ಕ್ರೀಡೆ

ಲಂಕೇಶ್ ಅಮೋಘ ಬ್ಯಾಟಿಂಗ್ ಪ್ರದರ್ಶನ: ಮೈಸೂರು ವಾರಿಯರ್ಸ್‌ಗೆ ಭರ್ಜರಿ ಜಯ

ಬೆಂಗಳೂರು : ಲಂಕೇಶ್‌ ಅವರ ಅಮೋಘ ಬ್ಯಾಟಿಂಗ್‌ ಬಲದಿಂದ ಮಹಾರಾಜ ಟ್ರೋಫಿ 22ನೇ ಪಂದ್ಯದಲ್ಲಿ ಮೈಸೂರು ವಾರಿಯರ್ಸ್ ತಂಡವು ಮಂಗಳೂರು ಡ್ರ್ಯಾಗನ್‌ ತಂಡವನ್ನು 7 ವಿಕೆಟ್‌ಗಳಿಂದ ಮಣಿಸಿತು.

ಮಂಗಳೂರು ಡ್ರ್ಯಾಗನ್‌ ತಂಡವು ನೀಡಿದ 140 ರನ್‌ಗಳ ಗುರಿಯನ್ನು ಬೆನ್ನಟ್ಟಿದ ವಾರಿಯರ್ಸ್‌ ತಂಡ ಕೇವಲ 16.3 ಓವರ್‌ಗಳಲ್ಲಿ 3 ವಿಕೆಟ್‌ ಕಳೆದುಕೊಂಡು ಗುರಿ ಮುಟ್ಟಿತು. ಆಮೂಲಕ ಟೂರ್ನಿಯಲ್ಲಿ 5ನೇ ಗೆಲುವು ದಾಖಲಿಸಿ ಪಾಯಿಂಟ್‌ ಪಟ್ಟಿಯಲ್ಲಿ ಎರಡನೇ ಸ್ಥಾನಕ್ಕೇರಿತು.

ಟಾಸ್‌ ಸೋತು ಮೊದಲು ಬ್ಯಾಟ್‌ ಮಾಡಿದ ಮಂಗಳೂರು ತಂಡ, ಮೊನಿಶ್ ರೆಡ್ಡಿ (3/42) ಮತ್ತು ಜಗದೀಶ ಸುಚಿತ್ (2-24) ನೇತೃತ್ವದ ಶಿಸ್ತಿನ ಬೌಲಿಂಗ್‌ಗೆ ಮಂಡಿಯೂರಿತು. ರೋಹನ್‌ ಪಾಟೀಲ್‌ 52(42) ಹೊರತಾಗಿ ಮತ್ತಾರಿಂದಲೂ ನಿರೀಕ್ಷಿತ ಪ್ರದರ್ಶನ ಕಂಡುಬರಲಿಲ್ಲ. ನಾಯಕ ಗೌತಮ್‌ 15(14), ಅನೀಶ್ವರ್‌ ಗೌತಮ್‌ 11(13) ತಂಡಕ್ಕೆ ಆಸರೆಯಾದರು. ಅಂತಿಮವಾಗಿ ನಿಗದಿತ 20 ಓವರ್‌ಗಳಲ್ಲಿ  8 ವಿಕೆಟ್‌ ಕಳೆದುಕೊಂಡು 140 ರನ್‌ ಗಳಿಸಲಷ್ಟೇ ಶಕ್ತರಾದರು.

ಈ ಮೊತ್ತವನ್ನು ಬೆನ್ನಟ್ಟಿದ ಮೈಸೂರು ವಾರಿಯರ್ಸ್‌ ತಂಡವು ಉತ್ತಮ ಆರಂಭ ಪಡೆಯಲಿಲ್ಲ. ಸಮರ್ಥ 6(5) ಮತ್ತು ಭರತ್‌ ಧುರಿ 10(9) ಬೇಗ ಪೆವಿಲಿಯನ್‌ ಸೇರಿದರು. ನಾಯಕ ಕರುಣ್‌ ನಾಯರ್‌ 43(25) ಸಮಯೋಚಿತ ಆಟ ಹಾಗೂ ಲಂಕೇಶ್‌ ಕೆ.ಎಸ್‌ 68(45) ಅಮೋಘ ಬ್ಯಾಟಿಂಗ್‌ ಪ್ರದರ್ಶನ ಮೂಲಕ ತಂಡವನ್ನು ಗೆಲುವಿನ ದಡ ಸೇರಿಸಿದರು. ಅಂತಿಮವಾಗಿ ಮೈಸೂರು ವಾರಿಯರ್ಸ್‌ ತಂಡವು 7 ವಿಕೆಟ್‌ಗಳ ಭರ್ಜರಿ ಜಯ ದಾಖಲಿಸಿತು.

ಸ್ಕೋರ್‌ ಬೋರ್ಡ್‌: 

ಮಂಗಳೂರು ಡ್ರಾಗನ್ಸ್: 20 ಓವರ್‌ಗಳಲ್ಲಿ 140-8: ರೋಹನ್ ಪಾಟೀಲ್ 52 (42), ಕೃಷ್ಣಪ್ಪ ಗೌತಮ್ 15(14), ಅನಿರುದ್ಧ ಜೋಶಿ 13(17), ಮೋನಿಶ್ ರೆಡ್ಡಿ 3-42, ಜಗದೀಶ ಸುಚಿತ್ 2-24, ಶ್ರೀಶ ಆಚಾರ್ 2-24.

