ಕ್ರೀಡೆ

ಲಂಕೇಶ್ ಅಮೋಘ ಬ್ಯಾಟಿಂಗ್ ಪ್ರದರ್ಶನ: ಮೈಸೂರು ವಾರಿಯರ್ಸ್‌ಗೆ ಭರ್ಜರಿ ಜಯ

ಬೆಂಗಳೂರು : ಲಂಕೇಶ್‌ ಅವರ ಅಮೋಘ ಬ್ಯಾಟಿಂಗ್‌ ಬಲದಿಂದ ಮಹಾರಾಜ ಟ್ರೋಫಿ 22ನೇ ಪಂದ್ಯದಲ್ಲಿ ಮೈಸೂರು ವಾರಿಯರ್ಸ್ ತಂಡವು ಮಂಗಳೂರು ಡ್ರ್ಯಾಗನ್‌ ತಂಡವನ್ನು 7 ವಿಕೆಟ್‌ಗಳಿಂದ ಮಣಿಸಿತು.

ಮಂಗಳೂರು ಡ್ರ್ಯಾಗನ್‌ ತಂಡವು ನೀಡಿದ 140 ರನ್‌ಗಳ ಗುರಿಯನ್ನು ಬೆನ್ನಟ್ಟಿದ ವಾರಿಯರ್ಸ್‌ ತಂಡ ಕೇವಲ 16.3 ಓವರ್‌ಗಳಲ್ಲಿ 3 ವಿಕೆಟ್‌ ಕಳೆದುಕೊಂಡು ಗುರಿ ಮುಟ್ಟಿತು. ಆಮೂಲಕ ಟೂರ್ನಿಯಲ್ಲಿ 5ನೇ ಗೆಲುವು ದಾಖಲಿಸಿ ಪಾಯಿಂಟ್‌ ಪಟ್ಟಿಯಲ್ಲಿ ಎರಡನೇ ಸ್ಥಾನಕ್ಕೇರಿತು.

ಟಾಸ್‌ ಸೋತು ಮೊದಲು ಬ್ಯಾಟ್‌ ಮಾಡಿದ ಮಂಗಳೂರು ತಂಡ, ಮೊನಿಶ್ ರೆಡ್ಡಿ (3/42) ಮತ್ತು ಜಗದೀಶ ಸುಚಿತ್ (2-24) ನೇತೃತ್ವದ ಶಿಸ್ತಿನ ಬೌಲಿಂಗ್‌ಗೆ ಮಂಡಿಯೂರಿತು. ರೋಹನ್‌ ಪಾಟೀಲ್‌ 52(42) ಹೊರತಾಗಿ ಮತ್ತಾರಿಂದಲೂ ನಿರೀಕ್ಷಿತ ಪ್ರದರ್ಶನ ಕಂಡುಬರಲಿಲ್ಲ. ನಾಯಕ ಗೌತಮ್‌ 15(14), ಅನೀಶ್ವರ್‌ ಗೌತಮ್‌ 11(13) ತಂಡಕ್ಕೆ ಆಸರೆಯಾದರು. ಅಂತಿಮವಾಗಿ ನಿಗದಿತ 20 ಓವರ್‌ಗಳಲ್ಲಿ  8 ವಿಕೆಟ್‌ ಕಳೆದುಕೊಂಡು 140 ರನ್‌ ಗಳಿಸಲಷ್ಟೇ ಶಕ್ತರಾದರು.

ಈ ಮೊತ್ತವನ್ನು ಬೆನ್ನಟ್ಟಿದ ಮೈಸೂರು ವಾರಿಯರ್ಸ್‌ ತಂಡವು ಉತ್ತಮ ಆರಂಭ ಪಡೆಯಲಿಲ್ಲ. ಸಮರ್ಥ 6(5) ಮತ್ತು ಭರತ್‌ ಧುರಿ 10(9) ಬೇಗ ಪೆವಿಲಿಯನ್‌ ಸೇರಿದರು. ನಾಯಕ ಕರುಣ್‌ ನಾಯರ್‌ 43(25) ಸಮಯೋಚಿತ ಆಟ ಹಾಗೂ ಲಂಕೇಶ್‌ ಕೆ.ಎಸ್‌ 68(45) ಅಮೋಘ ಬ್ಯಾಟಿಂಗ್‌ ಪ್ರದರ್ಶನ ಮೂಲಕ ತಂಡವನ್ನು ಗೆಲುವಿನ ದಡ ಸೇರಿಸಿದರು. ಅಂತಿಮವಾಗಿ ಮೈಸೂರು ವಾರಿಯರ್ಸ್‌ ತಂಡವು 7 ವಿಕೆಟ್‌ಗಳ ಭರ್ಜರಿ ಜಯ ದಾಖಲಿಸಿತು.

ಸ್ಕೋರ್‌ ಬೋರ್ಡ್‌: 

ಮಂಗಳೂರು ಡ್ರಾಗನ್ಸ್: 20 ಓವರ್‌ಗಳಲ್ಲಿ 140-8: ರೋಹನ್ ಪಾಟೀಲ್ 52 (42), ಕೃಷ್ಣಪ್ಪ ಗೌತಮ್ 15(14), ಅನಿರುದ್ಧ ಜೋಶಿ 13(17), ಮೋನಿಶ್ ರೆಡ್ಡಿ 3-42, ಜಗದೀಶ ಸುಚಿತ್ 2-24, ಶ್ರೀಶ ಆಚಾರ್ 2-24.

