ಕ್ರೀಡೆ

ವೈಯಕ್ತಿಕ ಕಾರಣ ನೀಡಿ ಸಿಪಿಎಲ್ ನಿಂದಲೂ ಹೊರಬಂದ ಅಂಬಾಟಿ ರಾಯುಡು

ಮುಂಬೈ: ಈ ವರ್ಷದ ಆರಂಭದಲ್ಲಿ ಇಂಡಿಯನ್ ಪ್ರೀಮಿಯರ್ ಲೀಗ್‌ (IPL) ನಿಂದ ನಿವೃತ್ತಿ ಘೋಷಿಸಿ ಕೆರಿಬಿಯನ್ ಪ್ರೀಮಿಯರ್ ಲೀಗ್‌ (CPL) ನಲ್ಲಿ ಆಡಲು ತೆರಳಿದ್ದ ಅಂಬಾಟಿ ರಾಯುಡು ಇದೀಗ ಅಲ್ಲಿಂದಲೂ ಹೊರಬಂದಿದ್ದಾರೆ.

ವೈಯಕ್ತಿಕ ಕಾರಣಗಳಿಂದಾಗಿ ಸಿಪಿಎಲ್ ನ ಸೇಂಟ್ ಕಿಟ್ಸ್ ಮತ್ತು ನೆವಿಸ್ ಪೇಟ್ರಿಯಾಟ್ಸ್‌ ನೊಂದಿಗೆ ರಾಯುಡು ತಮ್ಮ ಅವಧಿಯನ್ನು ಕೊನೆಗೊಳಿಸಿದ್ದಾರೆ.

ವೈಯಕ್ತಿಕ ಕಾರಣಗಳಿಂದಾಗಿ ಸೇಂಟ್ ಕಿಟ್ಸ್ ಮತ್ತು ನೆವಿಸ್ ಪೇಟ್ರಿಯಾಟ್ಸ್ ಜೊತೆಗಿನ ಒಪ್ಪಂದವನ್ನು ರಾಯುಡು ಕೊನೆಗೊಳಿಸಿದ್ದಾರೆ ಎಂದು ಇಎಸ್‌ಪಿಎನ್‌ ಕ್ರಿಕ್‌ಇನ್‌ಫೋ ವರದಿ ಮಾಡಿದೆ.

ಸದ್ಯ ನಡೆಯುತ್ತಿರುವ ಆವೃತ್ತಿಯಲ್ಲಿ ಪೇಟ್ರಿಯಾಟ್ಸ್‌ ತಂಡದ ಪರವಾಗಿ ರಾಯುಡು ಮೂರು ಇನ್ನಿಂಗ್ಸ್‌ ಗಳಲ್ಲಿ ಕಾಣಿಸಿಕೊಂಡರು, 117.50 ಸ್ಟ್ರೈಕ್ ರೇಟ್‌ನೊಂದಿಗೆ 47 ರನ್ ಗಳಿಸಿದರು. ಮೂರು ಇನ್ನಿಂಗ್ಸ್‌ಗಳಲ್ಲಿ ಅವರ ಸ್ಕೋರ್‌ಗಳು 0, 32 ಮತ್ತು 15 ರನ್.

ಎರಡು ವಾರಗಳ ಹಿಂದೆ, ರಾಯುಡು ಅವರನ್ನು ಪೇಟ್ರಿಯಾಟ್ಸ್‌ನ ಮಾರ್ಕ್ಯೂ ಆಟಗಾರ ಎಂದು ಘೋಷಿಸಲಾಗಿತ್ತು. ಪ್ರವೀಣ್ ತಾಂಬೆ ನಂತರ ಪುರುಷರ ಸಿಪಿಎಲ್‌ ನಲ್ಲಿ ಆಡಿದ ಎರಡನೇ ಭಾರತೀಯ ಎಂಬ ಖ್ಯಾತಿಗೆ ರಾಯುಡು ಪಾತ್ರರಾಗಿದ್ದರು. ರಾಯುಡು ಜೊತೆಗೆ ಜಿಂಬಾಬ್ವೆ ವೇಗಿ ಬ್ಲೆಸ್ಸಿಂಗ್ ಮುಜರಬಾನಿ ಕೂಡ ವೈಯಕ್ತಿಕ ಕಾರಣಗಳಿಂದ ಟೂರ್ನಿಯಿಂದ ನಿರ್ಗಮಿಸಿದ್ದಾರೆ.

andolanait

Recent Posts

ಕರ್ನಾಟಕ ಡಿಜಿಟಲ್‌ ಪ್ರಪಂಚದ ಸೃಜನಶೀಲ ರಾಜಧಾನಿ ಎಂಬುದು ನಮ್ಮ ಕನಸು: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಬೆಂಗಳೂರು ಜಿಎಎಫ್ ಎಕ್ಸ್-2026ರ 7ನೇ ಆವೃತ್ತಿಯ ಉದ್ಘಾಟಿಸಿ ಮಾತನಾಡಿದರು. “ಎವೊಲ್ಯೂಶನ್ ರಿಲೋಡೆಡ್” ಎಂಬ ವಿಷಯವನ್ನೊಳಗೊಂಡ…

