ಕ್ರೀಡೆ

ಸಿಎಸ್‌ಕೆ ತಂಡದಲ್ಲಿ ಎಲ್ಲವೂ ಸರಿಯಿಲ್ಲ, ಧೋನಿ ಜತೆ ಜಗಳ: ‘ಕರ್ಮ ನೋಡಿಕೊಳ್ಳುತ್ತದೆ’ ಎಂದ ಜಡ್ಡು

ಚೆನ್ನೈ: ಮಹೇಂದ್ರ ಸಿಂಗ್ ಧೋನಿ ನಾಯಕತ್ವದ ಚೆನ್ನೈ ಸೂಪರ್ ಕಿಂಗ್ಸ್ ತಂಡವು ಎರಡನೇ ತಂಡವಾಗಿ ಪ್ಲೇ ಆಫ್ ಪ್ರವೇಶಿಸಿದೆ. ಮೊದಲನೇ ಕ್ವಾಲಿಫಯರ್ ಪಂದ್ಯದಲ್ಲಿ ಸಿಎಸ್ ಕೆ ತಂಡವು ಹಾಲಿ ಚಾಂಪಿಯನ್ ಗುಜರಾತ್ ಟೈಟಾನ್ಸ್ ವಿರುದ್ಧ ಆಡಲಿದೆ.

ಕಳೆದ ವರ್ಷದ ಐಪಿಎಲ್ ಕೂಟದ ಆರಂಭದಲ್ಲೇ ರವೀಂದ್ರ ಜಡೇಜಾ ಅವರು ಸಿಎಸ್ ಕೆ ತಂಡದ ನಾಯಕತ್ವ ವಹಿಸಿಕೊಂಡಿದ್ದರು. ಆದರೆ ತಂಡದ ಸತತ ಸೋಲಿನ ಕಾರಣದಿಂದ ಅವರು ನಾಯಕನ ಸ್ಥಾನವನ್ನು ತೊರೆದಿದ್ದರು. ಕ್ಯಾಪ್ಟನ್ಸಿ ಪಟ್ಟ ಮತ್ತೆ ಧೋನಿ ಪಾಲಾಗಿತ್ತು. ಇದರ ಬಳಿಕ ಧೋನಿ ಮತ್ತು ಜಡ್ಡು ನಡುವೆ ಎಲ್ಲವೂ ಸರಿ ಇಲ್ಲ ಎಂಬ ಮಾತುಗಳು ಕೇಳಿಬಂದಿತ್ತು. ಜಡೇಜಾ ಕೂಡಾ ತಮ್ಮ ಸಾಮಾಜಿಕ ಜಾಲತಾಣದಲ್ಲಿ ಎಲ್ಲಾ ಸಿಎಸ್ ಕೆ ಫೋಟೊಗಳನ್ನು ಅಳಿಸಿ ಹಾಕಿದ್ದರು.

ಇದೀಗ ಜಡ್ಡು ಮತ್ತು ಧೋನಿ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಚರ್ಚೆಯಾಗುತ್ತದೆ. ಕಳೆದ ಶನಿವಾರ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧದ ಪಂದ್ಯದ ಬಳಿಕ ಇದು ಆರಂಭವಾಗಿದೆ. ಹೊಸದಿಲ್ಲಿಯಲ್ಲಿ ನಡೆದ ಪಂದ್ಯದಲ್ಲಿ ಚೆನ್ನೈ ಗೆಲುವು ಸಾಧಿಸಿತ್ತು. ಆಟ ಮುಗಿದ ನಂತರ, ಸಿಎಸ್ ಕೆ ನಾಯಕ ಧೋನಿ ಮತ್ತು ಆಲ್ ರೌಂಡರ್ ಜಡೇಜಾ ಅವರು ಮೈದಾನದಿಂದ ಹೊರನಡೆಯುತ್ತಿರುವಾಗ ನಾಟಕೀಯವಾಗಿ ಮಾತನಾಡುತ್ತಿರುವುದು ಕಂಡು ಬಂತು.

ರವೀಂದ್ರ ಜಡೇಜಾ ಸ್ವಲ್ಪವೂ ಸಂತೋಷವಾಗಿರಲಿಲ್ಲ, ಅವರ ಮುಖಭಾವವು ಅದನ್ನೇ ಸೂಚಿಸುತ್ತಿತ್ತು. ಮತ್ತೊಂದೆಡೆ, ಧೋನಿ ತನ್ನ ಜಡೇಜಾಗೆ ಏನನ್ನೂ ವಿವರಿಸುತ್ತಿದ್ದರೂ ಅವರ ಮುಖಚರ್ಯೆ ಬದಲಾಗಲಿಲ್ಲ. ಈ ಮಾತುಕತೆಯ ಕೆಲವು ಗಂಟೆಗಳ ನಂತರ ಜಡೇಜಾ ಟ್ವೀಟ್‌ ಮಾಡಿದ್ದು, ಇದು ಅಭಿಮಾನಿಗಳನ್ನು ಮತ್ತಷ್ಟು ಗೊಂದಲಕ್ಕೆ ದೂಡಿತು.

