ಕ್ರೀಡೆ

ಐಪಿಎಲ್‌ಗೆ ಅಂತ್ಯ ಹಾಡಿದ ಆಲ್‌ರೌಂಡರ್‌ ಡ್ವೇನ್‌ ಬ್ರಾವೋ

16ನೇ ಅವೃತ್ತಿಯ ಐಪಿಎಲ್ ಆರಂಭಕ್ಕೂ ಮುನ್ನ ಈ ಮಿಲಿಯನ್ ಡಾಲರ್ ಟೂರ್ನಿಗೆ ಸಿಎಸ್​ಕೆ ಆಲ್‌ರೌಂಡರ್ ಡ್ವೇನ್ ಬ್ರಾವೋ ಗುಡ್​ ಬೈ ಹೇಳಿದ್ದಾರೆ. ಆದರೆ ಈ ನಡುವೆ ತಂಡದೊಂದಿಗೆ ಸಾಕಷ್ಟು ವರ್ಷ ಕ್ರಿಕೆಟ್ ಆಡಿದ ಬ್ರಾವೋರನ್ನು ಸಿಎಸ್​ಕೆ ಫ್ರಾಂಚೈಸಿ ಮತ್ತೆ ತಂಡಕ್ಕೆ ವಾಪಸ್ಸಾತಿ ಮಾಡಿಕೊಂಡಿದೆ. ಆದರೆ ಈ ಬಾರಿ ಬ್ರಾವೋ ಆಟಗಾರನಿಗೆ ಕಾಣಿಸಿಕೊಳ್ಳುವ ಬದಲು ತಂಡದ ಬೌಲಿಂಗ್ ಕೋಚ್​ ಆಗಿ ತಂಡಕ್ಕೆ ಎಂಟ್ರಿಕೊಟ್ಟಿದ್ದಾರೆ. ಐಪಿಎಲ್ ಇತಿಹಾಸದಲ್ಲಿ ಅತಿ ಹೆಚ್ಚು ವಿಕೆಟ್ ಪಡೆದ ಬೌಲರ್‌ಗಳ ಪಟ್ಟಿಯಲ್ಲಿ ನಂಬರ್ ಒನ್ ಆಗಿರುವ ಬ್ರಾವೋ ಇದೀಗ ಚೆನ್ನೈನಲ್ಲಿ ಬೌಲಿಂಗ್ ಕೋಚ್ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಈ ಹಿಂದೆ ತಂಡದ ಬೌಲಿಂಗ್ ಆಗಿದ್ದ ಲಕ್ಷ್ಮೀಪತಿ ಬಾಲಾಜಿ ಮುಂದಿನ ಆವೃತ್ತಿಯ ಐಪಿಎಲ್​ನಿಂದ ವಿರಾಮ ತೆಗೆದುಕೊಳ್ಳಲು ನಿರ್ಧರಿಸಿರುವುದರಿಂದ ಅವರ ಸ್ಥಾನಕ್ಕೆ ಬ್ರಾವೋ ಆಯ್ಕೆಯಾಗಿದ್ದಾರೆ.

ಈ ಬಗ್ಗೆ ಚೆನ್ನೈ ಸೂಪರ್ ಕಿಂಗ್ಸ್ ಹೇಳಿಕೆ ನೀಡುವ ಮೂಲಕ ಮಾಹಿತಿ ನೀಡಿದೆ. ಈ ಹೇಳಿಕೆಯಲ್ಲಿ, ಬ್ರಾವೋ, “ನಾನು ಈ ಹೊಸ ಪ್ರಯಾಣಕ್ಕಾಗಿ ಉತ್ಸುಕನಾಗಿದ್ದೇನೆ. ನಾನು ಬೌಲರ್‌ಗಳೊಂದಿಗೆ ಕೆಲಸ ಮಾಡಲು ಇಷ್ಟಪಡುತ್ತೇನೆ. ಹೀಗಾಗಿ ಈ ಪಾತ್ರದ ಬಗ್ಗೆ ನಾನು ಉತ್ಸುಕನಾಗಿದ್ದೇನೆ. ಆಟಗಾರನಿಂದ ಕೋಚ್‌ನವರೆಗಿನ ಪ್ರಯಾಣದಲ್ಲಿ, ನಾನು ಏನನ್ನೂ ಬದಲಾಯಿಸಬೇಕಾಗಿಲ್ಲ ಎಂದು ನಾನು ಭಾವಿಸುತ್ತೇನೆ. ಏಕೆಂದರೆ ನಾನು ಆಡುವಾಗಲೂ ಬೌಲರ್‌ಗಳೊಂದಿಗೆ ಕೆಲಸ ಮಾಡುತ್ತಿದ್ದೆ. ಒಂದೇ ವ್ಯತ್ಯಾಸವೆಂದರೆ ನಾನು ಇನ್ನು ಮುಂದೆ ಮಿಡ್-ಆನ್ ಅಥವಾ ಮಿಡ್-ಆಫ್‌ನಲ್ಲಿ ನಿಲ್ಲುವುದಿಲ್ಲ ಎಂದಿದ್ದಾರೆ.

