ಕ್ರೀಡೆ

ಭಾರತೀಯ ಕ್ರಿಕೆಟ್​ನ ಎಲ್ಲಾ ಪ್ರಕಾರಗಳಿಗೆ ನಿವೃತ್ತಿ ಘೋಷಿಸಿದ ಅಂಬಟಿ ರಾಯುಡು

ಐಪಿಎಲ್-2023ರ ಪ್ರಶಸ್ತಿಯನ್ನು ಚೆನ್ನೈ ಸೂಪರ್ ಕಿಂಗ್ಸ್ ಗೆಲ್ಲುವಲ್ಲಿ ಪ್ರಮುಖ ಪಾತ್ರ ವಹಿಸಿದ್ದ ಬ್ಯಾಟ್ಸ್‌ಮನ್ ಅಂಬಟಿ ರಾಯುಡು ಫೈನಲ್ ಪಂದ್ಯಕ್ಕೂ ಮುನ್ನು ಐಪಿಎಲ್​ಗೆ ವಿದಾಯ ಹೇಳಿದ್ದು ಎಲ್ಲರಿಗೂ ಗೊತ್ತೇ ಇದೆ. ಇದೀಗ ಫೈನಲ್ ಗೆದ್ದ 1 ದಿನದ ಬಳಿಕ ಮತ್ತೊಂದು ನಿರ್ಧಾರ ಪ್ರಕಟಿಸಿರುವ ಅಂಬಟಿ ರಾಯುಡು ಭಾರತೀಯ ಕ್ರಿಕೆಟ್‌ನ ಎಲ್ಲಾ ಮಾದರಿಯ ಕ್ರಿಕೆಟ್​ಗೆ ನಿವೃತ್ತಿಯಾಗುತ್ತಿರುವುದಾಗಿ ಟ್ವೀಟ್ ಮಾಡಿದ್ದಾರೆ.

ಸೋಮವಾರ ನಡೆದ ಐಪಿಎಲ್-2023 ರ ಫೈನಲ್ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಗುಜರಾತ್ ಟೈಟಾನ್ಸ್ ತಂಡವನ್ನು ಸೋಲಿಸಿತು. ಈ ಪಂದ್ಯದಲ್ಲಿ ರಾಯುಡು ಎಂಟು ಎಸೆತಗಳಲ್ಲಿ 19 ರನ್ ಗಳಿಸಿ ಚೆನ್ನೈ ತಂಡವನ್ನು ಮತ್ತೆ ಗೆಲುವಿನ ಟ್ರ್ಯಾಕ್​ಗೆ ಕರೆತಂದಿದ್ದರು.

ಐಪಿಎಲ್ ಇತಿಹಾಸದಲ್ಲಿ ಎರಡು ತಂಡಗಳ ಪರ ಆಡಿರುವ ರಾಯಡು ಆರು ಬಾರಿ ಐಪಿಎಲ್ ಗೆದ್ದಿರುವ ಆಟಗಾರ ಎನಿಸಿಕೊಂಡಿದ್ದಾರೆ. ಈ ಬಲಗೈ ಬ್ಯಾಟ್ಸ್‌ಮನ್ ಮುಂಬೈ ಇಂಡಿಯನ್ಸ್ ಮತ್ತು ಚೆನ್ನೈ ಪರ ತಲಾ ಮೂರು ಪ್ರಶಸ್ತಿಗಳನ್ನು ಗೆದ್ದಿದ್ದಾರೆ.

ಟೀಂ ಇಂಡಿಯಾ ಪರ 55 ಏಕದಿನ ಪಂದ್ಯಗಳನ್ನು ಆಡಿರುವ ರಾಯುಡು 47.05 ಸರಾಸರಿಯಲ್ಲಿ 1694 ರನ್ ಬಾರಿಸಿದ್ದಾರೆ. ಔಟಾಗದೆ 124 ರನ್ ಬಾರಿಸಿರುವುದು ಅವರ ಅತ್ಯುತ್ತಮ ಸ್ಕೋರ್ ಆಗಿದೆ. ಇನ್ನು ಏಕದಿನ ಕ್ರಿಕೆಟ್‌ನಲ್ಲಿ ಮೂರು ಶತಕ ಮತ್ತು 10 ಅರ್ಧಶತಕಗಳನ್ನು ಬಾರಿಸಿರುವ ರಾಯುಡು ಟೀಂ ಇಂಡಿಯಾ ಪರ ಆರು ಟಿ20 ಪಂದ್ಯಗಳನ್ನು ಆಡಿ 42 ರನ್ ಸಿಡಿಸಿದ್ದಾರೆ.

ಇನ್ನು ದೇಶಿ ಕ್ರಿಕೆಟ್​ನಲ್ಲಿ 97 ಪ್ರಥಮ ದರ್ಜೆ ಪಂದ್ಯಗಳನ್ನಾಡಿರುವ ರಾಯುಡು 45.56 ರ ಸರಾಸರಿಯಲ್ಲಿ 16 ಶತಕ ಮತ್ತು 34 ಅರ್ಧಶತಕಗಳನೊಳಗೊಂಡಂತೆ 6,151 ರನ್ ಬಾರಿಸಿದ್ದಾರೆ. 178 ಲಿಸ್ಟ್-ಎ ಕ್ರಿಕೆಟ್ ಪಂದ್ಯಗಳಲ್ಲಿ ಐದು ಶತಕ ಸೇರಿದಂತೆ 40 ರ ಸರಾಸರಿಯಲ್ಲಿ 5,607 ರನ್ ಬಾರಿಸಿದ್ದಾರೆ.

