ಕ್ರೀಡೆ

ಅತ್ಯಾಚಾರ ಆರೋಪ: ನೇಪಾಳ ಮಾಜಿ ಆಟಗಾರ ಸಂದೀಪ್‌ ಲಮಿಚಾನೆ ದೋಷಿ!

ಕಠ್ಮಂಡು: ನೇಪಾಳ ಕ್ರಿಕೆಟ್ ತಂಡದ ಮಾಜಿ ನಾಯಕ ಸಂದೀಪ್ ಲಮಿಚಾನೆ ವಿರುದ್ಧ ಅಪ್ರಾಪ್ತ ಬಾಲಕೀಯ ಮೇಲಿನ ಅತ್ಯಾಚಾರ ಪ್ರಕರಣದಲ್ಲಿ ಆರೋಪಿ ಎಂದು ಕಠ್ಮಂಡು ನ್ಯಾಯಾಲಯ ತೀರ್ಪು ನೀಡಿದೆ.

ನೇಪಾಳದ ಸ್ಟಾರ್‌ ಆಟಗಾರ ಸಂದೀಪ್ ಲಾಮಿಚಾನೆ ವಿರುದ್ಧ ಸಂತ್ರಸ್ತ ಬಾಲಕಿ ಕಳೆದ ಸೆಪ್ಟೆಂಬರ್‌ ೬ ರಂದು ಗೊಶಾಲಾ ಮೊಟ್ರೊಪಾಲಿಟಿನ್‌ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಆಗಸ್ಟ್‌ 21 ರಂದು ತನ್ನೊಂದಿಗೆ ಕಠ್ಮಂಡುವಿನ ಸುತ್ತಮುತ್ತಾ ಓಡಾಡಿ ಹೋಟೆಲ್‌ ಕರೆದ್ಯೊಯ್ದು ಅತ್ಯಾಚಾರ ಎಸಗಿದ್ದ ಎಂದು ಉಲ್ಲೇಖಿಸಿದ್ದಳು. ಅದರಂತೆ ಬಂಧನಕ್ಕೆ ಒಳಗಾಗಿದ್ದ ಲಮಿಚಾನೆ ಜನವರಿಯಲ್ಲಿ ಜಾಮೀನಿನ ಮೇಲೆ ಬಿಡುಗಡೆಯಾಗಿದ್ದ.

ಈ ಪ್ರಕರಣ ಸಂಬಂಧ ನ್ಯಾ. ಶಿಶಿರ್‌ ರಾಜ್‌ ಧಾಕಲ್‌ ಅವರಿದ್ದ ಏಕಸದಸ್ಯ ಪೀಠ ಶುಕ್ರವಾರ ಲಮಿಚಾನೆ ದೋಷಿಯೆಂದು  ತೀರ್ಪು ನೀಡಿದೆ. ಮತ್ತು ಮುಂದಿನ ವಿಚಾರಣೆಯಲ್ಲಿ ಶಿಕ್ಷೆ ಪ್ರಮಾಣ ಪ್ರಕಟಿಸುವುದಾಗಿ ಕೋರ್ಟ್‌ ತಿಳಿಸಿದೆ ಎಂದು ʼದಿ ಕಠ್ಮಂಡು ಪೋಸ್ಟ್‌ʼ ವರದಿ ಮಾಡಿದೆ.

2022 ರಲ್ಲಿ ಈತನ ವಿರುದ್ಧ ಅತ್ಯಾಚಾರ ಆರೋಪ ಕಂಡುಬಂದ ಹಿನ್ನಲೆ ನೇಪಾಳ ಕ್ರಿಕೆಟ್ ತಂಡದ ನಾಯಕ ಸ್ಥಾನದಿಂದ ಅಮಾನತುಗೊಳಿಸಲಾಗಿತ್ತು. ಸಂದೀಪ್ 2018 ರಲ್ಲಿ ಡೆಲ್ಲಿ ಪರ ಪಾದಾರ್ಪಣೆ ಮಾಡುವ ಮೂಲಕ ಟಿ20 ಲೀಗ್ ನಲ್ಲಿ ಭಾಗಿಯಾಗಿದ್ದ ಮೊಲದ ನೇಪಾಳ ಕ್ರಿಕೆಟಿಗ ಎನಿಸಿಕೊಂಡಿದ್ದ.