andolana

Recent Posts

ಮೇಕೆದಾಟು ಯೋಜನೆಗೆ ಶೀಘ್ರದಲ್ಲೇ ಕೇಂದ್ರದಿಂದ ಅನುಮತಿ ಸಿಗುವ ಸಾಧ್ಯತೆ: ಸಚಿವ ರಾಮಲಿಂಗಾರೆಡ್ಡಿ

ನವದೆಹಲಿ: ಮೇಕೆದಾಟು ಯೋಜನೆಗೆ ಇರುವ ಅಡೆತಡೆಗಳು ನಿವಾರಣೆಯಾಗುತ್ತಿದ್ದು, ಶೀಘ್ರದಲ್ಲೇ ಕಾಮಗಾರಿಗೆ ಚಾಲನೆ ನೀಡುವ ಸಾಧ್ಯತೆ ಇದೆ ಎಂದು ಕರ್ನಾಟಕದ ಜಲಸಂಪನ್ಮೂಲ…

33 mins ago

ಉಡುಪಿ, ಉತ್ತರ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆ ಮುನ್ಸೂಚನೆ

ಬೆಂಗಳೂರು: ಮುಂದಿನ 24 ಗಂಟೆ ಅವಧಿಯಲ್ಲಿ ಕರಾವಳಿ ಭಾಗದಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.…

47 mins ago

ಅಪ್ರಾಪ್ತರನ್ನು ಬಿಡುಗಡೆ ಮಾಡಿ, ಕ್ರಿಮಿನಲ್‌ಗಳ ವಿರುದ್ಧ ತನಿಖೆ ನಡೆಸಿ: ಸುಪ್ರೀಂಕೋರ್ಟ್‌

ನವದೆಹಲಿ: ಜಂತರ್‌ ಮಂತರ್‌ ಹಾಗೂ ದೇಶದ ವಿವಿಧ ಭಾಗಗಳಲ್ಲಿ ವಿದ್ಯಾರ್ಥಿಗಳು ನಡೆಸಿದ ಪ್ರತಿಭಟನೆಗಳ ಮೇಲೆ ನಡೆದ ಪೊಲೀಸರ ದೌರ್ಜನ್ಯ ಮತ್ತು…

53 mins ago

ತಮಿಳುನಾಡಿಗೆ ನಿತ್ಯ 3500 ಕ್ಯೂಸೆಕ್ಸ್‌ ನೀರು ಬಿಡಲು CWRC ಆದೇಶ: ಮಂಡ್ಯದಲ್ಲಿ ಭುಗಿಲೆದ್ದ ಆಕ್ರೋಶ

ಮಂಡ್ಯ: ಕಾವೇರಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ ಕಾವೇರಿ ನೀರು ನಿಯಂತ್ರಣ ಸಮಿತಿಯು ತಮಿಳುನಾಡಿಗೆ ನಿತ್ಯ 3500 ಕ್ಯೂಸೆಕ್‌ನಂತೆ 15…

2 hours ago

ಓದುಗರ ಪತ್ರ: ಭ್ರಷ್ಟಾಚಾರ ಬಗ್ಗು ಬಡಿಯಲು ಸಿಎಂ ಮುಂದಾಗುವರೇ?

ರಾಜ್ಯದಲ್ಲಿ ಭ್ರಷ್ಟಾಚಾರ ನಿಯಂತ್ರಣಕ್ಕಾಗಿ ಲೋಕಾಯುಕ್ತರು ಆಗಾಗ್ಗೆ ದಾಳಿ ನಡೆಸುವುದು ಮಾಧ್ಯಮಗಳಲ್ಲಿ ವರದಿಯಾಗುತ್ತವೆ. ಈಗಿನ ಪತ್ರಿಕಾ ವರದಿಗಳ ಪ್ರಕಾರ, ಮೂರೂವರೆ ವರ್ಷಗಳಲ್ಲಿ…

11 hours ago

ಓದುಗರ ಪತ್ರ: ಸದ್ದು ಮಾಡದ ತುಪ್ಪ, ಬೆಣ್ಣೆ ಬೆಲೆ ಏರಿಕೆ!

ನಂದಿನಿ ಉತ್ಪನ್ನಗಳಾದ, ತುಪ್ಪ ಕೆ.ಜಿಗೆ ರೂ.೧೫ ಮತ್ತು ಬೆಣ್ಣೆ ಕೆ.ಜಿಗೆ ರೂ.೫೦ ಅನ್ನು ಇದೇ ತಿಂಗಳ ೨೪ ರಿಂದಲೇ ಗ್ರಾಹಕರಿಗೆ…

11 hours ago