ಕ್ರೀಡೆ

ಲಂಕೇಶ್ ಅಮೋಘ ಬ್ಯಾಟಿಂಗ್ ಪ್ರದರ್ಶನ: ಮೈಸೂರು ವಾರಿಯರ್ಸ್‌ಗೆ ಭರ್ಜರಿ ಜಯ

ಬೆಂಗಳೂರು : ಲಂಕೇಶ್‌ ಅವರ ಅಮೋಘ ಬ್ಯಾಟಿಂಗ್‌ ಬಲದಿಂದ ಮಹಾರಾಜ ಟ್ರೋಫಿ 22ನೇ ಪಂದ್ಯದಲ್ಲಿ ಮೈಸೂರು ವಾರಿಯರ್ಸ್ ತಂಡವು ಮಂಗಳೂರು ಡ್ರ್ಯಾಗನ್‌ ತಂಡವನ್ನು 7 ವಿಕೆಟ್‌ಗಳಿಂದ ಮಣಿಸಿತು.

ಮಂಗಳೂರು ಡ್ರ್ಯಾಗನ್‌ ತಂಡವು ನೀಡಿದ 140 ರನ್‌ಗಳ ಗುರಿಯನ್ನು ಬೆನ್ನಟ್ಟಿದ ವಾರಿಯರ್ಸ್‌ ತಂಡ ಕೇವಲ 16.3 ಓವರ್‌ಗಳಲ್ಲಿ 3 ವಿಕೆಟ್‌ ಕಳೆದುಕೊಂಡು ಗುರಿ ಮುಟ್ಟಿತು. ಆಮೂಲಕ ಟೂರ್ನಿಯಲ್ಲಿ 5ನೇ ಗೆಲುವು ದಾಖಲಿಸಿ ಪಾಯಿಂಟ್‌ ಪಟ್ಟಿಯಲ್ಲಿ ಎರಡನೇ ಸ್ಥಾನಕ್ಕೇರಿತು.

ಟಾಸ್‌ ಸೋತು ಮೊದಲು ಬ್ಯಾಟ್‌ ಮಾಡಿದ ಮಂಗಳೂರು ತಂಡ, ಮೊನಿಶ್ ರೆಡ್ಡಿ (3/42) ಮತ್ತು ಜಗದೀಶ ಸುಚಿತ್ (2-24) ನೇತೃತ್ವದ ಶಿಸ್ತಿನ ಬೌಲಿಂಗ್‌ಗೆ ಮಂಡಿಯೂರಿತು. ರೋಹನ್‌ ಪಾಟೀಲ್‌ 52(42) ಹೊರತಾಗಿ ಮತ್ತಾರಿಂದಲೂ ನಿರೀಕ್ಷಿತ ಪ್ರದರ್ಶನ ಕಂಡುಬರಲಿಲ್ಲ. ನಾಯಕ ಗೌತಮ್‌ 15(14), ಅನೀಶ್ವರ್‌ ಗೌತಮ್‌ 11(13) ತಂಡಕ್ಕೆ ಆಸರೆಯಾದರು. ಅಂತಿಮವಾಗಿ ನಿಗದಿತ 20 ಓವರ್‌ಗಳಲ್ಲಿ  8 ವಿಕೆಟ್‌ ಕಳೆದುಕೊಂಡು 140 ರನ್‌ ಗಳಿಸಲಷ್ಟೇ ಶಕ್ತರಾದರು.

ಈ ಮೊತ್ತವನ್ನು ಬೆನ್ನಟ್ಟಿದ ಮೈಸೂರು ವಾರಿಯರ್ಸ್‌ ತಂಡವು ಉತ್ತಮ ಆರಂಭ ಪಡೆಯಲಿಲ್ಲ. ಸಮರ್ಥ 6(5) ಮತ್ತು ಭರತ್‌ ಧುರಿ 10(9) ಬೇಗ ಪೆವಿಲಿಯನ್‌ ಸೇರಿದರು. ನಾಯಕ ಕರುಣ್‌ ನಾಯರ್‌ 43(25) ಸಮಯೋಚಿತ ಆಟ ಹಾಗೂ ಲಂಕೇಶ್‌ ಕೆ.ಎಸ್‌ 68(45) ಅಮೋಘ ಬ್ಯಾಟಿಂಗ್‌ ಪ್ರದರ್ಶನ ಮೂಲಕ ತಂಡವನ್ನು ಗೆಲುವಿನ ದಡ ಸೇರಿಸಿದರು. ಅಂತಿಮವಾಗಿ ಮೈಸೂರು ವಾರಿಯರ್ಸ್‌ ತಂಡವು 7 ವಿಕೆಟ್‌ಗಳ ಭರ್ಜರಿ ಜಯ ದಾಖಲಿಸಿತು.

ಸ್ಕೋರ್‌ ಬೋರ್ಡ್‌: 

ಮಂಗಳೂರು ಡ್ರಾಗನ್ಸ್: 20 ಓವರ್‌ಗಳಲ್ಲಿ 140-8: ರೋಹನ್ ಪಾಟೀಲ್ 52 (42), ಕೃಷ್ಣಪ್ಪ ಗೌತಮ್ 15(14), ಅನಿರುದ್ಧ ಜೋಶಿ 13(17), ಮೋನಿಶ್ ರೆಡ್ಡಿ 3-42, ಜಗದೀಶ ಸುಚಿತ್ 2-24, ಶ್ರೀಶ ಆಚಾರ್ 2-24.

