ಕ್ರೀಡೆ

ಭಾರತೀಯ ಕ್ರಿಕೆಟ್​ನ ಎಲ್ಲಾ ಪ್ರಕಾರಗಳಿಗೆ ನಿವೃತ್ತಿ ಘೋಷಿಸಿದ ಅಂಬಟಿ ರಾಯುಡು

ಐಪಿಎಲ್-2023ರ ಪ್ರಶಸ್ತಿಯನ್ನು ಚೆನ್ನೈ ಸೂಪರ್ ಕಿಂಗ್ಸ್ ಗೆಲ್ಲುವಲ್ಲಿ ಪ್ರಮುಖ ಪಾತ್ರ ವಹಿಸಿದ್ದ ಬ್ಯಾಟ್ಸ್‌ಮನ್ ಅಂಬಟಿ ರಾಯುಡು ಫೈನಲ್ ಪಂದ್ಯಕ್ಕೂ ಮುನ್ನು ಐಪಿಎಲ್​ಗೆ ವಿದಾಯ ಹೇಳಿದ್ದು ಎಲ್ಲರಿಗೂ ಗೊತ್ತೇ ಇದೆ. ಇದೀಗ ಫೈನಲ್ ಗೆದ್ದ 1 ದಿನದ ಬಳಿಕ ಮತ್ತೊಂದು ನಿರ್ಧಾರ ಪ್ರಕಟಿಸಿರುವ ಅಂಬಟಿ ರಾಯುಡು ಭಾರತೀಯ ಕ್ರಿಕೆಟ್‌ನ ಎಲ್ಲಾ ಮಾದರಿಯ ಕ್ರಿಕೆಟ್​ಗೆ ನಿವೃತ್ತಿಯಾಗುತ್ತಿರುವುದಾಗಿ ಟ್ವೀಟ್ ಮಾಡಿದ್ದಾರೆ.

ಸೋಮವಾರ ನಡೆದ ಐಪಿಎಲ್-2023 ರ ಫೈನಲ್ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಗುಜರಾತ್ ಟೈಟಾನ್ಸ್ ತಂಡವನ್ನು ಸೋಲಿಸಿತು. ಈ ಪಂದ್ಯದಲ್ಲಿ ರಾಯುಡು ಎಂಟು ಎಸೆತಗಳಲ್ಲಿ 19 ರನ್ ಗಳಿಸಿ ಚೆನ್ನೈ ತಂಡವನ್ನು ಮತ್ತೆ ಗೆಲುವಿನ ಟ್ರ್ಯಾಕ್​ಗೆ ಕರೆತಂದಿದ್ದರು.

ಐಪಿಎಲ್ ಇತಿಹಾಸದಲ್ಲಿ ಎರಡು ತಂಡಗಳ ಪರ ಆಡಿರುವ ರಾಯಡು ಆರು ಬಾರಿ ಐಪಿಎಲ್ ಗೆದ್ದಿರುವ ಆಟಗಾರ ಎನಿಸಿಕೊಂಡಿದ್ದಾರೆ. ಈ ಬಲಗೈ ಬ್ಯಾಟ್ಸ್‌ಮನ್ ಮುಂಬೈ ಇಂಡಿಯನ್ಸ್ ಮತ್ತು ಚೆನ್ನೈ ಪರ ತಲಾ ಮೂರು ಪ್ರಶಸ್ತಿಗಳನ್ನು ಗೆದ್ದಿದ್ದಾರೆ.