ಟ್ವಿಟರ್‌ ನಲ್ಲಿ ಜಡೇಜಾ ಫೋಟೋವನ್ನು ಪೋಸ್ಟ್ ಮಾಡಿದ್ದು, ಅದರಲ್ಲಿ “ಕರ್ಮವು ನಿಮ್ಮ ಬಳಿಗೆ ಮರಳುತ್ತದೆ, ಬೇಗನೇ ಅಥವಾ ತಡವಾಗಬಹುದು. ಆದರೆ ಅದು ಖಂಡಿತವಾಗಿಯೂ ಬರುತ್ತದೆ.” ಎಂದು ಬರೆಯಲಾಗಿದೆ. ಅಲ್ಲದೆ ಡೆಫಿನೇಟ್ಲಿ (Definitely) ಎಂಬ ಶೀರ್ಷಿಕೆಯೊಂದಿಗೆ ಹಂಚಿಕೊಂಡಿದ್ದಾರೆ. ಡೆಫಿನೇಟ್ಲಿ ಎನ್ನುವುದು ಧೋನಿಯ ಪ್ರಸಿದ್ದ ಮಾತು.

 

andolanait

Recent Posts

ಲೋಕಸಭೆಯಲ್ಲಿ ಮಹತ್ವದ ಕ್ಷೇತ್ರ ಮರುವಿಂಗಡಣೆ ಮಸೂದೆ ಮಂಡಿಸಿದ ಅಮಿತ್‌ ಶಾ

ನವದೆಹಲಿ: ಕೇಂದ್ರ ಸಚಿವ ಅಮಿತ್‌ ಶಾ ಅವರು ಇಂದು ಲೋಕಸಭೆಯಲ್ಲಿ ಕ್ಷೇತ್ರ ಮರುವಿಂಗಡಣೆ ಮಸೂದೆ 2026ನ್ನು ಮಂಡಿಸಿದರು. ಈ ಪ್ರಸ್ತಾವನೆಯು…

7 mins ago

ಲೋಕಸಭಾ ಕ್ಷೇತ್ರ ಮರು ವಿಂಗಡಣೆ ಮಸೂದೆಗೆ ತೀವ್ರ ವಿರೋಧ: ತಮಿಳುನಾಡು ಸಿಎಂ ಸ್ಟಾಲಿನ್‌ ಪ್ರತಿಭಟನೆ

ಚೆನ್ನೈ: ಕೇಂದ್ರ ಸರ್ಕಾರ ಜಾರಿ ಮಾಡಲು ಹೊರಟಿರುವ ಲೋಕಸಭಾ ಕ್ಷೇತ್ರ ಮರು ವಿಂಗಡಣೆ ಮಸೂದೆಗೆ ವಿಪಕ್ಷಗಳು ತೀವ್ರ ವಿರೋಧ ವ್ಯಕ್ತಪಡಿಸಿದ್ದು,…

28 mins ago

ತಾಪಮಾನ ಏರಿಕೆ ಬೆನ್ನಲ್ಲೇ ಮಳೆ ಮುನ್ಸೂಚನೆ ನೀಡಿದ ಹವಾಮಾನ ಇಲಾಖೆ

ಬೆಂಗಳೂರು: ರಾಜ್ಯದಲ್ಲಿ ರಣ ಬಿಸಿಲ ಧಗೆ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಕೆಲ ಜಿಲ್ಲೆಗಳಲ್ಲಿ ಅತ್ಯಧಿಕ ತಾಪಮಾನ ದಾಖಲಾಗುತ್ತಿದ್ದು, ಜನರು ಬಿಸಿಲ…

1 hour ago

ಓದುಗರ ಪತ್ರ: ವಿಶ್ವ ಶಾಂತಿಗೆ ಪೋಪ್ ಕರೆ ಸ್ವಾಗತಾರ್ಹ

ಮಧ್ಯ ಪ್ರಾಚ್ಯ ದೇಶಗಳಲ್ಲಿ ಕಳೆದ ೪೦ ದಿನಗಳಿಂದಲೂ ಯುದ್ಧ ನಡೆಯುತ್ತಿರುವುದರಿಂದ ವಿವಿಧ ದೇಶಗಳು ಸಂಕಷ್ಟಕ್ಕೆ ಸಿಲುಕಿವೆ. ಪೋಪ್ ೧೪ನೇ ಲಿಯೋರವರು…

2 hours ago

ಓದುಗರ ಪತ್ರ: ವಿದ್ಯಾರ್ಥಿಗಳ ಸ್ಕಾಲರ್‌ಶಿಪ್ ಮೊತ್ತ ಹೆಚ್ಚಿಸಿ

ಬಡ ಮತ್ತು ಮಧ್ಯಮ ವರ್ಗದ ವಿದ್ಯಾರ್ಥಿಗಳ ವ್ಯಾಸಂಗಕ್ಕೆ ಸರ್ಕಾರ ನೀಡುವ ಸ್ಕಾಲರ್‌ಶಿಪ್ ದೊಡ್ಡ ಸಹಾಯವಾಗಿದೆ. ಆದರೆ ವಸತಿ ವೆಚ್ಚ,ಪುಸ್ತಕಗಳು ಹಾಗೂ…

2 hours ago

ಓದುಗರ ಪತ್ರ: ದಿಕ್ಕು ತಪ್ಪುತ್ತಿರುವ ಕೊಲ್ಲಿ ಸಮರ

ಕೊಲ್ಲಿಯಲ್ಲಿ ಅಮೆರಿಕ-ಇಸ್ರೇಲ್ ಜಂಟಿಯಾಗಿ ಇರಾನ್ ಮೇಲೆ ನಡೆಸುತ್ತಿದ್ದ ಯುದ್ಧದ ನಿಲುಗಡೆಗಾಗಿ ಕರೆಯಲಾಗಿದ್ದ ಪಾಕಿಸ್ತಾನ ನೇತೃತ್ವದ ಸಂಧಾನ ಸಭೆ ವಿಫಲವಾಗುವುದರೊಂದಿಗೆ ಕೊಲ್ಲಿಯಲ್ಲಿ…

2 hours ago