ಕ್ರೀಡೆ

ಲಂಕೇಶ್ ಅಮೋಘ ಬ್ಯಾಟಿಂಗ್ ಪ್ರದರ್ಶನ: ಮೈಸೂರು ವಾರಿಯರ್ಸ್‌ಗೆ ಭರ್ಜರಿ ಜಯ

ಬೆಂಗಳೂರು : ಲಂಕೇಶ್‌ ಅವರ ಅಮೋಘ ಬ್ಯಾಟಿಂಗ್‌ ಬಲದಿಂದ ಮಹಾರಾಜ ಟ್ರೋಫಿ 22ನೇ ಪಂದ್ಯದಲ್ಲಿ ಮೈಸೂರು ವಾರಿಯರ್ಸ್ ತಂಡವು ಮಂಗಳೂರು ಡ್ರ್ಯಾಗನ್‌ ತಂಡವನ್ನು 7 ವಿಕೆಟ್‌ಗಳಿಂದ ಮಣಿಸಿತು.

ಮಂಗಳೂರು ಡ್ರ್ಯಾಗನ್‌ ತಂಡವು ನೀಡಿದ 140 ರನ್‌ಗಳ ಗುರಿಯನ್ನು ಬೆನ್ನಟ್ಟಿದ ವಾರಿಯರ್ಸ್‌ ತಂಡ ಕೇವಲ 16.3 ಓವರ್‌ಗಳಲ್ಲಿ 3 ವಿಕೆಟ್‌ ಕಳೆದುಕೊಂಡು ಗುರಿ ಮುಟ್ಟಿತು. ಆಮೂಲಕ ಟೂರ್ನಿಯಲ್ಲಿ 5ನೇ ಗೆಲುವು ದಾಖಲಿಸಿ ಪಾಯಿಂಟ್‌ ಪಟ್ಟಿಯಲ್ಲಿ ಎರಡನೇ ಸ್ಥಾನಕ್ಕೇರಿತು.

ಟಾಸ್‌ ಸೋತು ಮೊದಲು ಬ್ಯಾಟ್‌ ಮಾಡಿದ ಮಂಗಳೂರು ತಂಡ, ಮೊನಿಶ್ ರೆಡ್ಡಿ (3/42) ಮತ್ತು ಜಗದೀಶ ಸುಚಿತ್ (2-24) ನೇತೃತ್ವದ ಶಿಸ್ತಿನ ಬೌಲಿಂಗ್‌ಗೆ ಮಂಡಿಯೂರಿತು. ರೋಹನ್‌ ಪಾಟೀಲ್‌ 52(42) ಹೊರತಾಗಿ ಮತ್ತಾರಿಂದಲೂ ನಿರೀಕ್ಷಿತ ಪ್ರದರ್ಶನ ಕಂಡುಬರಲಿಲ್ಲ. ನಾಯಕ ಗೌತಮ್‌ 15(14), ಅನೀಶ್ವರ್‌ ಗೌತಮ್‌ 11(13) ತಂಡಕ್ಕೆ ಆಸರೆಯಾದರು. ಅಂತಿಮವಾಗಿ ನಿಗದಿತ 20 ಓವರ್‌ಗಳಲ್ಲಿ  8 ವಿಕೆಟ್‌ ಕಳೆದುಕೊಂಡು 140 ರನ್‌ ಗಳಿಸಲಷ್ಟೇ ಶಕ್ತರಾದರು.

ಈ ಮೊತ್ತವನ್ನು ಬೆನ್ನಟ್ಟಿದ ಮೈಸೂರು ವಾರಿಯರ್ಸ್‌ ತಂಡವು ಉತ್ತಮ ಆರಂಭ ಪಡೆಯಲಿಲ್ಲ. ಸಮರ್ಥ 6(5) ಮತ್ತು ಭರತ್‌ ಧುರಿ 10(9) ಬೇಗ ಪೆವಿಲಿಯನ್‌ ಸೇರಿದರು. ನಾಯಕ ಕರುಣ್‌ ನಾಯರ್‌ 43(25) ಸಮಯೋಚಿತ ಆಟ ಹಾಗೂ ಲಂಕೇಶ್‌ ಕೆ.ಎಸ್‌ 68(45) ಅಮೋಘ ಬ್ಯಾಟಿಂಗ್‌ ಪ್ರದರ್ಶನ ಮೂಲಕ ತಂಡವನ್ನು ಗೆಲುವಿನ ದಡ ಸೇರಿಸಿದರು. ಅಂತಿಮವಾಗಿ ಮೈಸೂರು ವಾರಿಯರ್ಸ್‌ ತಂಡವು 7 ವಿಕೆಟ್‌ಗಳ ಭರ್ಜರಿ ಜಯ ದಾಖಲಿಸಿತು.

ಸ್ಕೋರ್‌ ಬೋರ್ಡ್‌: 

ಮಂಗಳೂರು ಡ್ರಾಗನ್ಸ್: 20 ಓವರ್‌ಗಳಲ್ಲಿ 140-8: ರೋಹನ್ ಪಾಟೀಲ್ 52 (42), ಕೃಷ್ಣಪ್ಪ ಗೌತಮ್ 15(14), ಅನಿರುದ್ಧ ಜೋಶಿ 13(17), ಮೋನಿಶ್ ರೆಡ್ಡಿ 3-42, ಜಗದೀಶ ಸುಚಿತ್ 2-24, ಶ್ರೀಶ ಆಚಾರ್ 2-24.

