ಕ್ರೀಡೆ

ಭಾರತೀಯ ಕ್ರಿಕೆಟ್​ನ ಎಲ್ಲಾ ಪ್ರಕಾರಗಳಿಗೆ ನಿವೃತ್ತಿ ಘೋಷಿಸಿದ ಅಂಬಟಿ ರಾಯುಡು

ಐಪಿಎಲ್-2023ರ ಪ್ರಶಸ್ತಿಯನ್ನು ಚೆನ್ನೈ ಸೂಪರ್ ಕಿಂಗ್ಸ್ ಗೆಲ್ಲುವಲ್ಲಿ ಪ್ರಮುಖ ಪಾತ್ರ ವಹಿಸಿದ್ದ ಬ್ಯಾಟ್ಸ್‌ಮನ್ ಅಂಬಟಿ ರಾಯುಡು ಫೈನಲ್ ಪಂದ್ಯಕ್ಕೂ ಮುನ್ನು ಐಪಿಎಲ್​ಗೆ ವಿದಾಯ ಹೇಳಿದ್ದು ಎಲ್ಲರಿಗೂ ಗೊತ್ತೇ ಇದೆ. ಇದೀಗ ಫೈನಲ್ ಗೆದ್ದ 1 ದಿನದ ಬಳಿಕ ಮತ್ತೊಂದು ನಿರ್ಧಾರ ಪ್ರಕಟಿಸಿರುವ ಅಂಬಟಿ ರಾಯುಡು ಭಾರತೀಯ ಕ್ರಿಕೆಟ್‌ನ ಎಲ್ಲಾ ಮಾದರಿಯ ಕ್ರಿಕೆಟ್​ಗೆ ನಿವೃತ್ತಿಯಾಗುತ್ತಿರುವುದಾಗಿ ಟ್ವೀಟ್ ಮಾಡಿದ್ದಾರೆ.

ಸೋಮವಾರ ನಡೆದ ಐಪಿಎಲ್-2023 ರ ಫೈನಲ್ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಗುಜರಾತ್ ಟೈಟಾನ್ಸ್ ತಂಡವನ್ನು ಸೋಲಿಸಿತು. ಈ ಪಂದ್ಯದಲ್ಲಿ ರಾಯುಡು ಎಂಟು ಎಸೆತಗಳಲ್ಲಿ 19 ರನ್ ಗಳಿಸಿ ಚೆನ್ನೈ ತಂಡವನ್ನು ಮತ್ತೆ ಗೆಲುವಿನ ಟ್ರ್ಯಾಕ್​ಗೆ ಕರೆತಂದಿದ್ದರು.

ಐಪಿಎಲ್ ಇತಿಹಾಸದಲ್ಲಿ ಎರಡು ತಂಡಗಳ ಪರ ಆಡಿರುವ ರಾಯಡು ಆರು ಬಾರಿ ಐಪಿಎಲ್ ಗೆದ್ದಿರುವ ಆಟಗಾರ ಎನಿಸಿಕೊಂಡಿದ್ದಾರೆ. ಈ ಬಲಗೈ ಬ್ಯಾಟ್ಸ್‌ಮನ್ ಮುಂಬೈ ಇಂಡಿಯನ್ಸ್ ಮತ್ತು ಚೆನ್ನೈ ಪರ ತಲಾ ಮೂರು ಪ್ರಶಸ್ತಿಗಳನ್ನು ಗೆದ್ದಿದ್ದಾರೆ.