ಮೈಸೂರು ವಾರಿಯರ್ಸ್: 16.3 ಓವರ್‌ಗಳಲ್ಲಿ 141-3: ಕೆ.ಎಸ್. ಲಂಕೇಶ್ 68*(45) , ಕರುಣ್ ನಾಯರ್ 43 (25), ಶೋಯಬ್ ಮ್ಯಾನೇಜರ್ 11 (15), ಎಂ.ಜಿ. ನವೀನ್ 1-12, ಪಾರಸ್ ಆರ್ಯ 1-35

ಪಂದ್ಯ ಶ್ರೇಷ್ಠ : ಕೆ.ಎಸ್‌.ಲಂಕೇಶ್‌

andolanait

Recent Posts

ಓದುಗರ ಪತ್ರ: ಕಾನೂನು ಎಷ್ಟರ ಮಟ್ಟಿಗೆ ಕೆಲಸ ಮಾಡುತ್ತೆ?

ದ್ವೇಷ ಭಾಷಣ ಮತ್ತು ದ್ವೇಷ ಅಪರಾಧಗಳ ವಿಧೇಯಕವನ್ನು ರಾಜ್ಯ ಕಾಂಗ್ರೆಸ್ ಸರ್ಕಾರ ಡಿ.೧೮ರಂದು ಬೆಳಗಾವಿ ಸುವರ್ಣ ವಿಧಾನಸೌಧದಲ್ಲಿ ನಡೆಯುತ್ತಿರುವ ಅಧಿವೇಶನದಲ್ಲಿ…

20 mins ago

ಓದುಗರ ಪತ್ರ:  ಸಾಮಾಜಿಕ ಬಹಿಷ್ಕಾರ ನಿಷೇಧ ಕಾನೂನು ಸ್ವಾಗತಾರ್ಹ

ರಾಜ್ಯದಲ್ಲಿ ‘ಸಾಮಾಜಿಕ ಬಹಿಷ್ಕಾರ ನಿಷೇಧ ’ ಕಾನೂನನ್ನು ಜಾರಿಗೊಳಿಸಲು ಮುಂದಾಗಿರುವ ರಾಜ್ಯಸರ್ಕಾರದ ಕ್ರಮ ಶ್ಲಾಘನೀಯ. ಸ್ವಾತಂತ್ರ್ಯ, ಸಮಾನತೆ, ಭ್ರಾತೃತ್ವ, ಸಾರ್ವಭೌಮತೆ,…

23 mins ago

ಓದುಗರ ಪತ್ರ:  ‘ರಾಮ ಜಪ’ ಮಸೂದೆ ತಿರಸ್ಕರಿಸಿ

ಬುದ್ಧನ ಚಿಂತನೆಗಳನ್ನು ಭಾರತದಿಂದ ಓಡಿಸಿದಂತೆ, ಮಹಾತ್ಮ ಗಾಂಧೀಜಿಯವರನ್ನು ಭಾರತೀಯರ ಮನಸ್ಸಿನಿಂದಿಂದಲೇ ತೆಗೆದುಹಾಕುವ ಬಿಜೆಪಿ ಹಾಗೂ ಕೇಂದ್ರ ಸರ್ಕಾರದ ಕುತಂತ್ರ ಬಯಲಾಗಿದೆ.…

26 mins ago

‘ಮಾದಾರಿ ಮಾದಯ್ಯ’ ವರ್ತಮಾನದ ಅವಶ್ಯ ರಂಗ ಪ್ರಯೋಗ

ಮಹದೇವ ಶಂಕನಪುರ ಎಚ್.ಎಸ್.ಶಿವಪ್ರಕಾಶ್ ಅವರ ನಾಟಕ ‘ಮಾದಾರಿ ಮಾದಯ್ಯ’ ಕಳೆದ ೩೫ ವರ್ಷಗಳಿಂದಲೂ ಕನ್ನಡ ನೆಲದಲ್ಲಿ ಅಭಿನಯಿಸಲ್ಪಡುತ್ತಿದೆ. ಮೊದಲಿಗೆ ೧೯೯೦ರಲ್ಲಿ…

1 hour ago

ಅಯೋಧ್ಯೆಯಲ್ಲಿ ಗಣಪತಿ ಆಶ್ರಮ ಶಾಖೆ ಉದ್ಘಾಟನಾ ಕಾರ್ಯಕ್ರಮ

ಮೈಸೂರು: ದೇಶ-ವಿದೇಶಗಳಲ್ಲಿ ಜನ ಸಮೂಹವನ್ನು ಹೊಂದಿರುವ ಅವಧೂತ ಶ್ರೀ ಗಣಪತಿ ಸಚ್ಚಿದಾನಂದ ಆಶ್ರಮದ ನೂತನ ಶಾಖೆಯನ್ನು ಉತ್ತರ ಪ್ರದೇಶದ ಅಯೋಧ್ಯೆಯಲ್ಲಿ…

4 hours ago

ಜನವರಿ.5ಕ್ಕೆ ಮೈಸೂರು ವಿವಿ 106ನೇ ಘಟಿಕೋತ್ಸವ

ಕುಲಪತಿ ಲೋಕನಾಥ್ ಅಧ್ಯಕ್ಷತೆಯಲ್ಲಿ ನಡೆದ ಸಿಂಡಿಕೇಟ್ ಸಭೆಯಲ್ಲಿ ತೀರ್ಮಾನ ಮೈಸೂರು: ಮೈಸೂರು ವಿಶ್ವವಿದ್ಯಾನಿಲಯದ ೧೦೬ನೇ ಘಟಿಕೋತ್ಸವವನ್ನು ಜ.೫ರಂದುನಡೆಸಲು ತೀರ್ಮಾನಿಸಲಾಗಿದ್ದು, ಘಟಿಕೋತ್ಸವ…

4 hours ago