ಟೀಂ ಇಂಡಿಯಾ ಪರ 55 ಏಕದಿನ ಪಂದ್ಯಗಳನ್ನು ಆಡಿರುವ ರಾಯುಡು 47.05 ಸರಾಸರಿಯಲ್ಲಿ 1694 ರನ್ ಬಾರಿಸಿದ್ದಾರೆ. ಔಟಾಗದೆ 124 ರನ್ ಬಾರಿಸಿರುವುದು ಅವರ ಅತ್ಯುತ್ತಮ ಸ್ಕೋರ್ ಆಗಿದೆ. ಇನ್ನು ಏಕದಿನ ಕ್ರಿಕೆಟ್‌ನಲ್ಲಿ ಮೂರು ಶತಕ ಮತ್ತು 10 ಅರ್ಧಶತಕಗಳನ್ನು ಬಾರಿಸಿರುವ ರಾಯುಡು ಟೀಂ ಇಂಡಿಯಾ ಪರ ಆರು ಟಿ20 ಪಂದ್ಯಗಳನ್ನು ಆಡಿ 42 ರನ್ ಸಿಡಿಸಿದ್ದಾರೆ.

ಇನ್ನು ದೇಶಿ ಕ್ರಿಕೆಟ್​ನಲ್ಲಿ 97 ಪ್ರಥಮ ದರ್ಜೆ ಪಂದ್ಯಗಳನ್ನಾಡಿರುವ ರಾಯುಡು 45.56 ರ ಸರಾಸರಿಯಲ್ಲಿ 16 ಶತಕ ಮತ್ತು 34 ಅರ್ಧಶತಕಗಳನೊಳಗೊಂಡಂತೆ 6,151 ರನ್ ಬಾರಿಸಿದ್ದಾರೆ. 178 ಲಿಸ್ಟ್-ಎ ಕ್ರಿಕೆಟ್ ಪಂದ್ಯಗಳಲ್ಲಿ ಐದು ಶತಕ ಸೇರಿದಂತೆ 40 ರ ಸರಾಸರಿಯಲ್ಲಿ 5,607 ರನ್ ಬಾರಿಸಿದ್ದಾರೆ.

2010-2017 ರವರೆಗೆ 114 ಪಂದ್ಯಗಳಲ್ಲಿ ಮುಂಬೈ ಇಂಡಿಯನ್ಸ್ ತಂಡವನ್ನು ಪ್ರತಿನಿಧಿಸಿದ್ದ ರಾಯಡು 126.16 ಸ್ಟ್ರೈಕ್ ರೇಟ್‌ ಹಾಗೂ 27.15 ರ ಸರಾಸರಿಯಲ್ಲಿ 14 ಅರ್ಧ ಶತಕಗಳೊಂದಿಗೆ 2,416 ರನ್ ಬಾರಿಸಿದ್ದರು. ಔಟಾಗದೆ 81* ಬಾರಿಸಿದ್ದು ಅವರ ಅತ್ಯಧಿಕ ರನ್ ಆಗಿತ್ತು.

2018 ರಲ್ಲಿ ಚೆನ್ನೈ ತಂಡ ಸೇರಿಕೊಂಡ ರಾಯುಡು ತಂಡದ ಪರ 90 ಪಂದ್ಯಗಳನ್ನಾಡಿದ್ದು, 30.18 ರ ಸರಾಸರಿಯಲ್ಲಿ 1,932 ರನ್ ಬಾರಿಸಿದ್ದಾರೆ. ಚೆನ್ನೈ ಪರ ಶತಕ ಮತ್ತು ಎಂಟು ಅರ್ಧಶತಕಗಳನ್ನು ಬಾರಿಸಿರುವ ರಾಯುಡು ಅವರ ಅತ್ಯುತ್ತಮ ಸ್ಕೋರ್ 100*.

lokesh

Recent Posts

ರಾಜ್ಯದ ಅಭಿವೃದ್ಧಿಗೆ ಪೂರಕವಾದ ಬಜೆಟ್‌ ಮಂಡಿಸಿದ್ದೇನೆ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕೇಂದ್ರ ಸರ್ಕಾರ ಜಿಎಸ್‌ಟಿ ಕೊಡದಿದ್ದರಿಂದ ರಾಜ್ಯದ ಬೆಳವಣಿಗೆ ಕಡಿಮೆಯಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಕಿಡಿಕಾರಿದರು. 2026-27ನೇ ಸಾಲಿನ ಬಜೆಟ್‌…

