ಕ್ರೀಡೆ

ಸಿಎಸ್‌ಕೆ ತಂಡದಲ್ಲಿ ಎಲ್ಲವೂ ಸರಿಯಿಲ್ಲ, ಧೋನಿ ಜತೆ ಜಗಳ: ‘ಕರ್ಮ ನೋಡಿಕೊಳ್ಳುತ್ತದೆ’ ಎಂದ ಜಡ್ಡು

ಚೆನ್ನೈ: ಮಹೇಂದ್ರ ಸಿಂಗ್ ಧೋನಿ ನಾಯಕತ್ವದ ಚೆನ್ನೈ ಸೂಪರ್ ಕಿಂಗ್ಸ್ ತಂಡವು ಎರಡನೇ ತಂಡವಾಗಿ ಪ್ಲೇ ಆಫ್ ಪ್ರವೇಶಿಸಿದೆ. ಮೊದಲನೇ ಕ್ವಾಲಿಫಯರ್ ಪಂದ್ಯದಲ್ಲಿ ಸಿಎಸ್ ಕೆ ತಂಡವು ಹಾಲಿ ಚಾಂಪಿಯನ್ ಗುಜರಾತ್ ಟೈಟಾನ್ಸ್ ವಿರುದ್ಧ ಆಡಲಿದೆ.

ಕಳೆದ ವರ್ಷದ ಐಪಿಎಲ್ ಕೂಟದ ಆರಂಭದಲ್ಲೇ ರವೀಂದ್ರ ಜಡೇಜಾ ಅವರು ಸಿಎಸ್ ಕೆ ತಂಡದ ನಾಯಕತ್ವ ವಹಿಸಿಕೊಂಡಿದ್ದರು. ಆದರೆ ತಂಡದ ಸತತ ಸೋಲಿನ ಕಾರಣದಿಂದ ಅವರು ನಾಯಕನ ಸ್ಥಾನವನ್ನು ತೊರೆದಿದ್ದರು. ಕ್ಯಾಪ್ಟನ್ಸಿ ಪಟ್ಟ ಮತ್ತೆ ಧೋನಿ ಪಾಲಾಗಿತ್ತು. ಇದರ ಬಳಿಕ ಧೋನಿ ಮತ್ತು ಜಡ್ಡು ನಡುವೆ ಎಲ್ಲವೂ ಸರಿ ಇಲ್ಲ ಎಂಬ ಮಾತುಗಳು ಕೇಳಿಬಂದಿತ್ತು. ಜಡೇಜಾ ಕೂಡಾ ತಮ್ಮ ಸಾಮಾಜಿಕ ಜಾಲತಾಣದಲ್ಲಿ ಎಲ್ಲಾ ಸಿಎಸ್ ಕೆ ಫೋಟೊಗಳನ್ನು ಅಳಿಸಿ ಹಾಕಿದ್ದರು.

ಇದೀಗ ಜಡ್ಡು ಮತ್ತು ಧೋನಿ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಚರ್ಚೆಯಾಗುತ್ತದೆ. ಕಳೆದ ಶನಿವಾರ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧದ ಪಂದ್ಯದ ಬಳಿಕ ಇದು ಆರಂಭವಾಗಿದೆ. ಹೊಸದಿಲ್ಲಿಯಲ್ಲಿ ನಡೆದ ಪಂದ್ಯದಲ್ಲಿ ಚೆನ್ನೈ ಗೆಲುವು ಸಾಧಿಸಿತ್ತು. ಆಟ ಮುಗಿದ ನಂತರ, ಸಿಎಸ್ ಕೆ ನಾಯಕ ಧೋನಿ ಮತ್ತು ಆಲ್ ರೌಂಡರ್ ಜಡೇಜಾ ಅವರು ಮೈದಾನದಿಂದ ಹೊರನಡೆಯುತ್ತಿರುವಾಗ ನಾಟಕೀಯವಾಗಿ ಮಾತನಾಡುತ್ತಿರುವುದು ಕಂಡು ಬಂತು.

ರವೀಂದ್ರ ಜಡೇಜಾ ಸ್ವಲ್ಪವೂ ಸಂತೋಷವಾಗಿರಲಿಲ್ಲ, ಅವರ ಮುಖಭಾವವು ಅದನ್ನೇ ಸೂಚಿಸುತ್ತಿತ್ತು. ಮತ್ತೊಂದೆಡೆ, ಧೋನಿ ತನ್ನ ಜಡೇಜಾಗೆ ಏನನ್ನೂ ವಿವರಿಸುತ್ತಿದ್ದರೂ ಅವರ ಮುಖಚರ್ಯೆ ಬದಲಾಗಲಿಲ್ಲ. ಈ ಮಾತುಕತೆಯ ಕೆಲವು ಗಂಟೆಗಳ ನಂತರ ಜಡೇಜಾ ಟ್ವೀಟ್‌ ಮಾಡಿದ್ದು, ಇದು ಅಭಿಮಾನಿಗಳನ್ನು ಮತ್ತಷ್ಟು ಗೊಂದಲಕ್ಕೆ ದೂಡಿತು.

