ಕ್ರೀಡೆ

ಭಾರತೀಯ ಕ್ರಿಕೆಟ್​ನ ಎಲ್ಲಾ ಪ್ರಕಾರಗಳಿಗೆ ನಿವೃತ್ತಿ ಘೋಷಿಸಿದ ಅಂಬಟಿ ರಾಯುಡು

ಐಪಿಎಲ್-2023ರ ಪ್ರಶಸ್ತಿಯನ್ನು ಚೆನ್ನೈ ಸೂಪರ್ ಕಿಂಗ್ಸ್ ಗೆಲ್ಲುವಲ್ಲಿ ಪ್ರಮುಖ ಪಾತ್ರ ವಹಿಸಿದ್ದ ಬ್ಯಾಟ್ಸ್‌ಮನ್ ಅಂಬಟಿ ರಾಯುಡು ಫೈನಲ್ ಪಂದ್ಯಕ್ಕೂ ಮುನ್ನು ಐಪಿಎಲ್​ಗೆ ವಿದಾಯ ಹೇಳಿದ್ದು ಎಲ್ಲರಿಗೂ ಗೊತ್ತೇ ಇದೆ. ಇದೀಗ ಫೈನಲ್ ಗೆದ್ದ 1 ದಿನದ ಬಳಿಕ ಮತ್ತೊಂದು ನಿರ್ಧಾರ ಪ್ರಕಟಿಸಿರುವ ಅಂಬಟಿ ರಾಯುಡು ಭಾರತೀಯ ಕ್ರಿಕೆಟ್‌ನ ಎಲ್ಲಾ ಮಾದರಿಯ ಕ್ರಿಕೆಟ್​ಗೆ ನಿವೃತ್ತಿಯಾಗುತ್ತಿರುವುದಾಗಿ ಟ್ವೀಟ್ ಮಾಡಿದ್ದಾರೆ.

ಸೋಮವಾರ ನಡೆದ ಐಪಿಎಲ್-2023 ರ ಫೈನಲ್ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಗುಜರಾತ್ ಟೈಟಾನ್ಸ್ ತಂಡವನ್ನು ಸೋಲಿಸಿತು. ಈ ಪಂದ್ಯದಲ್ಲಿ ರಾಯುಡು ಎಂಟು ಎಸೆತಗಳಲ್ಲಿ 19 ರನ್ ಗಳಿಸಿ ಚೆನ್ನೈ ತಂಡವನ್ನು ಮತ್ತೆ ಗೆಲುವಿನ ಟ್ರ್ಯಾಕ್​ಗೆ ಕರೆತಂದಿದ್ದರು.

ಐಪಿಎಲ್ ಇತಿಹಾಸದಲ್ಲಿ ಎರಡು ತಂಡಗಳ ಪರ ಆಡಿರುವ ರಾಯಡು ಆರು ಬಾರಿ ಐಪಿಎಲ್ ಗೆದ್ದಿರುವ ಆಟಗಾರ ಎನಿಸಿಕೊಂಡಿದ್ದಾರೆ. ಈ ಬಲಗೈ ಬ್ಯಾಟ್ಸ್‌ಮನ್ ಮುಂಬೈ ಇಂಡಿಯನ್ಸ್ ಮತ್ತು ಚೆನ್ನೈ ಪರ ತಲಾ ಮೂರು ಪ್ರಶಸ್ತಿಗಳನ್ನು ಗೆದ್ದಿದ್ದಾರೆ.

