ಕ್ರೀಡೆ

French Open 2024: ಚೊಚ್ಚಲ ಪ್ರಶಸ್ತಿಗೆ ಮುತ್ತಿಕ್ಕಿದ ಸ್ಪೇನ್‌ ತಾರೆ ಅಲ್ಕರಾಜ್‌

ರೋಲ್ಯಾಂಡ್‌: ಇಲ್ಲಿನ ಗ್ಯಾರಸ್‌ನ ಕ್ಲೇಕೋರ್ಟ್‌ನಲ್ಲಿ ನಡೆದ ಫ್ರೆಂಚ್‌ ಓಪನ್‌ 2024ರ ಪುರುಷರ ಸಿಂಗಲ್ಸ್‌ನಲ್ಲಿ ಜರ್ಮನಿಯ ಅಲೆಕ್ಜಾಂಡರ್‌ ಜ್ವೆರೆವ್‌ ವಿರುದ್ಧ ಸ್ಪೇನ್‌ನ ಕಾರ್ಲೋಸ್‌ ಅಲ್ಕರಾಜ್‌ ನೇರ ಸೆಟ್‌ಗಳ ಮೂಲಕ ಗೆಲುವು ದಾಖಲಿಸಿ ಫ್ರೆಂಚ್‌ ಓಪನ್‌ ಚಾಂಪಿಯನ್‌ ಆಗಿ ಹೊರಹೊಮ್ಮಿದ್ದಾರೆ.

ಇದು ಅಲ್ಕರಾಜ್‌ ಅವರ ವೃತ್ತಿ ಜೀವನದ ಮೊದಲ ಫ್ರೆಂಚ್‌ ಓಪನ್‌ ಹಾಗೂ ವೈಯಕ್ತಿಕ ಮೂರನೇ ಗ್ರ್ಯಾಂಡ್‌ ಸ್ಲಾಮ್‌ ಪ್ರಶಸ್ತಿಯಾಗಿದೆ.

ಪ್ರಶಸ್ತಿ ಸುತ್ತಿನಲ್ಲಿ ಅಲ್ಕರಾಜ್‌ ಜರ್ಮನಿಯ ಜ್ವೆರೆವ್‌ ವಿರುದ್ಧ ನಿರ್ಣಾಯಕ ಸೆಟ್‌ಗಳಿಂದ ಗೆದ್ದು ಬೀಗಿದರು. ಒಟ್ಟು 4 ಗಂಟೆ 19 ನಿಮಿಷಗಳ ಕಾದಾಟದಲ್ಲಿ ಅಲ್ಕರಾಜ್‌ 6-3, 2-6, 5-7, 6-1, 6-2 ಸೆಟ್‌ಗಳಿಂದ ಜಯ ದಾಖಲಿಸಿದರು. ಆ ಮೂಲಕ ಮೊದಲ ಫ್ರೆಂಚ್‌ ಓಪನ್‌ ಟ್ರೋಫಿಗೆ ಮತ್ತಿಕ್ಕಿದರು. ಮತ್ತು ಫ್ರೆಂಚ್‌ ಓಪನ್‌ ಗೆದ್ದ ಏಳನೇ ಸ್ಪೇನ್‌ ಆಟಗಾರ ಎಂಬ ಹೆಗ್ಗಳಿಕೆಗೂ ಇವರು ಭಾಜನರಾಗಿದ್ದಾರೆ.

ಅಲ್ಕರಾಜ್‌ಗೆ ಸಿಕ್ಕ ಮೊತ್ತವೆಷ್ಟು ಗೊತ್ತಾ?: ಫ್ರೆಂಚ್‌ ಓಪನ್‌ ಪ್ರಶಸ್ತಿ ಬಾಚಿಕೊಂಡ ಕಾರ್ಲೋಸ್‌ ಅಲ್ಕರಾಜ್‌ ಅವರಿಗೆ 21.62 ಕೋಟಿ ಬಹುಮಾನ ಸಿಕ್ಕರೇ, ರನ್ನರ್‌ಅಪ್‌ ಆದ ಜ್ವೆರೆವ್‌ಗೆ 10.81 ಕೋಟಿ ರೂ ಬಹುಮಾನ ಸಿಕ್ಕಿದೆ. ಇನ್ನು ಸೆಮಿಸ್‌ನಲ್ಲಿ ನಿರ್ಗಮಿಸಿದ ಜಾನಿಕ್‌ ಸಿನ್ನರ್‌ ಹಾಗೂ ಕ್ಯಾಸ್ಪರ್‌ ರೂಡ್‌ ಅವರಿಗೆ 650,000 ಡಾಲರ್‌ ಮೊತ್ತ ನಗದು ನೀಡಲಾಗಿದೆ.

