16ನೇ ಅವೃತ್ತಿಯ ಐಪಿಎಲ್ ಆರಂಭಕ್ಕೂ ಮುನ್ನ ಈ ಮಿಲಿಯನ್ ಡಾಲರ್ ಟೂರ್ನಿಗೆ ಸಿಎಸ್ಕೆ ಆಲ್ರೌಂಡರ್ ಡ್ವೇನ್ ಬ್ರಾವೋ ಗುಡ್ ಬೈ ಹೇಳಿದ್ದಾರೆ. ಆದರೆ ಈ ನಡುವೆ ತಂಡದೊಂದಿಗೆ ಸಾಕಷ್ಟು ವರ್ಷ ಕ್ರಿಕೆಟ್ ಆಡಿದ ಬ್ರಾವೋರನ್ನು ಸಿಎಸ್ಕೆ ಫ್ರಾಂಚೈಸಿ ಮತ್ತೆ ತಂಡಕ್ಕೆ ವಾಪಸ್ಸಾತಿ ಮಾಡಿಕೊಂಡಿದೆ. ಆದರೆ ಈ ಬಾರಿ ಬ್ರಾವೋ ಆಟಗಾರನಿಗೆ ಕಾಣಿಸಿಕೊಳ್ಳುವ ಬದಲು ತಂಡದ ಬೌಲಿಂಗ್ ಕೋಚ್ ಆಗಿ ತಂಡಕ್ಕೆ ಎಂಟ್ರಿಕೊಟ್ಟಿದ್ದಾರೆ. ಐಪಿಎಲ್ ಇತಿಹಾಸದಲ್ಲಿ ಅತಿ ಹೆಚ್ಚು ವಿಕೆಟ್ ಪಡೆದ ಬೌಲರ್ಗಳ ಪಟ್ಟಿಯಲ್ಲಿ ನಂಬರ್ ಒನ್ ಆಗಿರುವ ಬ್ರಾವೋ ಇದೀಗ ಚೆನ್ನೈನಲ್ಲಿ ಬೌಲಿಂಗ್ ಕೋಚ್ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಈ ಹಿಂದೆ ತಂಡದ ಬೌಲಿಂಗ್ ಆಗಿದ್ದ ಲಕ್ಷ್ಮೀಪತಿ ಬಾಲಾಜಿ ಮುಂದಿನ ಆವೃತ್ತಿಯ ಐಪಿಎಲ್ನಿಂದ ವಿರಾಮ ತೆಗೆದುಕೊಳ್ಳಲು ನಿರ್ಧರಿಸಿರುವುದರಿಂದ ಅವರ ಸ್ಥಾನಕ್ಕೆ ಬ್ರಾವೋ ಆಯ್ಕೆಯಾಗಿದ್ದಾರೆ.
ಈ ಬಗ್ಗೆ ಚೆನ್ನೈ ಸೂಪರ್ ಕಿಂಗ್ಸ್ ಹೇಳಿಕೆ ನೀಡುವ ಮೂಲಕ ಮಾಹಿತಿ ನೀಡಿದೆ. ಈ ಹೇಳಿಕೆಯಲ್ಲಿ, ಬ್ರಾವೋ, “ನಾನು ಈ ಹೊಸ ಪ್ರಯಾಣಕ್ಕಾಗಿ ಉತ್ಸುಕನಾಗಿದ್ದೇನೆ. ನಾನು ಬೌಲರ್ಗಳೊಂದಿಗೆ ಕೆಲಸ ಮಾಡಲು ಇಷ್ಟಪಡುತ್ತೇನೆ. ಹೀಗಾಗಿ ಈ ಪಾತ್ರದ ಬಗ್ಗೆ ನಾನು ಉತ್ಸುಕನಾಗಿದ್ದೇನೆ. ಆಟಗಾರನಿಂದ ಕೋಚ್ನವರೆಗಿನ ಪ್ರಯಾಣದಲ್ಲಿ, ನಾನು ಏನನ್ನೂ ಬದಲಾಯಿಸಬೇಕಾಗಿಲ್ಲ ಎಂದು ನಾನು ಭಾವಿಸುತ್ತೇನೆ. ಏಕೆಂದರೆ ನಾನು ಆಡುವಾಗಲೂ ಬೌಲರ್ಗಳೊಂದಿಗೆ ಕೆಲಸ ಮಾಡುತ್ತಿದ್ದೆ. ಒಂದೇ ವ್ಯತ್ಯಾಸವೆಂದರೆ ನಾನು ಇನ್ನು ಮುಂದೆ ಮಿಡ್-ಆನ್ ಅಥವಾ ಮಿಡ್-ಆಫ್ನಲ್ಲಿ ನಿಲ್ಲುವುದಿಲ್ಲ ಎಂದಿದ್ದಾರೆ.