ಮೈಸೂರು ವಾರಿಯರ್ಸ್: 16.3 ಓವರ್‌ಗಳಲ್ಲಿ 141-3: ಕೆ.ಎಸ್. ಲಂಕೇಶ್ 68*(45) , ಕರುಣ್ ನಾಯರ್ 43 (25), ಶೋಯಬ್ ಮ್ಯಾನೇಜರ್ 11 (15), ಎಂ.ಜಿ. ನವೀನ್ 1-12, ಪಾರಸ್ ಆರ್ಯ 1-35

ಪಂದ್ಯ ಶ್ರೇಷ್ಠ : ಕೆ.ಎಸ್‌.ಲಂಕೇಶ್‌

andolanait

Recent Posts

ದ್ರಾಕ್ಷಿ ತೋಟ ನೋಡಲು ಮುಗಿಬಿದ್ದ ಜನರು

ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ತಾಲ್ಲೂಕಿನ ಗುಂಡ್ಲುಪೇಟೆ- ಕೇರಳ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಕೇರಳ ಮೂಲದ ಅಶ್ರಫ್ ಎಂಬವರು ಮಾಡಿರುವ ಒಂದು…

15 hours ago

ಓದುಗರ ಪತ್ರ: ಎಲ್‌ಇಡಿ ಪರದೆ ಮೂಲಕ ಚಾಮುಂಡಿ ದರ್ಶನ ಮಾಡಿಸಿ

ಪ್ರತಿ ಆಷಾಢ ಶುಕ್ರವಾರಗಳಂದು ಚಾಮುಂಡಿ ಬೆಟ್ಟದಲ್ಲಿ ವಿಪರೀತ ಜನಸಂದಣಿ ಉಂಟಾಗುತ್ತಿದೆ. ಇದಕ್ಕೆ ಇತ್ತೀಚಿನ ಕೆಲವು ವರ್ಷಗಳಲ್ಲಿ ಮಾಡಲ್ಪಟ್ಟ ಅವೈಜ್ಞಾನಿಕ ಮಾರ್ಪಾಡುಗಳೇ…

15 hours ago

ಓದುಗರ ಪತ್ರ: ಪಾಲಿಕೆ ಆಯುಕ್ತರಾದ ಎಂ.ಕೆ. ಸವಿತಾ ನಡೆ ಶ್ಲಾಘನೀಯ

ಈ ಬಾರಿಯ ಸ್ವಾತಂತ್ರೋತ್ಸವದ ಅಂಗವಾಗಿ ೮೦ ತ್ಯಾಜ್ಯ ಹಾಕುವ ತಾಣಗಳನ್ನು ಗುರುತಿಸಿ, ಸ್ವಾತಂತ್ರೋತ್ಸವ ಸ್ವಚ್ಛತಾ ಅಭಿಯಾನ ೨೦೨೬ರ ಪ್ರಯುಕ್ತ ೮೦…

15 hours ago

ಓದುಗರ ಪತ್ರ: ಏನೇ ಓದಿದ್ದರೂ ಬೇಕು ಪಿಸಿ ಹುದ್ದೆ !

ರಾಜ್ಯದಲ್ಲಿ ೩,೭೦೦ ಸಿವಿಲ್ ಪೊಲೀಸ್ ಕಾನ್‌ಸ್ಟೆಬಲ್ ಹುzಗಳಿಗೆ, ೩ ಲಕ್ಷದ ೭೭ ಸಾವಿರ ಅಭ್ಯರ್ಥಿಗಳು ಇದೇ ಭಾನುವಾರ ಲಿಖಿತ ಪರೀಕ್ಷೆ…

15 hours ago

ರವಿಯ ನೋಡ ಹೋಗಿ ಶಶಿಯ ಕಂಡುಬಂದೆ

ಭಾರತಿ ಬಿ ವಿ ವ್ಯಾಲಿ ಆಫ್ ಮಾನ್ಯುಮೆಂಟ್ಸ್‌ನ ಸನ್ ಸೆಟ್ ನೋಡಬೇಕು!’ ಹಾಗಂತ ಮಗ ಸಂದೀಪ್ ಗ್ರಾಂಡ್ ಕ್ಯಾನ್ಯನ್ ಹತ್ತಿರ…

15 hours ago

ಕಾರ್ಗಿಲ್ ಕಾಲದ ಸುಬೇದಾರ್ ಹೈದರ್ ಮೈಸೂರಿನಲ್ಲಿದ್ದಾರೆ

ಅಕ್ಷತಾ ಹೈದರ್ ಅವರ ಮುತ್ತಾತ ಎಂ.ಬುಡಾನ್ ಬೇಗ್ ಮೈಸೂರಿನ ಮಹಾರಾಜರ ಪದಾತಿ ದಳದಲ್ಲಿ ಸುಬೇ ದಾರ್ ಮೇಜರ್ ಆಗಿ ಕರ್ತವ್ಯ…

15 hours ago