ಮುಂಬೈ: ಈ ವರ್ಷದ ಆರಂಭದಲ್ಲಿ ಇಂಡಿಯನ್ ಪ್ರೀಮಿಯರ್ ಲೀಗ್ (IPL) ನಿಂದ ನಿವೃತ್ತಿ ಘೋಷಿಸಿ ಕೆರಿಬಿಯನ್ ಪ್ರೀಮಿಯರ್ ಲೀಗ್ (CPL) ನಲ್ಲಿ ಆಡಲು ತೆರಳಿದ್ದ ಅಂಬಾಟಿ ರಾಯುಡು ಇದೀಗ ಅಲ್ಲಿಂದಲೂ ಹೊರಬಂದಿದ್ದಾರೆ.
ವೈಯಕ್ತಿಕ ಕಾರಣಗಳಿಂದಾಗಿ ಸಿಪಿಎಲ್ ನ ಸೇಂಟ್ ಕಿಟ್ಸ್ ಮತ್ತು ನೆವಿಸ್ ಪೇಟ್ರಿಯಾಟ್ಸ್ ನೊಂದಿಗೆ ರಾಯುಡು ತಮ್ಮ ಅವಧಿಯನ್ನು ಕೊನೆಗೊಳಿಸಿದ್ದಾರೆ.
ವೈಯಕ್ತಿಕ ಕಾರಣಗಳಿಂದಾಗಿ ಸೇಂಟ್ ಕಿಟ್ಸ್ ಮತ್ತು ನೆವಿಸ್ ಪೇಟ್ರಿಯಾಟ್ಸ್ ಜೊತೆಗಿನ ಒಪ್ಪಂದವನ್ನು ರಾಯುಡು ಕೊನೆಗೊಳಿಸಿದ್ದಾರೆ ಎಂದು ಇಎಸ್ಪಿಎನ್ ಕ್ರಿಕ್ಇನ್ಫೋ ವರದಿ ಮಾಡಿದೆ.
ಸದ್ಯ ನಡೆಯುತ್ತಿರುವ ಆವೃತ್ತಿಯಲ್ಲಿ ಪೇಟ್ರಿಯಾಟ್ಸ್ ತಂಡದ ಪರವಾಗಿ ರಾಯುಡು ಮೂರು ಇನ್ನಿಂಗ್ಸ್ ಗಳಲ್ಲಿ ಕಾಣಿಸಿಕೊಂಡರು, 117.50 ಸ್ಟ್ರೈಕ್ ರೇಟ್ನೊಂದಿಗೆ 47 ರನ್ ಗಳಿಸಿದರು. ಮೂರು ಇನ್ನಿಂಗ್ಸ್ಗಳಲ್ಲಿ ಅವರ ಸ್ಕೋರ್ಗಳು 0, 32 ಮತ್ತು 15 ರನ್.
ಎರಡು ವಾರಗಳ ಹಿಂದೆ, ರಾಯುಡು ಅವರನ್ನು ಪೇಟ್ರಿಯಾಟ್ಸ್ನ ಮಾರ್ಕ್ಯೂ ಆಟಗಾರ ಎಂದು ಘೋಷಿಸಲಾಗಿತ್ತು. ಪ್ರವೀಣ್ ತಾಂಬೆ ನಂತರ ಪುರುಷರ ಸಿಪಿಎಲ್ ನಲ್ಲಿ ಆಡಿದ ಎರಡನೇ ಭಾರತೀಯ ಎಂಬ ಖ್ಯಾತಿಗೆ ರಾಯುಡು ಪಾತ್ರರಾಗಿದ್ದರು. ರಾಯುಡು ಜೊತೆಗೆ ಜಿಂಬಾಬ್ವೆ ವೇಗಿ ಬ್ಲೆಸ್ಸಿಂಗ್ ಮುಜರಬಾನಿ ಕೂಡ ವೈಯಕ್ತಿಕ ಕಾರಣಗಳಿಂದ ಟೂರ್ನಿಯಿಂದ ನಿರ್ಗಮಿಸಿದ್ದಾರೆ.
ಹನೂರು: ವಿಷ ಕುಡಿದು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಮಪುರ ಪೊಲೀಸ್ ಠಾಣೆ ವ್ಯಾಪ್ತಿಯ ಗರಿಕೆಕಂಡಿ ಅರಣ್ಯ ಪ್ರದೇಶದಲ್ಲಿ ನಡೆದಿದೆ.…
ನವದೆಹಲಿ: ದೆಹಲಿ ಪ್ರವಾಸದಲ್ಲಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಇಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಭೇಟಿಯಾಗಿದ್ದಾರೆ. ನಿನ್ನೆ…
ಹನೂರು: ಸುಕ್ಷೇತ್ರ ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಶ್ರಾವಣ ಮಾಸದ ಸಮಾರೋಪದ ಅಂಗವಾಗಿ 108 ಕುಂಭಾಭಿಷೇಕ ಮಹೋತ್ಸವ ಹಾಗೂ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕೊಪ್ಪ ಗ್ರಾಮದಿಂದ ಕೊಳ್ಳೇಗಾಲಕ್ಕೆ ತೆರಳುತ್ತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ…
ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…
ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…