ರಾಜ್ಯದ ಅರಣ್ಯ ಪ್ರದೇಶ ಒಂದು ವಾರದ ಅಂತರದಲ್ಲಿ ಕೇರಳ ರಾಜ್ಯದ ಇಬ್ಬರು ಹೆಣ್ಣುಮಕ್ಕಳ ಪೈಕಿ ಒಬ್ಬಾಕೆಯ ಪ್ರಾಣವನ್ನೇ ಬಲಿತೆಗೆದುಕೊಂಡರೆ, ಇನ್ನೊಬ್ಬಾಕೆಯ…
ಶಾಸನ ಸಭೆಗಳಲ್ಲಿ ಮಹಿಳೆಯರಿಗೆ ಶೇ.೩೩ರಷ್ಟು ಮೀಸಲಾತಿ ಕಲ್ಪಿಸುವ ಕುರಿತು ನಿರ್ಧಾರ ಏಪ್ರಿಲ್ ೧೬ರಿಂದ ೧೮ರವರೆಗೆ ಮೂರು ದಿನಗಳ ಕಾಲ ಸಂಸತ್ತಿನ…
ಅಭ್ಯರ್ಥಿಗಳ ಗೆಲುವಿಗಾಗಿ ಸ್ವತಃ ಫೀಲ್ಡಿಗಿಳಿದಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜ್ಯದ ಎರಡು ವಿಧಾನಸಭಾ ಕ್ಷೇತ್ರಗಳಿಗೆ ನಡೆದ ಉಪಚುನಾವಣೆ ಆಡಳಿತಾರೂಢ ಕಾಂಗ್ರೆಸ್ ಮತ್ತು…
ನವೀನ್ ಡಿಸೋಜ ಕೊಡಗು ಜಿಲ್ಲೆಯಲ್ಲಿ ಇವೆ ಅಪಾಯಕಾರಿ ಸ್ಥಳಗಳು; ಅಗತ್ಯ ಮುನ್ನೆಚ್ಚರಿಕೆ ವಹಿಸಲು ಸಲಹೆ ಮಡಿಕೇರಿ:ಬೇಸಿಗೆಯಲ್ಲಿ ಬಿಸಿಲ ಝಳಕ್ಕೆ ನೀರಿಗಿಳಿದು…
ಕೆ.ಬಿ.ರಮೇಶನಾಯಕ ಶೇ.೩೩ ಮಹಿಳಾ ಮೀಸಲು ಜಾರಿಯಾದರೆ ಐದು ಸ್ಥಾನ ಮೀಸಲು ಚಾಮುಂಡೇಶ್ವರಿ, ಕೃಷ್ಣರಾಜ, ನರಸಿಂಹರಾಜ ಕ್ಷೇತ್ರದ ಕೆಲ ಭಾಗಗಳನ್ನು ಬೇರ್ಪಡಿಸಿ…
ಹೇಮಂತ್ಕುಮಾರ್ ಮಂಡ್ಯ: ಜಿಲ್ಲೆಯ ಮೇಲುಕೋಟೆ ಪ್ರಖ್ಯಾತ ಧಾರ್ಮಿಕ ಮತ್ತು ಐತಿಹಾಸಿಕ ಕ್ಷೇತ್ರವಾಗಿದ್ದು, ಹತ್ತಾರು ಶತಮಾನಗಳ ವಿಶೇಷತೆಗಳನ್ನು ಒಳಗೊಂಡಿದೆ. ಈ ಪಟ್ಟಿಯಲ್ಲಿ…