ಕ್ರೀಡೆ

Paris Olympics 2024: ಭಾರತೀಯ ಹಾಕಿ ಆಟಗಾರನಿಗೆ ಒಂದು ಪಂದ್ಯ ನಿಷೇಧ

ಪ್ಯಾರಿಸ್‌: ಒಲಂಪಿಕ್ಸ್‌ ಕ್ರೀಡಾಕೂಟದ ಹಾಕಿ ವಿಭಾಗದಲ್ಲಿ ನಿನ್ನೆ (ಆ.5) ನಡೆದ ಭಾರತ ಹಾಗೂ ಗ್ರೇಟ್‌ ಬ್ರಿಟನ್‌ ನಡುವಿನ ಕ್ವಾರ್ಟರ್‌ ಫೈನಲ್ಸ್‌ ಪಂದ್ಯಾವಳಿಯಲ್ಲಿ ಭಾರತ ತಂಡದ ಶ್ರೇಷ್ಠ ಪ್ರದರ್ಶನ ನೀಡುವ ಮೂಲಕ ಸೆಮಿಸ್‌ಗೆ ಅರ್ಹತೆ ಗಿಟ್ಟಿಸಿಕೊಂಡಿದೆ. ಇದೇ ಆಗಸ್ಟ್‌ 6 ರಂದು ಸಮಿಸ್‌ನಲ್ಲಿ ಬಲಿಷ್ಠ ಜರ್ಮನಿ ತಂಡವನ್ನು ಭಾರತ ಎದುರಿಸಲಿದೆ.

ಈ ವೇಳೆಯಲ್ಲಿಯೇ ಭಾರತ ತಂಡಕ್ಕ ಬಹು ದೊಡ್ಡ ಹೊಡೆತ ಬಿದ್ದಿದೆ. ಭಾರತ ತಂಡದ ಅನುಭವಿ ಆಟಗಾರ ಅಮಿತ್‌ ರೋಹಿದಾಸ್‌ ಅವರ ಮೇಲೆ ಒಂದು ಪಂದ್ಯ ನಿಷೇಧಿಸಿದ ಆದೇಶ ಹೊರಡಿಸಲಾಗಿದೆ.

ಇತ್ತ ನಿನ್ನೆ ನಡೆದ ಬ್ರಿಟನ್‌ ವಿರುದ್ಧದ ಪಂದ್ಯದಲ್ಲಿ ಭಾರತ ತಂಡ ಅನುಭವಿ ಡಿಫೆಂಡರ್‌ ಅಮಿತ್‌ ರೋಹಿದಾಸ್‌ ಅವರಿಗೆ ನಿಯಮ ಉಲ್ಲಂಘನೆ ಆಧಾರದಲ್ಲಿ ರೆಡ್‌ ಕಾರ್ಡ್‌ ನೀಡಲಾಗಿತ್ತು. ಇದಾದ ಬಳಿಕ ಬ್ರಿಟನ್‌ ವಿರುದ್ಧ ಕೇವಲ ಹತ್ತು ಜನರ ಶ್ರೇಷ್ಠ ಹೋರಾಟದ ಫಲವಾಗಿ ಭಾರತ ಸೆಮಿಸ್‌ ತಲುಪಿತ್ತು. ಇದಾದ ಒಂದು ದಿನದ ಬಳಿಕ ಭಾರತ ತಂಡದ ಡಿಫೆಂಡರ್‌ ಅಮಿತ್‌ ವಿರುದ್ಧ ಅಂತರಾಷ್ಟ್ರೀಯ ಹಾಕಿ ಫೆಡರೇಷನ್‌ ಒಂದು ಪಂದ್ಯ ನಿಷೇಧ ಏರಿದೆ. ಈ ಮೂಲಕ ಭಾರತ ತಂಡಕ್ಕೆ ಭಾರೀ ಹಿನ್ನಡೆ ಉಂಟಾಗಿದೆ.

ಈ ಬಗ್ಗೆ ಮಾತನಾಡಿರುವ ಹಾಕಿ ಫೆಡರೇಷನ್‌, ಭಾರತ ಹಾಗೂ ಗ್ರೇಟ್‌ ಬ್ರಿಟನ್‌ ನಡುವಣ ಪಂದ್ಯದಲ್ಲಿ ಅಮಿತ್‌ ರೋಹಿದಾಸ್‌ ಅವರು ನಿಯಮ ಉಲ್ಲಂಘನೆ ಮಾಡಿದ್ದಾರೆ. ಹಾಗಾಗಿ ಅವರಿಗೆ ಮುಂದಿನ ಒಂದು ಪಂದ್ಯ ನಿಷೇಧಿಸಲಾಗಿದೆ ಎಂದು ಹೇಳಿದೆ. ಭಾರತ ತಂಡ ಅಮಿತ್‌ ಹೊರತುಪಡಿಸಿ ಉಳಿದ ಹದಿನೈದು ಆಟಗಾರರ ತಂಡವನ್ನು ರಚಿಸಬೇಕಿದೆ.

