ಕ್ರೀಡೆ

ಲಂಕೇಶ್ ಅಮೋಘ ಬ್ಯಾಟಿಂಗ್ ಪ್ರದರ್ಶನ: ಮೈಸೂರು ವಾರಿಯರ್ಸ್‌ಗೆ ಭರ್ಜರಿ ಜಯ

ಬೆಂಗಳೂರು : ಲಂಕೇಶ್‌ ಅವರ ಅಮೋಘ ಬ್ಯಾಟಿಂಗ್‌ ಬಲದಿಂದ ಮಹಾರಾಜ ಟ್ರೋಫಿ 22ನೇ ಪಂದ್ಯದಲ್ಲಿ ಮೈಸೂರು ವಾರಿಯರ್ಸ್ ತಂಡವು ಮಂಗಳೂರು ಡ್ರ್ಯಾಗನ್‌ ತಂಡವನ್ನು 7 ವಿಕೆಟ್‌ಗಳಿಂದ ಮಣಿಸಿತು.

ಮಂಗಳೂರು ಡ್ರ್ಯಾಗನ್‌ ತಂಡವು ನೀಡಿದ 140 ರನ್‌ಗಳ ಗುರಿಯನ್ನು ಬೆನ್ನಟ್ಟಿದ ವಾರಿಯರ್ಸ್‌ ತಂಡ ಕೇವಲ 16.3 ಓವರ್‌ಗಳಲ್ಲಿ 3 ವಿಕೆಟ್‌ ಕಳೆದುಕೊಂಡು ಗುರಿ ಮುಟ್ಟಿತು. ಆಮೂಲಕ ಟೂರ್ನಿಯಲ್ಲಿ 5ನೇ ಗೆಲುವು ದಾಖಲಿಸಿ ಪಾಯಿಂಟ್‌ ಪಟ್ಟಿಯಲ್ಲಿ ಎರಡನೇ ಸ್ಥಾನಕ್ಕೇರಿತು.

ಟಾಸ್‌ ಸೋತು ಮೊದಲು ಬ್ಯಾಟ್‌ ಮಾಡಿದ ಮಂಗಳೂರು ತಂಡ, ಮೊನಿಶ್ ರೆಡ್ಡಿ (3/42) ಮತ್ತು ಜಗದೀಶ ಸುಚಿತ್ (2-24) ನೇತೃತ್ವದ ಶಿಸ್ತಿನ ಬೌಲಿಂಗ್‌ಗೆ ಮಂಡಿಯೂರಿತು. ರೋಹನ್‌ ಪಾಟೀಲ್‌ 52(42) ಹೊರತಾಗಿ ಮತ್ತಾರಿಂದಲೂ ನಿರೀಕ್ಷಿತ ಪ್ರದರ್ಶನ ಕಂಡುಬರಲಿಲ್ಲ. ನಾಯಕ ಗೌತಮ್‌ 15(14), ಅನೀಶ್ವರ್‌ ಗೌತಮ್‌ 11(13) ತಂಡಕ್ಕೆ ಆಸರೆಯಾದರು. ಅಂತಿಮವಾಗಿ ನಿಗದಿತ 20 ಓವರ್‌ಗಳಲ್ಲಿ  8 ವಿಕೆಟ್‌ ಕಳೆದುಕೊಂಡು 140 ರನ್‌ ಗಳಿಸಲಷ್ಟೇ ಶಕ್ತರಾದರು.

ಈ ಮೊತ್ತವನ್ನು ಬೆನ್ನಟ್ಟಿದ ಮೈಸೂರು ವಾರಿಯರ್ಸ್‌ ತಂಡವು ಉತ್ತಮ ಆರಂಭ ಪಡೆಯಲಿಲ್ಲ. ಸಮರ್ಥ 6(5) ಮತ್ತು ಭರತ್‌ ಧುರಿ 10(9) ಬೇಗ ಪೆವಿಲಿಯನ್‌ ಸೇರಿದರು. ನಾಯಕ ಕರುಣ್‌ ನಾಯರ್‌ 43(25) ಸಮಯೋಚಿತ ಆಟ ಹಾಗೂ ಲಂಕೇಶ್‌ ಕೆ.ಎಸ್‌ 68(45) ಅಮೋಘ ಬ್ಯಾಟಿಂಗ್‌ ಪ್ರದರ್ಶನ ಮೂಲಕ ತಂಡವನ್ನು ಗೆಲುವಿನ ದಡ ಸೇರಿಸಿದರು. ಅಂತಿಮವಾಗಿ ಮೈಸೂರು ವಾರಿಯರ್ಸ್‌ ತಂಡವು 7 ವಿಕೆಟ್‌ಗಳ ಭರ್ಜರಿ ಜಯ ದಾಖಲಿಸಿತು.

ಸ್ಕೋರ್‌ ಬೋರ್ಡ್‌: 

ಮಂಗಳೂರು ಡ್ರಾಗನ್ಸ್: 20 ಓವರ್‌ಗಳಲ್ಲಿ 140-8: ರೋಹನ್ ಪಾಟೀಲ್ 52 (42), ಕೃಷ್ಣಪ್ಪ ಗೌತಮ್ 15(14), ಅನಿರುದ್ಧ ಜೋಶಿ 13(17), ಮೋನಿಶ್ ರೆಡ್ಡಿ 3-42, ಜಗದೀಶ ಸುಚಿತ್ 2-24, ಶ್ರೀಶ ಆಚಾರ್ 2-24.

