್ದ ಏಳನೇ ಸ್ಪೇನ್‌ ಆಟಗಾರ ಎಂಬ ಹೆಗ್ಗಳಿಕೆಗೂ ಇವರು ಭಾಜನರಾಗಿದ್ದಾರೆ.

ಅಲ್ಕರಾಜ್‌ಗೆ ಸಿಕ್ಕ ಮೊತ್ತವೆಷ್ಟು ಗೊತ್ತಾ?: ಫ್ರೆಂಚ್‌ ಓಪನ್‌ ಪ್ರಶಸ್ತಿ ಬಾಚಿಕೊಂಡ ಕಾರ್ಲೋಸ್‌ ಅಲ್ಕರಾಜ್‌ ಅವರಿಗೆ 21.62 ಕೋಟಿ ಬಹುಮಾನ ಸಿಕ್ಕರೇ, ರನ್ನರ್‌ಅಪ್‌ ಆದ ಜ್ವೆರೆವ್‌ಗೆ 10.81 ಕೋಟಿ ರೂ ಬಹುಮಾನ ಸಿಕ್ಕಿದೆ. ಇನ್ನು ಸೆಮಿಸ್‌ನಲ್ಲಿ ನಿರ್ಗಮಿಸಿದ ಜಾನಿಕ್‌ ಸಿನ್ನರ್‌ ಹಾಗೂ ಕ್ಯಾಸ್ಪರ್‌ ರೂಡ್‌ ಅವರಿಗೆ 650,000 ಡಾಲರ್‌ ಮೊತ್ತ ನಗದು ನೀಡಲಾಗಿದೆ.

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ಏತ ನೀರಾವರಿ ಪುನಶ್ಚೇತನ ಕಾಮಗಾರಿಗೆ ಪರೀಕ್ಷಾರ್ಥ ಚಾಲನೆ ನೀಡಿದ ಡಿ.ಕೆ.ಶಿವಕುಮಾರ್‌

ರಾಮನಗರ: ಕನಕಪುರ ತಾಲ್ಲೂಕಿನ ಮೂಲೆಗುಂದಿ ಗ್ರಾಮದಲ್ಲಿ ಅರ್ಕಾವತಿ ಬಲದಂಡೆಯ ಏತ ನೀರಾವರಿ ಯೋಜನೆಗೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಅವರು ಪರೀಕ್ಷಾರ್ಥ ಚಾಲನೆ…

10 mins ago

ಮುಡಾ ಡೈವರ್ಟ್‌ ಮಾಡಲು ದರ್ಶನ್‌ ಪೋಟೋ ವೈರಲ್: ಜೋಶಿ ಆರೋಪಕ್ಕೆ ಡಿ.ಕೆ ಶಿವಕುಮಾರ್ ಕೌಂಟರ್‌ ತಿರುಗೇಟು

ಬೆಂಗಳೂರು: ಮುಡಾ ಹಾಗೂ ವಾಲ್ಮೀಕಿ ಹಗರಣವನ್ನು ಮುಚ್ಚುಹಾಕೋಕೆ ಕಾಂಗ್ರೆಸ್‌ ಸರ್ಕಾರ ಜೈಲಿನಲ್ಲಿ ದರ್ಶನ್‌ಗೆ ರಾಜಾತಿಥ್ಯದ ಫೋಟೋ ಹರಬಿಟ್ಟಿದ್ದೆ ಎಂಬ ಕೇಂದ್ರ…

8 hours ago

ಐಎಎಸ್‌ ಸೇವೆಯಿಂದಲೇ ಪೂಜಾ ಖೇಡ್ಕರ್‌ ವಜಾ: ಕೇಂದ್ರ ಸರ್ಕಾರ ಆದೇಶ

ನವದೆಹಲಿ: ಅಧಿಕಾರ ದುರ್ಬಳಕೆ ಸೇರಿ ಹಲವು ವಿವಾದಗಳ ಆರೋಪ ಹೊತ್ತಿದ್ದ ಮಾಜಿ ಐಎಎಸ್‌ ಅಧಿಕಾರಿ ಪೂಜಾ ಖೇಡ್ಕರ್‌ ಅವರನ್ನು ತಕ್ಷಣದಿಂದಲೇ…

9 hours ago

‘ಕೋಣ’ದ ಕಥೆಯೊಂದಿಗೆ ಬಂದ ಕೋಮಲ್

ಕೋಮಲ್‍ ಈಗಾಗಲೇ ‘ಕಾಲಾಯ ನಮಃ’, ‘ರೋಲೆಕ್ಸ್’, ‘ಎಲಾ ಕುನ್ನಿ’ ಮುಂತಾದ ಚಿತ್ರಗಳಲ್ಲಿ ನಟಿಸುತ್ತಿದ್ದು, ಆ ಚಿತ್ರಗಳು ಇನ್ನಷ್ಟೇ ಬಿಡುಗಡೆ ಆಗಬೇಕಿದೆ.…

9 hours ago

ಮೈಸೂರು: ಬೆಳವಾಡಿ ರಾಯಲ್‌ ಬ್ರದರ್ಸ್‌ ವತಿಯಿಂದ 13ಅಡಿ ಗಣಪ ಪ್ರತಿಷ್ಠಾಪನೆ

ಮೈಸೂರು: ನಗರದಲ್ಲಿ ವಿನಾಯಕ ಚೌತಿ ಹಬ್ಬದ ಆಚರಣೆ ಚೋರಾಗಿಯೇ ನಡೆಯುತ್ತಿದೆ. ನಗರದ ಬೆಳವಾಡಿಯ ರಾಯಲ್‌ ಬ್ರದರ್ಸ್‌ ವತಿಯಿಂದ ಸತತ ಎಂಟು…

15 hours ago

ಸೆಟ್ಟೇರಿತು ರಮೇಶ್ ಅರವಿಂದ್, ಗಣೇಶ್ ಹೊಸ ಸಿನಿಮಾ …

ರಮೇಶ್‍ ಅರವಿಂದ್ ಮತ್ತು ಗಣೇಶ್‍ ಒಟ್ಟಿಗೆ ನಟಿಸುತ್ತಾರೆ ಎಂಬುದು ಕಳೆದ ವರ್ಷದ ಸುದ್ದಿ. ‘ಇನ್‍ಸ್ಪೆಕ್ಟರ್‍ ವಿಕ್ರಂ’, ‘ಮಾನ್ಸೂನ್‍ ರಾಗ’, ‘ರಂಗನಾಯಕ’…

15 hours ago