ಕ್ರೀಡೆ

French Open 2024: ಚೊಚ್ಚಲ ಪ್ರಶಸ್ತಿಗೆ ಮುತ್ತಿಕ್ಕಿದ ಸ್ಪೇನ್‌ ತಾರೆ ಅಲ್ಕರಾಜ್‌

ರೋಲ್ಯಾಂಡ್‌: ಇಲ್ಲಿನ ಗ್ಯಾರಸ್‌ನ ಕ್ಲೇಕೋರ್ಟ್‌ನಲ್ಲಿ ನಡೆದ ಫ್ರೆಂಚ್‌ ಓಪನ್‌ 2024ರ ಪುರುಷರ ಸಿಂಗಲ್ಸ್‌ನಲ್ಲಿ ಜರ್ಮನಿಯ ಅಲೆಕ್ಜಾಂಡರ್‌ ಜ್ವೆರೆವ್‌ ವಿರುದ್ಧ ಸ್ಪೇನ್‌ನ ಕಾರ್ಲೋಸ್‌ ಅಲ್ಕರಾಜ್‌ ನೇರ ಸೆಟ್‌ಗಳ ಮೂಲಕ ಗೆಲುವು ದಾಖಲಿಸಿ ಫ್ರೆಂಚ್‌ ಓಪನ್‌ ಚಾಂಪಿಯನ್‌ ಆಗಿ ಹೊರಹೊಮ್ಮಿದ್ದಾರೆ.

ಇದು ಅಲ್ಕರಾಜ್‌ ಅವರ ವೃತ್ತಿ ಜೀವನದ ಮೊದಲ ಫ್ರೆಂಚ್‌ ಓಪನ್‌ ಹಾಗೂ ವೈಯಕ್ತಿಕ ಮೂರನೇ ಗ್ರ್ಯಾಂಡ್‌ ಸ್ಲಾಮ್‌ ಪ್ರಶಸ್ತಿಯಾಗಿದೆ.

ಪ್ರಶಸ್ತಿ ಸುತ್ತಿನಲ್ಲಿ ಅಲ್ಕರಾಜ್‌ ಜರ್ಮನಿಯ ಜ್ವೆರೆವ್‌ ವಿರುದ್ಧ ನಿರ್ಣಾಯಕ ಸೆಟ್‌ಗಳಿಂದ ಗೆದ್ದು ಬೀಗಿದರು. ಒಟ್ಟು 4 ಗಂಟೆ 19 ನಿಮಿಷಗಳ ಕಾದಾಟದಲ್ಲಿ ಅಲ್ಕರಾಜ್‌ 6-3, 2-6, 5-7, 6-1, 6-2 ಸೆಟ್‌ಗಳಿಂದ ಜಯ ದಾಖಲಿಸಿದರು. ಆ ಮೂಲಕ ಮೊದಲ ಫ್ರೆಂಚ್‌ ಓಪನ್‌ ಟ್ರೋಫಿಗೆ ಮತ್ತಿಕ್ಕಿದರು. ಮತ್ತು ಫ್ರೆಂಚ್‌ ಓಪನ್‌ ಗೆದ್ದ ಏಳನೇ ಸ್ಪೇನ್‌ ಆಟಗಾರ ಎಂಬ ಹೆಗ್ಗಳಿಕೆಗೂ ಇವರು ಭಾಜನರಾಗಿದ್ದಾರೆ.

ಅಲ್ಕರಾಜ್‌ಗೆ ಸಿಕ್ಕ ಮೊತ್ತವೆಷ್ಟು ಗೊತ್ತಾ?: ಫ್ರೆಂಚ್‌ ಓಪನ್‌ ಪ್ರಶಸ್ತಿ ಬಾಚಿಕೊಂಡ ಕಾರ್ಲೋಸ್‌ ಅಲ್ಕರಾಜ್‌ ಅವರಿಗೆ 21.62 ಕೋಟಿ ಬಹುಮಾನ ಸಿಕ್ಕರೇ, ರನ್ನರ್‌ಅಪ್‌ ಆದ ಜ್ವೆರೆವ್‌ಗೆ 10.81 ಕೋಟಿ ರೂ ಬಹುಮಾನ ಸಿಕ್ಕಿದೆ. ಇನ್ನು ಸೆಮಿಸ್‌ನಲ್ಲಿ ನಿರ್ಗಮಿಸಿದ ಜಾನಿಕ್‌ ಸಿನ್ನರ್‌ ಹಾಗೂ ಕ್ಯಾಸ್ಪರ್‌ ರೂಡ್‌ ಅವರಿಗೆ 650,000 ಡಾಲರ್‌ ಮೊತ್ತ ನಗದು ನೀಡಲಾಗಿದೆ.