ಟೀಂ ಇಂಡಿಯಾ ಪರ 55 ಏಕದಿನ ಪಂದ್ಯಗಳನ್ನು ಆಡಿರುವ ರಾಯುಡು 47.05 ಸರಾಸರಿಯಲ್ಲಿ 1694 ರನ್ ಬಾರಿಸಿದ್ದಾರೆ. ಔಟಾಗದೆ 124 ರನ್ ಬಾರಿಸಿರುವುದು ಅವರ ಅತ್ಯುತ್ತಮ ಸ್ಕೋರ್ ಆಗಿದೆ. ಇನ್ನು ಏಕದಿನ ಕ್ರಿಕೆಟ್‌ನಲ್ಲಿ ಮೂರು ಶತಕ ಮತ್ತು 10 ಅರ್ಧಶತಕಗಳನ್ನು ಬಾರಿಸಿರುವ ರಾಯುಡು ಟೀಂ ಇಂಡಿಯಾ ಪರ ಆರು ಟಿ20 ಪಂದ್ಯಗಳನ್ನು ಆಡಿ 42 ರನ್ ಸಿಡಿಸಿದ್ದಾರೆ.

ಇನ್ನು ದೇಶಿ ಕ್ರಿಕೆಟ್​ನಲ್ಲಿ 97 ಪ್ರಥಮ ದರ್ಜೆ ಪಂದ್ಯಗಳನ್ನಾಡಿರುವ ರಾಯುಡು 45.56 ರ ಸರಾಸರಿಯಲ್ಲಿ 16 ಶತಕ ಮತ್ತು 34 ಅರ್ಧಶತಕಗಳನೊಳಗೊಂಡಂತೆ 6,151 ರನ್ ಬಾರಿಸಿದ್ದಾರೆ. 178 ಲಿಸ್ಟ್-ಎ ಕ್ರಿಕೆಟ್ ಪಂದ್ಯಗಳಲ್ಲಿ ಐದು ಶತಕ ಸೇರಿದಂತೆ 40 ರ ಸರಾಸರಿಯಲ್ಲಿ 5,607 ರನ್ ಬಾರಿಸಿದ್ದಾರೆ.

2010-2017 ರವರೆಗೆ 114 ಪಂದ್ಯಗಳಲ್ಲಿ ಮುಂಬೈ ಇಂಡಿಯನ್ಸ್ ತಂಡವನ್ನು ಪ್ರತಿನಿಧಿಸಿದ್ದ ರಾಯಡು 126.16 ಸ್ಟ್ರೈಕ್ ರೇಟ್‌ ಹಾಗೂ 27.15 ರ ಸರಾಸರಿಯಲ್ಲಿ 14 ಅರ್ಧ ಶತಕಗಳೊಂದಿಗೆ 2,416 ರನ್ ಬಾರಿಸಿದ್ದರು. ಔಟಾಗದೆ 81* ಬಾರಿಸಿದ್ದು ಅವರ ಅತ್ಯಧಿಕ ರನ್ ಆಗಿತ್ತು.

2018 ರಲ್ಲಿ ಚೆನ್ನೈ ತಂಡ ಸೇರಿಕೊಂಡ ರಾಯುಡು ತಂಡದ ಪರ 90 ಪಂದ್ಯಗಳನ್ನಾಡಿದ್ದು, 30.18 ರ ಸರಾಸರಿಯಲ್ಲಿ 1,932 ರನ್ ಬಾರಿಸಿದ್ದಾರೆ. ಚೆನ್ನೈ ಪರ ಶತಕ ಮತ್ತು ಎಂಟು ಅರ್ಧಶತಕಗಳನ್ನು ಬಾರಿಸಿರುವ ರಾಯುಡು ಅವರ ಅತ್ಯುತ್ತಮ ಸ್ಕೋರ್ 100*.

lokesh

Recent Posts

ಪ್ರಮಾಣ ವಚನ ಸಮಾರಂಭಕ್ಕೆ ವಿಜಯ್‌ ಪತ್ನಿ, ಮಕ್ಕಳು ಗೈರು

ಚೆನ್ನೈ : ದಳಪತಿ ವಿಜಯ್ ತಮಿಳುನಾಡಿನ ನೂತನ ಮುಖ್ಯಮಂತ್ರಿ ಆಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಸಮಾರಂಭದಲ್ಲಿ ಅನೇಕ ಗಣ್ಯರು ಸೇರಿದ್ದರು.…