andolanait

Recent Posts

ಕಾವೇರಿ ನದಿಗಿಳಿದ ನಾಗಲ್ಯಾಂಡ್ ಮೂಲದ ಇಬ್ಬರು ಯುವಕರು ನಾಪತ್ತೆ

ಕುಶಾಲನಗರ: ಕಾವೇರಿ ನದಿಗೆ ಇಳಿದ ನಾಗಲ್ಯಾಂಡ್ ಮೂಲದ ಇಬ್ಬರು ಯುವಕರು ನಾಪತ್ತೆಯಾಗಿರುವ ಘಟನೆ ಕುಶಾಲನಗರ ರಸೂಲ್ ಲೇಔಟ್ ಬಳಿ ಬುಧವಾರ…

5 hours ago

ಪಾಕ್‌ನಿಂದ ಆಫ್ಗಾನಿಸ್ತಾನದ ಮೇಲೆ ವಾಯು ದಾಳಿ ; 13 ಮಂದಿ ಸಾವು; 14 ಮಂದಿಗೆ ಗಾಯ

ಕಾಬೂಲ್ : ಪಾಕಿಸ್ತಾನವು ಬುಧವಾರ ನಡೆಸಿದ ಹೊಸ ವಾಯುದಾಳಿಗಳಲ್ಲಿ ಕನಿಷ್ಠ 13 ಮಂದಿ ಸಾವನ್ನಪ್ಪಿದ್ದಾರೆ ಎಂದು ಅಫ್ಘಾನಿಸ್ತಾನ ತಿಳಿಸಿದೆ. ಪಾಕ್…

8 hours ago

ಭಾರತಿರಾಜ್‌ ಅಂತಿಮ ದರ್ಶನ ಪಡೆದ ರಜನಿ, ಕಮಲ್‌, ಸಿ.ಎಂ.ವಿಜಯ್‌

ಚೆನ್ನೈ : ತಮಿಳಿನ ಖ್ಯಾತ ನಿರ್ದೇಶಕ, ಪದ್ಮಶ್ರೀ ಭಾರತಿರಾಜ್ ನಿಧನಕ್ಕೆ ಹೆಸರಾಂತ ನಟರು ಕಂಬನಿ ಮಿಡಿದಿದ್ದಾರೆ. ಅವರ ಅಂತಿಮ ದರ್ಶನಕ್ಕೆ…

10 hours ago

ಎಚ್.ಸಿ.ಮಹದೇವಪ್ಪನವರಿಗೆ ಸಚಿವ ಸ್ಥಾನಕ್ಕೆ ದಲಿತ ಸಂಘಟನೆಗಳ ಆಗ್ರಹ

ವರುಣ : ಮಾಜಿ ಸಚಿವ ಡಾ.ಎಚ್.ಸಿ.ಮಹದೇವಪ್ಪನವರಿಗೆ ಸಚಿವ ಸ್ಥಾನ ನೀಡಬೇಕು ಎಂದು ವರುಣ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ದಲಿತ ಸಂಘಟನೆಗಳ…

10 hours ago

ಕೇಂದ್ರದ ಮೇಲೆ ಗೂಬೆ ಕೂರಿಸುವ ಕೆಲಸ ಬಿಟ್ಟು ಬೇರೇನೂ ಮಾಡಲಿಲ್ಲ ಸಿದ್ದರಾಮಯ್ಯ: ಟೀಕೆ

ಮೈಸೂರು : ರಾಜ್ಯದ ನೂತನ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹಾಗೂ ಸಚಿವರು ಕೇಂದ್ರ ಸರ್ಕಾರದೊಂದಿಗೆ ಸೌಹಾರ್ದದಿಂದ ಸಂಪರ್ಕ ಸಾಧಿಸಿ ರಾಜ್ಯದ ಅಭಿವೃದ್ಧಿ…

10 hours ago

ರಾಜ್ಯಸಭಾ ಸ್ಥಾನ ಕೇಳಿಲ್ಲ, ಚರ್ಚೆಯೂ ನಡೆಸಿಲ್ಲ: ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ

ಬೆಂಗಳೂರು: ರಾಜ್ಯಸಭಾ ಸ್ಥಾನಕ್ಕೆ ಟಿಕೆಟ್‌ ತಪ್ಪಿದೆ ಎಂಬ ಕಾರಣದಿಂದ ನನ್ನ ಮತ್ತು ಪ್ರಧಾನಿ ನರೇಂದ್ರ ಮೋದಿ ಅವರ ನಡುವಿನ ಸಂಬಂಧ…

14 hours ago