ಕ್ರೀಡೆ

ಭಾರತೀಯ ಕ್ರಿಕೆಟ್​ನ ಎಲ್ಲಾ ಪ್ರಕಾರಗಳಿಗೆ ನಿವೃತ್ತಿ ಘೋಷಿಸಿದ ಅಂಬಟಿ ರಾಯುಡು

ಐಪಿಎಲ್-2023ರ ಪ್ರಶಸ್ತಿಯನ್ನು ಚೆನ್ನೈ ಸೂಪರ್ ಕಿಂಗ್ಸ್ ಗೆಲ್ಲುವಲ್ಲಿ ಪ್ರಮುಖ ಪಾತ್ರ ವಹಿಸಿದ್ದ ಬ್ಯಾಟ್ಸ್‌ಮನ್ ಅಂಬಟಿ ರಾಯುಡು ಫೈನಲ್ ಪಂದ್ಯಕ್ಕೂ ಮುನ್ನು ಐಪಿಎಲ್​ಗೆ ವಿದಾಯ ಹೇಳಿದ್ದು ಎಲ್ಲರಿಗೂ ಗೊತ್ತೇ ಇದೆ. ಇದೀಗ ಫೈನಲ್ ಗೆದ್ದ 1 ದಿನದ ಬಳಿಕ ಮತ್ತೊಂದು ನಿರ್ಧಾರ ಪ್ರಕಟಿಸಿರುವ ಅಂಬಟಿ ರಾಯುಡು ಭಾರತೀಯ ಕ್ರಿಕೆಟ್‌ನ ಎಲ್ಲಾ ಮಾದರಿಯ ಕ್ರಿಕೆಟ್​ಗೆ ನಿವೃತ್ತಿಯಾಗುತ್ತಿರುವುದಾಗಿ ಟ್ವೀಟ್ ಮಾಡಿದ್ದಾರೆ.

ಸೋಮವಾರ ನಡೆದ ಐಪಿಎಲ್-2023 ರ ಫೈನಲ್ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಗುಜರಾತ್ ಟೈಟಾನ್ಸ್ ತಂಡವನ್ನು ಸೋಲಿಸಿತು. ಈ ಪಂದ್ಯದಲ್ಲಿ ರಾಯುಡು ಎಂಟು ಎಸೆತಗಳಲ್ಲಿ 19 ರನ್ ಗಳಿಸಿ ಚೆನ್ನೈ ತಂಡವನ್ನು ಮತ್ತೆ ಗೆಲುವಿನ ಟ್ರ್ಯಾಕ್​ಗೆ ಕರೆತಂದಿದ್ದರು.

ಐಪಿಎಲ್ ಇತಿಹಾಸದಲ್ಲಿ ಎರಡು ತಂಡಗಳ ಪರ ಆಡಿರುವ ರಾಯಡು ಆರು ಬಾರಿ ಐಪಿಎಲ್ ಗೆದ್ದಿರುವ ಆಟಗಾರ ಎನಿಸಿಕೊಂಡಿದ್ದಾರೆ. ಈ ಬಲಗೈ ಬ್ಯಾಟ್ಸ್‌ಮನ್ ಮುಂಬೈ ಇಂಡಿಯನ್ಸ್ ಮತ್ತು ಚೆನ್ನೈ ಪರ ತಲಾ ಮೂರು ಪ್ರಶಸ್ತಿಗಳನ್ನು ಗೆದ್ದಿದ್ದಾರೆ.