ಮೈಸೂರು ವಾರಿಯರ್ಸ್: 16.3 ಓವರ್‌ಗಳಲ್ಲಿ 141-3: ಕೆ.ಎಸ್. ಲಂಕೇಶ್ 68*(45) , ಕರುಣ್ ನಾಯರ್ 43 (25), ಶೋಯಬ್ ಮ್ಯಾನೇಜರ್ 11 (15), ಎಂ.ಜಿ. ನವೀನ್ 1-12, ಪಾರಸ್ ಆರ್ಯ 1-35

ಪಂದ್ಯ ಶ್ರೇಷ್ಠ : ಕೆ.ಎಸ್‌.ಲಂಕೇಶ್‌

andolanait

Recent Posts

ಮಂಡ್ಯದಲ್ಲಿ ಸಿಇಟಿ ಗದ್ದಲ: ವಿದ್ಯಾರ್ಥಿನಿಯರ ಓಲೆ ಬಿಚ್ಚಿಸಿದ ಪರಿವೀಕ್ಷಕರು

ಮಂಡ್ಯ: ಮಂಡ್ಯ ಜಿಲ್ಲೆಯ ಕೆ.ಆರ್.ಪೇಟೆಯಲ್ಲಿ ಇಂದು ಸಿಇಟಿ ಪರೀಕ್ಷೆ ಹಿನ್ನೆಲೆ ರಾಜ್ಯ ಸರ್ಕಾರದ ವಸ್ತ್ರ ಸಂಹಿತೆ ಕಡ್ಡಾಯವಾಗಿ ಜಾರಿಗೊಂಡಿದೆ. ಪರೀಕ್ಷೆಗೆ…

14 mins ago

ಮೈಸೂರಿನಲ್ಲಿ ಮೀನು ಮಾರಾಟ ಮಳಿಗೆಗೆ ಬೆಂಕಿ: ಅಂಗಡಿ ಸಾಮಾಗ್ರಿಗಳು ಸಂಪೂರ್ಣ ಸುಟ್ಟು ಕರಕಲು

ಮೈಸೂರು: ಮೈಸೂರಿನಲ್ಲಿ ಮೀನು ಮಾರಾಟ ಮಳಿಗೆಗೆ ಆಕಸ್ಮಿಕ ಬೆಂಕಿ ಕಾಣಿಸಿಕೊಂಡ ಪರಿಣಾಮ ಅಂಗಡಿ ಸಾಮಾಗ್ರಿಗಳು ಸಂಪೂರ್ಣ ಸುಟ್ಟು ಕರಕಲಾಗಿರುವ ಘಟನೆ…

36 mins ago

ಪರಿಶಿಷ್ಟ ಜಾತಿಯೊಳಗೆ ಒಳಮೀಸಲಾತಿ | ನಾಳೆ ವಿಶೇಷ ಸಂಪುಟ ಸಭೆ

ಬೆಂಗಳೂರು : ಪರಿಶಿಷ್ಟ ಜಾತಿಯೊಳಗೆ ಒಳಮೀಸಲಾತಿ ಕಲ್ಪಿಸುವ ಉದ್ದೇಶಕ್ಕಾಗಿ ನಾಳೆ(ಏ.24)ವಿಶೇಷ ಸಚಿವ ಸಂಪುಟ ಸಭೆ ನಿಗದಿಯಾಗಿದೆ. ವಿಧಾನಸೌಧದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ…

50 mins ago

ವಿದೇಶಿ ಮಹಿಳೆ ಮೇಲೆ ಅತ್ಯಾಚಾರ ಆರೋಪ: ಕುಟ್ಟ ಖಾಸಗಿ ಹೋಂಸ್ಟೇ ಪರವಾನಗಿ ರದ್ದು

ಪೊನ್ನಂಪೇಟೆ: ಕೊಡಗು ಜಿಲ್ಲೆ ಪೊನ್ನಂಪೇಟೆ ತಾಲ್ಲೂಕಿನ ಕುಟ್ಟ ಗ್ರಾಮದಲ್ಲಿ ವಿದೇಶಿ ಮಹಿಳೆ ಅತ್ಯಾಚಾರ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಕುಟ್ಟ ಖಾಸಗಿ…

1 hour ago

ಮಗು ಸಾವಿಗೆ ಇರುವೆ ಕಚ್ಚಿರುವುದು ಕಾರಣವಲ್ಲ: ಚಲುವಾಂಬ ಆಸ್ಪತ್ರೆ ವೈದ್ಯರಿಂದ ಸ್ಪಷ್ಟನೆ

ಮೈಸೂರು: ಇಲ್ಲಿನ ಚಲುವಾಂಬ ಆಸ್ಪತ್ರೆಯಲ್ಲಿ ನವಜಾತ ಶಿಶು ಇರುವೆ ಕಚ್ಚಿ ಸಾವನ್ನಪ್ಪಿರುವ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಆಸ್ಪತ್ರೆ ವೈದ್ಯಾಧಿಕಾರಿ ಡಾ.ಲಕ್ಷ್ಮಿಕಾಂತ್…

1 hour ago

ಮೆದಗನಾಣೆ ಗ್ರಾಮಸ್ಥರ ಬವಣೆಗೆ ಕೊನೆ ಎಂದು?

ಸಮರ್ಪಕ ರಸ್ತೆ ಇಲ್ಲ, ವಾಹನ ಸೌಲಭ್ಯವಿಲ್ಲ, ಶುದ್ಧ ನೀರಿಗೂ ತತ್ವಾರ; ಗ್ರಾಮಕ್ಕೆ ಮೂಲಸೌಕರ್ಯ ಕಲ್ಪಿಸಲು ಆಗ್ರಹ ಮಹಾದೇಶ್ ಎಂ.ಗೌಡ ಹನೂರು:…

1 hour ago