ಟೀಂ ಇಂಡಿಯಾ ಪರ 55 ಏಕದಿನ ಪಂದ್ಯಗಳನ್ನು ಆಡಿರುವ ರಾಯುಡು 47.05 ಸರಾಸರಿಯಲ್ಲಿ 1694 ರನ್ ಬಾರಿಸಿದ್ದಾರೆ. ಔಟಾಗದೆ 124 ರನ್ ಬಾರಿಸಿರುವುದು ಅವರ ಅತ್ಯುತ್ತಮ ಸ್ಕೋರ್ ಆಗಿದೆ. ಇನ್ನು ಏಕದಿನ ಕ್ರಿಕೆಟ್‌ನಲ್ಲಿ ಮೂರು ಶತಕ ಮತ್ತು 10 ಅರ್ಧಶತಕಗಳನ್ನು ಬಾರಿಸಿರುವ ರಾಯುಡು ಟೀಂ ಇಂಡಿಯಾ ಪರ ಆರು ಟಿ20 ಪಂದ್ಯಗಳನ್ನು ಆಡಿ 42 ರನ್ ಸಿಡಿಸಿದ್ದಾರೆ.

ಇನ್ನು ದೇಶಿ ಕ್ರಿಕೆಟ್​ನಲ್ಲಿ 97 ಪ್ರಥಮ ದರ್ಜೆ ಪಂದ್ಯಗಳನ್ನಾಡಿರುವ ರಾಯುಡು 45.56 ರ ಸರಾಸರಿಯಲ್ಲಿ 16 ಶತಕ ಮತ್ತು 34 ಅರ್ಧಶತಕಗಳನೊಳಗೊಂಡಂತೆ 6,151 ರನ್ ಬಾರಿಸಿದ್ದಾರೆ. 178 ಲಿಸ್ಟ್-ಎ ಕ್ರಿಕೆಟ್ ಪಂದ್ಯಗಳಲ್ಲಿ ಐದು ಶತಕ ಸೇರಿದಂತೆ 40 ರ ಸರಾಸರಿಯಲ್ಲಿ 5,607 ರನ್ ಬಾರಿಸಿದ್ದಾರೆ.

2010-2017 ರವರೆಗೆ 114 ಪಂದ್ಯಗಳಲ್ಲಿ ಮುಂಬೈ ಇಂಡಿಯನ್ಸ್ ತಂಡವನ್ನು ಪ್ರತಿನಿಧಿಸಿದ್ದ ರಾಯಡು 126.16 ಸ್ಟ್ರೈಕ್ ರೇಟ್‌ ಹಾಗೂ 27.15 ರ ಸರಾಸರಿಯಲ್ಲಿ 14 ಅರ್ಧ ಶತಕಗಳೊಂದಿಗೆ 2,416 ರನ್ ಬಾರಿಸಿದ್ದರು. ಔಟಾಗದೆ 81* ಬಾರಿಸಿದ್ದು ಅವರ ಅತ್ಯಧಿಕ ರನ್ ಆಗಿತ್ತು.

2018 ರಲ್ಲಿ ಚೆನ್ನೈ ತಂಡ ಸೇರಿಕೊಂಡ ರಾಯುಡು ತಂಡದ ಪರ 90 ಪಂದ್ಯಗಳನ್ನಾಡಿದ್ದು, 30.18 ರ ಸರಾಸರಿಯಲ್ಲಿ 1,932 ರನ್ ಬಾರಿಸಿದ್ದಾರೆ. ಚೆನ್ನೈ ಪರ ಶತಕ ಮತ್ತು ಎಂಟು ಅರ್ಧಶತಕಗಳನ್ನು ಬಾರಿಸಿರುವ ರಾಯುಡು ಅವರ ಅತ್ಯುತ್ತಮ ಸ್ಕೋರ್ 100*.

lokesh

Recent Posts

ಇಶಾ ಫೌಂಡೇಶನ್‌ ವಿರುದ್ಧದ ಪ್ರಕರಣ ವಜಾಗೊಳಿಸಿದ ಸುಪ್ರೀಂಕೋರ್ಟ್‌

ಹೊಸದಿಲ್ಲಿ: ತಮಿಳುನಾಡಿನ ಕೊಯಮತ್ತೂರಿನಲ್ಲಿರುವ ಸದ್ಗುರು ಜಗ್ಗಿ ವಾಸುದೇವ್‌ ಅವರ ಆಶ್ರಮ ಸೇರಲು ತನ್ನ ಇಬ್ಬರು ಹೆಣ್ಣುಮಕ್ಕಳನ್ನು ಬ್ರೈನ್‌ವಾಶ್‌ ಮಾಡಲಾಗಿದೆ ಎಂಬ…

1 hour ago

ಮಡಿಕೇರಿ: ಮಗನಿಂದಲೇ ತಂದೆಯ ಹತ್ಯೆ..