ಮೈಸೂರು ವಾರಿಯರ್ಸ್: 16.3 ಓವರ್‌ಗಳಲ್ಲಿ 141-3: ಕೆ.ಎಸ್. ಲಂಕೇಶ್ 68*(45) , ಕರುಣ್ ನಾಯರ್ 43 (25), ಶೋಯಬ್ ಮ್ಯಾನೇಜರ್ 11 (15), ಎಂ.ಜಿ. ನವೀನ್ 1-12, ಪಾರಸ್ ಆರ್ಯ 1-35

ಪಂದ್ಯ ಶ್ರೇಷ್ಠ : ಕೆ.ಎಸ್‌.ಲಂಕೇಶ್‌

andolanait

Recent Posts

ಮಹಾಪ್ರವಾಹಕ್ಕೆ ನೇಪಾಳ ತತ್ತರ: ನಾಪತ್ತೆಯಾದವರ ಸಂಖ್ಯೆ 6100ಕ್ಕೆ ಏರಿಕೆ

ಕಠ್ಮಂಡು: ಮಹಾ ಪ್ರವಾಹಕ್ಕೆ ನೇಪಾಳ ತತ್ತರಿಸಿದೆ. ಪ್ರವಾಹ ಹಾಗೂ ಭೂಕುಸಿತದಿಂದ ನಾಪತ್ತೆಯಾದವರ ಸಂಖ್ಯೆ 6,100ಕ್ಕೆ ಏರಿಕೆಯಾಗಿದೆ. ಇದೀಗ ಹೈಡ್ರೋ ಪವರ್…

3 hours ago

ಓದುಗರ ಪತ್ರ: ಇನ್ಸ್‌ಪೆಕ್ಟರ್ ಧನಂಜಯರ ಹೇಳಿಕೆಯಲ್ಲಿ ತಪ್ಪಿಲ್ಲ

ತಿ.ನರಸೀಪುರ ಪಟ್ಟಣದಲ್ಲಿ ನಡೆದ ಗಣೇಶೋತ್ಸವ ಪೂರ್ವಭಾವಿ ಸಭೆಯಲ್ಲಿ ಇನ್ಸ್ ಪೆಕ್ಟರ್ ಧನಂಜಯ ಅವರು ಪ್ರಚೋದನಕಾರಿಯಾಗಿ ಮಾತನಾಡಿದ್ದಾರೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ…

10 hours ago

ಓದುಗರ ಪತ್ರ: ದಸರಾ ಬಂದಾಗ ಮಾತ್ರ ಮೈಸೂರಿಗೆ ಸಿಂಗಾರ

ವಿಶ್ವವಿಖ್ಯಾತ ಮೈಸೂರು ದಸರಾಕ್ಕೆ ದಿನಗಣನೆ ಆರಂಭವಾಗಿದ್ದು, ಈ ನಿಟ್ಟಿನಲ್ಲಿ ಜಿಲ್ಲಾ ಆಡಳಿತ ಸಕಲ ಸಿದ್ಧತೆಗಳನ್ನೂ ಮಾಡುತ್ತಿದೆ. ದಸರಾ ಆನೆಗಳು ಅರಮನೆ…

10 hours ago

ಓದುಗರ ಪತ್ರ: ತ್ಯಾಜ್ಯದಿಂದ ವಿದ್ಯುತ್ ಉತ್ಪಾದನೆ ಕಡ್ಡಾಯವಾಗಲಿ

ರಾಜ್ಯದ ನಗರ ಪ್ರದೇಶಗಳಲ್ಲಿ ದಿನಂಪ್ರತಿ ಶೇ.೭೦ ಕ್ಕೂ ಹೆಚ್ಚು ಹಸಿ ತ್ಯಾಜ್ಯ ಸೃಷ್ಟಿಯಾಗುತ್ತಿದೆ. ಈ ತ್ಯಾಜ್ಯವನ್ನು ಸುಮ್ಮನೆ ಸುರಿಯುವ ಬದಲು…

10 hours ago

ಓದುಗರ ಪತ್ರ: ಯುಪಿಐ ವಹಿವಾಟು ಶುಲ್ಕ; ಹೊರೆಯಾಗದಿರಲಿ

ಇತ್ತೀಚಿನ ದಿನಗಳಲ್ಲಿ ಡಿಜಿಟಲ್ ಇಂಡಿಯಾ ಯೋಜನೆಯಡಿ ಯುಪಿಐ ಪಾವತಿ ವ್ಯವಸ್ಥೆಯು ಭಾರತೀಯರ ದೈನಂದಿನ ಜೀವನದ ಅವಿಭಾಜ್ಯ ಅಂಗವಾಗಿದೆ. ಜೇಬಿನಲ್ಲಿ ಹಣವಿಲ್ಲದಿದ್ದರೂ…

10 hours ago

ಮೋದಿ ಅಧಿಕಾರ ಪರ್ವ ರಜತ ಮಹೋತ್ಸವ: ಏನಿತ್ತು? ಏನಿಲ್ಲ?

ನರೇಂದ್ರ ಮೋದಿ ಅವರು ೨೦೦೧ರಲ್ಲಿ ಮೊದಲ ಬಾರಿಗೆ ಗುಜರಾತ್ ಸಿಎಂ ಆಗಿ ಅಧಿಕಾರ ಸ್ವೀಕರಿಸಿದರು. ಸತತ ೧೫ ವರ್ಷಗಳು ಅಲ್ಲಿ…

10 hours ago