ಟೀಂ ಇಂಡಿಯಾ ಪರ 55 ಏಕದಿನ ಪಂದ್ಯಗಳನ್ನು ಆಡಿರುವ ರಾಯುಡು 47.05 ಸರಾಸರಿಯಲ್ಲಿ 1694 ರನ್ ಬಾರಿಸಿದ್ದಾರೆ. ಔಟಾಗದೆ 124 ರನ್ ಬಾರಿಸಿರುವುದು ಅವರ ಅತ್ಯುತ್ತಮ ಸ್ಕೋರ್ ಆಗಿದೆ. ಇನ್ನು ಏಕದಿನ ಕ್ರಿಕೆಟ್‌ನಲ್ಲಿ ಮೂರು ಶತಕ ಮತ್ತು 10 ಅರ್ಧಶತಕಗಳನ್ನು ಬಾರಿಸಿರುವ ರಾಯುಡು ಟೀಂ ಇಂಡಿಯಾ ಪರ ಆರು ಟಿ20 ಪಂದ್ಯಗಳನ್ನು ಆಡಿ 42 ರನ್ ಸಿಡಿಸಿದ್ದಾರೆ.

ಇನ್ನು ದೇಶಿ ಕ್ರಿಕೆಟ್​ನಲ್ಲಿ 97 ಪ್ರಥಮ ದರ್ಜೆ ಪಂದ್ಯಗಳನ್ನಾಡಿರುವ ರಾಯುಡು 45.56 ರ ಸರಾಸರಿಯಲ್ಲಿ 16 ಶತಕ ಮತ್ತು 34 ಅರ್ಧಶತಕಗಳನೊಳಗೊಂಡಂತೆ 6,151 ರನ್ ಬಾರಿಸಿದ್ದಾರೆ. 178 ಲಿಸ್ಟ್-ಎ ಕ್ರಿಕೆಟ್ ಪಂದ್ಯಗಳಲ್ಲಿ ಐದು ಶತಕ ಸೇರಿದಂತೆ 40 ರ ಸರಾಸರಿಯಲ್ಲಿ 5,607 ರನ್ ಬಾರಿಸಿದ್ದಾರೆ.

2010-2017 ರವರೆಗೆ 114 ಪಂದ್ಯಗಳಲ್ಲಿ ಮುಂಬೈ ಇಂಡಿಯನ್ಸ್ ತಂಡವನ್ನು ಪ್ರತಿನಿಧಿಸಿದ್ದ ರಾಯಡು 126.16 ಸ್ಟ್ರೈಕ್ ರೇಟ್‌ ಹಾಗೂ 27.15 ರ ಸರಾಸರಿಯಲ್ಲಿ 14 ಅರ್ಧ ಶತಕಗಳೊಂದಿಗೆ 2,416 ರನ್ ಬಾರಿಸಿದ್ದರು. ಔಟಾಗದೆ 81* ಬಾರಿಸಿದ್ದು ಅವರ ಅತ್ಯಧಿಕ ರನ್ ಆಗಿತ್ತು.

2018 ರಲ್ಲಿ ಚೆನ್ನೈ ತಂಡ ಸೇರಿಕೊಂಡ ರಾಯುಡು ತಂಡದ ಪರ 90 ಪಂದ್ಯಗಳನ್ನಾಡಿದ್ದು, 30.18 ರ ಸರಾಸರಿಯಲ್ಲಿ 1,932 ರನ್ ಬಾರಿಸಿದ್ದಾರೆ. ಚೆನ್ನೈ ಪರ ಶತಕ ಮತ್ತು ಎಂಟು ಅರ್ಧಶತಕಗಳನ್ನು ಬಾರಿಸಿರುವ ರಾಯುಡು ಅವರ ಅತ್ಯುತ್ತಮ ಸ್ಕೋರ್ 100*.

lokesh

Recent Posts

ಮೈಸೂರು: ಹೊಸ ಮಠದ ಚಿದಾನಂದ ಸ್ವಾಮೀಜಿ ಲಿಂಗೈಕ್ಯ

ಮೈಸೂರು: ಮೈಸೂರಿನ ಶಂಕರ ಮಠದ ರಸ್ತಯಲ್ಲಿರುವ ಹೊಸ ಮಠದ ಚಿದಾನಂದ ಸ್ವಾಮೀಜಿ ಅವರು ಇಂದು ಲಿಂಗೈಕ್ಯರಾಗಿದ್ದಾರೆ. ವಯೋಸಹಜ ಆರೋಗ್ಯ ಸಮಸ್ಯೆಗಳಿಂದ…