ಮಡಿಕೇರಿ: ಮಗನಿಂದಲೇ ತಂದೆ ಹತ್ಯೆಯಾದ ಘಟನೆ ಶ್ರೀಮಂಗಲ ಪೊಲೀಸ್ ಠಾಣಾ ವ್ಯಾಪ್ತಿಯ ಚಿಕ್ಕಮಂಡೂರು ಗ್ರಾಮದಲ್ಲಿ ನಡೆದಿದೆ. ಸಿ ಎನ್ ನಾಣಯ್ಯ…

2 hours ago

ಮುಡಾ: ಇಡಿ ದಾಳಿಗೆ ರಾಜಕೀಯ ಕಾರಣವಲ್ಲ; ಅಶೋಕ್

ಜಾರಿ ನಿರ್ದೇಶನಾಲಯದ ದಾಳಿಗೆ ರಾಜಕೀಯ ಕಾರಣವಲ್ಲ, 3-4 ಸಾವಿರ ಕೋಟಿ ರೂ. ಅಕ್ರಮ ನಡೆದಿದೆ ಎಂದು ಹೇಳಿದ್ದೇ ಕಾಂಗ್ರೆಸ್‌ನವರು: ಪ್ರತಿಪಕ್ಷ…

2 hours ago

BJP ಟಿಕೆಟ್‌ ವಂಚನೆ: ಆರೋಪ ತಳ್ಳಿ ಹಾಕಿದ ಕೇಂದ್ರ ಸಚಿವ ಪ್ರಲ್ಹಾದ ಜೋಶಿ

ನವದೆಹಲಿ: ನನಗೆ ಸಹೋದರಿಯೇ ಇಲ್ಲ ಮತ್ತು ಗೋಪಾಲ್ ಜೋಶಿ ಮೇಲಿನ ಪ್ರಕರಣಕ್ಕೂ ತಮಗೂ ಯಾವುದೇ ಸಂಬಂಧವಿಲ್ಲ ಎಂದು ಕೇಂದ್ರ ಸಚಿವ…

3 hours ago

ಮಂಡ್ಯ ಟೂ ಇಂಡಿಯಾ: ಬೃಹತ್‌ ಉದ್ಯೋಗ ಮೇಳಕ್ಕೆ ಮೊದಲ ದಿನ ಅಭೂತಪೂರ್ವ ಸ್ಪಂದನೆ

ಮಂಡ್ಯ ಟೂ ಇಂಡಿಯಾ; ಸಕ್ಕರೆ ನಾಡಿನಲ್ಲಿ 2 ದಿನಗಳ ಬೃಹತ್ ಉದ್ಯೋಗ ಮೇಳ 150ಕ್ಕೂ ಹೆಚ್ಚು ಕಂಪನಿಗಳ ಭಾಗಿ, ಸಾವಿರಾರು…

3 hours ago

ಮುಡಾ ಮೇಲೆ ಇಡಿ ದಾಳಿ: ಸಿಬಿಐ ತನಿಖೆ ನಡೆಸುವರೆಗೂ ಹೋರಾಟ ಮುಂದುವರಿಕೆ: ಸ್ನೇಹಮಯಿ ಕೃಷ್ಣ

ಮೈಸೂರು: ಮುಡಾ ಮೇಲಿನ ಇಡಿ ಕಾರ್ಯಾಚರಣೆ ಕೇವಲ ಸಿಎಂ ಸಿದ್ದರಾಮಯ್ಯ ಅವರ ಕುಟುಂಬದವರ ಪ್ರಕರಣವಲ್ಲ. ಸಂಪೂರ್ಣ ಮುಡಾ ಅಕ್ರಮದ ಬಗ್ಗೆ…

3 hours ago