ಕ್ರೀಡೆ

ವೈಯಕ್ತಿಕ ಕಾರಣ ನೀಡಿ ಸಿಪಿಎಲ್ ನಿಂದಲೂ ಹೊರಬಂದ ಅಂಬಾಟಿ ರಾಯುಡು

ಮುಂಬೈ: ಈ ವರ್ಷದ ಆರಂಭದಲ್ಲಿ ಇಂಡಿಯನ್ ಪ್ರೀಮಿಯರ್ ಲೀಗ್‌ (IPL) ನಿಂದ ನಿವೃತ್ತಿ ಘೋಷಿಸಿ ಕೆರಿಬಿಯನ್ ಪ್ರೀಮಿಯರ್ ಲೀಗ್‌ (CPL) ನಲ್ಲಿ ಆಡಲು ತೆರಳಿದ್ದ ಅಂಬಾಟಿ ರಾಯುಡು ಇದೀಗ ಅಲ್ಲಿಂದಲೂ ಹೊರಬಂದಿದ್ದಾರೆ.

ವೈಯಕ್ತಿಕ ಕಾರಣಗಳಿಂದಾಗಿ ಸಿಪಿಎಲ್ ನ ಸೇಂಟ್ ಕಿಟ್ಸ್ ಮತ್ತು ನೆವಿಸ್ ಪೇಟ್ರಿಯಾಟ್ಸ್‌ ನೊಂದಿಗೆ ರಾಯುಡು ತಮ್ಮ ಅವಧಿಯನ್ನು ಕೊನೆಗೊಳಿಸಿದ್ದಾರೆ.

ವೈಯಕ್ತಿಕ ಕಾರಣಗಳಿಂದಾಗಿ ಸೇಂಟ್ ಕಿಟ್ಸ್ ಮತ್ತು ನೆವಿಸ್ ಪೇಟ್ರಿಯಾಟ್ಸ್ ಜೊತೆಗಿನ ಒಪ್ಪಂದವನ್ನು ರಾಯುಡು ಕೊನೆಗೊಳಿಸಿದ್ದಾರೆ ಎಂದು ಇಎಸ್‌ಪಿಎನ್‌ ಕ್ರಿಕ್‌ಇನ್‌ಫೋ ವರದಿ ಮಾಡಿದೆ.

ಸದ್ಯ ನಡೆಯುತ್ತಿರುವ ಆವೃತ್ತಿಯಲ್ಲಿ ಪೇಟ್ರಿಯಾಟ್ಸ್‌ ತಂಡದ ಪರವಾಗಿ ರಾಯುಡು ಮೂರು ಇನ್ನಿಂಗ್ಸ್‌ ಗಳಲ್ಲಿ ಕಾಣಿಸಿಕೊಂಡರು, 117.50 ಸ್ಟ್ರೈಕ್ ರೇಟ್‌ನೊಂದಿಗೆ 47 ರನ್ ಗಳಿಸಿದರು. ಮೂರು ಇನ್ನಿಂಗ್ಸ್‌ಗಳಲ್ಲಿ ಅವರ ಸ್ಕೋರ್‌ಗಳು 0, 32 ಮತ್ತು 15 ರನ್.

ಎರಡು ವಾರಗಳ ಹಿಂದೆ, ರಾಯುಡು ಅವರನ್ನು ಪೇಟ್ರಿಯಾಟ್ಸ್‌ನ ಮಾರ್ಕ್ಯೂ ಆಟಗಾರ ಎಂದು ಘೋಷಿಸಲಾಗಿತ್ತು. ಪ್ರವೀಣ್ ತಾಂಬೆ ನಂತರ ಪುರುಷರ ಸಿಪಿಎಲ್‌ ನಲ್ಲಿ ಆಡಿದ ಎರಡನೇ ಭಾರತೀಯ ಎಂಬ ಖ್ಯಾತಿಗೆ ರಾಯುಡು ಪಾತ್ರರಾಗಿದ್ದರು. ರಾಯುಡು ಜೊತೆಗೆ ಜಿಂಬಾಬ್ವೆ ವೇಗಿ ಬ್ಲೆಸ್ಸಿಂಗ್ ಮುಜರಬಾನಿ ಕೂಡ ವೈಯಕ್ತಿಕ ಕಾರಣಗಳಿಂದ ಟೂರ್ನಿಯಿಂದ ನಿರ್ಗಮಿಸಿದ್ದಾರೆ.