1 hour ago

ಓದುಗರ ಪತ್ರ: ಹೋಟೆಲ್‌ಗಳ ಆಹಾರ ಶುದ್ಧತೆ, ಪದಾರ್ಥಗಳ ತಪಾಸಣೆ ನಿಯಮಿತವಾಗಿ ನಡೆಯಲಿ

ಅಧಿಕಾರಿಗಳ ತಪಾಸಣೆ ವೇಳೆ ಬೆಂಗಳೂರಿನ ಕೆಲವು ಪಂಚತಾರಾ ಹೋಟೆಲ್‌ಗಳಲ್ಲಿ, ಕೊಳೆತ ಮಾಂಸ, ಹಳೆಯ ತರಕಾರಿಗಳು ಇರುವುದು ಪತ್ತೆಯಾಗಿರುವುದೇ ಎಲ್ಲೆಲ್ಲೂ ಚರ್ಚಿತ…

8 hours ago

ಓದುಗರ ಪತ್ರ: ವೈದ್ಯಕೀಯ ಸೀಟು ಹೆಚ್ಚಳ: ಪ್ರಶಂಸನೀಯ ನಡೆ

೨೦೨೮ - ೨೯ ರ ಶೈಕ್ಷಣಿಕ ವರ್ಷದ ವೇಳೆಗೆ ದೇಶಾದ್ಯಂತ ಹೆಚ್ಚುವರಿಯಾಗಿ ೫,೦೦೦ ಸ್ನಾತಕೋತ್ತರ ವೈದ್ಯಕೀಯ ಸೀಟುಗಳನ್ನು ಸೇರ್ಪಡೆಗೊಳಿಸಿ ದೇಶದಲ್ಲಿ…

8 hours ago

ಓದುಗರ ಪತ್ರ: ಬಂದ್ ಮಾಡುವುದರಿಂದ ನಮಗೇ ತೊಂದರೆ ಅಲ್ಲವೇ?

ಪ್ರಸ್ತುತ ವರ್ಷ ಮುಂಗಾರು ಕೈಕೊಟ್ಟಿದ್ದು ಎಲ್‌ನಿನೋ ಪರಿಣಾಮ ಎಂದು ವರದಿಗಳು ಹೇಳಿವೆ. ಜೊತೆಗೆ ಹವಾಮಾನ ಇಲಾಖೆ ಅದನ್ನು ಪುಷ್ಟೀಕರಿಸಿದ್ದು, ಈ…

8 hours ago

ತಂಬಾಕು ನಿಯಂತ್ರಣ: ಕೇಂದ್ರ ದ್ವಂದ್ವ ನೀತಿ

ವಸಂತಕುಮಾರ ಮೈಸೂರು ಮಠ, ತಂಬಾಕು ವಿರೋಧಿ ಹೋರಾಟಗಾರ ಗುಣಮಟ್ಟದ ತಂಬಾಕು ಬೆಳೆ ಸಂಬಂಧ ರಾಜಕೀಯ ಹಸ್ತಕ್ಷೇಪ ಸಲ್ಲದು ಯಾವುದೇ ರೀತಿಯ…

8 hours ago

ಮಳೆಗಾಲದಲ್ಲಿ ಶುದ್ಧ ಕುಡಿಯುವ ನೀರು, ಬಿಸಿ ನೀರು ಒದಗಿಸಿ

ನವೀನ್ ಡಿಸೋಜ ಸಾಂಕ್ರಾಮಿಕ ಕಾಯಿಲೆಯಲ್ಲಿ ಹಿನ್ನೆಲೆ ಹೋಟೆಲ್, ರೆಸ್ಟೋರೆಂಟ್‌ಗಳಿಗೆ ಆಹಾರ ಸುರಕ್ಷತೆ ಇಲಾಖೆ ಸೂಚನೆ  ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಮಳೆ…

8 hours ago