9 hours ago

ಮಡಿಕೇರಿ | ನೀರಿನಲ್ಲಿ ಮುಳುಗಿ ಯುವಕ ಸಾವು

ಮಡಿಕೇರಿ : ಸ್ನಾನಕ್ಕೆ ತೆರಳಿದ್ದ ಯುವಕನೊಬ್ಬ ನೀರಿನಲ್ಲಿ ಮುಳುಗಿ ಮೃತಪಟ್ಟಿರುವ ಘಟನೆ ಇಲ್ಲಿಗೆ ಸಮೀಪದ ಬಲಮುರಿ ಗ್ರಾಮದಲ್ಲಿ ಭಾನುವಾರ ನಡೆದಿದೆ.…

9 hours ago

ಗಡಿ ಜಿಲ್ಲೆಯಲ್ಲೂ ತಮಿಳು ಸಿಎಂ ವಿಜಯ್‌ ಹವಾ!

ಹನೂರು : ತಮಿಳುನಾಡಿನ ಮುಖ್ಯಮಂತ್ರಿಯಾಗಿ ಟಿವಿಕೆ ಪಕ್ಷದ ಮುಖ್ಯಸ್ಥ ಹಾಗೂ ನಟ ಸಿ.ಜೋಸೆಫ್ ವಿಜಯ್ ಅಧಿಕಾರ ಸ್ವೀಕರಿಸಿದ ಹಿನ್ನೆಲೆ ಪಟ್ಟಣದಲ್ಲಿ…

9 hours ago

ಪ್ರಧಾನಿ ಸಂಚಾರ ಮಾರ್ಗದಲ್ಲಿ ಜಿಲಿಟೆನ್ ಕಡ್ಡಿ ಪತ್ತೆ ; ಕೆಲಕಾಲ ಆತಂಕ ; ಓರ್ವ ವಶಕ್ಕೆ

ಬೆಂಗಳೂರು : ಪ್ರಧಾನಿ ನರೇಂದ್ರಮೋದಿ ಅವರು ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲು ನಗರಕ್ಕೆ ಬಂದಿದ್ದ ವೇಳೆ ಜಿಲಿಟಿನ್ ಕಡ್ಡಿಗಳು ಪತ್ತೆಯಾಗಿ ಕೆಲಕಾಲ…

9 hours ago

ತಮಿಳುನಾಡು | ತಿರುಚಿರಾಪಳ್ಳಿ ಕ್ಷೇತ್ರಕ್ಕೆ ವಿಜಯ್ ರಾಜೀನಾಮೆ

ಚೆನ್ನೈ : ಟಿವಿಕೆ ಮುಖ್ಯಸ್ಥ ಮತ್ತು ತಮಿಳುನಾಡು ಮುಖ್ಯಮಂತ್ರಿ ಸಿ.ಜೋಸೆಫ್ ವಿಜಯ್ ಭಾನುವಾರ ತಿರುಚಿರಾಪಳ್ಳಿ ಪೂರ್ವ ವಿಧಾನಸಭಾ ಕ್ಷೇತ್ರಕ್ಕೆ ರಾಜೀನಾಮೆ…

10 hours ago

ಹುಣಸೂರು | ಭಾರೀ ಗಾಳಿ-ಮಳೆಗೆ ಹಾರಿಹೋದ ಚಾವಣಿ

ಹುಣಸೂರು : ಬಿರುಗಾಳಿ ಮಳೆಗೆ ತಾಲ್ಲೂಕಿನ ಹನಗೋಡು ಹೋಬಳಿಯ ವದ್ಲಿ ಮನುಗನಹಳ್ಳಿಯಲ್ಲಿ ಮನೆಯ ಚಾವಣಿಗೆ ಹಾಕಿದ್ದ ಕಲ್ನಾರ್ ಶೀಟ್ ಹಾರಿಹೋಗಿದ್ದು,…

11 hours ago