andolanait

Recent Posts

ಎಕ್ಸ್ ಬಿಟ್ಟು ಇನ್‌ಸ್ಟಾ ಹಿಡಿದ ರಾಜಕಾರಣ : ಮೋದಿಗೆ ಜೆನ್-ಝೀ ಕಾಟ

ನವದೆಹಲಿ : ದೇಶದ ರಾಜಕೀಯದ ಭಾಷೆ ಬದಲಾಗುತ್ತಿದೆ. ಒಮ್ಮೆ ಟ್ವಿಟರ್, ಈಗಿನ ಎಕ್ಸ್‌ನಲ್ಲಿ ನಡೆಯುತ್ತಿದ್ದ ವಾಗ್ವಾದ, ಟ್ರೆಂಡ್‌ಗಳು ಈಗ ಇನ್‌ಸ್ಟಾಗ್ರಾಂ…

7 hours ago

ಓದುಗರ ಪತ್ರ: ಕಠಿಣ ಕ್ರಮ ಅಗತ್ಯ

ಉನ್ನತ ವಿದ್ಯಾಭ್ಯಾಸಕ್ಕಾಗಿ ವಿದ್ಯಾರ್ಥಿಗಳು ಶ್ರಮಪಡುವುದು ಗೊತ್ತಿರುವ ವಿಷಯವೇ. ವೃತ್ತಿಪರ ಕೋರ್ಸ್‌ಗಳು ಮತ್ತು ನಂತರ ಉದ್ಯೋಗಕ್ಕಾಗಿ ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿಗೆ ವಿದ್ಯಾರ್ಥಿಗಳು…

15 hours ago

ಓದುಗರ ಪತ್ರ: ಕಸ ವಿಲೇವಾರಿಗೆ ವೈಜ್ಞಾನಿಕ ಪರಿಹಾರ ಅಗತ್ಯ

ರಾಜ್ಯದಲ್ಲಿ ಪ್ರತಿದಿನ ಸೃಷ್ಟಿಯಾಗುವ ೧೨,೧೪೯ ಟನ್ ಕಸದಿಂದ ವಿದ್ಯುತ್ ತಯಾರಿಸುವ ಸರ್ಕಾರದ ಪ್ರಸ್ತಾಪವು ಕೇವಲ ಕಾಗದದ ಮೇಲಷ್ಟೇ ಸುಂದರವಾಗಿ ಕಾಣುತ್ತದೆ.…

15 hours ago

ಕೇಂದ್ರ ಸರ್ಕಾರದ ಮೇಲೆ ಜೆನ್ ಝೀ ಚಳುವಳಿಯ ತೂಗುಗತ್ತಿ

ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್‌  ಪಂಜಬ್ ಮತ್ತು ಹರಿಯಾಣ ರೈತರ ೧೩ ತಿಂಗಳ ನಿರಂತರಹೋರಾಟ ಜನಮಾನಸದಿಂದ ಮರೆಯುತ್ತಿದ್ದಂತೆ ಬಿಜೆಪಿ ನೇತೃತ್ವದ…

15 hours ago

‘ಅಂಕಲ್ ಚೋಕ್’ ಕಟ್ಟಿದ ಬಿದಿರಿನ ಮಾಯಾಲೋಕ

ಜಿ.ಕೃಷ್ಣ ಪ್ರಸಾದ್ ‘ಇಂದು ನಿಮ್ಮನ್ನು ಬಿದಿರಿನ ಲೋಕಕ್ಕೆ ಕರೆದೊಯ್ಯುತ್ತೇನೆ’. ಬೆಳಿಗ್ಗೆ ಕಾಫಿ ಕುಡಿಯುತ್ತಿದ್ದಾಗ ಗೆಳೆಯ ಮೈಕೆಲ್ ಕಾಮನ್ಸ್ ಹೇಳಿದ ಈ…

18 hours ago

ಮುಚ್ಚುತ್ತಿರುವ ಚಿತ್ರಮಂದಿರ

ಮಧುಕರ ಎಂ.ಎಲ್. ಒಂದು ಕಾಲದಲ್ಲಿ ಚಲನಚಿತ್ರವೇ ನಮ್ಮ ಮನರಂಜನೆ ಮಾಧ್ಯಮವಾಗಿದ್ದು, ಪೌರಾಣಿಕ ಕಥೆಗಳು, ರಾಮಾಯಣ ಕಥೆಗಳು, ಮಹಾಭಾರತ ಪ್ರಸಂಗಗಳು ಚಲನಚಿತ್ರವಾಗಿ…

18 hours ago