ಟ್ವಿಟರ್‌ ನಲ್ಲಿ ಜಡೇಜಾ ಫೋಟೋವನ್ನು ಪೋಸ್ಟ್ ಮಾಡಿದ್ದು, ಅದರಲ್ಲಿ “ಕರ್ಮವು ನಿಮ್ಮ ಬಳಿಗೆ ಮರಳುತ್ತದೆ, ಬೇಗನೇ ಅಥವಾ ತಡವಾಗಬಹುದು. ಆದರೆ ಅದು ಖಂಡಿತವಾಗಿಯೂ ಬರುತ್ತದೆ.” ಎಂದು ಬರೆಯಲಾಗಿದೆ. ಅಲ್ಲದೆ ಡೆಫಿನೇಟ್ಲಿ (Definitely) ಎಂಬ ಶೀರ್ಷಿಕೆಯೊಂದಿಗೆ ಹಂಚಿಕೊಂಡಿದ್ದಾರೆ. ಡೆಫಿನೇಟ್ಲಿ ಎನ್ನುವುದು ಧೋನಿಯ ಪ್ರಸಿದ್ದ ಮಾತು.

 

andolanait

Recent Posts

ಗೋವಾ ಅವಘಡ : ಭಾರತದಿಂದ ಪರಾರಿಯಾದ ಲುತ್ರಾ ಸೋದರರು ಥಾಯ್ಲೆಂಡ್‌ನಲ್ಲಿ ವಶಕ್ಕೆ

ಪಣಜಿ : ಗೋವಾ ಬೆಂಕಿ ಅವಘಡ ಪ್ರಕರಣದಲ್ಲಿ ಭಾರತದಿಂದ ಪರಾರಿಯಾಗಿದ್ದ ನೈಟ್ ಕ್ಲಬ್ ಮಾಲೀಕರಾದ ಸೌರಭ್ ಲುತ್ರಾ ಮತ್ತು ಗೌರವ್…

4 mins ago

ಡೀಮ್ಡ್‌ ಅರಣ್ಯ ಪ್ರದೇಶ ಗುರುತಿಸುವಿಕೆಗೆ ಸಮಿತಿ ರಚನೆ : ಈಶ್ವರ ಖಂಡ್ರೆ

ಬೆಳಗಾವಿ : ಸರ್ಕಾರ ರಾಜ್ಯದಲ್ಲಿ 2022ರಲ್ಲಿ ಒಟ್ಟು 3,30,000 ಹೆಕ್ಟೇರ್ ಪರಿಭಾವಿತ (ಡೀಮ್ಡ್) ಅರಣ್ಯ ಪ್ರದೇಶ ಇರುವುದಾಗಿ ಸರ್ವೋಚ್ಛ ನ್ಯಾಯಾಲಯಕ್ಕೆ…

36 mins ago

ಕೆಪಿಟಿಸಿಎಲ್ : 448 ಕಿರಿಯ ಸ್ಟೇಷನ್ ಪರಿಚಾರಕ ಮತ್ತು ಕಿರಿಯ ಪವರ್‌ಮ್ಯಾನ್‌ಗಳ ನೇಮಕ

ಬೆಂಗಳೂರು : ಕಿರಿಯ ಸ್ಟೇಷನ್ ಪರಿಚಾರಕ ಮತ್ತು ಕಿರಿಯ ಪವರ್‌ಮ್ಯಾನ್ ಹುದ್ದೆಗಳಿಗೆ ಪಾರದರ್ಶಕವಾಗಿ ಕೌನ್ಸೆಲಿಂಗ್ ನಡೆಸಿ ಕರ್ನಾಟಕ ವಿದ್ಯುತ್ ಪ್ರಸರಣ…

39 mins ago

ಕ್ರೀಡಾ ನೇಮಕಾತಿ ಮೀಸಲಾತಿ ಅನುಷ್ಠಾನ : ಸಿಎಂ ಘೋಷಣೆ

ಬೆಳಗಾವಿ : ಕ್ರೀಡಾಪಟುಗಳಿಗೆ ಪ್ರೋತ್ಸಾಹ ನೀಡುವ ದಿಸೆಯಲ್ಲಿ ಅರಣ್ಯ ಇಲಾಖೆಯಲ್ಲಿ ಶೇ. 3 ಪೊಲೀಸ್ ಇಲಾಖೆಯಲ್ಲಿ ಶೇ.3 ಹಾಗೂ ವಿವಿಧ…

45 mins ago

ಹಂತ ಹಂತವಾಗಿ ಖಾಲಿ ಹುದ್ದೆಗಳ ಭರ್ತಿ : ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಳಗಾವಿ : ಆರ್ಥಿಕ ಇಲಾಖೆಯ ಅನುಮತಿ ಪಡೆದು ಖಾಲಿ ಹುದ್ದೆಗಳನ್ನು ಹಂತಹಂತವಾಗಿ ಭರ್ತಿ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.…

50 mins ago

ಹೊಸದಿಲ್ಲಿ : ಭಾರತೀಯ ಜಲಪ್ರದೇಶಕ್ಕೆ ಪ್ರವೇಶಿಸಿದ ಪಾಕಿಸ್ತಾನಿ ಬೋಟ್ ಒಂದನ್ನು ಇಂದು ಕೋಸ್ಟ್ ಗಾರ್ಡ್ ವಶಪಡಿಸಿಕೊಂಡಿದ್ದು ಹಡಗಿನಲ್ಲಿದ್ದ ೧೧ ಸಿಬ್ಬಂದಿಯನ್ನು ಬಂಧಿಸಲಾಗಿದೆ.

ಭಾರತೀಯ ಜಲಪ್ರದೇಶದಲ್ಲಿ ಅಕ್ರಮ ಮೀನುಗಾರಿಕೆಗಾಗಿ ಭಾರತೀಯ ಕೋಸ್ಟ್ ಗಾರ್ಡ್ ಪಾಕಿಸ್ತಾನಿ ದೋಣಿಯನ್ನು ವಶಪಡಿಸಿಕೊಂಡಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಬಂಧಿತ ವ್ಯಕ್ತಿಗಳನ್ನು…

54 mins ago