12 hours ago

2025-26ನೇ ಸಾಲಿನ ರಾಜ್ಯ ಬಜೆಟ್ ಕುರಿತು ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ಪ್ರತಿಕ್ರಿಯೆ

ಬೆಂಗಳೂರು: ಸಿಎಂ ಸಿದ್ದರಾಮಯ್ಯ ಅವರು ಇಂದು ಅತ್ಯಂತ ಜನಪರ ಬಜೆಟ್‌ ಮಂಡನೆ ಮಾಡಿದ್ದಾರೆ ಎಂದು ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ಸಂತಸ…

13 hours ago

ರಾಜ್ಯ ಬಜೆಟ್‌ನಲ್ಲಿ ಜಯದೇವ ಆಸ್ಪತ್ರೆಗೆ 180 ಕೋಟಿ ಅನುದಾನ: ಸಿಎಂ ಸಿದ್ದುಗೆ ಡಾ.ಬಿ.ದಿನೇಶ್‌ ಧನ್ಯವಾದ

ಮೈಸೂರು: ಮೈಸೂರಿನ ಶ್ರೀ ಜಯದೇವ ಹೃದ್ರೋಗ ಆಸ್ಪತ್ರೆ ಉನ್ನತೀಕರಣಗೊಳಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ೧೮೦ ಕೋಟಿ ರೂ. ಅನುದಾನ ಘೋಷಿಸಿ,…

13 hours ago

ಸಿದ್ದರಾಮಯ್ಯ ದಾಖಲೆ ಮಾಡಲು ಹೋಗಿ ರಾಜ್ಯದ ಆರ್ಥಿಕತೆಯನ್ನು ದಿಕ್ಕಾಪಾಲಾಗಿಸಿದ್ದಾರೆ: ಎಚ್.ಡಿ.ಕುಮಾರಸ್ವಾಮಿ

ಬೆಂಗಳೂರು: ಸ್ಲೋಗನ್ ರಾಮಯ್ಯನವರ ಬಜೆಟ್ಟಿನ ಸುದೀರ್ಘ ಪ್ರಲಾಪ ಆಲಿಸಿದೆ. ಅವರಿಗೆ 17ನೇ ಬಜೆಟ್ ಮಂಡಿಸಿದ ಖುಷಿ, ಜನರಿಗೆ ಬರೆ ಎಳೆಸಿಕೊಂಡ…

14 hours ago

ರಾಜ್ಯ ಬಜೆಟ್‌ ರೈತರ ಪಾಲಿಗೆ ತೀವ್ರ ನಿರಾಸೆ ತಂದಿದೆ: ಕುರುಬೂರು ಶಾಂತಕುಮಾರ್‌ ಅಸಮಾಧಾನ

ಮೈಸೂರು: ರಾಜ್ಯ ಸರ್ಕಾರ ಮಂಡಿಸಿರುವ ಬಜೆಟ್ ರೈತರ ಪಾಲಿಗೆ ತೀವ್ರ ನಿರಾಸೆ ತಂದಿದೆ ಎಂದು ರಾಜ್ಯ ರೈತ ಸಂಘಟನೆಗಳ ಒಕ್ಕೂಟದ…

14 hours ago

ನೀರಿನಲ್ಲಿ ಹೋಮ ಮಾಡಿದ ಸಿದ್ದರಾಮಯ್ಯ ಬಜೆಟ್:‌ ವಿಜಯೇಂದ್ರ ಕಿಡಿ

ಬೆಂಗಳೂರು: ಸಿಎಂ ಸಿದ್ದರಾಮಯ್ಯ ಅವರಿಂದು ಮಂಡಿಸಿದ ರಾಜ್ಯ ಬಜೆಟ್‌ ಅನ್ನು ಟೀಕಿಸಿದ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಅವರು, ಸಿದ್ದರಾಮಯ್ಯ ಅವರು…

14 hours ago