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ಮುಂದಿನ ಎರಡು ತಿಂಗಳ ಕಾಲ ಕುಡಿಯುವ ನೀರಿಗೆ ಸಮಸ್ಯೆಯಿಲ್ಲ: ಸಚಿವ ರಾಮಲಿಂಗಾರೆಡ್ಡಿ

ಬೆಂಗಳೂರು: ರಾಜ್ಯದಲ್ಲಿ ಈ ಬಾರಿ ನಿರೀಕ್ಷಿತ ಪ್ರಮಾಣದ ಮಳೆ ಬಾರದೇ ಇದ್ದರೂ, ಮುಂದಿನ ಎರಡು ತಿಂಗಳ ಕಾಲ ಕುಡಿಯುವ ನೀರಿಗೆ…

1 hour ago

ಕದನ ವಿರಾಮದ ನಡುವೆ ಮತ್ತೆ ಲೆಬನಾನ್‌ ಮೇಲೆ ಇಸ್ರೇಲ್‌ ದಾಳಿ: 5 ಮಂದಿ ಸಾವು

ಬೈರುತ್:‌ ಲೆಬನಾನ್‌ ಮೇಲೆ ಇಸ್ರೇಲ್‌ ದಾಳಿ ಮುಂದುವರಿದಿದ್ದು, ಇಸ್ರೇಲ್ ಮತ್ತು ಇರಾನ್‌ ಬೆಂಬಲಿತ ಹೆಬ್ಜೊಲ್ಲಾ ನಡುವೆ ಕದನ ವಿರಾಮ ಜಾರಿಗೆ…

1 hour ago

ಮಕ್ಕಳ ಮನದಂಗಳದಲ್ಲಿ ಗಾಂಧಿ ಚಿಂತನೆಯ ಬೇರುಗಳು

ಗಾಂಧೀಜಿಯವರ ಜೀವನವೇ ತೆರೆದ ಪುಸ್ತಕ:  ಇಡೀ ವಿಶ್ವವೇ ಗಾಂಧೀಜಿಯವರ ಅಹಿಂಸೆ ಮತ್ತು ಸತ್ಯಾಗ್ರಹಗಳನ್ನು ಗೌರವಿಸುತ್ತದೆ. ಗಾಂಧಿಯವರು ತಮ್ಮ ಶಾಲಾ ದಿನಗಳಲ್ಲಿಯೇ…

5 hours ago

ಗಾಂಧಿ ಹಾದಿಯಲ್ಲಿ ಹತಳಾದ ಮಾತಂಗಿನಿ ಹಜ್ರಾ

ಡಾ.ಟಿ.ಮಂಜು ಸತ್ತಿಗೆಹುಂಡಿ, ಉಪನ್ಯಾಸಕರು, ಗಾಂಧಿ ಅಧ್ಯಯನ ಕೇಂದ್ರ, ಗಾಂಧಿ ಭವನ, ಮೈಸೂರು ವಿಶ್ವವಿದ್ಯಾಲಯ ಭಾರತದ ಸ್ವಾತಂತ್ರ್ಯ ಚಳವಳಿಗೆ ಕಾಲೇಜು ವಿದ್ಯಾರ್ಥಿಗಳು,…

6 hours ago

ಧರ್ಮವೆಂದು ತಿಳಿದು ತಿಗಣೆ ಇತ್ಯಾದಿಗಳನ್ನು ಕೊಲ್ಲುತ್ತಿದ್ದೆ

ನನ್ನ ಆರು ಏಳನೆಯ ವಯಸ್ಸಿನಿಂದ ಹದಿನಾರನೆಯ ವಯಸ್ಸಿನವರೆಗೆ ಪಾಠಶಾಲೆಯಲ್ಲಿ ವಿದ್ಯೆಯನ್ನು ಕಲಿತೆ. ಆದರೆ ಸ್ಕೂಲಿನಲ್ಲಿ ನನಗೆ ಯಾವ ಧಾರ್ಮಿಕ ಶಿಕ್ಷಣವೂ…

6 hours ago

ಜೂ.28ರಿಂದ ಪಲ್ಸ್ ಪೋಲಿಯೋ ಲಸಿಕಾ ಕಾರ್ಯಕ್ರಮ

ನವೀನ್ ಡಿಸೋಜ ಮಡಿಕೇರಿ: ಜೂ.೨೮ರಿಂದ ಪಲ್ಸ್ ಪೋಲಿಯೋ ಲಸಿಕಾ ಕಾರ್ಯಕ್ರಮ ನಡೆಯಲಿದ್ದು, ಕೊಡಗು ಜಿಲ್ಲೆಯಲ್ಲಿಯೂ ಅಗತ್ಯ ಸಿದ್ಧತೆಯನ್ನು ಮಾಡಿಕೊಳ್ಳಲಾಗಿದೆ. ಜಿಲ್ಲೆಯಲ್ಲಿ…

6 hours ago