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ಪ್ರಮಾಣ ವಚನ ಸಮಾರಂಭಕ್ಕೆ ವಿಜಯ್‌ ಪತ್ನಿ, ಮಕ್ಕಳು ಗೈರು

ಚೆನ್ನೈ : ದಳಪತಿ ವಿಜಯ್ ತಮಿಳುನಾಡಿನ ನೂತನ ಮುಖ್ಯಮಂತ್ರಿ ಆಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಸಮಾರಂಭದಲ್ಲಿ ಅನೇಕ ಗಣ್ಯರು ಸೇರಿದ್ದರು.…

3 hours ago

ಮಡಿಕೇರಿ | ನೀರಿನಲ್ಲಿ ಮುಳುಗಿ ಯುವಕ ಸಾವು

ಮಡಿಕೇರಿ : ಸ್ನಾನಕ್ಕೆ ತೆರಳಿದ್ದ ಯುವಕನೊಬ್ಬ ನೀರಿನಲ್ಲಿ ಮುಳುಗಿ ಮೃತಪಟ್ಟಿರುವ ಘಟನೆ ಇಲ್ಲಿಗೆ ಸಮೀಪದ ಬಲಮುರಿ ಗ್ರಾಮದಲ್ಲಿ ಭಾನುವಾರ ನಡೆದಿದೆ.…

3 hours ago

ಗಡಿ ಜಿಲ್ಲೆಯಲ್ಲೂ ತಮಿಳು ಸಿಎಂ ವಿಜಯ್‌ ಹವಾ!

ಹನೂರು : ತಮಿಳುನಾಡಿನ ಮುಖ್ಯಮಂತ್ರಿಯಾಗಿ ಟಿವಿಕೆ ಪಕ್ಷದ ಮುಖ್ಯಸ್ಥ ಹಾಗೂ ನಟ ಸಿ.ಜೋಸೆಫ್ ವಿಜಯ್ ಅಧಿಕಾರ ಸ್ವೀಕರಿಸಿದ ಹಿನ್ನೆಲೆ ಪಟ್ಟಣದಲ್ಲಿ…

3 hours ago

ಪ್ರಧಾನಿ ಸಂಚಾರ ಮಾರ್ಗದಲ್ಲಿ ಜಿಲಿಟೆನ್ ಕಡ್ಡಿ ಪತ್ತೆ ; ಕೆಲಕಾಲ ಆತಂಕ ; ಓರ್ವ ವಶಕ್ಕೆ

ಬೆಂಗಳೂರು : ಪ್ರಧಾನಿ ನರೇಂದ್ರಮೋದಿ ಅವರು ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲು ನಗರಕ್ಕೆ ಬಂದಿದ್ದ ವೇಳೆ ಜಿಲಿಟಿನ್ ಕಡ್ಡಿಗಳು ಪತ್ತೆಯಾಗಿ ಕೆಲಕಾಲ…

3 hours ago

ತಮಿಳುನಾಡು | ತಿರುಚಿರಾಪಳ್ಳಿ ಕ್ಷೇತ್ರಕ್ಕೆ ವಿಜಯ್ ರಾಜೀನಾಮೆ

ಚೆನ್ನೈ : ಟಿವಿಕೆ ಮುಖ್ಯಸ್ಥ ಮತ್ತು ತಮಿಳುನಾಡು ಮುಖ್ಯಮಂತ್ರಿ ಸಿ.ಜೋಸೆಫ್ ವಿಜಯ್ ಭಾನುವಾರ ತಿರುಚಿರಾಪಳ್ಳಿ ಪೂರ್ವ ವಿಧಾನಸಭಾ ಕ್ಷೇತ್ರಕ್ಕೆ ರಾಜೀನಾಮೆ…

4 hours ago

ಹುಣಸೂರು | ಭಾರೀ ಗಾಳಿ-ಮಳೆಗೆ ಹಾರಿಹೋದ ಚಾವಣಿ

ಹುಣಸೂರು : ಬಿರುಗಾಳಿ ಮಳೆಗೆ ತಾಲ್ಲೂಕಿನ ಹನಗೋಡು ಹೋಬಳಿಯ ವದ್ಲಿ ಮನುಗನಹಳ್ಳಿಯಲ್ಲಿ ಮನೆಯ ಚಾವಣಿಗೆ ಹಾಕಿದ್ದ ಕಲ್ನಾರ್ ಶೀಟ್ ಹಾರಿಹೋಗಿದ್ದು,…

5 hours ago