ಕ್ರೀಡೆ

Paris Olympics 2024: ಭಾರತೀಯ ಹಾಕಿ ಆಟಗಾರನಿಗೆ ಒಂದು ಪಂದ್ಯ ನಿಷೇಧ

ಪ್ಯಾರಿಸ್‌: ಒಲಂಪಿಕ್ಸ್‌ ಕ್ರೀಡಾಕೂಟದ ಹಾಕಿ ವಿಭಾಗದಲ್ಲಿ ನಿನ್ನೆ (ಆ.5) ನಡೆದ ಭಾರತ ಹಾಗೂ ಗ್ರೇಟ್‌ ಬ್ರಿಟನ್‌ ನಡುವಿನ ಕ್ವಾರ್ಟರ್‌ ಫೈನಲ್ಸ್‌ ಪಂದ್ಯಾವಳಿಯಲ್ಲಿ ಭಾರತ ತಂಡದ ಶ್ರೇಷ್ಠ ಪ್ರದರ್ಶನ ನೀಡುವ ಮೂಲಕ ಸೆಮಿಸ್‌ಗೆ ಅರ್ಹತೆ ಗಿಟ್ಟಿಸಿಕೊಂಡಿದೆ. ಇದೇ ಆಗಸ್ಟ್‌ 6 ರಂದು ಸಮಿಸ್‌ನಲ್ಲಿ ಬಲಿಷ್ಠ ಜರ್ಮನಿ ತಂಡವನ್ನು ಭಾರತ ಎದುರಿಸಲಿದೆ.

ಈ ವೇಳೆಯಲ್ಲಿಯೇ ಭಾರತ ತಂಡಕ್ಕ ಬಹು ದೊಡ್ಡ ಹೊಡೆತ ಬಿದ್ದಿದೆ. ಭಾರತ ತಂಡದ ಅನುಭವಿ ಆಟಗಾರ ಅಮಿತ್‌ ರೋಹಿದಾಸ್‌ ಅವರ ಮೇಲೆ ಒಂದು ಪಂದ್ಯ ನಿಷೇಧಿಸಿದ ಆದೇಶ ಹೊರಡಿಸಲಾಗಿದೆ.

ಇತ್ತ ನಿನ್ನೆ ನಡೆದ ಬ್ರಿಟನ್‌ ವಿರುದ್ಧದ ಪಂದ್ಯದಲ್ಲಿ ಭಾರತ ತಂಡ ಅನುಭವಿ ಡಿಫೆಂಡರ್‌ ಅಮಿತ್‌ ರೋಹಿದಾಸ್‌ ಅವರಿಗೆ ನಿಯಮ ಉಲ್ಲಂಘನೆ ಆಧಾರದಲ್ಲಿ ರೆಡ್‌ ಕಾರ್ಡ್‌ ನೀಡಲಾಗಿತ್ತು. ಇದಾದ ಬಳಿಕ ಬ್ರಿಟನ್‌ ವಿರುದ್ಧ ಕೇವಲ ಹತ್ತು ಜನರ ಶ್ರೇಷ್ಠ ಹೋರಾಟದ ಫಲವಾಗಿ ಭಾರತ ಸೆಮಿಸ್‌ ತಲುಪಿತ್ತು. ಇದಾದ ಒಂದು ದಿನದ ಬಳಿಕ ಭಾರತ ತಂಡದ ಡಿಫೆಂಡರ್‌ ಅಮಿತ್‌ ವಿರುದ್ಧ ಅಂತರಾಷ್ಟ್ರೀಯ ಹಾಕಿ ಫೆಡರೇಷನ್‌ ಒಂದು ಪಂದ್ಯ ನಿಷೇಧ ಏರಿದೆ. ಈ ಮೂಲಕ ಭಾರತ ತಂಡಕ್ಕೆ ಭಾರೀ ಹಿನ್ನಡೆ ಉಂಟಾಗಿದೆ.

ಈ ಬಗ್ಗೆ ಮಾತನಾಡಿರುವ ಹಾಕಿ ಫೆಡರೇಷನ್‌, ಭಾರತ ಹಾಗೂ ಗ್ರೇಟ್‌ ಬ್ರಿಟನ್‌ ನಡುವಣ ಪಂದ್ಯದಲ್ಲಿ ಅಮಿತ್‌ ರೋಹಿದಾಸ್‌ ಅವರು ನಿಯಮ ಉಲ್ಲಂಘನೆ ಮಾಡಿದ್ದಾರೆ. ಹಾಗಾಗಿ ಅವರಿಗೆ ಮುಂದಿನ ಒಂದು ಪಂದ್ಯ ನಿಷೇಧಿಸಲಾಗಿದೆ ಎಂದು ಹೇಳಿದೆ. ಭಾರತ ತಂಡ ಅಮಿತ್‌ ಹೊರತುಪಡಿಸಿ ಉಳಿದ ಹದಿನೈದು ಆಟಗಾರರ ತಂಡವನ್ನು ರಚಿಸಬೇಕಿದೆ.