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ಮುತ್ತತ್ತಿಯಲ್ಲಿ ಘೋರ ದುರಂತ: ಒಂದೇ ಕುಟುಂಬದ ನಾಲ್ವರು ಮಹಿಳೆಯರು ಸೇರಿ ಐವರು ನೀರುಪಾಲು

ಹಲಗೂರು: ಸಮೀಪದ ಪ್ರವಾಸಿ ತಾಣವಾದ ಮುತ್ತತ್ತಿಯ ಕಾವೇರಿ ನದಿಯಲ್ಲಿ ಸೆಲ್ಫಿ ತೆಗೆಯುವ ವೇಳೆ ಕಾಲು ಜಾರಿ ನೀರಿನ ಪ್ರಬಲ ಸೆಳೆತಕ್ಕೆ…

6 hours ago

ಚಾಮರಾಜನಗರ ನ್ಯಾಯಾಲಯಕ್ಕೆ ಹುಸಿ ಬಾಂಬ್ ಬೆದರಿಕೆ

ಚಾಮರಾಜನಗರ: ನಗರದ ಜಿಲ್ಲಾ ಪ್ರಧಾನ ಮತ್ತು ಸೆಷನ್ಸ್ ನ್ಯಾಯಾಲಯಕ್ಕೆ ಹುಸಿ ಬಾಂಬ್ ಬೆದರಿಕೆಯ ಇ-ಮೇಲ್ ಸಂದೇಶ ಬಂದ ಹಿನ್ನೆಲೆಯಲ್ಲಿ ಪೊಲೀಸರು,…

8 hours ago

ಬಿಆರ್‌ಟಿ ವ್ಯಾಪ್ತಿಯಲ್ಲಿ ಕಾಡಾನೆ ಕಳೇಬರ ಪತ್ತೆ

ಚಾಮರಾಜನಗರ: ಬಿಆರ್‌ಟಿ ಹುಲಿ ಸಂರಕ್ಷಿತ ಪ್ರದೇಶದ ಪುಣಜನೂರು ವನ್ಯಜೀವಿ ವಲಯ ವ್ಯಾಪ್ತಿಯ ಕಾರೆಪಾಳ್ಯ ಗಸ್ತಿನ ಸಮೀಪ ಅರಣ್ಯ ಪ್ರದೇಶದಿಂದ ಸುಮಾರು…

9 hours ago

ತೊಟ್ಟಿಲುಶಾಸ್ತ್ರ, ಸಿದ್ದಪ್ಪಾಜಿ ಕಂಡಾಯೋತ್ಸವದಲ್ಲಿ ತಾರಾ, ಶಶಿಕುಮಾರ್ ಭಾಗಿ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ದೊಡ್ಡಾಲತ್ತೂರು ಗ್ರಾಮದ ಶ್ರೀ ಮಕ್ಕಳೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಹಮ್ಮಿಕೊಂಡಿದ್ದ…

9 hours ago

ಬೆಳೆಗೆ ಸಿಗದ ಬೆಲೆ: ಯುವ ರೈತ ಆತ್ಮಹತ್ಯೆ

ಕೆ.ಆರ್.ನಗರ: ತಂಬಾಕು ಬೆಳೆಗೆ ಸರಿಯಾಗಿ ಬೆಲೆ ಸಿಗದೇ ನಷ್ಟವಾದ ಹಿನ್ನೆಲೆಯಲ್ಲಿ ಮಾಡಿದ್ದ ಸಾಲ ತೀರಿಸಲಾಗದೆ ಮನನೊಂದು ರೈತರೊಬ್ಬರು ತಮ್ಮ ಜಮೀನಿನಲ್ಲಿ…

10 hours ago

ಮುಂದಿನ ಒಂದು ವಾರಗಳ ಕಾಲ ಭಾರೀ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರೀ ಗಾಳಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಚಿಕ್ಕಮಗಳೂರು, ಹಾಸನ, ಶಿವಮೊಗ್ಗ,…

11 hours ago