17 mins ago

ಬೆಂಗಳೂರು ಕರಗ ಮಹೋತ್ಸವಕ್ಕೆ ಮುಹೂರ್ತ ಫಿಕ್ಸ್‌

ಬೆಂಗಳೂರು: ಬೆಂಗಳೂರು ಕರಗ ಶಕ್ತ್ಯೋತ್ಸವಕ್ಕೆ ಮುಹೂರ್ತ ನಿಗದಿಯಾಗಿದೆ ಈ ವರ್ಷವೂ ಸಂಪ್ರದಾಯದಂತೆ ತಿಗಳರಪೇಟೆಯ ಶ್ರೀ ಧರ್ಮರಾಯ ಸ್ವಾಮಿ ದೇವಸ್ಥಾನದಲ್ಲಿ ವೈಭವದ…

39 mins ago

ಡಿಕೆಶಿ ಸಿಎಂ ಆಗಲಿ ಅನ್ನೋದು ನನ್ನ ವೈಯಕ್ತಿಕ ಆಸೆ: ಶಾಸಕ ಗಣಿಗ ರವಿಕುಮಾರ್‌

ಮಂಡ್ಯ: 2028ಕ್ಕೂ ಕಾಂಗ್ರೆಸ್‌ ಅಧಿಕಾರಕ್ಕೆ ಬರಬೇಕು. ಹಾಗಾಗಿ ಹೈಕಮಾಂಡ್‌ ಮಧ್ಯಪ್ರವೇಶಿಸಿ ಕುರ್ಚಿ ಗೊಂದಲ ಬಗೆಹರಿಸಬೇಕು ಎಂದು ಕಾಂಗ್ರೆಸ್‌ ಶಾಸಕ ಗಣಿಗ…

1 hour ago

ರೈತರಿಗೆ ಕಿರುಕುಳ ನೀಡುವ ಖಾಸಗಿ ಫೈನಾನ್ಸಿಯರ್‌ಗಳ ವಿರುದ್ಧ ಕಠಿಣ ಕ್ರಮ: ಜಿಲ್ಲಾಧಿಕಾರಿ ಡಾ.ಕುಮಾರ

ಮಂಡ್ಯ: ಖಾಸಗಿ ಹಣಕಾಸು ಸಂಸ್ಥೆಗಳು ಮತ್ತು ಮೈಕ್ರೋ ಫೈನಾನ್ಸ್‌ ಕಂಪನಿಗಳು ರೈತರಿಗೆ ಹಾಗೂ ಜನಸಾಮಾನ್ಯರಿಗೆ ಸಾಲ ವಸೂಲಾತಿ ಹೆಸರಿನಲ್ಲಿ ಕಿರುಕುಳ…

1 hour ago

ವಾಲ್ಮೀಕಿ ಪೀಠದ ಶ್ರೀ ಪ್ರಸನ್ನಾನಂದ ಪುರಿ ಸ್ವಾಮೀಜಿ ಆರೋಗ್ಯದಲ್ಲಿ ಚೇತರಿಕೆ: ಆಸ್ಪತ್ರೆಯಿಂದ ಡಿಸ್ಚಾರ್ಜ್‌

ರಾಯಚೂರು: ಶ್ರೀ ಪ್ರಸನ್ನಾನಂದಪುರಿ ಸ್ವಾಮೀಜಿ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದ್ದು, ಆಸ್ಪತ್ರೆಯಿಂದ ಡಿಸ್ಚಾರ್ಜ್‌ ಆಗಿದ್ದಾರೆ. ರಾಯಚೂರಿನಲ್ಲಿ ಕಾರ್ಯಕ್ರಮವೊಂದರಲ್ಲಿ ಭಾಗಿಯಾಗಿದ್ದ ವೇಳೆಯಲ್ಲಿ…

1 hour ago

ಅಧಿಕಾರ ಹಂಚಿಕೆ ಬಗ್ಗೆ ಹೈಕಮಾಂಡ್‌ ಬಹಿರಂಗಪಡಿಸಲಿ: ಶಾಸಕ ತನ್ವೀರ್‌ ಸೇಠ್‌

ಮೈಸೂರು: ಅಧಿಕಾರ ಹಂಚಿಕೆ ಬಗ್ಗೆ ಹೈಕಮಾಂಡ್‌ ಬಹಿರಂಗಪಡಿಸಲು ಎಂದು ಶಾಸಕ ತನ್ವೀರ್‌ ಸೇಠ್‌ ಆಗ್ರಹಿಸಿದ್ದಾರೆ. ಈ ಕುರಿತು ಮೈಸೂರಿನಲ್ಲಿ ಮಾತನಾಡಿದ…

3 hours ago