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ತಿ.‌ ನರಸೀಪುರ: ಬೈಕ್ ಡಿಕ್ಕಿ ಚಿರತೆ ಸಾವು

ತಿ. ನರಸೀಪುರ: ತಾಲೂಕಿನ ಬನ್ನೂರು ಹೋಬಳಿಯ ಬಸವನಹಳ್ಳಿ ಗ್ರಾಮದ ಸಮೀಪದ ಮುಖ್ಯರಸ್ತೆಯಲ್ಲಿ ದ್ವಿಚಕ್ರ ವಾಹನ ಚಿರತೆಗೆ ಡಿಕ್ಕಿ ಹೊಡೆದ ಪರಿಣಾಮ…

3 hours ago

ತಿರುಪತಿ ಲಡ್ಡು: ತುಪ್ಪದಲ್ಲಿ ಪ್ರಾಣಿ ಕೊಬ್ಬು ಬಳಕೆ

ಅಮರಾವತಿ: ಜಗತ್‌ ಪ್ರಸಿದ್ಧ ತಿರುಪತಿ ಲಡ್ಡು ಪ್ರಸಾದದಲ್ಲಿ ಪ್ರಾಣಿಗಳ ಕೊಬ್ಬು ಹಾಗೂ ಕಳಪೆ ಗುಣಮಟ್ಟದ ಪದಾರ್ಥಗಳು ಪತ್ತೆಯಾಗಿದೆ ಎಂದು ತೆಲುಗು…

5 hours ago

ಬುರ್ಖಾಧಾರಿ ಮಹಿಳೆಯಿಂದ ಸಲ್ಮಾನ್‌ ಖಾನ್‌ ತಂದೆಗೆ ಜೀವ ಬೆದರಿಕೆ: ಮಹಿಳೆ ಸೇರಿ ಇಬ್ಬರ ಬಂಧನ

ಮುಂಬೈ:‌ ಬಾಲಿವುಡ್‌ನ ಭಾಯಿಜಾನ್ ಸಲ್ಮಾನ್‌ ಖಾನ್‌ ಅವರ ತಂದೆಗೆ ಬುರ್ಖಾ ಧರಿಸಿದ್ದ ಮಹಿಳೆ ಹಾಗೂ ಇನ್ನೊರ್ವ ವ್ಯಕ್ತಿ ಜೀವ ಬೆದರಿಕೆ…

5 hours ago

ಶಾಸಕ ಮುನಿರತ್ನಗೆ ಜಾಮೀನು: ಅತ್ಯಾಚಾರ ಪ್ರಕರಣದಲ್ಲಿ ಮತ್ತೆ ಬಂಧನ ಸಾಧ್ಯತೆ

ಬೆಂಗಳೂರು: ಗುತ್ತಿಗೆದಾರರೊಬ್ಬರಿಗೆ ಜಾತಿನಿಂದನೆ ಹಾಗೂ ಪ್ರಾಣ ಬೆದರಿಕೆ ಹಾಕಿದ ಪ್ರಕರಣದಲ್ಲಿ ಬೆಂಗಳೂರಿನ ರಾಜರಾಜೇಶ್ವರಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನಗೆ…

6 hours ago

ನುಡಿ ಹಬ್ಬಕ್ಕೆ ಆಹ್ವಾನಿಸಲು ಸಿದ್ಧವಾಗಿದೆ ಕನ್ನಡ ರಥ

ಮಂಡ್ಯ: ಜಿಲ್ಲೆಯಲ್ಲಿ ಡಿಸೆಂಬರ್ 20, 21, 22 ರಂದು ನಡೆಯಲಿರುವ 87 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ…

7 hours ago

ಬಸ್‌ನಲ್ಲಿ ಪ್ರಯಾಣ: ಮಹಿಳೆಯರಿಂದ ಶಕ್ತಿಯೋಜನೆಯ ಅಭಿಪ್ರಾಯ ಪಡೆದ ಪುಷ್ಪ ಅಮರನಾಥ್‌

ಮೈಸೂರು: ರಾಜ್ಯ ಸರ್ಕಾರದ ಮಹತ್ವಕಾಂಕ್ಷೆ ಯೋಜನೆಗಳಲ್ಲಿ ಒಂದಾದ ಶಕ್ತಿಯೋಜನೆ ಫಲಾನುಭವಿಗಳ ಅಭಿಪ್ರಾಯ ಸಂಗ್ರಹಿಸಲು ಗ್ಯಾರಂಟಿ ಅನುಷ್ಠಾನ ಸಮಿತಿ ಉಪಾಧ್ಯಕ್ಷೆಯಾದ ಡಾ…

7 hours ago