ಕ್ರೀಡೆ

ಐಪಿಎಲ್‌ಗೆ ಅಂತ್ಯ ಹಾಡಿದ ಆಲ್‌ರೌಂಡರ್‌ ಡ್ವೇನ್‌ ಬ್ರಾವೋ

16ನೇ ಅವೃತ್ತಿಯ ಐಪಿಎಲ್ ಆರಂಭಕ್ಕೂ ಮುನ್ನ ಈ ಮಿಲಿಯನ್ ಡಾಲರ್ ಟೂರ್ನಿಗೆ ಸಿಎಸ್​ಕೆ ಆಲ್‌ರೌಂಡರ್ ಡ್ವೇನ್ ಬ್ರಾವೋ ಗುಡ್​ ಬೈ ಹೇಳಿದ್ದಾರೆ. ಆದರೆ ಈ ನಡುವೆ ತಂಡದೊಂದಿಗೆ ಸಾಕಷ್ಟು ವರ್ಷ ಕ್ರಿಕೆಟ್ ಆಡಿದ ಬ್ರಾವೋರನ್ನು ಸಿಎಸ್​ಕೆ ಫ್ರಾಂಚೈಸಿ ಮತ್ತೆ ತಂಡಕ್ಕೆ ವಾಪಸ್ಸಾತಿ ಮಾಡಿಕೊಂಡಿದೆ. ಆದರೆ ಈ ಬಾರಿ ಬ್ರಾವೋ ಆಟಗಾರನಿಗೆ ಕಾಣಿಸಿಕೊಳ್ಳುವ ಬದಲು ತಂಡದ ಬೌಲಿಂಗ್ ಕೋಚ್​ ಆಗಿ ತಂಡಕ್ಕೆ ಎಂಟ್ರಿಕೊಟ್ಟಿದ್ದಾರೆ. ಐಪಿಎಲ್ ಇತಿಹಾಸದಲ್ಲಿ ಅತಿ ಹೆಚ್ಚು ವಿಕೆಟ್ ಪಡೆದ ಬೌಲರ್‌ಗಳ ಪಟ್ಟಿಯಲ್ಲಿ ನಂಬರ್ ಒನ್ ಆಗಿರುವ ಬ್ರಾವೋ ಇದೀಗ ಚೆನ್ನೈನಲ್ಲಿ ಬೌಲಿಂಗ್ ಕೋಚ್ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಈ ಹಿಂದೆ ತಂಡದ ಬೌಲಿಂಗ್ ಆಗಿದ್ದ ಲಕ್ಷ್ಮೀಪತಿ ಬಾಲಾಜಿ ಮುಂದಿನ ಆವೃತ್ತಿಯ ಐಪಿಎಲ್​ನಿಂದ ವಿರಾಮ ತೆಗೆದುಕೊಳ್ಳಲು ನಿರ್ಧರಿಸಿರುವುದರಿಂದ ಅವರ ಸ್ಥಾನಕ್ಕೆ ಬ್ರಾವೋ ಆಯ್ಕೆಯಾಗಿದ್ದಾರೆ.

ಈ ಬಗ್ಗೆ ಚೆನ್ನೈ ಸೂಪರ್ ಕಿಂಗ್ಸ್ ಹೇಳಿಕೆ ನೀಡುವ ಮೂಲಕ ಮಾಹಿತಿ ನೀಡಿದೆ. ಈ ಹೇಳಿಕೆಯಲ್ಲಿ, ಬ್ರಾವೋ, “ನಾನು ಈ ಹೊಸ ಪ್ರಯಾಣಕ್ಕಾಗಿ ಉತ್ಸುಕನಾಗಿದ್ದೇನೆ. ನಾನು ಬೌಲರ್‌ಗಳೊಂದಿಗೆ ಕೆಲಸ ಮಾಡಲು ಇಷ್ಟಪಡುತ್ತೇನೆ. ಹೀಗಾಗಿ ಈ ಪಾತ್ರದ ಬಗ್ಗೆ ನಾನು ಉತ್ಸುಕನಾಗಿದ್ದೇನೆ. ಆಟಗಾರನಿಂದ ಕೋಚ್‌ನವರೆಗಿನ ಪ್ರಯಾಣದಲ್ಲಿ, ನಾನು ಏನನ್ನೂ ಬದಲಾಯಿಸಬೇಕಾಗಿಲ್ಲ ಎಂದು ನಾನು ಭಾವಿಸುತ್ತೇನೆ. ಏಕೆಂದರೆ ನಾನು ಆಡುವಾಗಲೂ ಬೌಲರ್‌ಗಳೊಂದಿಗೆ ಕೆಲಸ ಮಾಡುತ್ತಿದ್ದೆ. ಒಂದೇ ವ್ಯತ್ಯಾಸವೆಂದರೆ ನಾನು ಇನ್ನು ಮುಂದೆ ಮಿಡ್-ಆನ್ ಅಥವಾ ಮಿಡ್-ಆಫ್‌ನಲ್ಲಿ ನಿಲ್ಲುವುದಿಲ್ಲ ಎಂದಿದ್ದಾರೆ.

