ಕ್ರೀಡೆ

ಐಪಿಎಲ್‌ಗೆ ಅಂತ್ಯ ಹಾಡಿದ ಆಲ್‌ರೌಂಡರ್‌ ಡ್ವೇನ್‌ ಬ್ರಾವೋ

16ನೇ ಅವೃತ್ತಿಯ ಐಪಿಎಲ್ ಆರಂಭಕ್ಕೂ ಮುನ್ನ ಈ ಮಿಲಿಯನ್ ಡಾಲರ್ ಟೂರ್ನಿಗೆ ಸಿಎಸ್​ಕೆ ಆಲ್‌ರೌಂಡರ್ ಡ್ವೇನ್ ಬ್ರಾವೋ ಗುಡ್​ ಬೈ ಹೇಳಿದ್ದಾರೆ. ಆದರೆ ಈ ನಡುವೆ ತಂಡದೊಂದಿಗೆ ಸಾಕಷ್ಟು ವರ್ಷ ಕ್ರಿಕೆಟ್ ಆಡಿದ ಬ್ರಾವೋರನ್ನು ಸಿಎಸ್​ಕೆ ಫ್ರಾಂಚೈಸಿ ಮತ್ತೆ ತಂಡಕ್ಕೆ ವಾಪಸ್ಸಾತಿ ಮಾಡಿಕೊಂಡಿದೆ. ಆದರೆ ಈ ಬಾರಿ ಬ್ರಾವೋ ಆಟಗಾರನಿಗೆ ಕಾಣಿಸಿಕೊಳ್ಳುವ ಬದಲು ತಂಡದ ಬೌಲಿಂಗ್ ಕೋಚ್​ ಆಗಿ ತಂಡಕ್ಕೆ ಎಂಟ್ರಿಕೊಟ್ಟಿದ್ದಾರೆ. ಐಪಿಎಲ್ ಇತಿಹಾಸದಲ್ಲಿ ಅತಿ ಹೆಚ್ಚು ವಿಕೆಟ್ ಪಡೆದ ಬೌಲರ್‌ಗಳ ಪಟ್ಟಿಯಲ್ಲಿ ನಂಬರ್ ಒನ್ ಆಗಿರುವ ಬ್ರಾವೋ ಇದೀಗ ಚೆನ್ನೈನಲ್ಲಿ ಬೌಲಿಂಗ್ ಕೋಚ್ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಈ ಹಿಂದೆ ತಂಡದ ಬೌಲಿಂಗ್ ಆಗಿದ್ದ ಲಕ್ಷ್ಮೀಪತಿ ಬಾಲಾಜಿ ಮುಂದಿನ ಆವೃತ್ತಿಯ ಐಪಿಎಲ್​ನಿಂದ ವಿರಾಮ ತೆಗೆದುಕೊಳ್ಳಲು ನಿರ್ಧರಿಸಿರುವುದರಿಂದ ಅವರ ಸ್ಥಾನಕ್ಕೆ ಬ್ರಾವೋ ಆಯ್ಕೆಯಾಗಿದ್ದಾರೆ.

ಈ ಬಗ್ಗೆ ಚೆನ್ನೈ ಸೂಪರ್ ಕಿಂಗ್ಸ್ ಹೇಳಿಕೆ ನೀಡುವ ಮೂಲಕ ಮಾಹಿತಿ ನೀಡಿದೆ. ಈ ಹೇಳಿಕೆಯಲ್ಲಿ, ಬ್ರಾವೋ, “ನಾನು ಈ ಹೊಸ ಪ್ರಯಾಣಕ್ಕಾಗಿ ಉತ್ಸುಕನಾಗಿದ್ದೇನೆ. ನಾನು ಬೌಲರ್‌ಗಳೊಂದಿಗೆ ಕೆಲಸ ಮಾಡಲು ಇಷ್ಟಪಡುತ್ತೇನೆ. ಹೀಗಾಗಿ ಈ ಪಾತ್ರದ ಬಗ್ಗೆ ನಾನು ಉತ್ಸುಕನಾಗಿದ್ದೇನೆ. ಆಟಗಾರನಿಂದ ಕೋಚ್‌ನವರೆಗಿನ ಪ್ರಯಾಣದಲ್ಲಿ, ನಾನು ಏನನ್ನೂ ಬದಲಾಯಿಸಬೇಕಾಗಿಲ್ಲ ಎಂದು ನಾನು ಭಾವಿಸುತ್ತೇನೆ. ಏಕೆಂದರೆ ನಾನು ಆಡುವಾಗಲೂ ಬೌಲರ್‌ಗಳೊಂದಿಗೆ ಕೆಲಸ ಮಾಡುತ್ತಿದ್ದೆ. ಒಂದೇ ವ್ಯತ್ಯಾಸವೆಂದರೆ ನಾನು ಇನ್ನು ಮುಂದೆ ಮಿಡ್-ಆನ್ ಅಥವಾ ಮಿಡ್-ಆಫ್‌ನಲ್ಲಿ ನಿಲ್ಲುವುದಿಲ್ಲ ಎಂದಿದ್ದಾರೆ.