2010-2017 ರವರೆಗೆ 114 ಪಂದ್ಯಗಳಲ್ಲಿ ಮುಂಬೈ ಇಂಡಿಯನ್ಸ್ ತಂಡವನ್ನು ಪ್ರತಿನಿಧಿಸಿದ್ದ ರಾಯಡು 126.16 ಸ್ಟ್ರೈಕ್ ರೇಟ್‌ ಹಾಗೂ 27.15 ರ ಸರಾಸರಿಯಲ್ಲಿ 14 ಅರ್ಧ ಶತಕಗಳೊಂದಿಗೆ 2,416 ರನ್ ಬಾರಿಸಿದ್ದರು. ಔಟಾಗದೆ 81* ಬಾರಿಸಿದ್ದು ಅವರ ಅತ್ಯಧಿಕ ರನ್ ಆಗಿತ್ತು.

2018 ರಲ್ಲಿ ಚೆನ್ನೈ ತಂಡ ಸೇರಿಕೊಂಡ ರಾಯುಡು ತಂಡದ ಪರ 90 ಪಂದ್ಯಗಳನ್ನಾಡಿದ್ದು, 30.18 ರ ಸರಾಸರಿಯಲ್ಲಿ 1,932 ರನ್ ಬಾರಿಸಿದ್ದಾರೆ. ಚೆನ್ನೈ ಪರ ಶತಕ ಮತ್ತು ಎಂಟು ಅರ್ಧಶತಕಗಳನ್ನು ಬಾರಿಸಿರುವ ರಾಯುಡು ಅವರ ಅತ್ಯುತ್ತಮ ಸ್ಕೋರ್ 100*.

lokesh

Recent Posts

ಅಗ್ನಿ ದುರಂತ | ಕೊನೆಗೂ ಅಬಕಾರಿ ಡಿಸಿ ತಲೆದಂಡ

ಮೈಸೂರು : ನಗರದ ದಟ್ಟಗಳ್ಳಿಯಲ್ಲಿರುವ ಮಾರಾ ಬಾರ್ ಅಂಡ್ ರೆಸ್ಟೋರೆಂಟ್ (ಫಾಕ್ಸ್ಡೆನ್‌ಬಾರ್) ನಲ್ಲಿ ಸಂಭವಿಸಿದ  ಅಗ್ನಿದುರಂತ ಪ್ರಕರಣಕ್ಕೆ ಸಂಬಂಧಿಸಿದಂತೆ ಕೊನೆಗೂ…

8 hours ago

ಮಕ್ಕಳ ಮನದಂಗಳದಲ್ಲಿ ಗಾಂಧೀ ಚಿಂತನೆಯ ಬೇರುಗಳು

ನನ್ನ ಆದರ್ಶ ವ್ಯಕ್ತಿ ಗಾಂಧಿ ಮಹಾತ್ಮ ಗಾಂಧೀಜಿ ತಮ್ಮ ಜೀವನದಲ್ಲಿ ಬಹಳ ಕಷ್ಟಪಟ್ಟು ಮೇಲೆ ಬಂದರು. ಭಾರತದ ಸ್ವಾತಂತ್ರ್ಯ ಕ್ಕಾಗಿ…

11 hours ago

ಗಾಂಧೀ ಅಭಿಯಾನ ಅರಿವಿನ ಯಾನ | ಗಾಂಧೀಜಿ ಅಹಿಂಸಾ ಮಾರ್ಗಕ್ಕೆ ಮೈಲಾರ ಮಹಾದೇವ

ದೇಶದ ಸ್ವಾತಂತ್ರ್ಯ ಸಂಗ್ರಾಮದಲ್ಲಿ ಸಕ್ರಿಯವಾಗಿ ಪಾಲ್ಗೊಂಡು ಪ್ರಾಣತ್ಯಾಗ ಮಾಡಿದ ಮಹನೀಯರಲ್ಲಿ ಎದ್ದು ಕಾಣುವ ಹೆಸರು ಕರ್ನಾಟಕದ ಹೆಮ್ಮೆಯ ಪುತ್ರ ಮೈಲಾರ…

11 hours ago

ಗಾಂಧಿ ಅಭಿಯಾನ ಅರಿವಿನ ಯಾನ | ವಿಲಾಯತಿಗೆ ತೆರಳಲು ಅಮ್ಮ ಒಪ್ಪಿದರು

೧೮೮೭ನೇ ಇಸವಿಯಲ್ಲಿ ನಾನು ಮೆಟ್ರಿಕ್ ಪರೀಕ್ಷೆಯಲ್ಲಿ ತೇರ್ಗಡೆಯಾದೆನು. ಮೆಟ್ರಿಕ್ ಪರೀಕ್ಷೆಗೆ ಬೊಂಬಾಯಿ ಮತ್ತು ಅಹಮದಾಬಾದ್ ಎರಡೂ ಕೇಂದ್ರಗಳಾಗಿದ್ದವು. ನಾನು ಹತ್ತಿರದ…

11 hours ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಜೂನ್‌ 27 ಶನಿವಾರ

15 hours ago

ಚಿರಕನಹಳ್ಳಿ ; ಬೋನಿಗೆ ಬಿದ್ದ ಹುಲಿ

ಗುಂಡ್ಲುಪೇಟೆ: ತಾಲ್ಲೂಕಿನ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶ ವ್ಯಾಪ್ತಿಯ ಕುಂದಕೆರೆ ವಲಯದ ಚಿರಕನಹಳ್ಳಿ ಗ್ರಾಮದಲ್ಲಿ ಪೋತರಾಜು ಎಂಬುವವರ ಜಮೀನಿನಲ್ಲಿ ಅರಣ್ಯ…

1 day ago