andolana

Recent Posts

ಲೋಕಾಯುಕ್ತ ಬಲೆಗೆ ಬಿದ್ದ ಪಿಡಿಒ

ಮೈಸೂರು: ಇ-ಸ್ವತ್ತು ಮಾಡಿ ಕೊಡಲು ಅರ್ಜಿದಾರರಿಗೆ ಹಣ ನೀಡುವಂತೆ ಒತ್ತಾಯ ಮಾಡಿದ ಗ್ರಾಮ ಪಂಚಾಯಿತಿ ಪಿಡಿಒ ಕುಳ್ಳೇಗೌಡ ನಾಲ್ಕು ಸಾವಿರ…

4 hours ago

ಅರ್ಥಪೂರ್ಣವಾಗಿ ಕನ್ನಡ ರಾಜ್ಯೋತ್ಸವ ಆಚರಣೆ – ಡಾ. ಪಿ ಶಿವರಾಜ್

ಮೈಸೂರು: ಕಳೆದ ಬಾರಿಯಂತೆ ಈ ಬಾರಿಯೂ ಅರ್ಥಪೂರ್ಣ ಹಾಗೂ ಅದ್ದೂರಿಯಾಗಿ ಕನ್ನಡ ರಾಜ್ಯೋತ್ಸವ ಆಚರಣೆ ಮಾಡಲಾಗುವುದು ಎಂದು ಅಪರ ಜಿಲ್ಲಾಧಿಕಾರಿ…

5 hours ago

ನಗರದ ಆರೋಗ್ಯ ಕಾಪಾಡುವ ಪೌರಕಾರ್ಮಿಕರ ಆರೋಗ್ಯವೂ ಮುಖ್ಯ: ಜಿ ಟಿ ದೇವೇಗೌಡ

ಮೈಸೂರು: ನಗರವನ್ನು ಸ್ವಚ್ಛಗೊಳಿಸುವ ಮೂಲಕ ಜನರ ಆರೋಗ್ಯ ಕಾಪಾಡುವ ಪೌರಕಾರ್ಮಿಕರ ಆರೋಗ್ಯವೂ ಮುಖ್ಯ ವಾಗಿದ್ದು, ಅವರು ಈ ವಿಷಯದಲ್ಲಿ ನಿರ್ಲಕ್ಷ್ಯ…

6 hours ago

ಹನೂರು: ಗುಂಡಿಮಯವಾದ ರಸ್ತೆ, ಸಾಮಾಜಿಕ ಜಾಲತಾಣ ಮೂಲಕ ಯುವಕ ವ್ಯಂಗ್ಯ

ಹನೂರು: ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಅತಿ ದೊಡ್ಡ ಗ್ರಾಮ ಪಂಚಾಯಿತಿ ಎಂದು ಪ್ರಸಿದ್ಧಿ ಪಡೆದಿರುವ ಮಾರ್ಟಳ್ಳಿ ಗ್ರಾಮ ಪಂಚಾಯಿತಿ ಮುಖ್ಯ…

6 hours ago

ಇಶಾ ಫೌಂಡೇಶನ್‌ ವಿರುದ್ಧದ ಪ್ರಕರಣ ವಜಾಗೊಳಿಸಿದ ಸುಪ್ರೀಂಕೋರ್ಟ್‌

ಹೊಸದಿಲ್ಲಿ: ತಮಿಳುನಾಡಿನ ಕೊಯಮತ್ತೂರಿನಲ್ಲಿರುವ ಸದ್ಗುರು ಜಗ್ಗಿ ವಾಸುದೇವ್‌ ಅವರ ಆಶ್ರಮ ಸೇರಲು ತನ್ನ ಇಬ್ಬರು ಹೆಣ್ಣುಮಕ್ಕಳನ್ನು ಬ್ರೈನ್‌ವಾಶ್‌ ಮಾಡಲಾಗಿದೆ ಎಂಬ…

7 hours ago

ಮಡಿಕೇರಿ: ಮಗನಿಂದಲೇ ತಂದೆಯ ಹತ್ಯೆ..

ಮಡಿಕೇರಿ: ಮಗನಿಂದಲೇ ತಂದೆ ಹತ್ಯೆಯಾದ ಘಟನೆ ಶ್ರೀಮಂಗಲ ಪೊಲೀಸ್ ಠಾಣಾ ವ್ಯಾಪ್ತಿಯ ಚಿಕ್ಕಮಂಡೂರು ಗ್ರಾಮದಲ್ಲಿ ನಡೆದಿದೆ. ಸಿ ಎನ್ ನಾಣಯ್ಯ…

8 hours ago