andolana

Recent Posts

ಕೊಡವ ಕೌಟುಂಬಿಕ ಕ್ರಿಕೆಟ್‌ ಉತ್ಸವಕ್ಕೆ ಸಿದ್ಧತೆ

ಏ.೨ರಿಂದ ೨೮ ದಿನಗಳ ಕಾಲ ನಡೆಯಲಿರುವ ಪಂದ್ಯಾವಳಿ; ೩೦೦ಕ್ಕೂ ಅಧಿಕ ತಂಡಗಳು ಪಾಲ್ಗೊಳ್ಳುವ ನಿರೀಕ್ಷೆ  ಮಡಿಕೇರಿ:ಕೊಡವ ಕ್ರಿಕೆಟ್ ಅಕಾಡೆಮಿ ಸಹಯೋಗದಲ್ಲಿ…

12 mins ago

ಹೊರವಲಯದ ನಿವೇಶನಗಳಿಗೆ ಹೆಚ್ಚಾಗಲಿದೆ ಮತ್ತಷ್ಟು ಬೇಡಿಕೆ

ಮೈಸೂರು: ನಗರದ ಹೊರವಲಯದ ನಾಲ್ಕು ದಿಕ್ಕುಗಳಲ್ಲಿರುವ ಹಲವು ಪ್ರದೇಶಗಳನ್ನು ಸೇರಿಸಿ ಗ್ರೇಡ್- ೧ ಮೈಸೂರು ಮಹಾನಗರ ಪಾಲಿಕೆಯನ್ನಾಗಿ ರಚಿಸಲು ರಾಜ್ಯಸರ್ಕಾರ…

40 mins ago

ಶಿವಾನಂದಪುರಿ ಶ್ರೀಗಳಿಗೆ ಕನಕ ಭವನ ನಿರ್ವಹಣೆ ಹೊಣೆ

ಮಂಜು ಕೋಟೆ ಕುರುಬ ಸಮಾಜದ ಎರಡು ಬಣಗಳ ನಡುವೆ ಉಂಟಾಗಿದ್ದ ಗೊಂದಲ; ಸಿಎಂ ಸಿದ್ದರಾಮಯ್ಯ ಸೂಚನೆಯಂತೆ ಕ್ರಮ ಎಚ್.ಡಿ.ಕೋಟೆ: ಮುಖ್ಯಮಂತ್ರಿ…

3 hours ago

ರಿಂಗ್ ರಸ್ತೆಯಲ್ಲಿ ಸಿಗ್ನಲ್ ಲೈಟ್‌ಗಳ ಅಳವಡಿಕೆ

೩೫ ಕಡೆಗಳಲ್ಲಿ ಹೈಬ್ರಿಡ್ ಸಿಗ್ನಲ್ ಲೈಟ್; ವಾಹನ ಸಂಚಾರ ದಟ್ಟಣೆ ನಿಯಂತ್ರಿಸಲು ಪೊಲೀಸ್ ಇಲಾಖೆ ಕ್ರಮ ಮೈಸೂರು: ಭವಿಷ್ಯದಲ್ಲಿ ರಿಂಗ್…

3 hours ago

ಹುಲಿ ಸೆರೆಗೆ ಬಂತು ಥರ್ಮಲ್ ಡ್ರೋನ್‌

ಕಾಡಂಚಿನ ವ್ಯಾಘ್ರ ಸೆರೆಗೆ ಹಗಲು-ರಾತ್ರಿ ಕಾರ್ಯಾಚರಣೆ ಚಿರತೆ ಸೆರೆಗೆ ತಂತ್ರಜ್ಞಾನ ಬಳಕೆ ಮಾಡಿದ್ದ ಅರಣ್ಯ ಇಲಾS ಮೈಸೂರು: ಕಳೆದ ಎರಡು…

3 hours ago

ಕೃಷಿ ಮೇಳಕ್ಕೆ 10 ಲಕ್ಷ ಜನ ಭೇಟಿ

ಹೇಮಂತ್‌ಕುಮಾರ್ ದಾಖಲೆ ಸೃಷ್ಟಿ ; ಹಲವು ಅಚ್ಚರಿಗಳ ತಾಣವಾದ ಮೂರು ದಿನಗಳ ಮೇಳ  ಮಂಡ್ಯ: ಮೂರು ದಿನಗಳ ಕಾಲ ವಿ.ಸಿ.ಫಾರಂನಲ್ಲಿ…

3 hours ago