ಮೈಸೂರು ವಾರಿಯರ್ಸ್: 16.3 ಓವರ್‌ಗಳಲ್ಲಿ 141-3: ಕೆ.ಎಸ್. ಲಂಕೇಶ್ 68*(45) , ಕರುಣ್ ನಾಯರ್ 43 (25), ಶೋಯಬ್ ಮ್ಯಾನೇಜರ್ 11 (15), ಎಂ.ಜಿ. ನವೀನ್ 1-12, ಪಾರಸ್ ಆರ್ಯ 1-35

ಪಂದ್ಯ ಶ್ರೇಷ್ಠ : ಕೆ.ಎಸ್‌.ಲಂಕೇಶ್‌

andolanait

Recent Posts

ನೀಟ್‌ ವಿದ್ಯಾರ್ಥಿಗಳಿಗೆ ಪ್ರಯಾಣದಲ್ಲಿ 50% ರಿಯಾಯಿತಿ: ಯುಪಿ ಸಿಎಂ ಯೋಗಿ ಆದಿತ್ಯನಾಥ್‌ ಆದೇಶ

ಲಕ್ನೋ: ಜೂನ್.‌21ರಂದು ನಡೆಯಲಿರುವ ನೀಟ್-ಯುಜಿ ಮರುಪರೀಕ್ಷೆಗೆ ಹಾಜರಾಗುವ ಎಲ್ಲಾ ವಿದ್ಯಾರ್ಥಿಗಳ ಬಸ್‌ ಪ್ರಯಾಣದ ದರದಲ್ಲಿ ಶೇ.50ರಷ್ಟು ರಿಯಾಯಿತಿ ನೀಡುವುದಾಗಿ ಉತ್ತರ…

13 mins ago

ಮುಂಬೈನಲ್ಲಿ ನೀರಿಗೆ ಭಾರೀ ಬಿಕ್ಕಟ್ಟು: ಕಟ್ಟಡ ಕಾಮಗಾರಿಗಳಿಗೆ ನೀರು ಬಂದ್‌

ಮುಂಬೈ: ದೇಶದಲ್ಲಿ ಮುಂಗಾರು ಪ್ರವೇಶಿದರೂ ಮುಂಬೈನಲ್ಲಿ ಮಳೆಯ ಕೊರತೆ ಎದುರಾಗಿದೆ. ಮಳೆ ಕೊರತೆ ಎದುರಾದ ಪರಿಣಾಮ ಜಲಾಶಯಗಳಲ್ಲಿ ನೀರಿನ ಮಟ್ಟ…

43 mins ago

ಕೆಫೆ ‘ರೂಫ್ ಟಾಪ್’ಗೆ ಅನುಮತಿಯೇ ಇರಲಿಲ್ಲ!

ಎಚ್.ಎಸ್.ದಿನೇಶ್‌ಕುಮಾರ್ ಲಿಕ್ಕರ್ ಗ್ಯಾರೇಜ್, ಫಾಕ್ಸ್ ಡೆನ್‌ಗೆ ಮಾತ್ರ ಅನುಮತಿ; ನೋಟಿಸ್ ಜಾರಿ ಮಾಡಿ ಸುಮ್ಮನಾಗಿದ್ದ ಅಧಿಕಾರಿಗಳು?; ಅಬಕಾರಿ ಡಿಸಿ ಅಮಾನತ್ತಿಗೆ…

2 hours ago

ಓದುಗರ ಪತ್ರ: ದುಷ್ಕೃತ್ಯ ನಿಯಂತ್ರಿಸಲು ಕಾನೂನು ರೂಪಿಸಬೇಕು

ಚಾಮರಾಜನಗರ ತಾಲ್ಲೂಕಿನ ಮಸಾಣಪುರ ಗ್ರಾಮದಲ್ಲಿ ಬಾಬಾ ಸಾಹೇಬ ಡಾ.ಅಂಬೇಡ್ಕರ್‌ರವರ ಭಾವಚಿತ್ರಕ್ಕೆ ಅಪಮಾನ ಮಾಡಿರುವ ಘಟನೆ ನಿಜಕ್ಕೂ ತಲೆತಗ್ಗಿಸುವಂಥ ಹೇಯ ಕೃತ್ಯವಾಗಿದೆ.ಈ…

6 hours ago

ಓದುಗರ ಪತ್ರ: ಯಶಸ್ಸಿಗೆ ಮೂಲ ಅಡಿಪಾಯವೇ ಸಮಯ ಪಾಲನೆ!

‘ಗಿಡವಾಗಿ ಬಗ್ಗದ್ದು ಮರವಾಗಿ ಬಗ್ಗೀತೇ’ ಎಂಬ ಗಾದೆಯ ಮಾತು ನಿಜಕ್ಕೂ ಇಂದಿನ ಕಾಲಘಟ್ಟಕ್ಕೆ ಹೆಚ್ಚಾಗಿ ಅನ್ವಯಿಸುತ್ತದೆ. ಏಕೆಂದರೆ ಸಮಯ ಪಾಲನೆ…

6 hours ago

ಓದುಗರ ಪತ್ರ: ಲಂಚದ ಬಗ್ಗೆ ಮಾತೇಕೆ?

ಸರ್ಕಾರಿ ಕಚೇರಿಗಳಲ್ಲಿ ಸಾರ್ವಜನಿಕರ ಕೆಲಸ ಮಾಡಲು ಸರ್ಕಾರಿ ನೌಕರರಿಗೆ ಅಥವಾ ಅಧಿಕಾರಿಗಳಿಗೆ ೧೦ ರೂ. ಲಂಚವನ್ನು ಕೂಡ ನೀಡಬೇಡಿ ಎಂದು…

6 hours ago